Homeಮುಖಪುಟಜಾತಿವಾದಿ ಶಿಕ್ಷಕರ ಗುಂಪಿನ ಮಸಲತ್ತು : ಮಹಿಳಾ ಡಿಡಿಪಿಐ ಎತ್ತಂಗಡಿಗೆ ನಡೆದಿದೆಯಾ ಕಸರತ್ತು!

ಜಾತಿವಾದಿ ಶಿಕ್ಷಕರ ಗುಂಪಿನ ಮಸಲತ್ತು : ಮಹಿಳಾ ಡಿಡಿಪಿಐ ಎತ್ತಂಗಡಿಗೆ ನಡೆದಿದೆಯಾ ಕಸರತ್ತು!

- Advertisement -
- Advertisement -

ತುಮಕೂರು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಡಿಡಿಪಿಐ ಕಾಮಾಕ್ಷಮ್ಮ ಅವರ ಎತ್ತಂಗಡಿಗೆ ಜಾತಿವಾದಿ ‘ರಾಜಕಾರಣಿ ಶಿಕ್ಷಕರ ಗುಂಪು’ ಲಾಬಿ ನಡೆಸಿದೆ. ಡಿಡಿಪಿಐ ತಮ್ಮ ತಾಳಕ್ಕೆ ತಕ್ಕಂತೆ ಕುಣಿಯಬೇಕು. ಹೇಳಿದಂತೆ ಕೇಳಬೇಕು ಎಂಬುದೇ ಈ ಶಿಕ್ಷಕರ ಗುಂಪಿನ ಉದ್ದೇಶ. ಕಾರ್ಯಸಾಧನೆಗೆ ಯಾರ ಕಾಲನ್ನಾದರೂ ಹಿಡಿಯಬಲ್ಲರಾದ ಇವರು ತಮ್ಮ ಉದ್ದೇಶ ಈಡೇರದಿದ್ದರೆ ಯಾರ ಕಾಲೆಳೆಸಲು ಸಹ ಸಿದ್ಧರು.

ಶಿಕ್ಷಣ ಇಲಾಖೆಯಲ್ಲಿ ಶಿಕ್ಷಕರ ವರ್ಗಾವಣೆಯನ್ನು ಕೇಂದ್ರೀಕರಣಗೊಳಿಸಿದೆ. ಕೌನ್ಸಿಲ್ ಮೂಲಕವೇ ಶಿಕ್ಷಕರ ವರ್ಗಾವಣೆ ನಡೆಯುತ್ತದೆ. ವಸ್ತುಸ್ಥಿತಿ ಹೀಗಿದ್ದರೂ ವರ್ಗಾವಣೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಡಿಡಿಪಿಐ ಭ್ರಷ್ಟಾಚಾರ ನಡೆಸುತ್ತಿದ್ದಾರೆ ಎಂಬ ವದಂತಿಯನ್ನು ಹಬ್ಬಿಸಲಾಗಿದೆ.

ಮೇಲಧಿಕಾರಿಗಳು ಅಧಿಕಾರ ನೀಡಿದರೆ ಮಾತ್ರ ಡಿಡಿಪಿಐಗೆ ಶಿಕ್ಷಕರ ವರ್ಗಾವಣೆ ಮಾಡುವ ಅಧಿಕಾರವಿದೆ. ವಿಶೇಷ ಪ್ರಕರಣಗಳಲ್ಲಿಯೂ ಮೇಲಿನ ಆದೇಶವಿಲ್ಲದೆ ಏನೂ ಮಾಡುವ ಹಾಗಿಲ್ಲ. ಆದರೆ ಶಿಕ್ಷಕರ ಡೆಪ್ಯೂಟೇಶನ್ ಮಾಡುವ ಅಧಿಕಾರ ಡಿಡಿಪಿಐಗೆ ಇದೆ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ. ಆದರೆ ಕೆಲವು ಜಾತಿವಾದಿ ಪಟ್ಟಭದ್ರ ಶಿಕ್ಷಕರ ಗುಂಪು ತಾವು ಹೇಳಿದಂತೆ ಕೇಳುತ್ತಿಲ್ಲ ಎಂಬ ಕಾರಣಕ್ಕೆ ಡಿಡಿಪಿಐ ಕಾಮಾಕ್ಷಮ್ಮ ವರ್ಗಾವಣೆಗೆ ಮಸಲತ್ತು ನಡೆಸಿದೆ.

ಕಾಮಾಕ್ಷಮ್ಮ

ಕಾಮಾಕ್ಷಮ್ಮ ಅವರು ಈ ಹಿಂದೆ ಬಾಗಲಕೋಟೆಯಲ್ಲಿ ಕೆಲಸ ಮಾಡಿಬಂದವರು. ಬಾಗಲಕೋಟೆಯಲ್ಲಿ ಉತ್ತಮ ಕೆಲಸ ಮಾಡಿ ಹೆಸರು ಮಾಡಿದ್ದರು. ತುಮಕೂರಿಗೆ ಬಂದ ಮೇಲೆ ಜಾತಿವಾದಿ ರಾಜಕಾರಣಿ ಶಿಕ್ಷಕರ ಗುಂಪು ಡಿಡಿಪಿಐ ವಿರುದ್ಧ ವದಂತಿಗಳನ್ನು ಹಬ್ಬಿಸುತ್ತಲೇ ಇದೆ. ಮಹಿಳಾ ಅಧಿಕಾರಿಯನ್ನು ಎತ್ತಂಗಡಿ ಮಾಡಿಸಿ ತಮ್ಮ ಮಾತು ಕೇಳುವವರನ್ನು ತಂದು ಹಾಕಿಸಿಕೊಳ್ಳುವುದು ಈ ಗುಂಪಿನ ಉದ್ದೇಶವಾಗಿದೆ ಎಂದು ಹೇಳಾಗುತ್ತಿದೆ.

ಇದೀಗ ಮತ್ತೊಂದು ಸುದ್ದಿ ಹಬ್ಬಿದೆ. ತುಮಕೂರಿನ ಡಾ. ರಾಧಾಕೃಷ್ಣನ್ ರಸ್ತೆಯ ಸೋಮೇಶ್ವರ ಮುಖ್ಯರಸ್ತೆಯ ತಿರುವಿನಲ್ಲಿರುವ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಕಚೇರಿ ಆವರಣದಲ್ಲಿ ದೊಡ್ಡದೊಂದು ಗುಂಡಿ ತೆಗೆಯಲಾಗಿದೆ. ಈ ಮಾಹಿತಿ ಜಿಲ್ಲಾ ಪಂಚಾಯಿತಿ ಸಿಇಒ ಶುಭ ಕಲ್ಯಾಣ್ ಅವರಿಗೆ ತಲುಪಿ ರಾತ್ರಿ 9 ಗಂಟೆಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಅಷ್ಟೊತ್ತಿಗೆ ಡಿಡಿಪಿಐ ಕಾಮಾಕ್ಷಮ್ಮ ಅವರ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಹಾಗಾಗಿ ಮಹಿಳಾ ಅಧಿಕಾರಿಯ ಪತಿಗೆ ಕರೆ ಮಾಡಿದ ಸಿಐಒ ಸ್ಥಳಕ್ಕೆ ಕರೆಸಿಕೊಂಡು ವಿವರ ಕೇಳಿದ್ದಾರೆ. ಕಸ ಮುಚ್ಚಲು ಗುಂಡಿ ತೋಡಿ ಎಂದು ನಾನೇ ಹೇಳಿದ್ದ ಎಂದು ಡಿಡಿಪಿಐ ಒಪ್ಪಿಕೊಂಡಿದ್ದಾರೆ. ಹಾಗಾಗಿ ಸಿಇಓ ಶುಭಕಲ್ಯಾಣ್ ಗುಂಡಿಯನ್ನು ಸೋಮವಾರದವರೆಗೆ ಮುಚ್ಚಬಾರದು. ಸ್ಧಳದಲ್ಲಿ ಸಿಸಿ ಕ್ಯಾಮೆರ ಅವಳವಡಿಸಬೇಕೆಂದು ಸೂಚಿಸಿ ಹೋಗಿದ್ದಾರೆ.

ಈ ಸುದ್ದಿಗೆ ಈಗ ರೆಕ್ಕೆಪುಕ್ಕಗಳು ಬಂದಿವೆ. ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ಕೆಲ ಫೈಲ್ ಗಳನ್ನು ಮಣ್ಣಿನಲ್ಲಿ ಮುಚ್ಚಿಹಾಕಲು ಡಿಡಿಪಿಐ ಯತ್ನಿಸಿದ್ದಾರೆ ಎಂಬ ಆರೋಪ ತೇಲಿಬಿಡಲಾಗಿದೆ. ಗುಂಡಿ ತೋಡಿರುವುದು ಅನುಮಾನ ಹುಟ್ಟುಹಾಕುತ್ತದೆ ಸರಿ. ಆದರೆ ಎಂಥಾ ಮೂರ್ಖರು ಕೂಡ ದಾಖಲೆಗಳನ್ನು ಕಣ್ಣಮುಂದೆಯೇ ಹೂತು ಹಾಕುವಷ್ಟು ಅಧಿಕಾರಿಗಳು ದಡ್ಡರಲ್ಲ. ಹಾಗಾಗಿ ಡಿಡಿಪಿಐ ಅವರನ್ನು ವರ್ಗಾವಣೆ ಮಾಡಿಸುವುದೇ ಈ ಕುತಂತ್ರದ ಹಿಂದಿನ ಪ್ರಮುಖ ಉದ್ದೇಶವಾಗಿದೆ ಎಂದು ಹೇಳಲಾಗುತ್ತಿದೆ.

ಗುಬ್ಬಿಯ ತಹಶೀಲ್ದಾರ್ ಮಮತ, ಜಿಲ್ಲೆಯ ಆರೋಗ್ಯಾಧಿಕಾರಿ ಚಂದ್ರಿಕಾ ಎತ್ತಂಗಡಿಯಾದ ಮೇಲೆ ಈಗ ಡಿಡಿಪಿಐ ಕಾಮಾಕ್ಷಮ್ಮ ಅವರನ್ನು ವರ್ಗಾವಣೆ ಮಾಡಿಸಲು ಪಿತೂರು ನಡೆದಿದೆ. ಅತ್ಯಂತ ಹಿಂದುಳಿದ ಸವಿತಾ ಸಮಾಜಕ್ಕೆ ಸೇರಿರುವ ಕಾಮಾಕ್ಷಮ್ಮ ಅವರ ಕೈಕೆಳಗೆ ಕೆಲಸ ಮಾಡಲು ಒಪ್ಪದ ಜಾತಿವಾದಿ ಮನಸ್ಸುಗಳು ಅನಗತ್ಯವಾಗಿ ಹುಯ್ಯಿಲೆಬ್ಬಿಸಿ ಮಹಿಳಾ ಅಧಿಕಾರಿಯ ನೈತಿಕತೆಯನ್ನು ಕುಗ್ಗಿಸುವ ಪ್ರಯತ್ನಗಳು ನಡೆಯುತ್ತಿರುವುದು ಶೋಚನೀಯ ಸಂಗತಿ ಎಂದು ಹೆಸರು ಹೇಳದ ಅಧಿಕಾರಿಯೊಬ್ಬರು ಹೇಳಿದ್ದಾರೆ.


ಮತ್ತಷ್ಟು ಸುದ್ದಿಗಳು

ಬೋಧನಾ ಕೆಲಸದಿಂದ ವಜಾ: ಬದುಕು ಸಾಗಿಸಲು ಬಾಳೆಹಣ್ಣು ಮಾರಾಟ ಆರಂಭಿಸಿದ ಶಿಕ್ಷಕ!

BJP ಮುಖಂಡನ ವಿರುದ್ಧ ಲೈಂಗಿಕ ದೌರ್ಜನ್ಯ ದೂರು; ಮಾರಕಾಸ್ತ್ರಗಳಿಂದ JDS ಕಾರ್ಯಕರ್ತರ ಮೇಲೆ ಹಲ್ಲೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. DDPI ಕಾಮಾಕ್ಷಮ್ಮನವರು ಹೆಣ್ಣು ಎಂಬ ಕಾರಣಕ್ಕೆ, ಕೆಲವು ಪಟ್ಟಭದ್ರ ಹಿತಾಸಕ್ತಿ, ಜಾತಿವಾದಿ ಶಿಕ್ಷಕರ ಮತ್ತು ಕಾಣದ ಕೈಗಳ ಮಸಲತ್ತಿನಿಂದ ವರ್ಗಾವಣೆ ಮಾಡುತ್ತಿರುವುದು ಪ್ರಜಾಪ್ರಭುತ್ವ ತತ್ವ ವಿ ೋಧಿ.

  2. ಇಂತಹ ಮನುವಾದಿ ಶಿಕ್ಷಕರು ಮಕ್ಕಳಿಗೆ ಬೋದಿಸುವುದಾದರೂ ಏನನ್ನು? ವಿದ್ಯೆ ಮನುಷ್ಯನನ್ನು ವಿವೇಕಿಯನ್ನಾಗಿಸಬೇಕು. ಆದರಿಲ್ಲಿ ಶಿಕ್ಷಕರೇ ಜಾತೀವಾದಿಗಳಾಗಿದ್ದಾರೆ. ಇದು ನಮ್ಮ ದುರಂತ. ಜಾತೀಯತೆ ಎಂಬ ರೋಗಾಣು ನಮ್ಮ ದೇಶದಿಂದ ತೊಲಗುವುದೇ ಇಲ್ಲವೇನೋ?

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...