Homeಕರ್ನಾಟಕರಾಜಕೀಯ ಮೇಲಾಟ: ಅಮಿತ್‌ ಶಾ ಭೇಟಿಯ ಒಂದು ದಿನದ ಮೊದಲು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಲಿರುವ...

ರಾಜಕೀಯ ಮೇಲಾಟ: ಅಮಿತ್‌ ಶಾ ಭೇಟಿಯ ಒಂದು ದಿನದ ಮೊದಲು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಲಿರುವ ರಾಹುಲ್ ಗಾಂಧಿ

- Advertisement -
- Advertisement -

ಮುಂದಿನ ವರ್ಷ ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ಮುಂಚಿತವಾಗಿ, ರಾಜಕೀಯದಲ್ಲಿ ಭಾರಿ ಪ್ರಭಾವ ಹೊಂದಿರುವ ಲಿಂಗಾಯತ ಸಮುದಾಯವನ್ನು ಮೆಚ್ಚಿಸಲು ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಸ್ಪರ್ಧೆ ನಡೆಯುತ್ತಿದೆ.

ಹಠಾತ್‌ ಬೆಳವಣಿಗೆಯಲ್ಲಿ, ರಾಜ್ಯ ಕಾಂಗ್ರೆಸ್‌ ನಾಯಕರ ಸಲಹೆಯಂತೆ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಗುರುವಾರದಂದು ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಲಿದ್ದಾರೆ ಎಂದು ವರದಿಯಾಗಿದೆ. ಶಿವಕುಮಾರ ಸ್ವಾಮಿಯವರ 115ನೇ ಜಯಂತಿಯ ಭಾಗವಾಗಿ ಶುಕ್ರವಾರದಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭೇಟಿ ನಿಗದಿಯಾಗಿದೆ. ಇದಕ್ಕಿಂತಲೂ ಒಂದು ದಿನ ಮುಂಚಿತವಾಗಿ ರಾಹುಲ್ ಗಾಂಧಿ ಮಠಕ್ಕೆ ಭೇಟಿ ನೀಡಲಿದ್ದಾರೆ.

ಇದನ್ನೂ ಓದಿ: ಜಾತಿಗೊಂದು ನಿಗಮ ಮಾಡಿದರೆ ಮಿತಿಯೇ ಇರುವುದಿಲ್ಲ – ಸಿದ್ದಲಿಂಗ ಸ್ವಾಮೀಜಿ

ಗುರುವಾರ ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿಗೆ ಆಗಮಿಸಲಿರುವ ರಾಹುಲ್‌ ಗಾಂಧಿಯವರು, ಅಲ್ಲಿಂದ ಮಠಕ್ಕೆ ಪ್ರಯಾಣಿಸುವ ನಿರೀಕ್ಷೆಯಿದೆ. ಅಲ್ಲಿ ಅವರು ಸ್ವಾಮಿಯ ಸಮಾಧಿಗೆ ಭೇಟಿ ನೀಡಲಿದ್ದು, ನಂತರ ಮಠದಲ್ಲಿ ಊಟ ಮಾಡುವ ಸಾಧ್ಯತೆಯಿದೆ ಎಂದು ರಾಜ್ಯ ಕಾಂಗ್ರೆಸ್‌ ಮೂಲಗಳನ್ನು ಉಲ್ಲೇಖಿಸಿ TNIE ವರದಿ ಮಾಡಿದೆ.

“ಮಠ-ಮಾನ್ಯಗಳೊಂದಿಗೆ ಗಾಂಧಿ ಕುಟುಂಬದ ನಡುವಿನ ಸಂಬಂಧವು ಭಕ್ತ ಮತ್ತು ದೇವರ ಸಂಬಂಧವಾಗಿದೆ. ಇಂದಿರಾಗಾಂಧಿ ಶೃಂಗೇರಿ ಶಾರದಾ ಮಠಕ್ಕೆ ಭೇಟಿ ನೀಡಿ ಸಲಹೆ ಪಡೆಯುತ್ತಿದ್ದರು. ರಾಜೀವ್ ಗಾಂಧಿ ಅಲ್ಲಿನ ಸಪ್ತಾಹದ ಧಾರ್ಮಿಕ ಕ್ರಿಯೆಗಳಲ್ಲಿ ಭಾಗವಹಿಸುತ್ತಿದ್ದರು” ಎಂದು ಕಾಂಗ್ರೆಸ್‌ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಹೇಳಿದ್ದಾರೆ.

2012ರಲ್ಲಿ ಶಿವಕುಮಾರ್‌ ಸ್ವಾಮಿಯ 105ನೇ ಜನ್ಮದಿನಾಚರಣೆ ಸಮಾರಂಭಕ್ಕೆ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಈ ವೇಳೆಗೆ ಬಿಜೆಪಿ ಜೊತೆಗಿನ ಸಂಬಂಧ ಕಡಿದುಕೊಂಡು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೆಜೆಪಿ ಸ್ಥಾಪಿಸಿದ್ದರು.

ಇದನ್ನೂ ಓದಿ: ಸಿದ್ದಗಂಗಾ ಮಠಕ್ಕೆ ಸಚಿವೆ ಜೊಲ್ಲೆ ಭೇಟಿ : ಡ್ಯಾಮೇಜ್ ಕಂಟ್ರೋಲ್ ಮಾಡಲು ಯತ್ನ

ಶಿವಕುಮಾರ ಸ್ವಾಮಿಯ ಜನ್ಮದಿನಾಚರಣೆಗೆ 2 ಲಕ್ಷಕ್ಕೂ ಹೆಚ್ಚು ಜನರು ಆಗಮಿಸಲಿದ್ದಾರೆ ಎಂದು ವರದಿಯಾಗಿದ್ದು, ಈ ಕಾರ್ಯಕ್ರಮದಲ್ಲಿ ಅಮಿತ್‌ ಶಾ ಅವರು ಭಾಗವಹಿಸಲಿದ್ದಾರೆ. ಕಾಂಗ್ರೆಸ್ ನಾಯಕತ್ವವೂ ಪಕ್ಷ ಮಠಗಳಿಂದ ವಿಮುಖವಾಗಿಲ್ಲ ಎಂದು ತನ್ನ ನಿಷ್ಠೆಯನ್ನು ಪ್ರದರ್ಶಿಸಲು ಬಯಸಿದೆ. ಈ ಹಿನ್ನಲೆಯಲ್ಲಿ ರಾಹುಲ್ ಗಾಂಧಿ ಅವರು ಭೇಟಿ ನೀಡಲಿದ್ದಾರೆ ಎಂದು ವರದಿಯಾಗಿದೆ.

ಭಾರತರತ್ನ ವಿವಾದ

ಶಿವಕುಮಾರ ಸ್ವಾಮಿಯವರಿಗೆ ಮರಣೋತ್ತರ ಭಾರತರತ್ನ ನೀಡುವ ವಿಚಾರ ಅಮಿತ್‌ ಶಾ ಅವರು ಭೇಟಿ ನೀಡುವ ಮುನ್ನ ಮತ್ತೆ ಚರ್ಚೆಗೆ ಬಂದಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಅವರ ಮಗ ಬಿ.ವೈ. ವಿಜಯೇಂದ್ರ ಅವರು ಶಿವಕುಮಾರ ಸ್ವಾಮಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡುವುದಾಗಿ ತಿಳಿಸಿದ್ದಾರೆ.

ಆದರೆ ಮಠದ ಈಗಿನ ಪೀಠಾಧಿಪತಿ ಸಿದ್ದಲಿಂಗ ಸ್ವಾಮಿ ಅವರು ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದು, ಪ್ರಶಸ್ತಿಗಾಗಿ ಮಠ ಎಂದಿಗೂ ಒತ್ತಾಯಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಪ್ರಶಸ್ತಿ ಸ್ವಾಭಾವಿಕವಾಗಿ ಬಂದರೆ ಅದು ಅಮೃತ, ಒತ್ತಡದ ಮೂಲಕ ಪಡೆದ ಅದು ವಿಷವಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸ್ಮಾರ್ಟ್ ಸಿಟಿ ನೆಪದಲ್ಲಿ ತುಮಕೂರಿನಲ್ಲಿ ಭಾರೀ ಲೂಟಿ: ವೆಬ್‌ಸೈಟ್‌ನಲ್ಲಿ ಪೂರ್ಣಗೊಂಡ ಕಾಮಗಾರಿಗಳು ವಾಸ್ತವದಲ್ಲಿ ಆರಂಭವೇ ಆಗಿಲ್ಲ!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...