Homeಮುಖಪುಟಜನರು ಏನು ತೊಡುತ್ತಾರೆ ಎಂಬುದರಲ್ಲಿ ರಾಜಕಾರಣಿಗಳು ಮೂಗು ತೂರಿಸಬೇಕಿಲ್ಲ: ಸ್ಮೃತಿ ಇರಾನಿ

ಜನರು ಏನು ತೊಡುತ್ತಾರೆ ಎಂಬುದರಲ್ಲಿ ರಾಜಕಾರಣಿಗಳು ಮೂಗು ತೂರಿಸಬೇಕಿಲ್ಲ: ಸ್ಮೃತಿ ಇರಾನಿ

ಹರಿದ ಜೀನ್ಸ್ ತೊಡಬಾರದು ಎಂದು ಮಹಿಳೆಯರಿಗೆ ತಾಕೀತು ಮಾಡಿದ್ದ ಉತ್ತರಾಖಂಡ ಮುಖ್ಯಮಂತ್ರಿ ಹೇಳಿಕೆಗೆ ಪ್ರತಿಕ್ರಿಯೆಯಾಗಿ ಈ ಹೇಳಿಕೆ ಬಂದಿದೆ.

- Advertisement -
- Advertisement -

ಜನರು ಯಾವ ರೀತಿಯ ಉಡುಗೆ ತೊಡುತ್ತಾರೆ ಎಂಬುದರ ಬಗ್ಗೆ ರಾಜಕಾರಣಿಗಳು ಮಾತನಾಡುವ ಅವಶ್ಯಕತೆ ಇಲ್ಲ ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಹೇಳಿದ್ದಾರೆ. ಉತ್ತರಾಖಂಡದ ನೂತನ ಮುಖ್ಯಮಂತ್ರಿ ತಿರತ್ ​​ಸಿಂಗ್ ರಾವತ್ ಅವರ ವಿವಾದಾತ್ಮಕ “ಹರಿದ ಜೀನ್ಸ್” ಹೇಳಿಕೆಯ ಹಿನ್ನೆಲೆಯಲ್ಲಿ ಈ ರೀತಿಯ ಪ್ರತಿಕ್ರಿಯೆ ನೀಡಿದ್ದಾರೆ.

ಮಹಿಳೆ ತನ್ನ ಜೀವನ ನಡೆಸಲು ಮತ್ತು ಅವಳಿಗೆ ಸರಿಹೊಂದುವಂತೆ ಸಮಾಜದೊಂದಿಗೆ ತೊಡಗಿಸಿಕೊಳ್ಳಲು ಆಕೆ ಬಯಸುವ ಮಾರ್ಗವನ್ನು ಆರಿಸಿಕೊಳ್ಳುವ ಹಕ್ಕು ಮಹಿಳೆಗಿದೆ ಎಂದು ಟೈಮ್ಸ್ ನೆಟ್‌ವರ್ಕ್ ಆಯೋಜಿಸಿದ ಕಾರ್ಯಕ್ರಮವೊಂದರಲ್ಲಿ ಸ್ಮೃತಿ ಇರಾನಿ ಹೇಳಿದ್ದಾರೆ.

“ಪುರುಷರು, ಮಹಿಳೆಯರು, ತೃತೀಯಲಿಂಗಿಗಳು ಯಾರೇ ಆಗಲಿ ಏನು ಧರಿಸುವರು, ಏನು ತಿನ್ನುತ್ತಾರೆ, ಅವರು ಏನು ಮಾಡುತ್ತಾರೆ ಎಂಬುದರ ಬಗ್ಗೆ ಯಾವುದೇ ರಾಜಕಾರಣಿಗಳು ಮೂಗು ತೂರಿಸುವ ಅಗತ್ಯವಿಲ್ಲ. ಏಕೆಂದರೆ, ನಮ್ಮ ಕೆಲಸ ಜನಸೇವೆ ಮತ್ತು ಕಾನೂನಿನ ನಿಯಮವನ್ನು ಪಾಲನೆ ಮಾಡುವುದು ಅಷ್ಟೇ. ಕೆಲವು ಪುರುಷ ಮತ್ತು ಮಹಿಳಾ ರಾಜಕಾರಣಿಗಳು ನಿಯಮ ಮೀರಿ ಮಾತನಾಡಿದ್ದಾರೆ. ಪ್ರಬುದ್ಧವಾಗಿ ಯೋಚಿಸುವವರು ಯಾರೂ ಆ ಹೇಳಿಕೆಯನ್ನು ನೀಡುವುದಿಲ್ಲ” ಎಂದು ಪರೋಕ್ಷವಾಗಿ ಉತ್ತರಾಖಂಡ ಮುಖ್ಯಮಂತ್ರಿಯನ್ನು ಟೀಕಿಸಿದ್ದಾರೆ.

ಇದನ್ನೂ ಓದಿ: ಜೀನ್ಸ್ ಪ್ಯಾಂಟ್ ವಿವಾದ: ತನ್ನ ವಿವಾದಾತ್ಮಕ ಹೇಳಿಕೆಗೆ ಕ್ಷಮೆಯಾಚಿಸಿದ ಉತ್ತರಾಖಂಡ್ ಸಿಎಂ

ಹರಿದ, ಟೋನ್ಡ್ ಜೀನ್ಸ್ ಧರಿಸಿದ ಮಹಿಳೆಯರು ಮಕ್ಕಳಿಗೆ ಯಾವ ಮೌಲ್ಯಗಳನ್ನು ನೀಡುತ್ತಾರೆ..? ಇವರು ಸಮಾಜವನ್ನು ಕೆಳಮಟ್ಟಕ್ಕಿಳಿಸುತ್ತಿದ್ದಾರೆ ಎಂದು ಉತ್ತರಾಖಂಡದ ನೂತನ ಸಿಎಂ ತಿರತ್ ಸಿಂಗ್ ರಾವತ್ ವಿವಾದಾತ್ಮಕ ಹೇಳಿಕೆ ನೀಡಿ ಭಾರಿ ಟೀಕೆಗೆ ಒಳಗಾಗಿದ್ದರು. ಅವರ ಪತ್ನಿ ಕೂಡ ಅವರನ್ನು ಸಮರ್ಥಿಸಿಕೊಂಡಿದ್ದರು. ನಂತರ ಮುಖ್ಯಮಂತ್ರಿ ಕ್ಷಮಾಪಣೆ ಕೇಳಿದ್ದರು.

“ಕೆಲವು ನಿರ್ದಿಷ್ಟ ಸ್ಥಾನಗಳನ್ನು ಕೇವಲ ಪುರುಷರು ಮಾತ್ರ ತೆಗೆದುಕೊಳ್ಳುತ್ತಾರೆ ಎಂಬುದಿಲ್ಲ. ಮಹಿಳೆಗೆ ಕೂಡ ಆಕೆ ಬಯಸಿದಂತೆ, ಆಕೆ ಆಯ್ಕೆ ಮಾಡಿಕೊಂಡಂತೆ ಬದುಕುವ ಹಕ್ಕು ಇದೆ. ಸಮಾಜದೊಂದಿಗೆ ಹೇಗೆ ತೊಡಗಿಸಿಕೊಳ್ಳಲು ಬಯಸುತ್ತಾಳೆ ಎಂಬುದನ್ನು ಆಕೆ ನಿರ್ಧರಿಸುತ್ತಾಳೆ. ಆಕೆ ಏನು ಮಾಡಬೇಕೆಂದು ಹೇಳುವ, ಆಕೆಯ ವಿಚಾರದಲ್ಲಿ ಮೂಗು ತೂರಿಸುವ ಅವಶ್ಯಕತೆ ಇಲ್ಲ” ಎಂದು ಸ್ಮೃತಿ ಇರಾನಿ ಹೇಳಿದ್ದಾರೆ.

ಇದೇ ವೇಳೆ ಮಹಿಳಾ ಮೀಸಲಾತಿ ಕುರಿತು ಮಾತನಾಡಿರುವ ಅವರು, “ಬಿಜೆಪಿ ತನ್ನೊಳಗೆ ಶೇಕಡಾ 33 ರಷ್ಟು ಮೀಸಲಾತಿ ನೀಡಿದ ಮೊದಲ ಪಕ್ಷ.  ಹಾಗಾಗಿ ನಿರ್ಮಲಾ ಸೀತಾರಾಮನ್ ಮತ್ತು ನನ್ನಂತಹ ಮಹಿಳೆಯರು ನಮ್ಮ ಮೊದಲ ಸಾಂಸ್ಥಿಕ ಸ್ಥಾನಗಳನ್ನು ಪಕ್ಷದಲ್ಲಿ ಪಡೆದಿದ್ದೇವೆ. ಉನ್ನತ ಕಚೇರಿಗಳಲ್ಲಿ ಸೇವೆ ಸಲ್ಲಿಸಲು ಎಂದಿಗೂ ಅವಕಾಶವಿಲ್ಲದ ಅನೇಕ ಮಹಿಳೆಯರು ಇದ್ದಾರೆ. ಇಂದು ನೀವು ಮಹಿಳೆಯರ ರಾಜಕೀಯ ಸಬಲೀಕರಣದ ಬಗ್ಗೆ ಮಾತನಾಡುವ ಜಾಗತಿಕ ಸೂಚ್ಯಂಕಗಳನ್ನು ನೋಡಿದರೆ, ಪಂಚಾಯಿತಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಮಹಿಳೆಯರನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲಾಗಿಲ್ಲ” ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಜೀನ್ಸ್ ಪ್ಯಾಂಟ್ ವಿವಾದ: ಸಾಂಸ್ಕೃತಿಕ ಪರಂಪರೆ ಉಳಿಸುವುದು ಮಹಿಳೆಯರ ಜವಾಬ್ದಾರಿ ಎಂದ ಉತ್ತರಾಖಂಡ ಸಿಎಂ ಪತ್ನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...