Homeಮುಖಪುಟ'ರಾಜಕೀಯ ಪ್ರೇರಿತ': ಪೌರತ್ವಕ್ಕೂ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರಿತ್ತು ಎಂಬ ಆರೋಪ ನಿರಾಕರಿಸಿದ ಸೋನಿಯಾ ಗಾಂಧಿ

‘ರಾಜಕೀಯ ಪ್ರೇರಿತ’: ಪೌರತ್ವಕ್ಕೂ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರಿತ್ತು ಎಂಬ ಆರೋಪ ನಿರಾಕರಿಸಿದ ಸೋನಿಯಾ ಗಾಂಧಿ

- Advertisement -
- Advertisement -

ಭಾರತದ ನಾಗರಿಕತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲಾಗಿತ್ತು ಎಂಬ ಆರೋಪದ ಮೇಲೆ ತನ್ನ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋರಿರುವ ಅರ್ಜಿಯು ‘ಸಂಪೂರ್ಣ ರಾಜಕೀಯ ಪ್ರೇರಿತ, ಕಾನೂನು ಪ್ರಕ್ರಿಯೆಯ ದುರುಪಯೋಗ’ ಎಂಬುವುದಾಗಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹೇಳಿದ್ದಾರೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

ಎಫ್‌ಐಆರ್ ದಾಖಲಿಸುವಂತೆ ಕೋರಿ ವಿಕಾಸ್ ತ್ರಿಪಾಠಿ ಎಂಬವರು ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ಈ ಅರ್ಜಿಗೆ ಸೋನಿಯಾ ಗಾಂಧಿ ಮೇಲಿನಂತೆ ಪ್ರತಿಕ್ರಿಯಿಸಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ಈ ಪ್ರಕರಣ ಶನಿವಾರ (ಫೆ.7) ವಿಶೇಷ ನ್ಯಾಯಾಧೀಶ (ಪಿಸಿ ಕಾಯ್ದೆ) ವಿಶಾಲ್ ಗೋಗ್ನೆ ಅವರ ಮುಂದೆ ವಿಚಾರಣೆಗೆ ಬಂದಿತ್ತು. ಸೋನಿಯಾ ಗಾಂಧಿ ಪ್ರತಿಕ್ರಿಯೆ ಸಲ್ಲಿಸಿದ್ದಾರೆ ಎಂದು ಗಮನಿಸಿದ ನ್ಯಾಯಾಧೀಶರು. ಫೆ. 21ರಂದು ವಾದ ಮಂಡನೆಗೆ ಪ್ರಕರಣವನ್ನು ಪಟ್ಟಿ ಮಾಡಿದ್ದಾರೆ ಎಂದು ವರದಿ ತಿಳಿಸಿದೆ.

ತ್ರಿಪಾಠಿ ಸಲ್ಲಿಸಿದ್ದ ಅರ್ಜಿಯನ್ನು ಆರಂಭದಲ್ಲಿ ಸೆಪ್ಟೆಂಬರ್ 11, 2025 ರಂದು ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (ಎಸಿಎಂಎಂ) ವೈಭವ್ ಚೌರಾಸಿಯಾ ಅವರು ವಜಾಗೊಳಿಸಿದ್ದರು. ಇದನ್ನು ಪ್ರಶ್ನಿಸಿ ತ್ರಿಪಾಠಿ ಸೆಷನ್ಸ್ ನ್ಯಾಯಾಲಯದಲ್ಲಿ ಮರು ಪರಿಶೀಲನೆ ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿ ಸಂಬಂಧ ನ್ಯಾಯಾಲಯವು ಡಿಸೆಂಬರ್ 9, 2025 ರಂದು ಸೋನಿಯಾ ಗಾಂಧಿಯವರಿಗೆ ನೋಟಿಸ್ ಜಾರಿಗೊಳಿಸಿತ್ತು.

1983ರ ಏಪ್ರಿಲ್‌ನಲ್ಲಿ ಸೋನಿಯಾ ಗಾಂಧಿಯವರು ಭಾರತದ ಪೌರತ್ವ ಪಡೆದಿದ್ದಾರೆ. ಆದರೆ, ಅದಕ್ಕೂ ಮುನ್ನ 1980ರಲ್ಲಿ ನವದೆಹಲಿ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಅವರ ಹೆಸರನ್ನು ಸೇರಿಸಲಾಗಿತ್ತು ಎಂಬುವುದು ತ್ರಿಪಾಠಿ ಅವರ ಆರೋಪವಾಗಿದೆ.

1980ರಲ್ಲಿ ಸೋನಿಯಾ ಗಾಂಧಿಯವರ ಹೆಸರನ್ನು ಮತದಾರರ ಪಟ್ಟಿಗೆ ಸೇರಿಸಲಾಗಿತ್ತು. ನಂತರ 1982ರಲ್ಲಿ ಅದನ್ನು ಅಳಿಸಲಾಯಿತು. ಆ ಬಳಿಕ 1983ರಲ್ಲಿ ಮತ್ತೆ ಸೇರಿಸಲಾಯಿತು ಎಂದು ತ್ರಿಪಾಠಿ ಹೇಳಿದ್ದಾರೆ.

ಪ್ರಕರಣ ಸಂಬಂಧ ನ್ಯಾಯಾಲಯಕ್ಕೆ ಸಲ್ಲಿಸಿರುವ ಸಂಕ್ಷಿಪ್ತ ಪ್ರತಿಕ್ರಿಯೆಯಲ್ಲಿ ಸೋನಿಯಾ ಗಾಂಧಿ ತಮ್ಮ ವಿರುದ್ಧದ ಆರೋಪವನ್ನು ಬಲವಾಗಿ ವಿರೋಧಿಸಿದ್ದಾರೆ. ಈ ದೂರು ಕೇವಲ ಊಹೆಗಳು, ಮಾಧ್ಯಮ ವರದಿಗಳು ಮತ್ತು ಕಾಲ್ಪನಿಕ ವಿಷಯಗಳನ್ನು ಆಧರಿಸಿದೆಯೇ ಹೊರತು, ಯಾವುದೇ ಮೂಲಭೂತ ದಾಖಲೆಗಳನ್ನು ಪುರಾವೆಯಾಗಿ ಒದಗಿಸಿಲ್ಲ ಎಂದು ಅವರು ವಾದಿಸಿದ್ದಾರೆ. ಅಂದರೆ, ತನ್ನ ಮೇಲಿನ ಆರೋಪಗಳಿಗೆ ಯಾವುದೇ ಭದ್ರವಾದ ಅಡಿಪಾಯ ಅಥವಾ ಅಧಿಕೃತ ದಾಖಲೆಗಳಿಲ್ಲ ಎಂದು ಸೋನಿಯಾ ಗಾಂಧಿ ಈ ಮೂಲಕ ಸ್ಪಷ್ಟಪಡಿಸಿದ್ದಾರೆ.

“ದೂರುದಾರರು ಯಾವುದೇ ಆಧಾರವಿಲ್ಲದೆ ಅತ್ಯಂತ ಗಂಭೀರವಾದ ಆರೋಪಗಳನ್ನು ಬೇಜವಾಬ್ದಾರಿಯಿಂದ ಮಾಡಿದ್ದಾರೆ. ಈ ಆರೋಪಗಳು ಕೇವಲ ಅವರ ಸ್ವಂತ ಕಲ್ಪನೆ, ವೈಯಕ್ತಿಕ ಅಭಿಪ್ರಾಯ ಅಥವಾ ಅನಗತ್ಯ ಊಹೆಗಳನ್ನು ಆಧರಿಸಿವೆ ಹೊರತು, ಅದರಲ್ಲಿ ಯಾವುದೇ ಸತ್ಯಾಂಶವಿಲ್ಲ” ಎಂದಿದ್ದಾರೆ.

“ದೂರುದಾರರು ಮತದಾರರ ನೋಂದಣಿಗೆ ಸಲ್ಲಿಸಿದ ಎನ್ನಲಾದ ಅರ್ಜಿಗಳ ಪ್ರತಿಗಳು, ಪೌರತ್ವಕ್ಕೆ ಸಂಬಂಧಿಸಿದ ದಾಖಲೆಗಳು ಅಥವಾ ಯಾವುದೇ ದಾಖಲೆಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿಲ್ಲ. ಅಷ್ಟೇ ಅಲ್ಲದೆ, ಅಂತಹ ದಾಖಲೆಗಳನ್ನು ಕಾನೂನುಬದ್ಧವಾಗಿ ಪಡೆದುಕೊಳ್ಳಲು ಯಾವುದೇ ಪ್ರಯತ್ನವನ್ನೂ ಮಾಡಿಲ್ಲ. ಅವರು ಕೇವಲ ಗಾಳಿಯಲ್ಲಿ ಗುಂಡು ಹೊಡೆಯುವಂತೆ ಯಾವುದೇ ಆಧಾರವಿಲ್ಲದೆ ಆರೋಪ ಮಾಡಿದ್ದಾರೆಯೇ ಹೊರತು, ಅದನ್ನು ಸಾಬೀತುಪಡಿಸುವ ಒಂದು ಅಧಿಕೃತ ದಾಖಲೆಯೂ ಅವರ ಬಳಿ ಇಲ್ಲ” ಎಂದು ಹೇಳಿದ್ದಾರೆ.

ದೂರುದಾರರಾದ ವಿಕಾಸ್ ತ್ರಿಪಾಠಿ ಅವರು ತಮ್ಮ ದೂರಿನ 8ನೇ ಪ್ಯಾರಾದಲ್ಲಿ, “1982ರಲ್ಲಿ ಸಾರ್ವಜನಿಕರಿಂದ ಭಾರಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ಅವರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿತ್ತು” ಎಂದು ಉಲ್ಲೇಖಿಸಿದ್ದಾರೆ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಸೋನಿಯಾ ಗಾಂಧಿ, “ಸಾರ್ವಜನಿಕರು ಅಥವಾ ಮಾಧ್ಯಮಗಳು ನಡೆಸಿದ್ದವು ಎನ್ನಲಾದ ಈ ಪ್ರತಿಭಟನೆಗಳು ನಡೆದು 43 ವರ್ಷಗಳ ನಂತರ, ದೂರುದಾರರು ಇದನ್ನು ‘ತಮ್ಮ ನೇರ ಜ್ಞಾನಕ್ಕೆ ಬಂದ ವಿಷಯ’ ಎಂದು ಕ್ರಿಮಿನಲ್ ದೂರಿನಲ್ಲಿ ದಾಖಲಿಸಿರುವುದು ಕುತೂಹಲಕಾರಿಯಾಗಿದೆ” ಎಂದಿದ್ದಾರೆ.

“ಈ ಆರೋಪಗಳು 1980 ರಿಂದ 1983 ರ ಅವಧಿಯಲ್ಲಿ ನಡೆದ ಘಟನೆಗಳಿಗೆ ಸಂಬಂಧಿಸಿವೆ ಮತ್ತು ದಶಕಗಳ ಹಿಂದೆಯೇ ಚರ್ಚೆಗೆ ಬಂದು ತಣ್ಣಗಾಗಿದ್ದ ವಿವಾದಗಳನ್ನು ಆಧರಿಸಿವೆ. ಇಷ್ಟು ದೀರ್ಘಕಾಲದ ನಂತರ, ಅಂದರೆ 40 ವರ್ಷಗಳ ಬಳಿಕ ಇಂತಹ ಹಳೆಯ ವಿಷಯಗಳನ್ನು ಮತ್ತೆ ಕೆದಕುವುದರಿಂದ, ಅವುಗಳಿಗೆ ಸಂಬಂಧಿಸಿದ ನಂಬಲರ್ಹ ಪುರಾವೆಗಳನ್ನು ಒದಗಿಸುವುದು ಅಸಾಧ್ಯ” ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.

“ಈ ವಿಳಂಬಿತ ದೂರು “ದುರುದ್ದೇಶಪೂರಿತ ಕಾನೂನು ಕ್ರಮ”. ಅಲ್ಲದೆ, ಇಷ್ಟು ದಶಕಗಳ ನಂತರ ವಿಚಾರಣೆ ನಡೆಸುವುದು ವ್ಯಕ್ತಿಯ ಘನತೆ ಮತ್ತು ನ್ಯಾಯಯುತ ವಿಚಾರಣೆಯ ಹಕ್ಕನ್ನು ಕಸಿದುಕೊಂಡಂತಾಗುತ್ತದೆ. ಇದು ಸಂವಿಧಾನದ 21ನೇ ವಿಧಿಯ (ಜೀವಿಸುವ ಮತ್ತು ವೈಯಕ್ತಿಕ ಸ್ವಾತಂತ್ರ್ಯದ ಹಕ್ಕು) ಉಲ್ಲಂಘನೆಯಾಗಿದೆ” ಎಂದು ಸೋನಿಯಾ ಗಾಂಧಿ ಪ್ರತಿಪಾದಿಸಿದ್ದಾರೆ.

“ಪೌರತ್ವಕ್ಕೆ ಸಂಬಂಧಿಸಿದ ಪ್ರಶ್ನೆಗಳು ಮತ್ತು ನಿರ್ಧಾರಗಳು ಸಂಪೂರ್ಣವಾಗಿ ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುತ್ತವೆ. ಅದೇ ರೀತಿ, ಮತದಾರರ ಪಟ್ಟಿಗೆ ಸಂಬಂಧಿಸಿದ ಯಾವುದೇ ವಿವಾದಗಳು ಅಥವಾ ಆಕ್ಷೇಪಣೆಗಳನ್ನು ನಿರ್ವಹಿಸುವ ಸಂಪೂರ್ಣ ಅಧಿಕಾರ ಭಾರತೀಯ ಚುನಾವಣಾ ಆಯೋಗಕ್ಕೆ ಮಾತ್ರ ಇರುತ್ತದೆ” ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.

“ಭಾರತೀಯ ದಂಡ ಸಂಹಿತೆ (ಐಪಿಸಿ) ಅಥವಾ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್‌) ಅಡಿಯಲ್ಲಿ ಅಪರಾಧಗಳೆಂದು ಬಿಂಬಿಸಿ, ಪೌರತ್ವ ಅಥವಾ ಮತದಾರರ ಪಟ್ಟಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಖಾಸಗಿ ದೂರುಗಳನ್ನು ವಿಚಾರಣೆಗೆ ತೆಗೆದುಕೊಳ್ಳಲು ಕ್ರಿಮಿನಲ್ ನ್ಯಾಯಾಲಯಗಳಿಗೆ ಅಧಿಕಾರವಿಲ್ಲ” ಎಂದು ಸೋನಿಯಾ ಗಾಂಧಿ ವಾದಿಸಿದ್ದಾರೆ.

“ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗದ ನಡುವಿನ ಅಧಿಕಾರ ವ್ಯಾಪ್ತಿಯನ್ನು ಇದು ಮೀರುತ್ತದೆ. ಪೌರತ್ವ ಮತ್ತು ಚುನಾವಣೆ ನಿರ್ವಹಣೆ ಆಯಾ ಸ್ವತಂತ್ರ ಸಂಸ್ಥೆಗಳ ಜವಾಬ್ದಾರಿಯಾಗಿದೆ. ಸಂವಿಧಾನದ 329ನೇ ವಿಧಿಯು ಚುನಾವಣಾ ಪ್ರಕ್ರಿಯೆಗಳಲ್ಲಿ ನ್ಯಾಯಾಂಗದ ಹಸ್ತಕ್ಷೇಪವನ್ನು ಸ್ಪಷ್ಟವಾಗಿ ನಿರ್ಬಂಧಿಸುತ್ತದೆ. ಮತದಾರರ ಪಟ್ಟಿ ತಯಾರಿಸುವುದು ಚುನಾವಣಾ ಪ್ರಕ್ರಿಯೆಯ ಭಾಗವಾಗಿರುವುದರಿಂದ, ಅದನ್ನು ಕ್ರಿಮಿನಲ್ ನ್ಯಾಯಾಲಯದಲ್ಲಿ ಪ್ರಶ್ನಿಸುವುದು ಅಸಂವಿಧಾನಿಕ ಎಂದು ಸೋನಿಯಾ ಗಾಂಧಿ ಪ್ರತಿಪಾದಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭಾರತ-ಅಮೆರಿಕ ವ್ಯಾಪಾರ ಒಪ್ಪಂದವು ದೇಶದ ಸಾರ್ವಭೌಮತ್ವದ ಮೇಲಿನ ದಾಳಿ’: ಸಿಪಿಎಂ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದವು ದೇಶದ ಸಾರ್ವಭೌಮತ್ವದ ಮೇಲಿನ ದಾಳಿಯಾಗಿದೆ ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ-ಮಾರ್ಕ್ಸಿಸ್ಟ್ (ಸಿಪಿಎಂ) ಭಾನುವಾರ ಹೇಳಿದೆ. ಕೇಂದ್ರವನ್ನು ಟೀಕಿಸಿದ ಪಕ್ಷವು, ಅಮೆರಿಕದೊಂದಿಗಿನ ಒಪ್ಪಂದವು "ಬಿಜೆಪಿ ನೇತೃತ್ವದ ಸರ್ಕಾರದ ನಾಚಿಕೆಗೇಡಿನ ಶರಣಾಗತಿ"...

ತೆಲಂಗಾಣ ಎಫ್‌ಎಸ್‌ಎಲ್‌ನಲ್ಲಿ ಬೆಂಕಿ : ಸಾಕ್ಷ್ಯ ನಾಶದ ಶಂಕೆ ವ್ಯಕ್ತಪಡಿಸಿದ ಬಿಆರ್‌ಎಸ್‌

ಹೈದರಾಬಾದ್‌ನ ನಾಂಪಲ್ಲಿಯಲ್ಲಿರುವ ತೆಲಂಗಾಣ ರಾಜ್ಯ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ (ಟಿಎಸ್‌ಎಫ್‌ಎಸ್‌ಎಲ್‌) ಶನಿವಾರ (ಫೆ.7) ಬೆಂಕಿ ಅವಘಡ ಸಂಭವಿಸಿದ್ದು, ಪ್ರತಿಪಕ್ಷ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಪ್ರಮುಖ ಪ್ರಕರಣಗಳ ಸಾಕ್ಷ್ಯ ನಾಶದ ಶಂಕೆ ವ್ಯಕ್ತಪಡಿಸಿದೆ....

ಬಿಹಾರದ ದರ್ಭಾಂಗದಲ್ಲಿ ಆರು ವರ್ಷದ ಬಾಲಕಿಯ ಹತ್ಯೆ: ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಶಂಕೆ 

ಪಾಟ್ನಾ: ಬಿಹಾರದ ದರ್ಭಾಂಗಾ ಪಟ್ಟಣದ ವಿಶ್ವವಿದ್ಯಾಲಯ ಪೊಲೀಸ್ ಠಾಣೆ ವ್ಯಾಪ್ತಿಯ ಕೊಳದ ಬಳಿ ಭಾನುವಾರ ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಮೂಲಗಳ ಪ್ರಕಾರ, ಶನಿವಾರ ಸಂಜೆ...

ರಾಜ್ಯದಲ್ಲಿ ಮಂಜೂರಾದ ಯೋಜನೆಗಳಿಗೆ ಹಣ ಬಿಡುಗಡೆ ಮಾಡುವಂತೆ, ರೈಲು ಯೋಜನೆ ತ್ವರಿತಗೊಳಿಸುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ ಸ್ಟಾಲಿನ್

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ರಾಜ್ಯದಲ್ಲಿ ಮಂಜೂರಾದ ಯೋಜನೆಗಳಿಗೆ ಅಗತ್ಯವಿರುವ ಹಣವನ್ನು ಬಿಡುಗಡೆ ಮಾಡುವ ಮೂಲಕ ಮತ್ತು ಸ್ಥಗಿತಗೊಂಡಿರುವ ಯೋಜನೆಗಳನ್ನು ಪುನರುಜ್ಜೀವನಗೊಳಿಸುವ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ವಿರೋಧಿಸಿದ ರೈತ ಸಂಘಟನೆಗಳು : ರಾಷ್ಟ್ರವ್ಯಾಪಿ ಪ್ರತಿಭಟನೆ ಘೋಷಣೆ

ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ), ಅಖಿಲ ಭಾರತ ಕಿಸಾನ್ ಸಭಾ (ಎಐಕೆಎಸ್‌) ಸೇರಿದಂತೆ ಹಲವಾರು ರೈತ ಸಂಘಟನೆಗಳು ಶನಿವಾರ (ಫೆ.7) ಭಾರತ-ಅಮೆರಿಕ ವ್ಯಾಪಾರ ಒಪ್ಪಂದವನ್ನು ವಿರೋಧಿಸಿದ್ದು, ಫೆಬ್ರವರಿ 12ರಂದು ರಾಷ್ಟ್ರವ್ಯಾಪಿ ಪ್ರತಿಭಟನೆ ಘೋಷಿಸಿವೆ. ಈ...

‘ನಮ್ಮ ಹಟ್ಟಿ’ ಕೇವಲ ದೊರೈರಾಜು ಅವರ ಕಥೆಯಲ್ಲ, ಒಂದು ಸಾಂಸ್ಕೃತಿಕ ಲೋಕವನ್ನೇ ಕಟ್ಟಿಕೊಡುವ ಕೃತಿ’: ಕೋಟಿಗಾನಹಳ್ಳಿ ರಾಮಯ್ಯ 

‘ಸಾಮಾನ್ಯವಾಗಿ ಆತ್ಮಕಥನಗಳು ಅಂದರೆ ಒಬ್ಬ ವ್ಯಕ್ತಿಯ ವಿವರಗಳು ಬಿಚ್ಚಿಕೊಳ್ಳುತ್ತಾ ಹೋಗುತ್ತವೆ. ಆದರೆ ‘ನಮ್ಮ ಹಟ್ಟಿ’ ಆತ್ಮಕಥಾನಕದಲ್ಲಿ ಒಂದು ಹಟ್ಟಿಯ ವಿವರಗಳು ಬಿಚ್ಚಿಕೊಳ್ಳುತ್ತಾ ಹೋಗುತ್ತವೆ. ಅಲ್ಲಿರುವ ಅನೇಕ ಕುಶಲ ಕರ್ಮಿಗಳು, ಹಾಗೂ ವಿಶಿಷ್ಟ ಲೋಕವೇ...

ಪ. ಬಂಗಾಳ ಎಸ್‌ಐಆರ್ | ಮೈಕ್ರೋ ಅಬ್ಸರ್ವರ್ಸ್ ಬದಲಿಗೆ 8,505 ಗ್ರೂಪ್ ಬಿ ಅಧಿಕಾರಿಗಳನ್ನು ಒದಗಿಸುತ್ತೇವೆ : ಚು. ಆಯೋಗಕ್ಕೆ ತಿಳಿಸಿದ ಮಮತಾ ಸರ್ಕಾರ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯಕ್ಕಾಗಿ ಮೈಕ್ರೋ ಅಬ್ಸರ್ವರ್ಸ್ ಬದಲಿಗೆ ತನ್ನ ಅಧೀನದ ಸುಮಾರು 8,505 ಗ್ರೂಪ್ ಬಿ ಅಧಿಕಾರಿಗಳನ್ನು ನಿಯೋಜಿಸಲು ಸಿದ್ಧವಿರುವುದಾಗಿ ಪಶ್ಚಿಮ ಬಂಗಾಳ ಸರ್ಕಾರ ಕೇಂದ್ರ...

ಸಿಎಂ ಶರ್ಮಾ ಮುಸ್ಲಿಮರಿಗೆ ಗುಂಡಿಕ್ಕಿದಂತೆ ತೋರಿಸುವ ವಿಡಿಯೋ ಹಂಚಿಕೊಂಡ ಅಸ್ಸಾಂ ಬಿಜೆಪಿ!

ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮುಸ್ಲಿಮರಿಗೆ ಗುಂಡಿಕ್ಕಿದಂತೆ ತೋರಿಸುವ ವಿಡಿಯೋವನ್ನು ಅಸ್ಸಾಂ ಬಿಜೆಪಿಯ ರಾಜ್ಯ ಘಟಕ ತನ್ನ ಅಧಿಕೃತ ಎಕ್ಸ್ ಹ್ಯಾಂಡಲ್‌ನಲ್ಲಿ ಶನಿವಾರ (ಫೆ.7) ಹಂಚಿಕೊಂಡಿತ್ತು. ತೀವ್ರ ಆಕ್ರೋಶ ವ್ಯಕ್ತವಾದ ಬಳಿಕ ಅದನ್ನು...

ಯಾವುದೇ ಕಾರಣಕ್ಕೂ ಕೇರಳದಲ್ಲಿ ಎನ್‌ಪಿಆರ್ ಜಾರಿಯಾಗುವುದಿಲ್ಲ : ಸಿಎಂ ಪಿಣರಾಯಿ ವಿಜಯನ್

ಕೇರಳದಲ್ಲಿ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್) ಯನ್ನು ಜಾರಿಗೆ ತರಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶನಿವಾರ (ಫೆ.7) ಪುನರುಚ್ಚರಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿರುವ ಅವರು, "ಯಾವುದೇ ಸಂದರ್ಭದಲ್ಲೂ...

ಕೋಗಿಲು ಬಡಾವಣೆ ಮನೆಗಳ ನೆಲಸಮ : ವರದಿ ಸಲ್ಲಿಸಲು ಹೈಕೋರ್ಟ್ ಸೂಚನೆ

ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಎಷ್ಟು ಮನೆಗಳನ್ನು ನೆಲಸಮ ಮಾಡಲಾಗಿದೆ. ಇದರಿಂದಾಗಿ ಎಷ್ಟು ಕುಟುಂಬಗಳು ನಿರಾಶ್ರಿತರಾಗಿದ್ದಾರೆ ಮತ್ತು ಪುನರ್ವವಸತಿಗೆ ಏನೆಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬ ಮಾಹಿತಿಯನ್ನು ಒಳಗೊಂಡ ವರದಿ ಸಲ್ಲಿಸುವಂತೆ ಪ್ರಕರಣದಲ್ಲಿ ನ್ಯಾಯಾಲಯದ ನೆರವುಗಾರರಾಗಿರುವ...