Homeಮುಖಪುಟರಾಜಕೀಯವಾಗಿ ತಟಸ್ಥರಾಗಿದ್ದರೆ ರಷ್ಯಾ ಕ್ರೀಡಾಪಟುಗಳು ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಹುದು: ಐಒಸಿ

ರಾಜಕೀಯವಾಗಿ ತಟಸ್ಥರಾಗಿದ್ದರೆ ರಷ್ಯಾ ಕ್ರೀಡಾಪಟುಗಳು ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಹುದು: ಐಒಸಿ

- Advertisement -
- Advertisement -

ರಷ್ಯಾ ಮತ್ತು ಬೆಲರೂಸಿಯನ್ ಅಥ್ಲೀಟ್‌ಗಳು ರಾಜಕೀಯವಾಗಿ ತಟಸ್ಥರಾಗಿದ್ದರೆ 2024ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಸ್ಪರ್ಧಿಸಬಹುದು ಎಂದು ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ) ಹೇಳಿದೆ. ಈ ಹಿಂದಿನ ನಿಷೇಧ ಆದೇಶವನ್ನು ಹಿಂಪಡೆದಿದೆ.

ರಷ್ಯಾದ ಅಥ್ಲೀಟ್‌ಗಳಿಗೆ ಭಾಗವಹಿಸಲು ಅವಕಾಶ ನೀಡಿದರೂ, ಅಲ್ಲಿನ ರಾಷ್ಟ್ರೀಯ ಒಲಿಂಪಿಕ್ ಸಮಿತಿಯ ಅಮಾನತು ಮುಂದುವರಿಯಲಿದೆ ಎಂದು ಐಒಸಿ ಹೇಳಿದೆ. ಉಕ್ರೇನ್ ರಾಷ್ಟ್ರೀಯ ಒಲಿಂಪಿಕ್ ಸಮಿತಿಯ ಪ್ರಾದೇಶಿಕ ಸಮಗ್ರತೆ ಉಲ್ಲಂಘನೆಗಾಗಿ ರಷ್ಯಾದ ರಾಷ್ಟ್ರೀಯ ಒಲಿಂಪಿಕ್ ಸಮಿತಿಯನ್ನು ಒಲಿಂಪಿಕ್‌ನಿಂದ ಹೊರಗಿಡಲಾಗಿದೆ.

ರಷ್ಯಾ ಅಥ್ಲೀಟ್‌ಗಳಿಗೆ ಅವಕಾಶ ನೀಡುವುವ ಐಒಸಿಯ ನಿರ್ಧಾರವನ್ನು ಪಾಶ್ಚಿಮಾತ್ಯ ನಾಯಕರು ತೀವ್ರವಾಗಿ ಖಂಡಿಸಿದ್ದಾರೆ. ಐಒಸಿ ಒಲಿಂಪಿಕ್‌ನ್ನು ಶಸ್ತ್ರಾಸ್ತ್ರಗೊಳಿಸಲು ರಷ್ಯಾಗೆ ಹಸಿರು ನಿಶಾನೆ ತೋರಿಸುತ್ತಿದೆ ಎಂದು ಉಕ್ರೇನ್ ವಿದೇಶಾಂಗ ಸಚಿವ ಡಿಮಿಟ್ರೋ ಕುಲೆಬಾ ಕಿಡಿಕಾರಿದ್ದಾರೆ.

ಸರ್ಕಾರದ ನಿರ್ಧಾರಗಳಿಗೆ ವೈಯಕ್ತಿಕವಾಗಿ ಕ್ರೀಡಾಪಟುಗಳನ್ನು ಹೊಣೆಗಾರರನ್ನಾಗಿ ಮಾಡದಿರುವುದು ಒಳ್ಳೆಯದು ಎಂದು ಐಒಸಿ ಹೇಳಿದೆ. ಸರ್ಕಾರದ ನಿರ್ಧಾರಕ್ಕೆ ಕ್ರೀಡಾಪಟುಗಳಿಗೆ ಶಿಕ್ಷೆ ವಿಧಿಸುವುದು ಸರಿಯಲ್ಲ ಎಂದು ಐಒಸಿ ಅಧ್ಯಕ್ಷ ಥಾಮಸ್ ಬಾಚ್ ಹೇಳಿದ್ದಾರೆ.

ಆಸ್ಟ್ರೇಲಿಯಾ ಸೇರಿದಂತೆ 30ಕ್ಕೂ ಹೆಚ್ಚು ಪಾಶ್ಚಿಮಾತ್ಯ ರಾಷ್ಟ್ರಗಳು ಕ್ರೀಡಾಕೂಟದಲ್ಲಿ ರಷ್ಯಾದ ಭಾಗವಹಿಸುವಿಕೆಯನ್ನು ಸಂಪೂರ್ಣವಾಗಿ ನಿಷೇಧಿಸುವಂತೆ ಈ ಹಿಂದೆ ಕರೆ ನೀಡಿದ್ದವು.

ರಷ್ಯಾ ಕ್ರೀಡಾಪಟುಗಳು ಒಲಿಂಪಿಕ್‌ನಲ್ಲಿ ಭಾಗವಹಿಸಲು ಅವಕಾಶ ನೀಡಿದರೂ, ಅವರಿಗೆ ಕೆಲವೊಂದು ಕಠಿಣ ನಿಯಮಗಳನ್ನು ವಿಧಿಸಲಾಗಿದೆ.

“ಕ್ರೀಡಾಪಟುಗಳು ರಷ್ಯಾದ ಆಕ್ರಮಣದ ಮುಕ್ತ ಬೆಂಬಲಿಗರಾಗಿರಬಾರದು. ರಷ್ಯಾ ಅಥವಾ ಬೆಲರೂಸಿಯನ್ ಮಿಲಿಟರಿ ಅಥವಾ ಭದ್ರತಾ ಸೇವೆಗಳೊಂದಿಗೆ ಸಂಯೋಜಿತವಾಗಿರಬಾರದು. ಅವರು ತಮ್ಮ ತಾಯ್ನಾಡಿನ ಧ್ವಜದ ಅಡಿಯಲ್ಲಿ ಅಥವಾ ರಾಷ್ಟ್ರೀಯ ಲಾಂಛನಗಳು ಅಥವಾ ಗೀತೆಗಳೊಂದಿಗೆ ಸ್ಪರ್ಧಿಸುವಂತಿಲ್ಲ. ಎಂದು ಸೂಚಿಲಾಗಿದೆ.

ಈ ನಿಯಮಗಳ ಅಡಿಯಲ್ಲಿ ಕೇವಲ 11 ಕ್ರೀಡಾಪಟುಗಳು, ಆರು ರಷ್ಯನ್ನರು ಮತ್ತು ಐದು ಬೆಲರೂಸಿಯನ್ನರು ಅರ್ಹತೆ ಪಡೆಯಲಿದ್ದಾರೆ ಎಂದು ಸಮಿತಿಯು ಅಂದಾಜಿಸಿದೆ.

ಐಒಸಿಯ ನಿರ್ಧಾರದ ವಿರುದ್ಧ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಕಿಡಿ ಕಾರಿದ್ದಾರೆ, ಐಒಸಿ ಹೀಗೆಯೇ ವರ್ತಿಸಿದರೆ ಒಲಿಂಪಿಕ್ ನಾಶವಾಗಲಿದೆ. ಐಒಸಿ ರಾಜಕೀಯ ಪ್ರೇರಿತ ನಿರ್ಧಾರಗಳ ಮೂಲಕ ನಮ್ಮ ತಂಡವನ್ನು ದುರ್ಬಲಗೊಳಿಸು ನೋಡುತ್ತಿದೆ. ನಮ್ಮ ಕ್ರೀಡಾಪಟುಗಳನ್ನು ಪ್ಯಾರಿಸ್‌ಗೆ ಕಳುಹಿಸುವ ಬಗ್ಗೆ ಸೂಕ್ಷವಾಗಿ ಗಮನಿಸಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ : ಅಧ್ಯಕ್ಷೀಯ ಚುನಾವಣೆಯಿಂದ ಟ್ರಂಪ್ ಅನರ್ಹ: ಕೊಲೊರಡೊ ಕೋರ್ಟ್‌ ತೀರ್ಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...