Homeಮುಖಪುಟಜಾತಿವಾದಿ ಶಿಕ್ಷಕರ ಗುಂಪಿನ ಮಸಲತ್ತು : ಮಹಿಳಾ ಡಿಡಿಪಿಐ ಎತ್ತಂಗಡಿಗೆ ನಡೆದಿದೆಯಾ ಕಸರತ್ತು!

ಜಾತಿವಾದಿ ಶಿಕ್ಷಕರ ಗುಂಪಿನ ಮಸಲತ್ತು : ಮಹಿಳಾ ಡಿಡಿಪಿಐ ಎತ್ತಂಗಡಿಗೆ ನಡೆದಿದೆಯಾ ಕಸರತ್ತು!

- Advertisement -
- Advertisement -

ತುಮಕೂರು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಡಿಡಿಪಿಐ ಕಾಮಾಕ್ಷಮ್ಮ ಅವರ ಎತ್ತಂಗಡಿಗೆ ಜಾತಿವಾದಿ ‘ರಾಜಕಾರಣಿ ಶಿಕ್ಷಕರ ಗುಂಪು’ ಲಾಬಿ ನಡೆಸಿದೆ. ಡಿಡಿಪಿಐ ತಮ್ಮ ತಾಳಕ್ಕೆ ತಕ್ಕಂತೆ ಕುಣಿಯಬೇಕು. ಹೇಳಿದಂತೆ ಕೇಳಬೇಕು ಎಂಬುದೇ ಈ ಶಿಕ್ಷಕರ ಗುಂಪಿನ ಉದ್ದೇಶ. ಕಾರ್ಯಸಾಧನೆಗೆ ಯಾರ ಕಾಲನ್ನಾದರೂ ಹಿಡಿಯಬಲ್ಲರಾದ ಇವರು ತಮ್ಮ ಉದ್ದೇಶ ಈಡೇರದಿದ್ದರೆ ಯಾರ ಕಾಲೆಳೆಸಲು ಸಹ ಸಿದ್ಧರು.

ಶಿಕ್ಷಣ ಇಲಾಖೆಯಲ್ಲಿ ಶಿಕ್ಷಕರ ವರ್ಗಾವಣೆಯನ್ನು ಕೇಂದ್ರೀಕರಣಗೊಳಿಸಿದೆ. ಕೌನ್ಸಿಲ್ ಮೂಲಕವೇ ಶಿಕ್ಷಕರ ವರ್ಗಾವಣೆ ನಡೆಯುತ್ತದೆ. ವಸ್ತುಸ್ಥಿತಿ ಹೀಗಿದ್ದರೂ ವರ್ಗಾವಣೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಡಿಡಿಪಿಐ ಭ್ರಷ್ಟಾಚಾರ ನಡೆಸುತ್ತಿದ್ದಾರೆ ಎಂಬ ವದಂತಿಯನ್ನು ಹಬ್ಬಿಸಲಾಗಿದೆ.

ಮೇಲಧಿಕಾರಿಗಳು ಅಧಿಕಾರ ನೀಡಿದರೆ ಮಾತ್ರ ಡಿಡಿಪಿಐಗೆ ಶಿಕ್ಷಕರ ವರ್ಗಾವಣೆ ಮಾಡುವ ಅಧಿಕಾರವಿದೆ. ವಿಶೇಷ ಪ್ರಕರಣಗಳಲ್ಲಿಯೂ ಮೇಲಿನ ಆದೇಶವಿಲ್ಲದೆ ಏನೂ ಮಾಡುವ ಹಾಗಿಲ್ಲ. ಆದರೆ ಶಿಕ್ಷಕರ ಡೆಪ್ಯೂಟೇಶನ್ ಮಾಡುವ ಅಧಿಕಾರ ಡಿಡಿಪಿಐಗೆ ಇದೆ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ. ಆದರೆ ಕೆಲವು ಜಾತಿವಾದಿ ಪಟ್ಟಭದ್ರ ಶಿಕ್ಷಕರ ಗುಂಪು ತಾವು ಹೇಳಿದಂತೆ ಕೇಳುತ್ತಿಲ್ಲ ಎಂಬ ಕಾರಣಕ್ಕೆ ಡಿಡಿಪಿಐ ಕಾಮಾಕ್ಷಮ್ಮ ವರ್ಗಾವಣೆಗೆ ಮಸಲತ್ತು ನಡೆಸಿದೆ.

ಕಾಮಾಕ್ಷಮ್ಮ

ಕಾಮಾಕ್ಷಮ್ಮ ಅವರು ಈ ಹಿಂದೆ ಬಾಗಲಕೋಟೆಯಲ್ಲಿ ಕೆಲಸ ಮಾಡಿಬಂದವರು. ಬಾಗಲಕೋಟೆಯಲ್ಲಿ ಉತ್ತಮ ಕೆಲಸ ಮಾಡಿ ಹೆಸರು ಮಾಡಿದ್ದರು. ತುಮಕೂರಿಗೆ ಬಂದ ಮೇಲೆ ಜಾತಿವಾದಿ ರಾಜಕಾರಣಿ ಶಿಕ್ಷಕರ ಗುಂಪು ಡಿಡಿಪಿಐ ವಿರುದ್ಧ ವದಂತಿಗಳನ್ನು ಹಬ್ಬಿಸುತ್ತಲೇ ಇದೆ. ಮಹಿಳಾ ಅಧಿಕಾರಿಯನ್ನು ಎತ್ತಂಗಡಿ ಮಾಡಿಸಿ ತಮ್ಮ ಮಾತು ಕೇಳುವವರನ್ನು ತಂದು ಹಾಕಿಸಿಕೊಳ್ಳುವುದು ಈ ಗುಂಪಿನ ಉದ್ದೇಶವಾಗಿದೆ ಎಂದು ಹೇಳಾಗುತ್ತಿದೆ.

ಇದೀಗ ಮತ್ತೊಂದು ಸುದ್ದಿ ಹಬ್ಬಿದೆ. ತುಮಕೂರಿನ ಡಾ. ರಾಧಾಕೃಷ್ಣನ್ ರಸ್ತೆಯ ಸೋಮೇಶ್ವರ ಮುಖ್ಯರಸ್ತೆಯ ತಿರುವಿನಲ್ಲಿರುವ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಕಚೇರಿ ಆವರಣದಲ್ಲಿ ದೊಡ್ಡದೊಂದು ಗುಂಡಿ ತೆಗೆಯಲಾಗಿದೆ. ಈ ಮಾಹಿತಿ ಜಿಲ್ಲಾ ಪಂಚಾಯಿತಿ ಸಿಇಒ ಶುಭ ಕಲ್ಯಾಣ್ ಅವರಿಗೆ ತಲುಪಿ ರಾತ್ರಿ 9 ಗಂಟೆಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಅಷ್ಟೊತ್ತಿಗೆ ಡಿಡಿಪಿಐ ಕಾಮಾಕ್ಷಮ್ಮ ಅವರ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಹಾಗಾಗಿ ಮಹಿಳಾ ಅಧಿಕಾರಿಯ ಪತಿಗೆ ಕರೆ ಮಾಡಿದ ಸಿಐಒ ಸ್ಥಳಕ್ಕೆ ಕರೆಸಿಕೊಂಡು ವಿವರ ಕೇಳಿದ್ದಾರೆ. ಕಸ ಮುಚ್ಚಲು ಗುಂಡಿ ತೋಡಿ ಎಂದು ನಾನೇ ಹೇಳಿದ್ದ ಎಂದು ಡಿಡಿಪಿಐ ಒಪ್ಪಿಕೊಂಡಿದ್ದಾರೆ. ಹಾಗಾಗಿ ಸಿಇಓ ಶುಭಕಲ್ಯಾಣ್ ಗುಂಡಿಯನ್ನು ಸೋಮವಾರದವರೆಗೆ ಮುಚ್ಚಬಾರದು. ಸ್ಧಳದಲ್ಲಿ ಸಿಸಿ ಕ್ಯಾಮೆರ ಅವಳವಡಿಸಬೇಕೆಂದು ಸೂಚಿಸಿ ಹೋಗಿದ್ದಾರೆ.

ಈ ಸುದ್ದಿಗೆ ಈಗ ರೆಕ್ಕೆಪುಕ್ಕಗಳು ಬಂದಿವೆ. ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ಕೆಲ ಫೈಲ್ ಗಳನ್ನು ಮಣ್ಣಿನಲ್ಲಿ ಮುಚ್ಚಿಹಾಕಲು ಡಿಡಿಪಿಐ ಯತ್ನಿಸಿದ್ದಾರೆ ಎಂಬ ಆರೋಪ ತೇಲಿಬಿಡಲಾಗಿದೆ. ಗುಂಡಿ ತೋಡಿರುವುದು ಅನುಮಾನ ಹುಟ್ಟುಹಾಕುತ್ತದೆ ಸರಿ. ಆದರೆ ಎಂಥಾ ಮೂರ್ಖರು ಕೂಡ ದಾಖಲೆಗಳನ್ನು ಕಣ್ಣಮುಂದೆಯೇ ಹೂತು ಹಾಕುವಷ್ಟು ಅಧಿಕಾರಿಗಳು ದಡ್ಡರಲ್ಲ. ಹಾಗಾಗಿ ಡಿಡಿಪಿಐ ಅವರನ್ನು ವರ್ಗಾವಣೆ ಮಾಡಿಸುವುದೇ ಈ ಕುತಂತ್ರದ ಹಿಂದಿನ ಪ್ರಮುಖ ಉದ್ದೇಶವಾಗಿದೆ ಎಂದು ಹೇಳಲಾಗುತ್ತಿದೆ.

ಗುಬ್ಬಿಯ ತಹಶೀಲ್ದಾರ್ ಮಮತ, ಜಿಲ್ಲೆಯ ಆರೋಗ್ಯಾಧಿಕಾರಿ ಚಂದ್ರಿಕಾ ಎತ್ತಂಗಡಿಯಾದ ಮೇಲೆ ಈಗ ಡಿಡಿಪಿಐ ಕಾಮಾಕ್ಷಮ್ಮ ಅವರನ್ನು ವರ್ಗಾವಣೆ ಮಾಡಿಸಲು ಪಿತೂರು ನಡೆದಿದೆ. ಅತ್ಯಂತ ಹಿಂದುಳಿದ ಸವಿತಾ ಸಮಾಜಕ್ಕೆ ಸೇರಿರುವ ಕಾಮಾಕ್ಷಮ್ಮ ಅವರ ಕೈಕೆಳಗೆ ಕೆಲಸ ಮಾಡಲು ಒಪ್ಪದ ಜಾತಿವಾದಿ ಮನಸ್ಸುಗಳು ಅನಗತ್ಯವಾಗಿ ಹುಯ್ಯಿಲೆಬ್ಬಿಸಿ ಮಹಿಳಾ ಅಧಿಕಾರಿಯ ನೈತಿಕತೆಯನ್ನು ಕುಗ್ಗಿಸುವ ಪ್ರಯತ್ನಗಳು ನಡೆಯುತ್ತಿರುವುದು ಶೋಚನೀಯ ಸಂಗತಿ ಎಂದು ಹೆಸರು ಹೇಳದ ಅಧಿಕಾರಿಯೊಬ್ಬರು ಹೇಳಿದ್ದಾರೆ.


ಮತ್ತಷ್ಟು ಸುದ್ದಿಗಳು

ಬೋಧನಾ ಕೆಲಸದಿಂದ ವಜಾ: ಬದುಕು ಸಾಗಿಸಲು ಬಾಳೆಹಣ್ಣು ಮಾರಾಟ ಆರಂಭಿಸಿದ ಶಿಕ್ಷಕ!

BJP ಮುಖಂಡನ ವಿರುದ್ಧ ಲೈಂಗಿಕ ದೌರ್ಜನ್ಯ ದೂರು; ಮಾರಕಾಸ್ತ್ರಗಳಿಂದ JDS ಕಾರ್ಯಕರ್ತರ ಮೇಲೆ ಹಲ್ಲೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. DDPI ಕಾಮಾಕ್ಷಮ್ಮನವರು ಹೆಣ್ಣು ಎಂಬ ಕಾರಣಕ್ಕೆ, ಕೆಲವು ಪಟ್ಟಭದ್ರ ಹಿತಾಸಕ್ತಿ, ಜಾತಿವಾದಿ ಶಿಕ್ಷಕರ ಮತ್ತು ಕಾಣದ ಕೈಗಳ ಮಸಲತ್ತಿನಿಂದ ವರ್ಗಾವಣೆ ಮಾಡುತ್ತಿರುವುದು ಪ್ರಜಾಪ್ರಭುತ್ವ ತತ್ವ ವಿ ೋಧಿ.

  2. ಇಂತಹ ಮನುವಾದಿ ಶಿಕ್ಷಕರು ಮಕ್ಕಳಿಗೆ ಬೋದಿಸುವುದಾದರೂ ಏನನ್ನು? ವಿದ್ಯೆ ಮನುಷ್ಯನನ್ನು ವಿವೇಕಿಯನ್ನಾಗಿಸಬೇಕು. ಆದರಿಲ್ಲಿ ಶಿಕ್ಷಕರೇ ಜಾತೀವಾದಿಗಳಾಗಿದ್ದಾರೆ. ಇದು ನಮ್ಮ ದುರಂತ. ಜಾತೀಯತೆ ಎಂಬ ರೋಗಾಣು ನಮ್ಮ ದೇಶದಿಂದ ತೊಲಗುವುದೇ ಇಲ್ಲವೇನೋ?

LEAVE A REPLY

Please enter your comment!
Please enter your name here

- Advertisment -

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...