Homeಮುಖಪುಟಜನರು ಏನು ತೊಡುತ್ತಾರೆ ಎಂಬುದರಲ್ಲಿ ರಾಜಕಾರಣಿಗಳು ಮೂಗು ತೂರಿಸಬೇಕಿಲ್ಲ: ಸ್ಮೃತಿ ಇರಾನಿ

ಜನರು ಏನು ತೊಡುತ್ತಾರೆ ಎಂಬುದರಲ್ಲಿ ರಾಜಕಾರಣಿಗಳು ಮೂಗು ತೂರಿಸಬೇಕಿಲ್ಲ: ಸ್ಮೃತಿ ಇರಾನಿ

ಹರಿದ ಜೀನ್ಸ್ ತೊಡಬಾರದು ಎಂದು ಮಹಿಳೆಯರಿಗೆ ತಾಕೀತು ಮಾಡಿದ್ದ ಉತ್ತರಾಖಂಡ ಮುಖ್ಯಮಂತ್ರಿ ಹೇಳಿಕೆಗೆ ಪ್ರತಿಕ್ರಿಯೆಯಾಗಿ ಈ ಹೇಳಿಕೆ ಬಂದಿದೆ.

- Advertisement -
- Advertisement -

ಜನರು ಯಾವ ರೀತಿಯ ಉಡುಗೆ ತೊಡುತ್ತಾರೆ ಎಂಬುದರ ಬಗ್ಗೆ ರಾಜಕಾರಣಿಗಳು ಮಾತನಾಡುವ ಅವಶ್ಯಕತೆ ಇಲ್ಲ ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಹೇಳಿದ್ದಾರೆ. ಉತ್ತರಾಖಂಡದ ನೂತನ ಮುಖ್ಯಮಂತ್ರಿ ತಿರತ್ ​​ಸಿಂಗ್ ರಾವತ್ ಅವರ ವಿವಾದಾತ್ಮಕ “ಹರಿದ ಜೀನ್ಸ್” ಹೇಳಿಕೆಯ ಹಿನ್ನೆಲೆಯಲ್ಲಿ ಈ ರೀತಿಯ ಪ್ರತಿಕ್ರಿಯೆ ನೀಡಿದ್ದಾರೆ.

ಮಹಿಳೆ ತನ್ನ ಜೀವನ ನಡೆಸಲು ಮತ್ತು ಅವಳಿಗೆ ಸರಿಹೊಂದುವಂತೆ ಸಮಾಜದೊಂದಿಗೆ ತೊಡಗಿಸಿಕೊಳ್ಳಲು ಆಕೆ ಬಯಸುವ ಮಾರ್ಗವನ್ನು ಆರಿಸಿಕೊಳ್ಳುವ ಹಕ್ಕು ಮಹಿಳೆಗಿದೆ ಎಂದು ಟೈಮ್ಸ್ ನೆಟ್‌ವರ್ಕ್ ಆಯೋಜಿಸಿದ ಕಾರ್ಯಕ್ರಮವೊಂದರಲ್ಲಿ ಸ್ಮೃತಿ ಇರಾನಿ ಹೇಳಿದ್ದಾರೆ.

“ಪುರುಷರು, ಮಹಿಳೆಯರು, ತೃತೀಯಲಿಂಗಿಗಳು ಯಾರೇ ಆಗಲಿ ಏನು ಧರಿಸುವರು, ಏನು ತಿನ್ನುತ್ತಾರೆ, ಅವರು ಏನು ಮಾಡುತ್ತಾರೆ ಎಂಬುದರ ಬಗ್ಗೆ ಯಾವುದೇ ರಾಜಕಾರಣಿಗಳು ಮೂಗು ತೂರಿಸುವ ಅಗತ್ಯವಿಲ್ಲ. ಏಕೆಂದರೆ, ನಮ್ಮ ಕೆಲಸ ಜನಸೇವೆ ಮತ್ತು ಕಾನೂನಿನ ನಿಯಮವನ್ನು ಪಾಲನೆ ಮಾಡುವುದು ಅಷ್ಟೇ. ಕೆಲವು ಪುರುಷ ಮತ್ತು ಮಹಿಳಾ ರಾಜಕಾರಣಿಗಳು ನಿಯಮ ಮೀರಿ ಮಾತನಾಡಿದ್ದಾರೆ. ಪ್ರಬುದ್ಧವಾಗಿ ಯೋಚಿಸುವವರು ಯಾರೂ ಆ ಹೇಳಿಕೆಯನ್ನು ನೀಡುವುದಿಲ್ಲ” ಎಂದು ಪರೋಕ್ಷವಾಗಿ ಉತ್ತರಾಖಂಡ ಮುಖ್ಯಮಂತ್ರಿಯನ್ನು ಟೀಕಿಸಿದ್ದಾರೆ.

ಇದನ್ನೂ ಓದಿ: ಜೀನ್ಸ್ ಪ್ಯಾಂಟ್ ವಿವಾದ: ತನ್ನ ವಿವಾದಾತ್ಮಕ ಹೇಳಿಕೆಗೆ ಕ್ಷಮೆಯಾಚಿಸಿದ ಉತ್ತರಾಖಂಡ್ ಸಿಎಂ

ಹರಿದ, ಟೋನ್ಡ್ ಜೀನ್ಸ್ ಧರಿಸಿದ ಮಹಿಳೆಯರು ಮಕ್ಕಳಿಗೆ ಯಾವ ಮೌಲ್ಯಗಳನ್ನು ನೀಡುತ್ತಾರೆ..? ಇವರು ಸಮಾಜವನ್ನು ಕೆಳಮಟ್ಟಕ್ಕಿಳಿಸುತ್ತಿದ್ದಾರೆ ಎಂದು ಉತ್ತರಾಖಂಡದ ನೂತನ ಸಿಎಂ ತಿರತ್ ಸಿಂಗ್ ರಾವತ್ ವಿವಾದಾತ್ಮಕ ಹೇಳಿಕೆ ನೀಡಿ ಭಾರಿ ಟೀಕೆಗೆ ಒಳಗಾಗಿದ್ದರು. ಅವರ ಪತ್ನಿ ಕೂಡ ಅವರನ್ನು ಸಮರ್ಥಿಸಿಕೊಂಡಿದ್ದರು. ನಂತರ ಮುಖ್ಯಮಂತ್ರಿ ಕ್ಷಮಾಪಣೆ ಕೇಳಿದ್ದರು.

“ಕೆಲವು ನಿರ್ದಿಷ್ಟ ಸ್ಥಾನಗಳನ್ನು ಕೇವಲ ಪುರುಷರು ಮಾತ್ರ ತೆಗೆದುಕೊಳ್ಳುತ್ತಾರೆ ಎಂಬುದಿಲ್ಲ. ಮಹಿಳೆಗೆ ಕೂಡ ಆಕೆ ಬಯಸಿದಂತೆ, ಆಕೆ ಆಯ್ಕೆ ಮಾಡಿಕೊಂಡಂತೆ ಬದುಕುವ ಹಕ್ಕು ಇದೆ. ಸಮಾಜದೊಂದಿಗೆ ಹೇಗೆ ತೊಡಗಿಸಿಕೊಳ್ಳಲು ಬಯಸುತ್ತಾಳೆ ಎಂಬುದನ್ನು ಆಕೆ ನಿರ್ಧರಿಸುತ್ತಾಳೆ. ಆಕೆ ಏನು ಮಾಡಬೇಕೆಂದು ಹೇಳುವ, ಆಕೆಯ ವಿಚಾರದಲ್ಲಿ ಮೂಗು ತೂರಿಸುವ ಅವಶ್ಯಕತೆ ಇಲ್ಲ” ಎಂದು ಸ್ಮೃತಿ ಇರಾನಿ ಹೇಳಿದ್ದಾರೆ.

ಇದೇ ವೇಳೆ ಮಹಿಳಾ ಮೀಸಲಾತಿ ಕುರಿತು ಮಾತನಾಡಿರುವ ಅವರು, “ಬಿಜೆಪಿ ತನ್ನೊಳಗೆ ಶೇಕಡಾ 33 ರಷ್ಟು ಮೀಸಲಾತಿ ನೀಡಿದ ಮೊದಲ ಪಕ್ಷ.  ಹಾಗಾಗಿ ನಿರ್ಮಲಾ ಸೀತಾರಾಮನ್ ಮತ್ತು ನನ್ನಂತಹ ಮಹಿಳೆಯರು ನಮ್ಮ ಮೊದಲ ಸಾಂಸ್ಥಿಕ ಸ್ಥಾನಗಳನ್ನು ಪಕ್ಷದಲ್ಲಿ ಪಡೆದಿದ್ದೇವೆ. ಉನ್ನತ ಕಚೇರಿಗಳಲ್ಲಿ ಸೇವೆ ಸಲ್ಲಿಸಲು ಎಂದಿಗೂ ಅವಕಾಶವಿಲ್ಲದ ಅನೇಕ ಮಹಿಳೆಯರು ಇದ್ದಾರೆ. ಇಂದು ನೀವು ಮಹಿಳೆಯರ ರಾಜಕೀಯ ಸಬಲೀಕರಣದ ಬಗ್ಗೆ ಮಾತನಾಡುವ ಜಾಗತಿಕ ಸೂಚ್ಯಂಕಗಳನ್ನು ನೋಡಿದರೆ, ಪಂಚಾಯಿತಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಮಹಿಳೆಯರನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲಾಗಿಲ್ಲ” ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಜೀನ್ಸ್ ಪ್ಯಾಂಟ್ ವಿವಾದ: ಸಾಂಸ್ಕೃತಿಕ ಪರಂಪರೆ ಉಳಿಸುವುದು ಮಹಿಳೆಯರ ಜವಾಬ್ದಾರಿ ಎಂದ ಉತ್ತರಾಖಂಡ ಸಿಎಂ ಪತ್ನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...