Homeಮುಖಪುಟಜಾತಿವಾದಿ ಶಿಕ್ಷಕರ ಗುಂಪಿನ ಮಸಲತ್ತು : ಮಹಿಳಾ ಡಿಡಿಪಿಐ ಎತ್ತಂಗಡಿಗೆ ನಡೆದಿದೆಯಾ ಕಸರತ್ತು!

ಜಾತಿವಾದಿ ಶಿಕ್ಷಕರ ಗುಂಪಿನ ಮಸಲತ್ತು : ಮಹಿಳಾ ಡಿಡಿಪಿಐ ಎತ್ತಂಗಡಿಗೆ ನಡೆದಿದೆಯಾ ಕಸರತ್ತು!

- Advertisement -
- Advertisement -

ತುಮಕೂರು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಡಿಡಿಪಿಐ ಕಾಮಾಕ್ಷಮ್ಮ ಅವರ ಎತ್ತಂಗಡಿಗೆ ಜಾತಿವಾದಿ ‘ರಾಜಕಾರಣಿ ಶಿಕ್ಷಕರ ಗುಂಪು’ ಲಾಬಿ ನಡೆಸಿದೆ. ಡಿಡಿಪಿಐ ತಮ್ಮ ತಾಳಕ್ಕೆ ತಕ್ಕಂತೆ ಕುಣಿಯಬೇಕು. ಹೇಳಿದಂತೆ ಕೇಳಬೇಕು ಎಂಬುದೇ ಈ ಶಿಕ್ಷಕರ ಗುಂಪಿನ ಉದ್ದೇಶ. ಕಾರ್ಯಸಾಧನೆಗೆ ಯಾರ ಕಾಲನ್ನಾದರೂ ಹಿಡಿಯಬಲ್ಲರಾದ ಇವರು ತಮ್ಮ ಉದ್ದೇಶ ಈಡೇರದಿದ್ದರೆ ಯಾರ ಕಾಲೆಳೆಸಲು ಸಹ ಸಿದ್ಧರು.

ಶಿಕ್ಷಣ ಇಲಾಖೆಯಲ್ಲಿ ಶಿಕ್ಷಕರ ವರ್ಗಾವಣೆಯನ್ನು ಕೇಂದ್ರೀಕರಣಗೊಳಿಸಿದೆ. ಕೌನ್ಸಿಲ್ ಮೂಲಕವೇ ಶಿಕ್ಷಕರ ವರ್ಗಾವಣೆ ನಡೆಯುತ್ತದೆ. ವಸ್ತುಸ್ಥಿತಿ ಹೀಗಿದ್ದರೂ ವರ್ಗಾವಣೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಡಿಡಿಪಿಐ ಭ್ರಷ್ಟಾಚಾರ ನಡೆಸುತ್ತಿದ್ದಾರೆ ಎಂಬ ವದಂತಿಯನ್ನು ಹಬ್ಬಿಸಲಾಗಿದೆ.

ಮೇಲಧಿಕಾರಿಗಳು ಅಧಿಕಾರ ನೀಡಿದರೆ ಮಾತ್ರ ಡಿಡಿಪಿಐಗೆ ಶಿಕ್ಷಕರ ವರ್ಗಾವಣೆ ಮಾಡುವ ಅಧಿಕಾರವಿದೆ. ವಿಶೇಷ ಪ್ರಕರಣಗಳಲ್ಲಿಯೂ ಮೇಲಿನ ಆದೇಶವಿಲ್ಲದೆ ಏನೂ ಮಾಡುವ ಹಾಗಿಲ್ಲ. ಆದರೆ ಶಿಕ್ಷಕರ ಡೆಪ್ಯೂಟೇಶನ್ ಮಾಡುವ ಅಧಿಕಾರ ಡಿಡಿಪಿಐಗೆ ಇದೆ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ. ಆದರೆ ಕೆಲವು ಜಾತಿವಾದಿ ಪಟ್ಟಭದ್ರ ಶಿಕ್ಷಕರ ಗುಂಪು ತಾವು ಹೇಳಿದಂತೆ ಕೇಳುತ್ತಿಲ್ಲ ಎಂಬ ಕಾರಣಕ್ಕೆ ಡಿಡಿಪಿಐ ಕಾಮಾಕ್ಷಮ್ಮ ವರ್ಗಾವಣೆಗೆ ಮಸಲತ್ತು ನಡೆಸಿದೆ.

ಕಾಮಾಕ್ಷಮ್ಮ

ಕಾಮಾಕ್ಷಮ್ಮ ಅವರು ಈ ಹಿಂದೆ ಬಾಗಲಕೋಟೆಯಲ್ಲಿ ಕೆಲಸ ಮಾಡಿಬಂದವರು. ಬಾಗಲಕೋಟೆಯಲ್ಲಿ ಉತ್ತಮ ಕೆಲಸ ಮಾಡಿ ಹೆಸರು ಮಾಡಿದ್ದರು. ತುಮಕೂರಿಗೆ ಬಂದ ಮೇಲೆ ಜಾತಿವಾದಿ ರಾಜಕಾರಣಿ ಶಿಕ್ಷಕರ ಗುಂಪು ಡಿಡಿಪಿಐ ವಿರುದ್ಧ ವದಂತಿಗಳನ್ನು ಹಬ್ಬಿಸುತ್ತಲೇ ಇದೆ. ಮಹಿಳಾ ಅಧಿಕಾರಿಯನ್ನು ಎತ್ತಂಗಡಿ ಮಾಡಿಸಿ ತಮ್ಮ ಮಾತು ಕೇಳುವವರನ್ನು ತಂದು ಹಾಕಿಸಿಕೊಳ್ಳುವುದು ಈ ಗುಂಪಿನ ಉದ್ದೇಶವಾಗಿದೆ ಎಂದು ಹೇಳಾಗುತ್ತಿದೆ.

ಇದೀಗ ಮತ್ತೊಂದು ಸುದ್ದಿ ಹಬ್ಬಿದೆ. ತುಮಕೂರಿನ ಡಾ. ರಾಧಾಕೃಷ್ಣನ್ ರಸ್ತೆಯ ಸೋಮೇಶ್ವರ ಮುಖ್ಯರಸ್ತೆಯ ತಿರುವಿನಲ್ಲಿರುವ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಕಚೇರಿ ಆವರಣದಲ್ಲಿ ದೊಡ್ಡದೊಂದು ಗುಂಡಿ ತೆಗೆಯಲಾಗಿದೆ. ಈ ಮಾಹಿತಿ ಜಿಲ್ಲಾ ಪಂಚಾಯಿತಿ ಸಿಇಒ ಶುಭ ಕಲ್ಯಾಣ್ ಅವರಿಗೆ ತಲುಪಿ ರಾತ್ರಿ 9 ಗಂಟೆಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಅಷ್ಟೊತ್ತಿಗೆ ಡಿಡಿಪಿಐ ಕಾಮಾಕ್ಷಮ್ಮ ಅವರ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಹಾಗಾಗಿ ಮಹಿಳಾ ಅಧಿಕಾರಿಯ ಪತಿಗೆ ಕರೆ ಮಾಡಿದ ಸಿಐಒ ಸ್ಥಳಕ್ಕೆ ಕರೆಸಿಕೊಂಡು ವಿವರ ಕೇಳಿದ್ದಾರೆ. ಕಸ ಮುಚ್ಚಲು ಗುಂಡಿ ತೋಡಿ ಎಂದು ನಾನೇ ಹೇಳಿದ್ದ ಎಂದು ಡಿಡಿಪಿಐ ಒಪ್ಪಿಕೊಂಡಿದ್ದಾರೆ. ಹಾಗಾಗಿ ಸಿಇಓ ಶುಭಕಲ್ಯಾಣ್ ಗುಂಡಿಯನ್ನು ಸೋಮವಾರದವರೆಗೆ ಮುಚ್ಚಬಾರದು. ಸ್ಧಳದಲ್ಲಿ ಸಿಸಿ ಕ್ಯಾಮೆರ ಅವಳವಡಿಸಬೇಕೆಂದು ಸೂಚಿಸಿ ಹೋಗಿದ್ದಾರೆ.

ಈ ಸುದ್ದಿಗೆ ಈಗ ರೆಕ್ಕೆಪುಕ್ಕಗಳು ಬಂದಿವೆ. ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ಕೆಲ ಫೈಲ್ ಗಳನ್ನು ಮಣ್ಣಿನಲ್ಲಿ ಮುಚ್ಚಿಹಾಕಲು ಡಿಡಿಪಿಐ ಯತ್ನಿಸಿದ್ದಾರೆ ಎಂಬ ಆರೋಪ ತೇಲಿಬಿಡಲಾಗಿದೆ. ಗುಂಡಿ ತೋಡಿರುವುದು ಅನುಮಾನ ಹುಟ್ಟುಹಾಕುತ್ತದೆ ಸರಿ. ಆದರೆ ಎಂಥಾ ಮೂರ್ಖರು ಕೂಡ ದಾಖಲೆಗಳನ್ನು ಕಣ್ಣಮುಂದೆಯೇ ಹೂತು ಹಾಕುವಷ್ಟು ಅಧಿಕಾರಿಗಳು ದಡ್ಡರಲ್ಲ. ಹಾಗಾಗಿ ಡಿಡಿಪಿಐ ಅವರನ್ನು ವರ್ಗಾವಣೆ ಮಾಡಿಸುವುದೇ ಈ ಕುತಂತ್ರದ ಹಿಂದಿನ ಪ್ರಮುಖ ಉದ್ದೇಶವಾಗಿದೆ ಎಂದು ಹೇಳಲಾಗುತ್ತಿದೆ.

ಗುಬ್ಬಿಯ ತಹಶೀಲ್ದಾರ್ ಮಮತ, ಜಿಲ್ಲೆಯ ಆರೋಗ್ಯಾಧಿಕಾರಿ ಚಂದ್ರಿಕಾ ಎತ್ತಂಗಡಿಯಾದ ಮೇಲೆ ಈಗ ಡಿಡಿಪಿಐ ಕಾಮಾಕ್ಷಮ್ಮ ಅವರನ್ನು ವರ್ಗಾವಣೆ ಮಾಡಿಸಲು ಪಿತೂರು ನಡೆದಿದೆ. ಅತ್ಯಂತ ಹಿಂದುಳಿದ ಸವಿತಾ ಸಮಾಜಕ್ಕೆ ಸೇರಿರುವ ಕಾಮಾಕ್ಷಮ್ಮ ಅವರ ಕೈಕೆಳಗೆ ಕೆಲಸ ಮಾಡಲು ಒಪ್ಪದ ಜಾತಿವಾದಿ ಮನಸ್ಸುಗಳು ಅನಗತ್ಯವಾಗಿ ಹುಯ್ಯಿಲೆಬ್ಬಿಸಿ ಮಹಿಳಾ ಅಧಿಕಾರಿಯ ನೈತಿಕತೆಯನ್ನು ಕುಗ್ಗಿಸುವ ಪ್ರಯತ್ನಗಳು ನಡೆಯುತ್ತಿರುವುದು ಶೋಚನೀಯ ಸಂಗತಿ ಎಂದು ಹೆಸರು ಹೇಳದ ಅಧಿಕಾರಿಯೊಬ್ಬರು ಹೇಳಿದ್ದಾರೆ.


ಮತ್ತಷ್ಟು ಸುದ್ದಿಗಳು

ಬೋಧನಾ ಕೆಲಸದಿಂದ ವಜಾ: ಬದುಕು ಸಾಗಿಸಲು ಬಾಳೆಹಣ್ಣು ಮಾರಾಟ ಆರಂಭಿಸಿದ ಶಿಕ್ಷಕ!

BJP ಮುಖಂಡನ ವಿರುದ್ಧ ಲೈಂಗಿಕ ದೌರ್ಜನ್ಯ ದೂರು; ಮಾರಕಾಸ್ತ್ರಗಳಿಂದ JDS ಕಾರ್ಯಕರ್ತರ ಮೇಲೆ ಹಲ್ಲೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. DDPI ಕಾಮಾಕ್ಷಮ್ಮನವರು ಹೆಣ್ಣು ಎಂಬ ಕಾರಣಕ್ಕೆ, ಕೆಲವು ಪಟ್ಟಭದ್ರ ಹಿತಾಸಕ್ತಿ, ಜಾತಿವಾದಿ ಶಿಕ್ಷಕರ ಮತ್ತು ಕಾಣದ ಕೈಗಳ ಮಸಲತ್ತಿನಿಂದ ವರ್ಗಾವಣೆ ಮಾಡುತ್ತಿರುವುದು ಪ್ರಜಾಪ್ರಭುತ್ವ ತತ್ವ ವಿ ೋಧಿ.

  2. ಇಂತಹ ಮನುವಾದಿ ಶಿಕ್ಷಕರು ಮಕ್ಕಳಿಗೆ ಬೋದಿಸುವುದಾದರೂ ಏನನ್ನು? ವಿದ್ಯೆ ಮನುಷ್ಯನನ್ನು ವಿವೇಕಿಯನ್ನಾಗಿಸಬೇಕು. ಆದರಿಲ್ಲಿ ಶಿಕ್ಷಕರೇ ಜಾತೀವಾದಿಗಳಾಗಿದ್ದಾರೆ. ಇದು ನಮ್ಮ ದುರಂತ. ಜಾತೀಯತೆ ಎಂಬ ರೋಗಾಣು ನಮ್ಮ ದೇಶದಿಂದ ತೊಲಗುವುದೇ ಇಲ್ಲವೇನೋ?

LEAVE A REPLY

Please enter your comment!
Please enter your name here

- Advertisment -

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...