Homeಮುಖಪುಟಜನರು ಏನು ತೊಡುತ್ತಾರೆ ಎಂಬುದರಲ್ಲಿ ರಾಜಕಾರಣಿಗಳು ಮೂಗು ತೂರಿಸಬೇಕಿಲ್ಲ: ಸ್ಮೃತಿ ಇರಾನಿ

ಜನರು ಏನು ತೊಡುತ್ತಾರೆ ಎಂಬುದರಲ್ಲಿ ರಾಜಕಾರಣಿಗಳು ಮೂಗು ತೂರಿಸಬೇಕಿಲ್ಲ: ಸ್ಮೃತಿ ಇರಾನಿ

ಹರಿದ ಜೀನ್ಸ್ ತೊಡಬಾರದು ಎಂದು ಮಹಿಳೆಯರಿಗೆ ತಾಕೀತು ಮಾಡಿದ್ದ ಉತ್ತರಾಖಂಡ ಮುಖ್ಯಮಂತ್ರಿ ಹೇಳಿಕೆಗೆ ಪ್ರತಿಕ್ರಿಯೆಯಾಗಿ ಈ ಹೇಳಿಕೆ ಬಂದಿದೆ.

- Advertisement -
- Advertisement -

ಜನರು ಯಾವ ರೀತಿಯ ಉಡುಗೆ ತೊಡುತ್ತಾರೆ ಎಂಬುದರ ಬಗ್ಗೆ ರಾಜಕಾರಣಿಗಳು ಮಾತನಾಡುವ ಅವಶ್ಯಕತೆ ಇಲ್ಲ ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಹೇಳಿದ್ದಾರೆ. ಉತ್ತರಾಖಂಡದ ನೂತನ ಮುಖ್ಯಮಂತ್ರಿ ತಿರತ್ ​​ಸಿಂಗ್ ರಾವತ್ ಅವರ ವಿವಾದಾತ್ಮಕ “ಹರಿದ ಜೀನ್ಸ್” ಹೇಳಿಕೆಯ ಹಿನ್ನೆಲೆಯಲ್ಲಿ ಈ ರೀತಿಯ ಪ್ರತಿಕ್ರಿಯೆ ನೀಡಿದ್ದಾರೆ.

ಮಹಿಳೆ ತನ್ನ ಜೀವನ ನಡೆಸಲು ಮತ್ತು ಅವಳಿಗೆ ಸರಿಹೊಂದುವಂತೆ ಸಮಾಜದೊಂದಿಗೆ ತೊಡಗಿಸಿಕೊಳ್ಳಲು ಆಕೆ ಬಯಸುವ ಮಾರ್ಗವನ್ನು ಆರಿಸಿಕೊಳ್ಳುವ ಹಕ್ಕು ಮಹಿಳೆಗಿದೆ ಎಂದು ಟೈಮ್ಸ್ ನೆಟ್‌ವರ್ಕ್ ಆಯೋಜಿಸಿದ ಕಾರ್ಯಕ್ರಮವೊಂದರಲ್ಲಿ ಸ್ಮೃತಿ ಇರಾನಿ ಹೇಳಿದ್ದಾರೆ.

“ಪುರುಷರು, ಮಹಿಳೆಯರು, ತೃತೀಯಲಿಂಗಿಗಳು ಯಾರೇ ಆಗಲಿ ಏನು ಧರಿಸುವರು, ಏನು ತಿನ್ನುತ್ತಾರೆ, ಅವರು ಏನು ಮಾಡುತ್ತಾರೆ ಎಂಬುದರ ಬಗ್ಗೆ ಯಾವುದೇ ರಾಜಕಾರಣಿಗಳು ಮೂಗು ತೂರಿಸುವ ಅಗತ್ಯವಿಲ್ಲ. ಏಕೆಂದರೆ, ನಮ್ಮ ಕೆಲಸ ಜನಸೇವೆ ಮತ್ತು ಕಾನೂನಿನ ನಿಯಮವನ್ನು ಪಾಲನೆ ಮಾಡುವುದು ಅಷ್ಟೇ. ಕೆಲವು ಪುರುಷ ಮತ್ತು ಮಹಿಳಾ ರಾಜಕಾರಣಿಗಳು ನಿಯಮ ಮೀರಿ ಮಾತನಾಡಿದ್ದಾರೆ. ಪ್ರಬುದ್ಧವಾಗಿ ಯೋಚಿಸುವವರು ಯಾರೂ ಆ ಹೇಳಿಕೆಯನ್ನು ನೀಡುವುದಿಲ್ಲ” ಎಂದು ಪರೋಕ್ಷವಾಗಿ ಉತ್ತರಾಖಂಡ ಮುಖ್ಯಮಂತ್ರಿಯನ್ನು ಟೀಕಿಸಿದ್ದಾರೆ.

ಇದನ್ನೂ ಓದಿ: ಜೀನ್ಸ್ ಪ್ಯಾಂಟ್ ವಿವಾದ: ತನ್ನ ವಿವಾದಾತ್ಮಕ ಹೇಳಿಕೆಗೆ ಕ್ಷಮೆಯಾಚಿಸಿದ ಉತ್ತರಾಖಂಡ್ ಸಿಎಂ

ಹರಿದ, ಟೋನ್ಡ್ ಜೀನ್ಸ್ ಧರಿಸಿದ ಮಹಿಳೆಯರು ಮಕ್ಕಳಿಗೆ ಯಾವ ಮೌಲ್ಯಗಳನ್ನು ನೀಡುತ್ತಾರೆ..? ಇವರು ಸಮಾಜವನ್ನು ಕೆಳಮಟ್ಟಕ್ಕಿಳಿಸುತ್ತಿದ್ದಾರೆ ಎಂದು ಉತ್ತರಾಖಂಡದ ನೂತನ ಸಿಎಂ ತಿರತ್ ಸಿಂಗ್ ರಾವತ್ ವಿವಾದಾತ್ಮಕ ಹೇಳಿಕೆ ನೀಡಿ ಭಾರಿ ಟೀಕೆಗೆ ಒಳಗಾಗಿದ್ದರು. ಅವರ ಪತ್ನಿ ಕೂಡ ಅವರನ್ನು ಸಮರ್ಥಿಸಿಕೊಂಡಿದ್ದರು. ನಂತರ ಮುಖ್ಯಮಂತ್ರಿ ಕ್ಷಮಾಪಣೆ ಕೇಳಿದ್ದರು.

“ಕೆಲವು ನಿರ್ದಿಷ್ಟ ಸ್ಥಾನಗಳನ್ನು ಕೇವಲ ಪುರುಷರು ಮಾತ್ರ ತೆಗೆದುಕೊಳ್ಳುತ್ತಾರೆ ಎಂಬುದಿಲ್ಲ. ಮಹಿಳೆಗೆ ಕೂಡ ಆಕೆ ಬಯಸಿದಂತೆ, ಆಕೆ ಆಯ್ಕೆ ಮಾಡಿಕೊಂಡಂತೆ ಬದುಕುವ ಹಕ್ಕು ಇದೆ. ಸಮಾಜದೊಂದಿಗೆ ಹೇಗೆ ತೊಡಗಿಸಿಕೊಳ್ಳಲು ಬಯಸುತ್ತಾಳೆ ಎಂಬುದನ್ನು ಆಕೆ ನಿರ್ಧರಿಸುತ್ತಾಳೆ. ಆಕೆ ಏನು ಮಾಡಬೇಕೆಂದು ಹೇಳುವ, ಆಕೆಯ ವಿಚಾರದಲ್ಲಿ ಮೂಗು ತೂರಿಸುವ ಅವಶ್ಯಕತೆ ಇಲ್ಲ” ಎಂದು ಸ್ಮೃತಿ ಇರಾನಿ ಹೇಳಿದ್ದಾರೆ.

ಇದೇ ವೇಳೆ ಮಹಿಳಾ ಮೀಸಲಾತಿ ಕುರಿತು ಮಾತನಾಡಿರುವ ಅವರು, “ಬಿಜೆಪಿ ತನ್ನೊಳಗೆ ಶೇಕಡಾ 33 ರಷ್ಟು ಮೀಸಲಾತಿ ನೀಡಿದ ಮೊದಲ ಪಕ್ಷ.  ಹಾಗಾಗಿ ನಿರ್ಮಲಾ ಸೀತಾರಾಮನ್ ಮತ್ತು ನನ್ನಂತಹ ಮಹಿಳೆಯರು ನಮ್ಮ ಮೊದಲ ಸಾಂಸ್ಥಿಕ ಸ್ಥಾನಗಳನ್ನು ಪಕ್ಷದಲ್ಲಿ ಪಡೆದಿದ್ದೇವೆ. ಉನ್ನತ ಕಚೇರಿಗಳಲ್ಲಿ ಸೇವೆ ಸಲ್ಲಿಸಲು ಎಂದಿಗೂ ಅವಕಾಶವಿಲ್ಲದ ಅನೇಕ ಮಹಿಳೆಯರು ಇದ್ದಾರೆ. ಇಂದು ನೀವು ಮಹಿಳೆಯರ ರಾಜಕೀಯ ಸಬಲೀಕರಣದ ಬಗ್ಗೆ ಮಾತನಾಡುವ ಜಾಗತಿಕ ಸೂಚ್ಯಂಕಗಳನ್ನು ನೋಡಿದರೆ, ಪಂಚಾಯಿತಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಮಹಿಳೆಯರನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲಾಗಿಲ್ಲ” ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಜೀನ್ಸ್ ಪ್ಯಾಂಟ್ ವಿವಾದ: ಸಾಂಸ್ಕೃತಿಕ ಪರಂಪರೆ ಉಳಿಸುವುದು ಮಹಿಳೆಯರ ಜವಾಬ್ದಾರಿ ಎಂದ ಉತ್ತರಾಖಂಡ ಸಿಎಂ ಪತ್ನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...