Homeಮುಖಪುಟಜಾತಿವಾದಿ ಶಿಕ್ಷಕರ ಗುಂಪಿನ ಮಸಲತ್ತು : ಮಹಿಳಾ ಡಿಡಿಪಿಐ ಎತ್ತಂಗಡಿಗೆ ನಡೆದಿದೆಯಾ ಕಸರತ್ತು!

ಜಾತಿವಾದಿ ಶಿಕ್ಷಕರ ಗುಂಪಿನ ಮಸಲತ್ತು : ಮಹಿಳಾ ಡಿಡಿಪಿಐ ಎತ್ತಂಗಡಿಗೆ ನಡೆದಿದೆಯಾ ಕಸರತ್ತು!

- Advertisement -
- Advertisement -

ತುಮಕೂರು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಡಿಡಿಪಿಐ ಕಾಮಾಕ್ಷಮ್ಮ ಅವರ ಎತ್ತಂಗಡಿಗೆ ಜಾತಿವಾದಿ ‘ರಾಜಕಾರಣಿ ಶಿಕ್ಷಕರ ಗುಂಪು’ ಲಾಬಿ ನಡೆಸಿದೆ. ಡಿಡಿಪಿಐ ತಮ್ಮ ತಾಳಕ್ಕೆ ತಕ್ಕಂತೆ ಕುಣಿಯಬೇಕು. ಹೇಳಿದಂತೆ ಕೇಳಬೇಕು ಎಂಬುದೇ ಈ ಶಿಕ್ಷಕರ ಗುಂಪಿನ ಉದ್ದೇಶ. ಕಾರ್ಯಸಾಧನೆಗೆ ಯಾರ ಕಾಲನ್ನಾದರೂ ಹಿಡಿಯಬಲ್ಲರಾದ ಇವರು ತಮ್ಮ ಉದ್ದೇಶ ಈಡೇರದಿದ್ದರೆ ಯಾರ ಕಾಲೆಳೆಸಲು ಸಹ ಸಿದ್ಧರು.

ಶಿಕ್ಷಣ ಇಲಾಖೆಯಲ್ಲಿ ಶಿಕ್ಷಕರ ವರ್ಗಾವಣೆಯನ್ನು ಕೇಂದ್ರೀಕರಣಗೊಳಿಸಿದೆ. ಕೌನ್ಸಿಲ್ ಮೂಲಕವೇ ಶಿಕ್ಷಕರ ವರ್ಗಾವಣೆ ನಡೆಯುತ್ತದೆ. ವಸ್ತುಸ್ಥಿತಿ ಹೀಗಿದ್ದರೂ ವರ್ಗಾವಣೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಡಿಡಿಪಿಐ ಭ್ರಷ್ಟಾಚಾರ ನಡೆಸುತ್ತಿದ್ದಾರೆ ಎಂಬ ವದಂತಿಯನ್ನು ಹಬ್ಬಿಸಲಾಗಿದೆ.

ಮೇಲಧಿಕಾರಿಗಳು ಅಧಿಕಾರ ನೀಡಿದರೆ ಮಾತ್ರ ಡಿಡಿಪಿಐಗೆ ಶಿಕ್ಷಕರ ವರ್ಗಾವಣೆ ಮಾಡುವ ಅಧಿಕಾರವಿದೆ. ವಿಶೇಷ ಪ್ರಕರಣಗಳಲ್ಲಿಯೂ ಮೇಲಿನ ಆದೇಶವಿಲ್ಲದೆ ಏನೂ ಮಾಡುವ ಹಾಗಿಲ್ಲ. ಆದರೆ ಶಿಕ್ಷಕರ ಡೆಪ್ಯೂಟೇಶನ್ ಮಾಡುವ ಅಧಿಕಾರ ಡಿಡಿಪಿಐಗೆ ಇದೆ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ. ಆದರೆ ಕೆಲವು ಜಾತಿವಾದಿ ಪಟ್ಟಭದ್ರ ಶಿಕ್ಷಕರ ಗುಂಪು ತಾವು ಹೇಳಿದಂತೆ ಕೇಳುತ್ತಿಲ್ಲ ಎಂಬ ಕಾರಣಕ್ಕೆ ಡಿಡಿಪಿಐ ಕಾಮಾಕ್ಷಮ್ಮ ವರ್ಗಾವಣೆಗೆ ಮಸಲತ್ತು ನಡೆಸಿದೆ.

ಕಾಮಾಕ್ಷಮ್ಮ

ಕಾಮಾಕ್ಷಮ್ಮ ಅವರು ಈ ಹಿಂದೆ ಬಾಗಲಕೋಟೆಯಲ್ಲಿ ಕೆಲಸ ಮಾಡಿಬಂದವರು. ಬಾಗಲಕೋಟೆಯಲ್ಲಿ ಉತ್ತಮ ಕೆಲಸ ಮಾಡಿ ಹೆಸರು ಮಾಡಿದ್ದರು. ತುಮಕೂರಿಗೆ ಬಂದ ಮೇಲೆ ಜಾತಿವಾದಿ ರಾಜಕಾರಣಿ ಶಿಕ್ಷಕರ ಗುಂಪು ಡಿಡಿಪಿಐ ವಿರುದ್ಧ ವದಂತಿಗಳನ್ನು ಹಬ್ಬಿಸುತ್ತಲೇ ಇದೆ. ಮಹಿಳಾ ಅಧಿಕಾರಿಯನ್ನು ಎತ್ತಂಗಡಿ ಮಾಡಿಸಿ ತಮ್ಮ ಮಾತು ಕೇಳುವವರನ್ನು ತಂದು ಹಾಕಿಸಿಕೊಳ್ಳುವುದು ಈ ಗುಂಪಿನ ಉದ್ದೇಶವಾಗಿದೆ ಎಂದು ಹೇಳಾಗುತ್ತಿದೆ.

ಇದೀಗ ಮತ್ತೊಂದು ಸುದ್ದಿ ಹಬ್ಬಿದೆ. ತುಮಕೂರಿನ ಡಾ. ರಾಧಾಕೃಷ್ಣನ್ ರಸ್ತೆಯ ಸೋಮೇಶ್ವರ ಮುಖ್ಯರಸ್ತೆಯ ತಿರುವಿನಲ್ಲಿರುವ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಕಚೇರಿ ಆವರಣದಲ್ಲಿ ದೊಡ್ಡದೊಂದು ಗುಂಡಿ ತೆಗೆಯಲಾಗಿದೆ. ಈ ಮಾಹಿತಿ ಜಿಲ್ಲಾ ಪಂಚಾಯಿತಿ ಸಿಇಒ ಶುಭ ಕಲ್ಯಾಣ್ ಅವರಿಗೆ ತಲುಪಿ ರಾತ್ರಿ 9 ಗಂಟೆಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಅಷ್ಟೊತ್ತಿಗೆ ಡಿಡಿಪಿಐ ಕಾಮಾಕ್ಷಮ್ಮ ಅವರ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಹಾಗಾಗಿ ಮಹಿಳಾ ಅಧಿಕಾರಿಯ ಪತಿಗೆ ಕರೆ ಮಾಡಿದ ಸಿಐಒ ಸ್ಥಳಕ್ಕೆ ಕರೆಸಿಕೊಂಡು ವಿವರ ಕೇಳಿದ್ದಾರೆ. ಕಸ ಮುಚ್ಚಲು ಗುಂಡಿ ತೋಡಿ ಎಂದು ನಾನೇ ಹೇಳಿದ್ದ ಎಂದು ಡಿಡಿಪಿಐ ಒಪ್ಪಿಕೊಂಡಿದ್ದಾರೆ. ಹಾಗಾಗಿ ಸಿಇಓ ಶುಭಕಲ್ಯಾಣ್ ಗುಂಡಿಯನ್ನು ಸೋಮವಾರದವರೆಗೆ ಮುಚ್ಚಬಾರದು. ಸ್ಧಳದಲ್ಲಿ ಸಿಸಿ ಕ್ಯಾಮೆರ ಅವಳವಡಿಸಬೇಕೆಂದು ಸೂಚಿಸಿ ಹೋಗಿದ್ದಾರೆ.

ಈ ಸುದ್ದಿಗೆ ಈಗ ರೆಕ್ಕೆಪುಕ್ಕಗಳು ಬಂದಿವೆ. ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ಕೆಲ ಫೈಲ್ ಗಳನ್ನು ಮಣ್ಣಿನಲ್ಲಿ ಮುಚ್ಚಿಹಾಕಲು ಡಿಡಿಪಿಐ ಯತ್ನಿಸಿದ್ದಾರೆ ಎಂಬ ಆರೋಪ ತೇಲಿಬಿಡಲಾಗಿದೆ. ಗುಂಡಿ ತೋಡಿರುವುದು ಅನುಮಾನ ಹುಟ್ಟುಹಾಕುತ್ತದೆ ಸರಿ. ಆದರೆ ಎಂಥಾ ಮೂರ್ಖರು ಕೂಡ ದಾಖಲೆಗಳನ್ನು ಕಣ್ಣಮುಂದೆಯೇ ಹೂತು ಹಾಕುವಷ್ಟು ಅಧಿಕಾರಿಗಳು ದಡ್ಡರಲ್ಲ. ಹಾಗಾಗಿ ಡಿಡಿಪಿಐ ಅವರನ್ನು ವರ್ಗಾವಣೆ ಮಾಡಿಸುವುದೇ ಈ ಕುತಂತ್ರದ ಹಿಂದಿನ ಪ್ರಮುಖ ಉದ್ದೇಶವಾಗಿದೆ ಎಂದು ಹೇಳಲಾಗುತ್ತಿದೆ.

ಗುಬ್ಬಿಯ ತಹಶೀಲ್ದಾರ್ ಮಮತ, ಜಿಲ್ಲೆಯ ಆರೋಗ್ಯಾಧಿಕಾರಿ ಚಂದ್ರಿಕಾ ಎತ್ತಂಗಡಿಯಾದ ಮೇಲೆ ಈಗ ಡಿಡಿಪಿಐ ಕಾಮಾಕ್ಷಮ್ಮ ಅವರನ್ನು ವರ್ಗಾವಣೆ ಮಾಡಿಸಲು ಪಿತೂರು ನಡೆದಿದೆ. ಅತ್ಯಂತ ಹಿಂದುಳಿದ ಸವಿತಾ ಸಮಾಜಕ್ಕೆ ಸೇರಿರುವ ಕಾಮಾಕ್ಷಮ್ಮ ಅವರ ಕೈಕೆಳಗೆ ಕೆಲಸ ಮಾಡಲು ಒಪ್ಪದ ಜಾತಿವಾದಿ ಮನಸ್ಸುಗಳು ಅನಗತ್ಯವಾಗಿ ಹುಯ್ಯಿಲೆಬ್ಬಿಸಿ ಮಹಿಳಾ ಅಧಿಕಾರಿಯ ನೈತಿಕತೆಯನ್ನು ಕುಗ್ಗಿಸುವ ಪ್ರಯತ್ನಗಳು ನಡೆಯುತ್ತಿರುವುದು ಶೋಚನೀಯ ಸಂಗತಿ ಎಂದು ಹೆಸರು ಹೇಳದ ಅಧಿಕಾರಿಯೊಬ್ಬರು ಹೇಳಿದ್ದಾರೆ.


ಮತ್ತಷ್ಟು ಸುದ್ದಿಗಳು

ಬೋಧನಾ ಕೆಲಸದಿಂದ ವಜಾ: ಬದುಕು ಸಾಗಿಸಲು ಬಾಳೆಹಣ್ಣು ಮಾರಾಟ ಆರಂಭಿಸಿದ ಶಿಕ್ಷಕ!

BJP ಮುಖಂಡನ ವಿರುದ್ಧ ಲೈಂಗಿಕ ದೌರ್ಜನ್ಯ ದೂರು; ಮಾರಕಾಸ್ತ್ರಗಳಿಂದ JDS ಕಾರ್ಯಕರ್ತರ ಮೇಲೆ ಹಲ್ಲೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. DDPI ಕಾಮಾಕ್ಷಮ್ಮನವರು ಹೆಣ್ಣು ಎಂಬ ಕಾರಣಕ್ಕೆ, ಕೆಲವು ಪಟ್ಟಭದ್ರ ಹಿತಾಸಕ್ತಿ, ಜಾತಿವಾದಿ ಶಿಕ್ಷಕರ ಮತ್ತು ಕಾಣದ ಕೈಗಳ ಮಸಲತ್ತಿನಿಂದ ವರ್ಗಾವಣೆ ಮಾಡುತ್ತಿರುವುದು ಪ್ರಜಾಪ್ರಭುತ್ವ ತತ್ವ ವಿ ೋಧಿ.

  2. ಇಂತಹ ಮನುವಾದಿ ಶಿಕ್ಷಕರು ಮಕ್ಕಳಿಗೆ ಬೋದಿಸುವುದಾದರೂ ಏನನ್ನು? ವಿದ್ಯೆ ಮನುಷ್ಯನನ್ನು ವಿವೇಕಿಯನ್ನಾಗಿಸಬೇಕು. ಆದರಿಲ್ಲಿ ಶಿಕ್ಷಕರೇ ಜಾತೀವಾದಿಗಳಾಗಿದ್ದಾರೆ. ಇದು ನಮ್ಮ ದುರಂತ. ಜಾತೀಯತೆ ಎಂಬ ರೋಗಾಣು ನಮ್ಮ ದೇಶದಿಂದ ತೊಲಗುವುದೇ ಇಲ್ಲವೇನೋ?

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...