Homeಮುಖಪುಟರಾಜಕೀಯವಾಗಿ ತಟಸ್ಥರಾಗಿದ್ದರೆ ರಷ್ಯಾ ಕ್ರೀಡಾಪಟುಗಳು ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಹುದು: ಐಒಸಿ

ರಾಜಕೀಯವಾಗಿ ತಟಸ್ಥರಾಗಿದ್ದರೆ ರಷ್ಯಾ ಕ್ರೀಡಾಪಟುಗಳು ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಹುದು: ಐಒಸಿ

- Advertisement -
- Advertisement -

ರಷ್ಯಾ ಮತ್ತು ಬೆಲರೂಸಿಯನ್ ಅಥ್ಲೀಟ್‌ಗಳು ರಾಜಕೀಯವಾಗಿ ತಟಸ್ಥರಾಗಿದ್ದರೆ 2024ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಸ್ಪರ್ಧಿಸಬಹುದು ಎಂದು ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ) ಹೇಳಿದೆ. ಈ ಹಿಂದಿನ ನಿಷೇಧ ಆದೇಶವನ್ನು ಹಿಂಪಡೆದಿದೆ.

ರಷ್ಯಾದ ಅಥ್ಲೀಟ್‌ಗಳಿಗೆ ಭಾಗವಹಿಸಲು ಅವಕಾಶ ನೀಡಿದರೂ, ಅಲ್ಲಿನ ರಾಷ್ಟ್ರೀಯ ಒಲಿಂಪಿಕ್ ಸಮಿತಿಯ ಅಮಾನತು ಮುಂದುವರಿಯಲಿದೆ ಎಂದು ಐಒಸಿ ಹೇಳಿದೆ. ಉಕ್ರೇನ್ ರಾಷ್ಟ್ರೀಯ ಒಲಿಂಪಿಕ್ ಸಮಿತಿಯ ಪ್ರಾದೇಶಿಕ ಸಮಗ್ರತೆ ಉಲ್ಲಂಘನೆಗಾಗಿ ರಷ್ಯಾದ ರಾಷ್ಟ್ರೀಯ ಒಲಿಂಪಿಕ್ ಸಮಿತಿಯನ್ನು ಒಲಿಂಪಿಕ್‌ನಿಂದ ಹೊರಗಿಡಲಾಗಿದೆ.

ರಷ್ಯಾ ಅಥ್ಲೀಟ್‌ಗಳಿಗೆ ಅವಕಾಶ ನೀಡುವುವ ಐಒಸಿಯ ನಿರ್ಧಾರವನ್ನು ಪಾಶ್ಚಿಮಾತ್ಯ ನಾಯಕರು ತೀವ್ರವಾಗಿ ಖಂಡಿಸಿದ್ದಾರೆ. ಐಒಸಿ ಒಲಿಂಪಿಕ್‌ನ್ನು ಶಸ್ತ್ರಾಸ್ತ್ರಗೊಳಿಸಲು ರಷ್ಯಾಗೆ ಹಸಿರು ನಿಶಾನೆ ತೋರಿಸುತ್ತಿದೆ ಎಂದು ಉಕ್ರೇನ್ ವಿದೇಶಾಂಗ ಸಚಿವ ಡಿಮಿಟ್ರೋ ಕುಲೆಬಾ ಕಿಡಿಕಾರಿದ್ದಾರೆ.

ಸರ್ಕಾರದ ನಿರ್ಧಾರಗಳಿಗೆ ವೈಯಕ್ತಿಕವಾಗಿ ಕ್ರೀಡಾಪಟುಗಳನ್ನು ಹೊಣೆಗಾರರನ್ನಾಗಿ ಮಾಡದಿರುವುದು ಒಳ್ಳೆಯದು ಎಂದು ಐಒಸಿ ಹೇಳಿದೆ. ಸರ್ಕಾರದ ನಿರ್ಧಾರಕ್ಕೆ ಕ್ರೀಡಾಪಟುಗಳಿಗೆ ಶಿಕ್ಷೆ ವಿಧಿಸುವುದು ಸರಿಯಲ್ಲ ಎಂದು ಐಒಸಿ ಅಧ್ಯಕ್ಷ ಥಾಮಸ್ ಬಾಚ್ ಹೇಳಿದ್ದಾರೆ.

ಆಸ್ಟ್ರೇಲಿಯಾ ಸೇರಿದಂತೆ 30ಕ್ಕೂ ಹೆಚ್ಚು ಪಾಶ್ಚಿಮಾತ್ಯ ರಾಷ್ಟ್ರಗಳು ಕ್ರೀಡಾಕೂಟದಲ್ಲಿ ರಷ್ಯಾದ ಭಾಗವಹಿಸುವಿಕೆಯನ್ನು ಸಂಪೂರ್ಣವಾಗಿ ನಿಷೇಧಿಸುವಂತೆ ಈ ಹಿಂದೆ ಕರೆ ನೀಡಿದ್ದವು.

ರಷ್ಯಾ ಕ್ರೀಡಾಪಟುಗಳು ಒಲಿಂಪಿಕ್‌ನಲ್ಲಿ ಭಾಗವಹಿಸಲು ಅವಕಾಶ ನೀಡಿದರೂ, ಅವರಿಗೆ ಕೆಲವೊಂದು ಕಠಿಣ ನಿಯಮಗಳನ್ನು ವಿಧಿಸಲಾಗಿದೆ.

“ಕ್ರೀಡಾಪಟುಗಳು ರಷ್ಯಾದ ಆಕ್ರಮಣದ ಮುಕ್ತ ಬೆಂಬಲಿಗರಾಗಿರಬಾರದು. ರಷ್ಯಾ ಅಥವಾ ಬೆಲರೂಸಿಯನ್ ಮಿಲಿಟರಿ ಅಥವಾ ಭದ್ರತಾ ಸೇವೆಗಳೊಂದಿಗೆ ಸಂಯೋಜಿತವಾಗಿರಬಾರದು. ಅವರು ತಮ್ಮ ತಾಯ್ನಾಡಿನ ಧ್ವಜದ ಅಡಿಯಲ್ಲಿ ಅಥವಾ ರಾಷ್ಟ್ರೀಯ ಲಾಂಛನಗಳು ಅಥವಾ ಗೀತೆಗಳೊಂದಿಗೆ ಸ್ಪರ್ಧಿಸುವಂತಿಲ್ಲ. ಎಂದು ಸೂಚಿಲಾಗಿದೆ.

ಈ ನಿಯಮಗಳ ಅಡಿಯಲ್ಲಿ ಕೇವಲ 11 ಕ್ರೀಡಾಪಟುಗಳು, ಆರು ರಷ್ಯನ್ನರು ಮತ್ತು ಐದು ಬೆಲರೂಸಿಯನ್ನರು ಅರ್ಹತೆ ಪಡೆಯಲಿದ್ದಾರೆ ಎಂದು ಸಮಿತಿಯು ಅಂದಾಜಿಸಿದೆ.

ಐಒಸಿಯ ನಿರ್ಧಾರದ ವಿರುದ್ಧ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಕಿಡಿ ಕಾರಿದ್ದಾರೆ, ಐಒಸಿ ಹೀಗೆಯೇ ವರ್ತಿಸಿದರೆ ಒಲಿಂಪಿಕ್ ನಾಶವಾಗಲಿದೆ. ಐಒಸಿ ರಾಜಕೀಯ ಪ್ರೇರಿತ ನಿರ್ಧಾರಗಳ ಮೂಲಕ ನಮ್ಮ ತಂಡವನ್ನು ದುರ್ಬಲಗೊಳಿಸು ನೋಡುತ್ತಿದೆ. ನಮ್ಮ ಕ್ರೀಡಾಪಟುಗಳನ್ನು ಪ್ಯಾರಿಸ್‌ಗೆ ಕಳುಹಿಸುವ ಬಗ್ಗೆ ಸೂಕ್ಷವಾಗಿ ಗಮನಿಸಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ : ಅಧ್ಯಕ್ಷೀಯ ಚುನಾವಣೆಯಿಂದ ಟ್ರಂಪ್ ಅನರ್ಹ: ಕೊಲೊರಡೊ ಕೋರ್ಟ್‌ ತೀರ್ಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...