Homeಮುಖಪುಟಜಾತಿವಾದಿ ಶಿಕ್ಷಕರ ಗುಂಪಿನ ಮಸಲತ್ತು : ಮಹಿಳಾ ಡಿಡಿಪಿಐ ಎತ್ತಂಗಡಿಗೆ ನಡೆದಿದೆಯಾ ಕಸರತ್ತು!

ಜಾತಿವಾದಿ ಶಿಕ್ಷಕರ ಗುಂಪಿನ ಮಸಲತ್ತು : ಮಹಿಳಾ ಡಿಡಿಪಿಐ ಎತ್ತಂಗಡಿಗೆ ನಡೆದಿದೆಯಾ ಕಸರತ್ತು!

- Advertisement -
- Advertisement -

ತುಮಕೂರು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಡಿಡಿಪಿಐ ಕಾಮಾಕ್ಷಮ್ಮ ಅವರ ಎತ್ತಂಗಡಿಗೆ ಜಾತಿವಾದಿ ‘ರಾಜಕಾರಣಿ ಶಿಕ್ಷಕರ ಗುಂಪು’ ಲಾಬಿ ನಡೆಸಿದೆ. ಡಿಡಿಪಿಐ ತಮ್ಮ ತಾಳಕ್ಕೆ ತಕ್ಕಂತೆ ಕುಣಿಯಬೇಕು. ಹೇಳಿದಂತೆ ಕೇಳಬೇಕು ಎಂಬುದೇ ಈ ಶಿಕ್ಷಕರ ಗುಂಪಿನ ಉದ್ದೇಶ. ಕಾರ್ಯಸಾಧನೆಗೆ ಯಾರ ಕಾಲನ್ನಾದರೂ ಹಿಡಿಯಬಲ್ಲರಾದ ಇವರು ತಮ್ಮ ಉದ್ದೇಶ ಈಡೇರದಿದ್ದರೆ ಯಾರ ಕಾಲೆಳೆಸಲು ಸಹ ಸಿದ್ಧರು.

ಶಿಕ್ಷಣ ಇಲಾಖೆಯಲ್ಲಿ ಶಿಕ್ಷಕರ ವರ್ಗಾವಣೆಯನ್ನು ಕೇಂದ್ರೀಕರಣಗೊಳಿಸಿದೆ. ಕೌನ್ಸಿಲ್ ಮೂಲಕವೇ ಶಿಕ್ಷಕರ ವರ್ಗಾವಣೆ ನಡೆಯುತ್ತದೆ. ವಸ್ತುಸ್ಥಿತಿ ಹೀಗಿದ್ದರೂ ವರ್ಗಾವಣೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಡಿಡಿಪಿಐ ಭ್ರಷ್ಟಾಚಾರ ನಡೆಸುತ್ತಿದ್ದಾರೆ ಎಂಬ ವದಂತಿಯನ್ನು ಹಬ್ಬಿಸಲಾಗಿದೆ.

ಮೇಲಧಿಕಾರಿಗಳು ಅಧಿಕಾರ ನೀಡಿದರೆ ಮಾತ್ರ ಡಿಡಿಪಿಐಗೆ ಶಿಕ್ಷಕರ ವರ್ಗಾವಣೆ ಮಾಡುವ ಅಧಿಕಾರವಿದೆ. ವಿಶೇಷ ಪ್ರಕರಣಗಳಲ್ಲಿಯೂ ಮೇಲಿನ ಆದೇಶವಿಲ್ಲದೆ ಏನೂ ಮಾಡುವ ಹಾಗಿಲ್ಲ. ಆದರೆ ಶಿಕ್ಷಕರ ಡೆಪ್ಯೂಟೇಶನ್ ಮಾಡುವ ಅಧಿಕಾರ ಡಿಡಿಪಿಐಗೆ ಇದೆ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ. ಆದರೆ ಕೆಲವು ಜಾತಿವಾದಿ ಪಟ್ಟಭದ್ರ ಶಿಕ್ಷಕರ ಗುಂಪು ತಾವು ಹೇಳಿದಂತೆ ಕೇಳುತ್ತಿಲ್ಲ ಎಂಬ ಕಾರಣಕ್ಕೆ ಡಿಡಿಪಿಐ ಕಾಮಾಕ್ಷಮ್ಮ ವರ್ಗಾವಣೆಗೆ ಮಸಲತ್ತು ನಡೆಸಿದೆ.

ಕಾಮಾಕ್ಷಮ್ಮ

ಕಾಮಾಕ್ಷಮ್ಮ ಅವರು ಈ ಹಿಂದೆ ಬಾಗಲಕೋಟೆಯಲ್ಲಿ ಕೆಲಸ ಮಾಡಿಬಂದವರು. ಬಾಗಲಕೋಟೆಯಲ್ಲಿ ಉತ್ತಮ ಕೆಲಸ ಮಾಡಿ ಹೆಸರು ಮಾಡಿದ್ದರು. ತುಮಕೂರಿಗೆ ಬಂದ ಮೇಲೆ ಜಾತಿವಾದಿ ರಾಜಕಾರಣಿ ಶಿಕ್ಷಕರ ಗುಂಪು ಡಿಡಿಪಿಐ ವಿರುದ್ಧ ವದಂತಿಗಳನ್ನು ಹಬ್ಬಿಸುತ್ತಲೇ ಇದೆ. ಮಹಿಳಾ ಅಧಿಕಾರಿಯನ್ನು ಎತ್ತಂಗಡಿ ಮಾಡಿಸಿ ತಮ್ಮ ಮಾತು ಕೇಳುವವರನ್ನು ತಂದು ಹಾಕಿಸಿಕೊಳ್ಳುವುದು ಈ ಗುಂಪಿನ ಉದ್ದೇಶವಾಗಿದೆ ಎಂದು ಹೇಳಾಗುತ್ತಿದೆ.

ಇದೀಗ ಮತ್ತೊಂದು ಸುದ್ದಿ ಹಬ್ಬಿದೆ. ತುಮಕೂರಿನ ಡಾ. ರಾಧಾಕೃಷ್ಣನ್ ರಸ್ತೆಯ ಸೋಮೇಶ್ವರ ಮುಖ್ಯರಸ್ತೆಯ ತಿರುವಿನಲ್ಲಿರುವ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಕಚೇರಿ ಆವರಣದಲ್ಲಿ ದೊಡ್ಡದೊಂದು ಗುಂಡಿ ತೆಗೆಯಲಾಗಿದೆ. ಈ ಮಾಹಿತಿ ಜಿಲ್ಲಾ ಪಂಚಾಯಿತಿ ಸಿಇಒ ಶುಭ ಕಲ್ಯಾಣ್ ಅವರಿಗೆ ತಲುಪಿ ರಾತ್ರಿ 9 ಗಂಟೆಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಅಷ್ಟೊತ್ತಿಗೆ ಡಿಡಿಪಿಐ ಕಾಮಾಕ್ಷಮ್ಮ ಅವರ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಹಾಗಾಗಿ ಮಹಿಳಾ ಅಧಿಕಾರಿಯ ಪತಿಗೆ ಕರೆ ಮಾಡಿದ ಸಿಐಒ ಸ್ಥಳಕ್ಕೆ ಕರೆಸಿಕೊಂಡು ವಿವರ ಕೇಳಿದ್ದಾರೆ. ಕಸ ಮುಚ್ಚಲು ಗುಂಡಿ ತೋಡಿ ಎಂದು ನಾನೇ ಹೇಳಿದ್ದ ಎಂದು ಡಿಡಿಪಿಐ ಒಪ್ಪಿಕೊಂಡಿದ್ದಾರೆ. ಹಾಗಾಗಿ ಸಿಇಓ ಶುಭಕಲ್ಯಾಣ್ ಗುಂಡಿಯನ್ನು ಸೋಮವಾರದವರೆಗೆ ಮುಚ್ಚಬಾರದು. ಸ್ಧಳದಲ್ಲಿ ಸಿಸಿ ಕ್ಯಾಮೆರ ಅವಳವಡಿಸಬೇಕೆಂದು ಸೂಚಿಸಿ ಹೋಗಿದ್ದಾರೆ.

ಈ ಸುದ್ದಿಗೆ ಈಗ ರೆಕ್ಕೆಪುಕ್ಕಗಳು ಬಂದಿವೆ. ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ಕೆಲ ಫೈಲ್ ಗಳನ್ನು ಮಣ್ಣಿನಲ್ಲಿ ಮುಚ್ಚಿಹಾಕಲು ಡಿಡಿಪಿಐ ಯತ್ನಿಸಿದ್ದಾರೆ ಎಂಬ ಆರೋಪ ತೇಲಿಬಿಡಲಾಗಿದೆ. ಗುಂಡಿ ತೋಡಿರುವುದು ಅನುಮಾನ ಹುಟ್ಟುಹಾಕುತ್ತದೆ ಸರಿ. ಆದರೆ ಎಂಥಾ ಮೂರ್ಖರು ಕೂಡ ದಾಖಲೆಗಳನ್ನು ಕಣ್ಣಮುಂದೆಯೇ ಹೂತು ಹಾಕುವಷ್ಟು ಅಧಿಕಾರಿಗಳು ದಡ್ಡರಲ್ಲ. ಹಾಗಾಗಿ ಡಿಡಿಪಿಐ ಅವರನ್ನು ವರ್ಗಾವಣೆ ಮಾಡಿಸುವುದೇ ಈ ಕುತಂತ್ರದ ಹಿಂದಿನ ಪ್ರಮುಖ ಉದ್ದೇಶವಾಗಿದೆ ಎಂದು ಹೇಳಲಾಗುತ್ತಿದೆ.

ಗುಬ್ಬಿಯ ತಹಶೀಲ್ದಾರ್ ಮಮತ, ಜಿಲ್ಲೆಯ ಆರೋಗ್ಯಾಧಿಕಾರಿ ಚಂದ್ರಿಕಾ ಎತ್ತಂಗಡಿಯಾದ ಮೇಲೆ ಈಗ ಡಿಡಿಪಿಐ ಕಾಮಾಕ್ಷಮ್ಮ ಅವರನ್ನು ವರ್ಗಾವಣೆ ಮಾಡಿಸಲು ಪಿತೂರು ನಡೆದಿದೆ. ಅತ್ಯಂತ ಹಿಂದುಳಿದ ಸವಿತಾ ಸಮಾಜಕ್ಕೆ ಸೇರಿರುವ ಕಾಮಾಕ್ಷಮ್ಮ ಅವರ ಕೈಕೆಳಗೆ ಕೆಲಸ ಮಾಡಲು ಒಪ್ಪದ ಜಾತಿವಾದಿ ಮನಸ್ಸುಗಳು ಅನಗತ್ಯವಾಗಿ ಹುಯ್ಯಿಲೆಬ್ಬಿಸಿ ಮಹಿಳಾ ಅಧಿಕಾರಿಯ ನೈತಿಕತೆಯನ್ನು ಕುಗ್ಗಿಸುವ ಪ್ರಯತ್ನಗಳು ನಡೆಯುತ್ತಿರುವುದು ಶೋಚನೀಯ ಸಂಗತಿ ಎಂದು ಹೆಸರು ಹೇಳದ ಅಧಿಕಾರಿಯೊಬ್ಬರು ಹೇಳಿದ್ದಾರೆ.


ಮತ್ತಷ್ಟು ಸುದ್ದಿಗಳು

ಬೋಧನಾ ಕೆಲಸದಿಂದ ವಜಾ: ಬದುಕು ಸಾಗಿಸಲು ಬಾಳೆಹಣ್ಣು ಮಾರಾಟ ಆರಂಭಿಸಿದ ಶಿಕ್ಷಕ!

BJP ಮುಖಂಡನ ವಿರುದ್ಧ ಲೈಂಗಿಕ ದೌರ್ಜನ್ಯ ದೂರು; ಮಾರಕಾಸ್ತ್ರಗಳಿಂದ JDS ಕಾರ್ಯಕರ್ತರ ಮೇಲೆ ಹಲ್ಲೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. DDPI ಕಾಮಾಕ್ಷಮ್ಮನವರು ಹೆಣ್ಣು ಎಂಬ ಕಾರಣಕ್ಕೆ, ಕೆಲವು ಪಟ್ಟಭದ್ರ ಹಿತಾಸಕ್ತಿ, ಜಾತಿವಾದಿ ಶಿಕ್ಷಕರ ಮತ್ತು ಕಾಣದ ಕೈಗಳ ಮಸಲತ್ತಿನಿಂದ ವರ್ಗಾವಣೆ ಮಾಡುತ್ತಿರುವುದು ಪ್ರಜಾಪ್ರಭುತ್ವ ತತ್ವ ವಿ ೋಧಿ.

  2. ಇಂತಹ ಮನುವಾದಿ ಶಿಕ್ಷಕರು ಮಕ್ಕಳಿಗೆ ಬೋದಿಸುವುದಾದರೂ ಏನನ್ನು? ವಿದ್ಯೆ ಮನುಷ್ಯನನ್ನು ವಿವೇಕಿಯನ್ನಾಗಿಸಬೇಕು. ಆದರಿಲ್ಲಿ ಶಿಕ್ಷಕರೇ ಜಾತೀವಾದಿಗಳಾಗಿದ್ದಾರೆ. ಇದು ನಮ್ಮ ದುರಂತ. ಜಾತೀಯತೆ ಎಂಬ ರೋಗಾಣು ನಮ್ಮ ದೇಶದಿಂದ ತೊಲಗುವುದೇ ಇಲ್ಲವೇನೋ?

LEAVE A REPLY

Please enter your comment!
Please enter your name here

- Advertisment -

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...