Homeಮುಖಪುಟಜಾತಿವಾದಿ ಶಿಕ್ಷಕರ ಗುಂಪಿನ ಮಸಲತ್ತು : ಮಹಿಳಾ ಡಿಡಿಪಿಐ ಎತ್ತಂಗಡಿಗೆ ನಡೆದಿದೆಯಾ ಕಸರತ್ತು!

ಜಾತಿವಾದಿ ಶಿಕ್ಷಕರ ಗುಂಪಿನ ಮಸಲತ್ತು : ಮಹಿಳಾ ಡಿಡಿಪಿಐ ಎತ್ತಂಗಡಿಗೆ ನಡೆದಿದೆಯಾ ಕಸರತ್ತು!

- Advertisement -
- Advertisement -

ತುಮಕೂರು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಡಿಡಿಪಿಐ ಕಾಮಾಕ್ಷಮ್ಮ ಅವರ ಎತ್ತಂಗಡಿಗೆ ಜಾತಿವಾದಿ ‘ರಾಜಕಾರಣಿ ಶಿಕ್ಷಕರ ಗುಂಪು’ ಲಾಬಿ ನಡೆಸಿದೆ. ಡಿಡಿಪಿಐ ತಮ್ಮ ತಾಳಕ್ಕೆ ತಕ್ಕಂತೆ ಕುಣಿಯಬೇಕು. ಹೇಳಿದಂತೆ ಕೇಳಬೇಕು ಎಂಬುದೇ ಈ ಶಿಕ್ಷಕರ ಗುಂಪಿನ ಉದ್ದೇಶ. ಕಾರ್ಯಸಾಧನೆಗೆ ಯಾರ ಕಾಲನ್ನಾದರೂ ಹಿಡಿಯಬಲ್ಲರಾದ ಇವರು ತಮ್ಮ ಉದ್ದೇಶ ಈಡೇರದಿದ್ದರೆ ಯಾರ ಕಾಲೆಳೆಸಲು ಸಹ ಸಿದ್ಧರು.

ಶಿಕ್ಷಣ ಇಲಾಖೆಯಲ್ಲಿ ಶಿಕ್ಷಕರ ವರ್ಗಾವಣೆಯನ್ನು ಕೇಂದ್ರೀಕರಣಗೊಳಿಸಿದೆ. ಕೌನ್ಸಿಲ್ ಮೂಲಕವೇ ಶಿಕ್ಷಕರ ವರ್ಗಾವಣೆ ನಡೆಯುತ್ತದೆ. ವಸ್ತುಸ್ಥಿತಿ ಹೀಗಿದ್ದರೂ ವರ್ಗಾವಣೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಡಿಡಿಪಿಐ ಭ್ರಷ್ಟಾಚಾರ ನಡೆಸುತ್ತಿದ್ದಾರೆ ಎಂಬ ವದಂತಿಯನ್ನು ಹಬ್ಬಿಸಲಾಗಿದೆ.

ಮೇಲಧಿಕಾರಿಗಳು ಅಧಿಕಾರ ನೀಡಿದರೆ ಮಾತ್ರ ಡಿಡಿಪಿಐಗೆ ಶಿಕ್ಷಕರ ವರ್ಗಾವಣೆ ಮಾಡುವ ಅಧಿಕಾರವಿದೆ. ವಿಶೇಷ ಪ್ರಕರಣಗಳಲ್ಲಿಯೂ ಮೇಲಿನ ಆದೇಶವಿಲ್ಲದೆ ಏನೂ ಮಾಡುವ ಹಾಗಿಲ್ಲ. ಆದರೆ ಶಿಕ್ಷಕರ ಡೆಪ್ಯೂಟೇಶನ್ ಮಾಡುವ ಅಧಿಕಾರ ಡಿಡಿಪಿಐಗೆ ಇದೆ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ. ಆದರೆ ಕೆಲವು ಜಾತಿವಾದಿ ಪಟ್ಟಭದ್ರ ಶಿಕ್ಷಕರ ಗುಂಪು ತಾವು ಹೇಳಿದಂತೆ ಕೇಳುತ್ತಿಲ್ಲ ಎಂಬ ಕಾರಣಕ್ಕೆ ಡಿಡಿಪಿಐ ಕಾಮಾಕ್ಷಮ್ಮ ವರ್ಗಾವಣೆಗೆ ಮಸಲತ್ತು ನಡೆಸಿದೆ.

ಕಾಮಾಕ್ಷಮ್ಮ

ಕಾಮಾಕ್ಷಮ್ಮ ಅವರು ಈ ಹಿಂದೆ ಬಾಗಲಕೋಟೆಯಲ್ಲಿ ಕೆಲಸ ಮಾಡಿಬಂದವರು. ಬಾಗಲಕೋಟೆಯಲ್ಲಿ ಉತ್ತಮ ಕೆಲಸ ಮಾಡಿ ಹೆಸರು ಮಾಡಿದ್ದರು. ತುಮಕೂರಿಗೆ ಬಂದ ಮೇಲೆ ಜಾತಿವಾದಿ ರಾಜಕಾರಣಿ ಶಿಕ್ಷಕರ ಗುಂಪು ಡಿಡಿಪಿಐ ವಿರುದ್ಧ ವದಂತಿಗಳನ್ನು ಹಬ್ಬಿಸುತ್ತಲೇ ಇದೆ. ಮಹಿಳಾ ಅಧಿಕಾರಿಯನ್ನು ಎತ್ತಂಗಡಿ ಮಾಡಿಸಿ ತಮ್ಮ ಮಾತು ಕೇಳುವವರನ್ನು ತಂದು ಹಾಕಿಸಿಕೊಳ್ಳುವುದು ಈ ಗುಂಪಿನ ಉದ್ದೇಶವಾಗಿದೆ ಎಂದು ಹೇಳಾಗುತ್ತಿದೆ.

ಇದೀಗ ಮತ್ತೊಂದು ಸುದ್ದಿ ಹಬ್ಬಿದೆ. ತುಮಕೂರಿನ ಡಾ. ರಾಧಾಕೃಷ್ಣನ್ ರಸ್ತೆಯ ಸೋಮೇಶ್ವರ ಮುಖ್ಯರಸ್ತೆಯ ತಿರುವಿನಲ್ಲಿರುವ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಕಚೇರಿ ಆವರಣದಲ್ಲಿ ದೊಡ್ಡದೊಂದು ಗುಂಡಿ ತೆಗೆಯಲಾಗಿದೆ. ಈ ಮಾಹಿತಿ ಜಿಲ್ಲಾ ಪಂಚಾಯಿತಿ ಸಿಇಒ ಶುಭ ಕಲ್ಯಾಣ್ ಅವರಿಗೆ ತಲುಪಿ ರಾತ್ರಿ 9 ಗಂಟೆಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಅಷ್ಟೊತ್ತಿಗೆ ಡಿಡಿಪಿಐ ಕಾಮಾಕ್ಷಮ್ಮ ಅವರ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಹಾಗಾಗಿ ಮಹಿಳಾ ಅಧಿಕಾರಿಯ ಪತಿಗೆ ಕರೆ ಮಾಡಿದ ಸಿಐಒ ಸ್ಥಳಕ್ಕೆ ಕರೆಸಿಕೊಂಡು ವಿವರ ಕೇಳಿದ್ದಾರೆ. ಕಸ ಮುಚ್ಚಲು ಗುಂಡಿ ತೋಡಿ ಎಂದು ನಾನೇ ಹೇಳಿದ್ದ ಎಂದು ಡಿಡಿಪಿಐ ಒಪ್ಪಿಕೊಂಡಿದ್ದಾರೆ. ಹಾಗಾಗಿ ಸಿಇಓ ಶುಭಕಲ್ಯಾಣ್ ಗುಂಡಿಯನ್ನು ಸೋಮವಾರದವರೆಗೆ ಮುಚ್ಚಬಾರದು. ಸ್ಧಳದಲ್ಲಿ ಸಿಸಿ ಕ್ಯಾಮೆರ ಅವಳವಡಿಸಬೇಕೆಂದು ಸೂಚಿಸಿ ಹೋಗಿದ್ದಾರೆ.

ಈ ಸುದ್ದಿಗೆ ಈಗ ರೆಕ್ಕೆಪುಕ್ಕಗಳು ಬಂದಿವೆ. ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ಕೆಲ ಫೈಲ್ ಗಳನ್ನು ಮಣ್ಣಿನಲ್ಲಿ ಮುಚ್ಚಿಹಾಕಲು ಡಿಡಿಪಿಐ ಯತ್ನಿಸಿದ್ದಾರೆ ಎಂಬ ಆರೋಪ ತೇಲಿಬಿಡಲಾಗಿದೆ. ಗುಂಡಿ ತೋಡಿರುವುದು ಅನುಮಾನ ಹುಟ್ಟುಹಾಕುತ್ತದೆ ಸರಿ. ಆದರೆ ಎಂಥಾ ಮೂರ್ಖರು ಕೂಡ ದಾಖಲೆಗಳನ್ನು ಕಣ್ಣಮುಂದೆಯೇ ಹೂತು ಹಾಕುವಷ್ಟು ಅಧಿಕಾರಿಗಳು ದಡ್ಡರಲ್ಲ. ಹಾಗಾಗಿ ಡಿಡಿಪಿಐ ಅವರನ್ನು ವರ್ಗಾವಣೆ ಮಾಡಿಸುವುದೇ ಈ ಕುತಂತ್ರದ ಹಿಂದಿನ ಪ್ರಮುಖ ಉದ್ದೇಶವಾಗಿದೆ ಎಂದು ಹೇಳಲಾಗುತ್ತಿದೆ.

ಗುಬ್ಬಿಯ ತಹಶೀಲ್ದಾರ್ ಮಮತ, ಜಿಲ್ಲೆಯ ಆರೋಗ್ಯಾಧಿಕಾರಿ ಚಂದ್ರಿಕಾ ಎತ್ತಂಗಡಿಯಾದ ಮೇಲೆ ಈಗ ಡಿಡಿಪಿಐ ಕಾಮಾಕ್ಷಮ್ಮ ಅವರನ್ನು ವರ್ಗಾವಣೆ ಮಾಡಿಸಲು ಪಿತೂರು ನಡೆದಿದೆ. ಅತ್ಯಂತ ಹಿಂದುಳಿದ ಸವಿತಾ ಸಮಾಜಕ್ಕೆ ಸೇರಿರುವ ಕಾಮಾಕ್ಷಮ್ಮ ಅವರ ಕೈಕೆಳಗೆ ಕೆಲಸ ಮಾಡಲು ಒಪ್ಪದ ಜಾತಿವಾದಿ ಮನಸ್ಸುಗಳು ಅನಗತ್ಯವಾಗಿ ಹುಯ್ಯಿಲೆಬ್ಬಿಸಿ ಮಹಿಳಾ ಅಧಿಕಾರಿಯ ನೈತಿಕತೆಯನ್ನು ಕುಗ್ಗಿಸುವ ಪ್ರಯತ್ನಗಳು ನಡೆಯುತ್ತಿರುವುದು ಶೋಚನೀಯ ಸಂಗತಿ ಎಂದು ಹೆಸರು ಹೇಳದ ಅಧಿಕಾರಿಯೊಬ್ಬರು ಹೇಳಿದ್ದಾರೆ.


ಮತ್ತಷ್ಟು ಸುದ್ದಿಗಳು

ಬೋಧನಾ ಕೆಲಸದಿಂದ ವಜಾ: ಬದುಕು ಸಾಗಿಸಲು ಬಾಳೆಹಣ್ಣು ಮಾರಾಟ ಆರಂಭಿಸಿದ ಶಿಕ್ಷಕ!

BJP ಮುಖಂಡನ ವಿರುದ್ಧ ಲೈಂಗಿಕ ದೌರ್ಜನ್ಯ ದೂರು; ಮಾರಕಾಸ್ತ್ರಗಳಿಂದ JDS ಕಾರ್ಯಕರ್ತರ ಮೇಲೆ ಹಲ್ಲೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. DDPI ಕಾಮಾಕ್ಷಮ್ಮನವರು ಹೆಣ್ಣು ಎಂಬ ಕಾರಣಕ್ಕೆ, ಕೆಲವು ಪಟ್ಟಭದ್ರ ಹಿತಾಸಕ್ತಿ, ಜಾತಿವಾದಿ ಶಿಕ್ಷಕರ ಮತ್ತು ಕಾಣದ ಕೈಗಳ ಮಸಲತ್ತಿನಿಂದ ವರ್ಗಾವಣೆ ಮಾಡುತ್ತಿರುವುದು ಪ್ರಜಾಪ್ರಭುತ್ವ ತತ್ವ ವಿ ೋಧಿ.

  2. ಇಂತಹ ಮನುವಾದಿ ಶಿಕ್ಷಕರು ಮಕ್ಕಳಿಗೆ ಬೋದಿಸುವುದಾದರೂ ಏನನ್ನು? ವಿದ್ಯೆ ಮನುಷ್ಯನನ್ನು ವಿವೇಕಿಯನ್ನಾಗಿಸಬೇಕು. ಆದರಿಲ್ಲಿ ಶಿಕ್ಷಕರೇ ಜಾತೀವಾದಿಗಳಾಗಿದ್ದಾರೆ. ಇದು ನಮ್ಮ ದುರಂತ. ಜಾತೀಯತೆ ಎಂಬ ರೋಗಾಣು ನಮ್ಮ ದೇಶದಿಂದ ತೊಲಗುವುದೇ ಇಲ್ಲವೇನೋ?

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...