Homeಮುಖಪುಟ'ರಾಜಕೀಯ ಪ್ರೇರಿತ': ಪೌರತ್ವಕ್ಕೂ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರಿತ್ತು ಎಂಬ ಆರೋಪ ನಿರಾಕರಿಸಿದ ಸೋನಿಯಾ ಗಾಂಧಿ

‘ರಾಜಕೀಯ ಪ್ರೇರಿತ’: ಪೌರತ್ವಕ್ಕೂ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರಿತ್ತು ಎಂಬ ಆರೋಪ ನಿರಾಕರಿಸಿದ ಸೋನಿಯಾ ಗಾಂಧಿ

- Advertisement -
- Advertisement -

ಭಾರತದ ನಾಗರಿಕತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲಾಗಿತ್ತು ಎಂಬ ಆರೋಪದ ಮೇಲೆ ತನ್ನ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋರಿರುವ ಅರ್ಜಿಯು ‘ಸಂಪೂರ್ಣ ರಾಜಕೀಯ ಪ್ರೇರಿತ, ಕಾನೂನು ಪ್ರಕ್ರಿಯೆಯ ದುರುಪಯೋಗ’ ಎಂಬುವುದಾಗಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹೇಳಿದ್ದಾರೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

ಎಫ್‌ಐಆರ್ ದಾಖಲಿಸುವಂತೆ ಕೋರಿ ವಿಕಾಸ್ ತ್ರಿಪಾಠಿ ಎಂಬವರು ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ಈ ಅರ್ಜಿಗೆ ಸೋನಿಯಾ ಗಾಂಧಿ ಮೇಲಿನಂತೆ ಪ್ರತಿಕ್ರಿಯಿಸಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ಈ ಪ್ರಕರಣ ಶನಿವಾರ (ಫೆ.7) ವಿಶೇಷ ನ್ಯಾಯಾಧೀಶ (ಪಿಸಿ ಕಾಯ್ದೆ) ವಿಶಾಲ್ ಗೋಗ್ನೆ ಅವರ ಮುಂದೆ ವಿಚಾರಣೆಗೆ ಬಂದಿತ್ತು. ಸೋನಿಯಾ ಗಾಂಧಿ ಪ್ರತಿಕ್ರಿಯೆ ಸಲ್ಲಿಸಿದ್ದಾರೆ ಎಂದು ಗಮನಿಸಿದ ನ್ಯಾಯಾಧೀಶರು. ಫೆ. 21ರಂದು ವಾದ ಮಂಡನೆಗೆ ಪ್ರಕರಣವನ್ನು ಪಟ್ಟಿ ಮಾಡಿದ್ದಾರೆ ಎಂದು ವರದಿ ತಿಳಿಸಿದೆ.

ತ್ರಿಪಾಠಿ ಸಲ್ಲಿಸಿದ್ದ ಅರ್ಜಿಯನ್ನು ಆರಂಭದಲ್ಲಿ ಸೆಪ್ಟೆಂಬರ್ 11, 2025 ರಂದು ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (ಎಸಿಎಂಎಂ) ವೈಭವ್ ಚೌರಾಸಿಯಾ ಅವರು ವಜಾಗೊಳಿಸಿದ್ದರು. ಇದನ್ನು ಪ್ರಶ್ನಿಸಿ ತ್ರಿಪಾಠಿ ಸೆಷನ್ಸ್ ನ್ಯಾಯಾಲಯದಲ್ಲಿ ಮರು ಪರಿಶೀಲನೆ ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿ ಸಂಬಂಧ ನ್ಯಾಯಾಲಯವು ಡಿಸೆಂಬರ್ 9, 2025 ರಂದು ಸೋನಿಯಾ ಗಾಂಧಿಯವರಿಗೆ ನೋಟಿಸ್ ಜಾರಿಗೊಳಿಸಿತ್ತು.

1983ರ ಏಪ್ರಿಲ್‌ನಲ್ಲಿ ಸೋನಿಯಾ ಗಾಂಧಿಯವರು ಭಾರತದ ಪೌರತ್ವ ಪಡೆದಿದ್ದಾರೆ. ಆದರೆ, ಅದಕ್ಕೂ ಮುನ್ನ 1980ರಲ್ಲಿ ನವದೆಹಲಿ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಅವರ ಹೆಸರನ್ನು ಸೇರಿಸಲಾಗಿತ್ತು ಎಂಬುವುದು ತ್ರಿಪಾಠಿ ಅವರ ಆರೋಪವಾಗಿದೆ.

1980ರಲ್ಲಿ ಸೋನಿಯಾ ಗಾಂಧಿಯವರ ಹೆಸರನ್ನು ಮತದಾರರ ಪಟ್ಟಿಗೆ ಸೇರಿಸಲಾಗಿತ್ತು. ನಂತರ 1982ರಲ್ಲಿ ಅದನ್ನು ಅಳಿಸಲಾಯಿತು. ಆ ಬಳಿಕ 1983ರಲ್ಲಿ ಮತ್ತೆ ಸೇರಿಸಲಾಯಿತು ಎಂದು ತ್ರಿಪಾಠಿ ಹೇಳಿದ್ದಾರೆ.

ಪ್ರಕರಣ ಸಂಬಂಧ ನ್ಯಾಯಾಲಯಕ್ಕೆ ಸಲ್ಲಿಸಿರುವ ಸಂಕ್ಷಿಪ್ತ ಪ್ರತಿಕ್ರಿಯೆಯಲ್ಲಿ ಸೋನಿಯಾ ಗಾಂಧಿ ತಮ್ಮ ವಿರುದ್ಧದ ಆರೋಪವನ್ನು ಬಲವಾಗಿ ವಿರೋಧಿಸಿದ್ದಾರೆ. ಈ ದೂರು ಕೇವಲ ಊಹೆಗಳು, ಮಾಧ್ಯಮ ವರದಿಗಳು ಮತ್ತು ಕಾಲ್ಪನಿಕ ವಿಷಯಗಳನ್ನು ಆಧರಿಸಿದೆಯೇ ಹೊರತು, ಯಾವುದೇ ಮೂಲಭೂತ ದಾಖಲೆಗಳನ್ನು ಪುರಾವೆಯಾಗಿ ಒದಗಿಸಿಲ್ಲ ಎಂದು ಅವರು ವಾದಿಸಿದ್ದಾರೆ. ಅಂದರೆ, ತನ್ನ ಮೇಲಿನ ಆರೋಪಗಳಿಗೆ ಯಾವುದೇ ಭದ್ರವಾದ ಅಡಿಪಾಯ ಅಥವಾ ಅಧಿಕೃತ ದಾಖಲೆಗಳಿಲ್ಲ ಎಂದು ಸೋನಿಯಾ ಗಾಂಧಿ ಈ ಮೂಲಕ ಸ್ಪಷ್ಟಪಡಿಸಿದ್ದಾರೆ.

“ದೂರುದಾರರು ಯಾವುದೇ ಆಧಾರವಿಲ್ಲದೆ ಅತ್ಯಂತ ಗಂಭೀರವಾದ ಆರೋಪಗಳನ್ನು ಬೇಜವಾಬ್ದಾರಿಯಿಂದ ಮಾಡಿದ್ದಾರೆ. ಈ ಆರೋಪಗಳು ಕೇವಲ ಅವರ ಸ್ವಂತ ಕಲ್ಪನೆ, ವೈಯಕ್ತಿಕ ಅಭಿಪ್ರಾಯ ಅಥವಾ ಅನಗತ್ಯ ಊಹೆಗಳನ್ನು ಆಧರಿಸಿವೆ ಹೊರತು, ಅದರಲ್ಲಿ ಯಾವುದೇ ಸತ್ಯಾಂಶವಿಲ್ಲ” ಎಂದಿದ್ದಾರೆ.

“ದೂರುದಾರರು ಮತದಾರರ ನೋಂದಣಿಗೆ ಸಲ್ಲಿಸಿದ ಎನ್ನಲಾದ ಅರ್ಜಿಗಳ ಪ್ರತಿಗಳು, ಪೌರತ್ವಕ್ಕೆ ಸಂಬಂಧಿಸಿದ ದಾಖಲೆಗಳು ಅಥವಾ ಯಾವುದೇ ದಾಖಲೆಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿಲ್ಲ. ಅಷ್ಟೇ ಅಲ್ಲದೆ, ಅಂತಹ ದಾಖಲೆಗಳನ್ನು ಕಾನೂನುಬದ್ಧವಾಗಿ ಪಡೆದುಕೊಳ್ಳಲು ಯಾವುದೇ ಪ್ರಯತ್ನವನ್ನೂ ಮಾಡಿಲ್ಲ. ಅವರು ಕೇವಲ ಗಾಳಿಯಲ್ಲಿ ಗುಂಡು ಹೊಡೆಯುವಂತೆ ಯಾವುದೇ ಆಧಾರವಿಲ್ಲದೆ ಆರೋಪ ಮಾಡಿದ್ದಾರೆಯೇ ಹೊರತು, ಅದನ್ನು ಸಾಬೀತುಪಡಿಸುವ ಒಂದು ಅಧಿಕೃತ ದಾಖಲೆಯೂ ಅವರ ಬಳಿ ಇಲ್ಲ” ಎಂದು ಹೇಳಿದ್ದಾರೆ.

ದೂರುದಾರರಾದ ವಿಕಾಸ್ ತ್ರಿಪಾಠಿ ಅವರು ತಮ್ಮ ದೂರಿನ 8ನೇ ಪ್ಯಾರಾದಲ್ಲಿ, “1982ರಲ್ಲಿ ಸಾರ್ವಜನಿಕರಿಂದ ಭಾರಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ಅವರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿತ್ತು” ಎಂದು ಉಲ್ಲೇಖಿಸಿದ್ದಾರೆ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಸೋನಿಯಾ ಗಾಂಧಿ, “ಸಾರ್ವಜನಿಕರು ಅಥವಾ ಮಾಧ್ಯಮಗಳು ನಡೆಸಿದ್ದವು ಎನ್ನಲಾದ ಈ ಪ್ರತಿಭಟನೆಗಳು ನಡೆದು 43 ವರ್ಷಗಳ ನಂತರ, ದೂರುದಾರರು ಇದನ್ನು ‘ತಮ್ಮ ನೇರ ಜ್ಞಾನಕ್ಕೆ ಬಂದ ವಿಷಯ’ ಎಂದು ಕ್ರಿಮಿನಲ್ ದೂರಿನಲ್ಲಿ ದಾಖಲಿಸಿರುವುದು ಕುತೂಹಲಕಾರಿಯಾಗಿದೆ” ಎಂದಿದ್ದಾರೆ.

“ಈ ಆರೋಪಗಳು 1980 ರಿಂದ 1983 ರ ಅವಧಿಯಲ್ಲಿ ನಡೆದ ಘಟನೆಗಳಿಗೆ ಸಂಬಂಧಿಸಿವೆ ಮತ್ತು ದಶಕಗಳ ಹಿಂದೆಯೇ ಚರ್ಚೆಗೆ ಬಂದು ತಣ್ಣಗಾಗಿದ್ದ ವಿವಾದಗಳನ್ನು ಆಧರಿಸಿವೆ. ಇಷ್ಟು ದೀರ್ಘಕಾಲದ ನಂತರ, ಅಂದರೆ 40 ವರ್ಷಗಳ ಬಳಿಕ ಇಂತಹ ಹಳೆಯ ವಿಷಯಗಳನ್ನು ಮತ್ತೆ ಕೆದಕುವುದರಿಂದ, ಅವುಗಳಿಗೆ ಸಂಬಂಧಿಸಿದ ನಂಬಲರ್ಹ ಪುರಾವೆಗಳನ್ನು ಒದಗಿಸುವುದು ಅಸಾಧ್ಯ” ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.

“ಈ ವಿಳಂಬಿತ ದೂರು “ದುರುದ್ದೇಶಪೂರಿತ ಕಾನೂನು ಕ್ರಮ”. ಅಲ್ಲದೆ, ಇಷ್ಟು ದಶಕಗಳ ನಂತರ ವಿಚಾರಣೆ ನಡೆಸುವುದು ವ್ಯಕ್ತಿಯ ಘನತೆ ಮತ್ತು ನ್ಯಾಯಯುತ ವಿಚಾರಣೆಯ ಹಕ್ಕನ್ನು ಕಸಿದುಕೊಂಡಂತಾಗುತ್ತದೆ. ಇದು ಸಂವಿಧಾನದ 21ನೇ ವಿಧಿಯ (ಜೀವಿಸುವ ಮತ್ತು ವೈಯಕ್ತಿಕ ಸ್ವಾತಂತ್ರ್ಯದ ಹಕ್ಕು) ಉಲ್ಲಂಘನೆಯಾಗಿದೆ” ಎಂದು ಸೋನಿಯಾ ಗಾಂಧಿ ಪ್ರತಿಪಾದಿಸಿದ್ದಾರೆ.

“ಪೌರತ್ವಕ್ಕೆ ಸಂಬಂಧಿಸಿದ ಪ್ರಶ್ನೆಗಳು ಮತ್ತು ನಿರ್ಧಾರಗಳು ಸಂಪೂರ್ಣವಾಗಿ ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುತ್ತವೆ. ಅದೇ ರೀತಿ, ಮತದಾರರ ಪಟ್ಟಿಗೆ ಸಂಬಂಧಿಸಿದ ಯಾವುದೇ ವಿವಾದಗಳು ಅಥವಾ ಆಕ್ಷೇಪಣೆಗಳನ್ನು ನಿರ್ವಹಿಸುವ ಸಂಪೂರ್ಣ ಅಧಿಕಾರ ಭಾರತೀಯ ಚುನಾವಣಾ ಆಯೋಗಕ್ಕೆ ಮಾತ್ರ ಇರುತ್ತದೆ” ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.

“ಭಾರತೀಯ ದಂಡ ಸಂಹಿತೆ (ಐಪಿಸಿ) ಅಥವಾ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್‌) ಅಡಿಯಲ್ಲಿ ಅಪರಾಧಗಳೆಂದು ಬಿಂಬಿಸಿ, ಪೌರತ್ವ ಅಥವಾ ಮತದಾರರ ಪಟ್ಟಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಖಾಸಗಿ ದೂರುಗಳನ್ನು ವಿಚಾರಣೆಗೆ ತೆಗೆದುಕೊಳ್ಳಲು ಕ್ರಿಮಿನಲ್ ನ್ಯಾಯಾಲಯಗಳಿಗೆ ಅಧಿಕಾರವಿಲ್ಲ” ಎಂದು ಸೋನಿಯಾ ಗಾಂಧಿ ವಾದಿಸಿದ್ದಾರೆ.

“ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗದ ನಡುವಿನ ಅಧಿಕಾರ ವ್ಯಾಪ್ತಿಯನ್ನು ಇದು ಮೀರುತ್ತದೆ. ಪೌರತ್ವ ಮತ್ತು ಚುನಾವಣೆ ನಿರ್ವಹಣೆ ಆಯಾ ಸ್ವತಂತ್ರ ಸಂಸ್ಥೆಗಳ ಜವಾಬ್ದಾರಿಯಾಗಿದೆ. ಸಂವಿಧಾನದ 329ನೇ ವಿಧಿಯು ಚುನಾವಣಾ ಪ್ರಕ್ರಿಯೆಗಳಲ್ಲಿ ನ್ಯಾಯಾಂಗದ ಹಸ್ತಕ್ಷೇಪವನ್ನು ಸ್ಪಷ್ಟವಾಗಿ ನಿರ್ಬಂಧಿಸುತ್ತದೆ. ಮತದಾರರ ಪಟ್ಟಿ ತಯಾರಿಸುವುದು ಚುನಾವಣಾ ಪ್ರಕ್ರಿಯೆಯ ಭಾಗವಾಗಿರುವುದರಿಂದ, ಅದನ್ನು ಕ್ರಿಮಿನಲ್ ನ್ಯಾಯಾಲಯದಲ್ಲಿ ಪ್ರಶ್ನಿಸುವುದು ಅಸಂವಿಧಾನಿಕ ಎಂದು ಸೋನಿಯಾ ಗಾಂಧಿ ಪ್ರತಿಪಾದಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...