Homeಮುಖಪುಟಜನರು ಏನು ತೊಡುತ್ತಾರೆ ಎಂಬುದರಲ್ಲಿ ರಾಜಕಾರಣಿಗಳು ಮೂಗು ತೂರಿಸಬೇಕಿಲ್ಲ: ಸ್ಮೃತಿ ಇರಾನಿ

ಜನರು ಏನು ತೊಡುತ್ತಾರೆ ಎಂಬುದರಲ್ಲಿ ರಾಜಕಾರಣಿಗಳು ಮೂಗು ತೂರಿಸಬೇಕಿಲ್ಲ: ಸ್ಮೃತಿ ಇರಾನಿ

ಹರಿದ ಜೀನ್ಸ್ ತೊಡಬಾರದು ಎಂದು ಮಹಿಳೆಯರಿಗೆ ತಾಕೀತು ಮಾಡಿದ್ದ ಉತ್ತರಾಖಂಡ ಮುಖ್ಯಮಂತ್ರಿ ಹೇಳಿಕೆಗೆ ಪ್ರತಿಕ್ರಿಯೆಯಾಗಿ ಈ ಹೇಳಿಕೆ ಬಂದಿದೆ.

- Advertisement -
- Advertisement -

ಜನರು ಯಾವ ರೀತಿಯ ಉಡುಗೆ ತೊಡುತ್ತಾರೆ ಎಂಬುದರ ಬಗ್ಗೆ ರಾಜಕಾರಣಿಗಳು ಮಾತನಾಡುವ ಅವಶ್ಯಕತೆ ಇಲ್ಲ ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಹೇಳಿದ್ದಾರೆ. ಉತ್ತರಾಖಂಡದ ನೂತನ ಮುಖ್ಯಮಂತ್ರಿ ತಿರತ್ ​​ಸಿಂಗ್ ರಾವತ್ ಅವರ ವಿವಾದಾತ್ಮಕ “ಹರಿದ ಜೀನ್ಸ್” ಹೇಳಿಕೆಯ ಹಿನ್ನೆಲೆಯಲ್ಲಿ ಈ ರೀತಿಯ ಪ್ರತಿಕ್ರಿಯೆ ನೀಡಿದ್ದಾರೆ.

ಮಹಿಳೆ ತನ್ನ ಜೀವನ ನಡೆಸಲು ಮತ್ತು ಅವಳಿಗೆ ಸರಿಹೊಂದುವಂತೆ ಸಮಾಜದೊಂದಿಗೆ ತೊಡಗಿಸಿಕೊಳ್ಳಲು ಆಕೆ ಬಯಸುವ ಮಾರ್ಗವನ್ನು ಆರಿಸಿಕೊಳ್ಳುವ ಹಕ್ಕು ಮಹಿಳೆಗಿದೆ ಎಂದು ಟೈಮ್ಸ್ ನೆಟ್‌ವರ್ಕ್ ಆಯೋಜಿಸಿದ ಕಾರ್ಯಕ್ರಮವೊಂದರಲ್ಲಿ ಸ್ಮೃತಿ ಇರಾನಿ ಹೇಳಿದ್ದಾರೆ.

“ಪುರುಷರು, ಮಹಿಳೆಯರು, ತೃತೀಯಲಿಂಗಿಗಳು ಯಾರೇ ಆಗಲಿ ಏನು ಧರಿಸುವರು, ಏನು ತಿನ್ನುತ್ತಾರೆ, ಅವರು ಏನು ಮಾಡುತ್ತಾರೆ ಎಂಬುದರ ಬಗ್ಗೆ ಯಾವುದೇ ರಾಜಕಾರಣಿಗಳು ಮೂಗು ತೂರಿಸುವ ಅಗತ್ಯವಿಲ್ಲ. ಏಕೆಂದರೆ, ನಮ್ಮ ಕೆಲಸ ಜನಸೇವೆ ಮತ್ತು ಕಾನೂನಿನ ನಿಯಮವನ್ನು ಪಾಲನೆ ಮಾಡುವುದು ಅಷ್ಟೇ. ಕೆಲವು ಪುರುಷ ಮತ್ತು ಮಹಿಳಾ ರಾಜಕಾರಣಿಗಳು ನಿಯಮ ಮೀರಿ ಮಾತನಾಡಿದ್ದಾರೆ. ಪ್ರಬುದ್ಧವಾಗಿ ಯೋಚಿಸುವವರು ಯಾರೂ ಆ ಹೇಳಿಕೆಯನ್ನು ನೀಡುವುದಿಲ್ಲ” ಎಂದು ಪರೋಕ್ಷವಾಗಿ ಉತ್ತರಾಖಂಡ ಮುಖ್ಯಮಂತ್ರಿಯನ್ನು ಟೀಕಿಸಿದ್ದಾರೆ.

ಇದನ್ನೂ ಓದಿ: ಜೀನ್ಸ್ ಪ್ಯಾಂಟ್ ವಿವಾದ: ತನ್ನ ವಿವಾದಾತ್ಮಕ ಹೇಳಿಕೆಗೆ ಕ್ಷಮೆಯಾಚಿಸಿದ ಉತ್ತರಾಖಂಡ್ ಸಿಎಂ

ಹರಿದ, ಟೋನ್ಡ್ ಜೀನ್ಸ್ ಧರಿಸಿದ ಮಹಿಳೆಯರು ಮಕ್ಕಳಿಗೆ ಯಾವ ಮೌಲ್ಯಗಳನ್ನು ನೀಡುತ್ತಾರೆ..? ಇವರು ಸಮಾಜವನ್ನು ಕೆಳಮಟ್ಟಕ್ಕಿಳಿಸುತ್ತಿದ್ದಾರೆ ಎಂದು ಉತ್ತರಾಖಂಡದ ನೂತನ ಸಿಎಂ ತಿರತ್ ಸಿಂಗ್ ರಾವತ್ ವಿವಾದಾತ್ಮಕ ಹೇಳಿಕೆ ನೀಡಿ ಭಾರಿ ಟೀಕೆಗೆ ಒಳಗಾಗಿದ್ದರು. ಅವರ ಪತ್ನಿ ಕೂಡ ಅವರನ್ನು ಸಮರ್ಥಿಸಿಕೊಂಡಿದ್ದರು. ನಂತರ ಮುಖ್ಯಮಂತ್ರಿ ಕ್ಷಮಾಪಣೆ ಕೇಳಿದ್ದರು.

“ಕೆಲವು ನಿರ್ದಿಷ್ಟ ಸ್ಥಾನಗಳನ್ನು ಕೇವಲ ಪುರುಷರು ಮಾತ್ರ ತೆಗೆದುಕೊಳ್ಳುತ್ತಾರೆ ಎಂಬುದಿಲ್ಲ. ಮಹಿಳೆಗೆ ಕೂಡ ಆಕೆ ಬಯಸಿದಂತೆ, ಆಕೆ ಆಯ್ಕೆ ಮಾಡಿಕೊಂಡಂತೆ ಬದುಕುವ ಹಕ್ಕು ಇದೆ. ಸಮಾಜದೊಂದಿಗೆ ಹೇಗೆ ತೊಡಗಿಸಿಕೊಳ್ಳಲು ಬಯಸುತ್ತಾಳೆ ಎಂಬುದನ್ನು ಆಕೆ ನಿರ್ಧರಿಸುತ್ತಾಳೆ. ಆಕೆ ಏನು ಮಾಡಬೇಕೆಂದು ಹೇಳುವ, ಆಕೆಯ ವಿಚಾರದಲ್ಲಿ ಮೂಗು ತೂರಿಸುವ ಅವಶ್ಯಕತೆ ಇಲ್ಲ” ಎಂದು ಸ್ಮೃತಿ ಇರಾನಿ ಹೇಳಿದ್ದಾರೆ.

ಇದೇ ವೇಳೆ ಮಹಿಳಾ ಮೀಸಲಾತಿ ಕುರಿತು ಮಾತನಾಡಿರುವ ಅವರು, “ಬಿಜೆಪಿ ತನ್ನೊಳಗೆ ಶೇಕಡಾ 33 ರಷ್ಟು ಮೀಸಲಾತಿ ನೀಡಿದ ಮೊದಲ ಪಕ್ಷ.  ಹಾಗಾಗಿ ನಿರ್ಮಲಾ ಸೀತಾರಾಮನ್ ಮತ್ತು ನನ್ನಂತಹ ಮಹಿಳೆಯರು ನಮ್ಮ ಮೊದಲ ಸಾಂಸ್ಥಿಕ ಸ್ಥಾನಗಳನ್ನು ಪಕ್ಷದಲ್ಲಿ ಪಡೆದಿದ್ದೇವೆ. ಉನ್ನತ ಕಚೇರಿಗಳಲ್ಲಿ ಸೇವೆ ಸಲ್ಲಿಸಲು ಎಂದಿಗೂ ಅವಕಾಶವಿಲ್ಲದ ಅನೇಕ ಮಹಿಳೆಯರು ಇದ್ದಾರೆ. ಇಂದು ನೀವು ಮಹಿಳೆಯರ ರಾಜಕೀಯ ಸಬಲೀಕರಣದ ಬಗ್ಗೆ ಮಾತನಾಡುವ ಜಾಗತಿಕ ಸೂಚ್ಯಂಕಗಳನ್ನು ನೋಡಿದರೆ, ಪಂಚಾಯಿತಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಮಹಿಳೆಯರನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲಾಗಿಲ್ಲ” ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಜೀನ್ಸ್ ಪ್ಯಾಂಟ್ ವಿವಾದ: ಸಾಂಸ್ಕೃತಿಕ ಪರಂಪರೆ ಉಳಿಸುವುದು ಮಹಿಳೆಯರ ಜವಾಬ್ದಾರಿ ಎಂದ ಉತ್ತರಾಖಂಡ ಸಿಎಂ ಪತ್ನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...