Homeಮುಖಪುಟಜನರು ಏನು ತೊಡುತ್ತಾರೆ ಎಂಬುದರಲ್ಲಿ ರಾಜಕಾರಣಿಗಳು ಮೂಗು ತೂರಿಸಬೇಕಿಲ್ಲ: ಸ್ಮೃತಿ ಇರಾನಿ

ಜನರು ಏನು ತೊಡುತ್ತಾರೆ ಎಂಬುದರಲ್ಲಿ ರಾಜಕಾರಣಿಗಳು ಮೂಗು ತೂರಿಸಬೇಕಿಲ್ಲ: ಸ್ಮೃತಿ ಇರಾನಿ

ಹರಿದ ಜೀನ್ಸ್ ತೊಡಬಾರದು ಎಂದು ಮಹಿಳೆಯರಿಗೆ ತಾಕೀತು ಮಾಡಿದ್ದ ಉತ್ತರಾಖಂಡ ಮುಖ್ಯಮಂತ್ರಿ ಹೇಳಿಕೆಗೆ ಪ್ರತಿಕ್ರಿಯೆಯಾಗಿ ಈ ಹೇಳಿಕೆ ಬಂದಿದೆ.

- Advertisement -
- Advertisement -

ಜನರು ಯಾವ ರೀತಿಯ ಉಡುಗೆ ತೊಡುತ್ತಾರೆ ಎಂಬುದರ ಬಗ್ಗೆ ರಾಜಕಾರಣಿಗಳು ಮಾತನಾಡುವ ಅವಶ್ಯಕತೆ ಇಲ್ಲ ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಹೇಳಿದ್ದಾರೆ. ಉತ್ತರಾಖಂಡದ ನೂತನ ಮುಖ್ಯಮಂತ್ರಿ ತಿರತ್ ​​ಸಿಂಗ್ ರಾವತ್ ಅವರ ವಿವಾದಾತ್ಮಕ “ಹರಿದ ಜೀನ್ಸ್” ಹೇಳಿಕೆಯ ಹಿನ್ನೆಲೆಯಲ್ಲಿ ಈ ರೀತಿಯ ಪ್ರತಿಕ್ರಿಯೆ ನೀಡಿದ್ದಾರೆ.

ಮಹಿಳೆ ತನ್ನ ಜೀವನ ನಡೆಸಲು ಮತ್ತು ಅವಳಿಗೆ ಸರಿಹೊಂದುವಂತೆ ಸಮಾಜದೊಂದಿಗೆ ತೊಡಗಿಸಿಕೊಳ್ಳಲು ಆಕೆ ಬಯಸುವ ಮಾರ್ಗವನ್ನು ಆರಿಸಿಕೊಳ್ಳುವ ಹಕ್ಕು ಮಹಿಳೆಗಿದೆ ಎಂದು ಟೈಮ್ಸ್ ನೆಟ್‌ವರ್ಕ್ ಆಯೋಜಿಸಿದ ಕಾರ್ಯಕ್ರಮವೊಂದರಲ್ಲಿ ಸ್ಮೃತಿ ಇರಾನಿ ಹೇಳಿದ್ದಾರೆ.

“ಪುರುಷರು, ಮಹಿಳೆಯರು, ತೃತೀಯಲಿಂಗಿಗಳು ಯಾರೇ ಆಗಲಿ ಏನು ಧರಿಸುವರು, ಏನು ತಿನ್ನುತ್ತಾರೆ, ಅವರು ಏನು ಮಾಡುತ್ತಾರೆ ಎಂಬುದರ ಬಗ್ಗೆ ಯಾವುದೇ ರಾಜಕಾರಣಿಗಳು ಮೂಗು ತೂರಿಸುವ ಅಗತ್ಯವಿಲ್ಲ. ಏಕೆಂದರೆ, ನಮ್ಮ ಕೆಲಸ ಜನಸೇವೆ ಮತ್ತು ಕಾನೂನಿನ ನಿಯಮವನ್ನು ಪಾಲನೆ ಮಾಡುವುದು ಅಷ್ಟೇ. ಕೆಲವು ಪುರುಷ ಮತ್ತು ಮಹಿಳಾ ರಾಜಕಾರಣಿಗಳು ನಿಯಮ ಮೀರಿ ಮಾತನಾಡಿದ್ದಾರೆ. ಪ್ರಬುದ್ಧವಾಗಿ ಯೋಚಿಸುವವರು ಯಾರೂ ಆ ಹೇಳಿಕೆಯನ್ನು ನೀಡುವುದಿಲ್ಲ” ಎಂದು ಪರೋಕ್ಷವಾಗಿ ಉತ್ತರಾಖಂಡ ಮುಖ್ಯಮಂತ್ರಿಯನ್ನು ಟೀಕಿಸಿದ್ದಾರೆ.

ಇದನ್ನೂ ಓದಿ: ಜೀನ್ಸ್ ಪ್ಯಾಂಟ್ ವಿವಾದ: ತನ್ನ ವಿವಾದಾತ್ಮಕ ಹೇಳಿಕೆಗೆ ಕ್ಷಮೆಯಾಚಿಸಿದ ಉತ್ತರಾಖಂಡ್ ಸಿಎಂ

ಹರಿದ, ಟೋನ್ಡ್ ಜೀನ್ಸ್ ಧರಿಸಿದ ಮಹಿಳೆಯರು ಮಕ್ಕಳಿಗೆ ಯಾವ ಮೌಲ್ಯಗಳನ್ನು ನೀಡುತ್ತಾರೆ..? ಇವರು ಸಮಾಜವನ್ನು ಕೆಳಮಟ್ಟಕ್ಕಿಳಿಸುತ್ತಿದ್ದಾರೆ ಎಂದು ಉತ್ತರಾಖಂಡದ ನೂತನ ಸಿಎಂ ತಿರತ್ ಸಿಂಗ್ ರಾವತ್ ವಿವಾದಾತ್ಮಕ ಹೇಳಿಕೆ ನೀಡಿ ಭಾರಿ ಟೀಕೆಗೆ ಒಳಗಾಗಿದ್ದರು. ಅವರ ಪತ್ನಿ ಕೂಡ ಅವರನ್ನು ಸಮರ್ಥಿಸಿಕೊಂಡಿದ್ದರು. ನಂತರ ಮುಖ್ಯಮಂತ್ರಿ ಕ್ಷಮಾಪಣೆ ಕೇಳಿದ್ದರು.

“ಕೆಲವು ನಿರ್ದಿಷ್ಟ ಸ್ಥಾನಗಳನ್ನು ಕೇವಲ ಪುರುಷರು ಮಾತ್ರ ತೆಗೆದುಕೊಳ್ಳುತ್ತಾರೆ ಎಂಬುದಿಲ್ಲ. ಮಹಿಳೆಗೆ ಕೂಡ ಆಕೆ ಬಯಸಿದಂತೆ, ಆಕೆ ಆಯ್ಕೆ ಮಾಡಿಕೊಂಡಂತೆ ಬದುಕುವ ಹಕ್ಕು ಇದೆ. ಸಮಾಜದೊಂದಿಗೆ ಹೇಗೆ ತೊಡಗಿಸಿಕೊಳ್ಳಲು ಬಯಸುತ್ತಾಳೆ ಎಂಬುದನ್ನು ಆಕೆ ನಿರ್ಧರಿಸುತ್ತಾಳೆ. ಆಕೆ ಏನು ಮಾಡಬೇಕೆಂದು ಹೇಳುವ, ಆಕೆಯ ವಿಚಾರದಲ್ಲಿ ಮೂಗು ತೂರಿಸುವ ಅವಶ್ಯಕತೆ ಇಲ್ಲ” ಎಂದು ಸ್ಮೃತಿ ಇರಾನಿ ಹೇಳಿದ್ದಾರೆ.

ಇದೇ ವೇಳೆ ಮಹಿಳಾ ಮೀಸಲಾತಿ ಕುರಿತು ಮಾತನಾಡಿರುವ ಅವರು, “ಬಿಜೆಪಿ ತನ್ನೊಳಗೆ ಶೇಕಡಾ 33 ರಷ್ಟು ಮೀಸಲಾತಿ ನೀಡಿದ ಮೊದಲ ಪಕ್ಷ.  ಹಾಗಾಗಿ ನಿರ್ಮಲಾ ಸೀತಾರಾಮನ್ ಮತ್ತು ನನ್ನಂತಹ ಮಹಿಳೆಯರು ನಮ್ಮ ಮೊದಲ ಸಾಂಸ್ಥಿಕ ಸ್ಥಾನಗಳನ್ನು ಪಕ್ಷದಲ್ಲಿ ಪಡೆದಿದ್ದೇವೆ. ಉನ್ನತ ಕಚೇರಿಗಳಲ್ಲಿ ಸೇವೆ ಸಲ್ಲಿಸಲು ಎಂದಿಗೂ ಅವಕಾಶವಿಲ್ಲದ ಅನೇಕ ಮಹಿಳೆಯರು ಇದ್ದಾರೆ. ಇಂದು ನೀವು ಮಹಿಳೆಯರ ರಾಜಕೀಯ ಸಬಲೀಕರಣದ ಬಗ್ಗೆ ಮಾತನಾಡುವ ಜಾಗತಿಕ ಸೂಚ್ಯಂಕಗಳನ್ನು ನೋಡಿದರೆ, ಪಂಚಾಯಿತಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಮಹಿಳೆಯರನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲಾಗಿಲ್ಲ” ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಜೀನ್ಸ್ ಪ್ಯಾಂಟ್ ವಿವಾದ: ಸಾಂಸ್ಕೃತಿಕ ಪರಂಪರೆ ಉಳಿಸುವುದು ಮಹಿಳೆಯರ ಜವಾಬ್ದಾರಿ ಎಂದ ಉತ್ತರಾಖಂಡ ಸಿಎಂ ಪತ್ನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...