Homeಅಂಕಣಗಳುಆಘಾತವಾಣಿ : ಅಟ್ಯಾಕ್ ಹನ್ಮಂತ

ಆಘಾತವಾಣಿ : ಅಟ್ಯಾಕ್ ಹನ್ಮಂತ

- Advertisement -
- Advertisement -

ಕೇಳುಗರಿಗೆಲ್ಲ ಸ್ವಾಗತ, ಆಘಾತವಾಣಿ ವಾರ್ತೆಗಳಿಗೆ ಸ್ವಾಗತ, ಓದುತ್ತಿರುವವರು ನಿಮ್ಮ ಪ್ರೀತಿಯ ಅಟ್ಯಾಕ್ ಹನ್ಮಂತ. ಈಗ ವಾರ್ತೆಗಳ ವಿವರ.

ಜಯನಗರದಲ್ಲಿ ತಮ್ಮ ಪಕ್ಷದ ಅಭ್ಯರ್ಥಿಯ ಸಾವಿನಿಂದಾಗಿ ಮುಂದೂಡಲ್ಪಟ್ಟ ಚುನಾವಣೆಯ ಫಲಿತಾಂಶದಲ್ಲಿ ಹೀನಾಯವಾಗಿ ಸೋತುಹೋದ ಕಾರಣದಿಂದ ಸನ್ಮಾನ್ಯ ಧಡಿಯೂರಪ್ಪನವರ ಎದೆ ಧಸಕ್ ಪುಸುಕ್ ಎಂದ ಸುದ್ದಿ ಬಂದಿದೆ. ಈ ಚಿಂತಾಜನಕ ಸಂದರ್ಭದಲ್ಲಿ ಮನೆ ಸೇರಿಕೊಂಡಿರೋ ಧಡಿಯೂರಪ್ಪನವರು ನಾನು ಯಾರಿಗೂ ಮುಖ ತೋರಿಸೋದಿಲ್ಲವೆಂದು ಕಂಬಳಿ ಹೊದ್ದು ಕಾಲೆತ್ತಿಕೊಂಡು ಮಲಗಿದ್ದಾರೆ. ಮಾತನಾಡಿಸಿ ಪ್ರತಿಕ್ರಿಯೆ ಕೇಳಲು ಹೋದ ಮಾಧ್ಯಮದವರ ಮೇಲೆ ನಾಯಿ ಛೂಬಿಟ್ಟು ಓಡಿಸಲು ತಮ್ಮ ಸಹಾಯಕರಿಗೆ ತಿಳಿಸಿರುವ ಅವರು, ತಮ್ಮ ಪಕ್ಷದ ಮುಖಂಡರು ಬಂದರೆ ಅವರನ್ನು ನೆಲಕ್ಕೆ ಕೆಡವಿ, ಅವರ ಮುಖ ಮತ್ತು ಹೊಟ್ಟೆಗೆ ಕಚ್ಚಿ ಓಡಿಸಲು ತಮ್ಮ ಭದ್ರತಾ ಸಿಬ್ಬಂದಿಗೆ ತಿಳಿಸಿದ್ದಾರೆಂದು ಸುದ್ದಿಮೂಲಗಳು ಸ್ಪಷ್ಟ ಪಡಿಸಿವೆ. ಹಾಸಿಗೆ ಹಿಡಿದಿರುವ ಧಡಿಯೂರಪ್ಪನವರಿಗೆ ಸ್ಕೋಪಕ್ಕ ತಮ್ಮ ಸೆರಗಿನಿಂದ ಗಾಳಿ ಬೀಸಿಕೊಂಡು ಶುಶ್ರೂಷೆ ಮಾಡುತ್ತಿದ್ದಾರೆಂದು ಬಲ್ಲ ಮೂಲಗಳು ತಿಳಿಸಿವೆ.

****

ನೋಟ್ ಬ್ಯಾನ್‍ನಿಂದಾಗಿ ದೇಶದಲ್ಲಿ ಭಯೋತ್ಪಾದಕರು, ನಕ್ಸಲೈಟರೆಲ್ಲರೂ ಕೈಯಲ್ಲಿ ಕಾಸಿಲ್ಲದೆ ಸಾಮೂಹಿಕವಾಗಿ ಶಸ್ತ್ರತ್ಯಾಗ ಮಾಡಿ ತಪಸ್ಸಿಗೆ ಕುಳಿತುಬಿಟ್ಟಿದ್ದಾರೆ ಎಂದಿದ್ದ ಫೇಕಪ್ಪನ ಸುಳ್ಳು ಮತ್ತೊಮ್ಮೆ ಮಕಾಡೆ ಮಲಗಿದೆ. ನಕ್ಸಲೈಟರು ಫೇಕಪ್ಪನನ್ನು ಕೊಲ್ಲಲು ಸಂಚು ಮಾಡಿದ್ದಾರೆ, ಇದರ ಬಗ್ಗೆ ನಕ್ಸಲೈಟರು “ಪಕೋಡೇಂದ್ರ ಮಟ್ಯಾಶ್ ಸ್ವಾಹ” ಎಂಬ ಕಾದಂಬರಿಯನ್ನು ಬರೆದು, ಅದರಲ್ಲಿ ತಮ್ಮ ಒರಿಜಿನಲ್ ಹೆಸರುಗಳನ್ನೂ ಬರೆದು ಪೊಲೀಸರ ಕೈಗೆ ಸಿಗುವಂತೆ ಇಟ್ಟಿದ್ದಾರೆ ಎಂಬ ನಗೆಪಾಟಲು ಪ್ರಚಾರಕ್ಕೆ ಫೇಕಪ್ಪ ಇಳಿದಿರುವುದು ಇದಕ್ಕೆ ಪುಷ್ಟಿ ನೀಡಿದೆ. ನನ್ನನ್ನ ಸಾಯಿಸ್ತಾರೆ, ಆದ್ರಿಂದ ಓಟು ಕೊಡಿ ಅಂತ ಗೋಳಾಡ್ತಿರೋ ಫೇಕಪ್ಪನ 3ನೇ ದರ್ಜೆ ಡ್ರಾಮೇಬಾಜಿ ಸರ್ಕಸ್ಸಿಗೆ ಜನ ಬಿದ್ದೂ ಬಿದ್ದೂ ನಗುತ್ತಿದ್ದಾರೆಂದು ತಿಳಿದುಬಂದಿದೆ.

****

ಸಲ್ಮಾನ್ ಖಾನ್ ‘ಚುಲ್‍ಬುಲ್ ಪಾಂಡೆ’ ಅವತಾರದಲ್ಲಿ ದಬಾಂಗ್ ಚಿತ್ರದಲ್ಲಿ ರಂಜಿಸಿದ ನಂತರ ಅದೇ ರೇಂಜಿಗೆ ‘ಬೋಂಡಾ ಪಾಂಡೆ’ ಎಂದು ರಾಜ್ಯದಾದ್ಯಂತ ಫೇಮಸ್ಸಾಗಿರುವ ಆರುವಿ ದೋಶಪಾಂಡೆ ಬಗ್ಗೆ ಹೊಸ ಸುದ್ದಿಯೊಂದು ಲಭ್ಯವಾಗಿದೆ. ಉದ್ಯೋಗಕ್ಕಾಗಿ ನಮ್ಮನ್ನು ನೆಚ್ಚಿಕೊಳ್ಳಬೇಡಿ, ಬೋಂಡಾ ಬಜ್ಜಿ ಮಾರುವ ಗೌರವಯುತ ಕೆಲಸ ಮಾಡಿ ಕೋಟಿಗಟ್ಟಲೆ ಸಂಪಾದನೆ ಮಾಡಿ ಎಂದು ಶ್ರೀ ಬೋಂಡಾಪಾಂಡೆಯವರು ವದರಿದ್ದಾರೆ. ಈ ತಲೆಕೆಟ್ಟ ಹೇಳಿಕೆಯ ಗಮನಿಸಿದರೆ, ‘ಉದ್ಯೋಗ ಕೊಟ್ಟು ಸಾಯ್ರಿ’ ಎಂಬ ಜನರ ಬೇಡಿಕೆಗೆ ಪಕೋಡ ಮಾರಿ, ಪಂಚರ್ ಹಾಕಿ ಅಂತ ಬಡಬಡಿಸುತ್ತಿದ್ದ ಫೇಕೇಂದ್ರನೇನಾದ್ರೂ ಈ ‘ದೋಶಪಾಂಡೆ’ಯ ಆಯಕಟ್ಟಿನ ಭಾಗಕ್ಕೆ ಕಚ್ಚಿರಬಹುದಾ ಎಂಬ ಅನುಮಾನ ಎಲ್ಲೆಡೆ ವ್ಯಕ್ತವಾಗಿದೆ.

****

ಗೌರಿ ಲಂಕೇಶ್ ಹತ್ಯೆಯ ಒಬ್ಬೊಬ್ಬ ಪಾತಕಿಗಳನ್ನೂ ಎರಡೂ ಕಾಲಿಗೆ ಹಗ್ಗ ಕಟ್ಟಿ ಸತ್ತನಾಯಿಗಳಂತೆ ದರದರ ಎಳೆದು ತಂದು ರುಬ್ಬುತ್ತಿರುವ ರಾಜ್ಯದ ಸ್ಪೆಷಲ್ ಇನ್ವೆಸ್ಟಿಗೇಷನ್ ಟೀಂ ಜನರ ಪ್ರಶಂಸೆಗೆ ಪಾತ್ರವಾಗಿದೆ. ರೌಡಿಗಳು ಕೊಲೆಗಡುಕರ ಕೈಗೆ ಧರ್ಮದ ಹೆಂಡ ಕೊಟ್ಟು ತಮಗಾಗದವರನ್ನು ಕೊಲ್ಲಿಸೋ ಸಣಕಲು ತೊಡೆಯ ಹೇಡಿಪಡೆಗಳ ಪಂಚೆ ಲಳಲಳನೆ ಒದ್ದೆಯಾಗುತ್ತಿರುವುದು ಕೇಳಿಬರುತ್ತಿದೆ. ಗೌರಿಹತ್ಯೆಯ ಕೇಸಿನಲ್ಲಿ ಆ ಸೇನೆ ಈ ಸೇನೆ, ಈ ಜಾಗೃತಿ, ಆ ವಿಕೃತಿ ಅಂತ ಮಕಮೂತಿ ನೋಡದೇ ಎಸ್.ಐ.ಟಿ ತಂಡವು ಒಬ್ಬೊಬ್ಬರನ್ನೇ ಹಿಡಿದುತಂದು ಬೋನಿಗೆ ಬಿಸಾಕುತ್ತಿದ್ದರೆ, ಅತ್ತ ದಾಬೋಲ್ಕರ್, ಪನ್ಸಾರೆ ಕೊಲೆ ಕೇಸನ್ನು ಏನೋ ಕಿತ್ತು ದಬಾಕ್ತೀವಿ ಎಂದು ಕೈಗೆತ್ತಿಕೊಂಡ ಸಿಬಿಐ ಪೊಮೇರಿಯನ್‍ಗಳು ಸರ್ಕಾರಿ ದುಡ್ಡಲ್ಲಿ ಕುಷ್ಕ ಕಬಾಬ್ ಮುಕ್ಕಿಕೊಂಡು ಓತ್ಲಾ ಹೊಡೆಯುತ್ತಿದ್ದಾರೆಂದು ಜನರು ಆಡಿಕೊಂಡು ನಗುತ್ತಿರುವ ವರದಿಗಳು ಬರುತ್ತಿವೆ.

****

ಭೂಮಿಯ ಮೇಲೆ ಇನ್ನೆಲ್ಲೂ ಕಾಣಸಿಗದ ಮಾಸ್ಟರ್ ಪೀಸ್ ಮೆಂಟ್ಲು ಗಿರಾಕಿಗಳಾದ ಉತ್ತರ ಕೊರಿಯಾದ ಕಿಮ್‍ಜಾಂಗ್ ಉನ್ನೇಶ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪೇಶ ಅವರು ಸಿಂಗಪೂರ್‍ನಲ್ಲಿ ಭೇಟಿಯಾಗಿದ್ದಾರೆ. ಈ ಸಂದರ್ಭದಲ್ಲಿ ‘ನಿನ್ ಮೇಲೆ ನಾನು ಬಾಂಬ್ ಹಾಕಲ್ಲ, ನನ್ ಮೇಲೆ ನೀನು ಬಾಂಬ್ ಹಾಕ್ಬೇಡ’ ಅಂತ ಒಪ್ಪಂದ ಮಾಡಿಕೊಂಡಿದ್ದಾರೆ. ಈ ಐತಿಹಾಸಿಕ ತಲೆತಿಕ್ಕಲರ ಸಂಗಮದಲ್ಲಿ ನಮ್ ಹಾಫ್ ಮೆಂಟ್ಲು ಫೇಕಪ್ಪನೂ ಇದ್ದಿದ್ರೆ ಈ ಶುದ್ದ ಮುಠ್ಠಾಳರ ಸಮ್ಮೇಳನ ಸಂಪೂರ್ಣವಾಗುತ್ತಿತ್ತೆಂದು ತೇಜಾವರ ಶ್ರೀಗಳು ನಿದ್ದೆಯಲ್ಲೇ ಕಣ್ಣನ್ನೆಲ್ಲ ತೇವ ಮಾಡಿಕೊಂಡು ಕನವರಿಸಿಕೊಳ್ಳುತ್ತಿದ್ದರೆಂದು ಅವರ ಕಾರ್ ಡ್ರೈವರ್ ಫೇಸ್ಬುಕ್ಕಲ್ಲಿ ಪೋಸ್ಟ್ ಹಾಕಿದ್ದಾನೆ.

****

ಹೋರಿಯ ಹಿಂದೆ ನಡೆಯುತ್ತ ಅದರ ಯಾವುದಾದರೊಂದು ಪಾರ್ಟು ಲೂಸಾಗಿ ಕಳಚಿಕೊಂಡು ಉದುರಬಹುದೆಂದು ಆಸೆಯಿಂದ ಫಾಲೋ ಮಾಡುತ್ತಿರೋ ಗುಳ್ಳೆನರಿಯಂತೆ ಧಡಿಯೂರಪ್ಪನವರು ರಾಜ್ಯದ ಬೆರಕೆ ಸರ್ಕಾರದ ಹಿಂದೆ ಬಿದ್ದಿರುವುದು ತಿಳಿದ ಸಂಗತಿ. ದಿನಕಳೆದಂತೆ ಬೆರಕೆ ಸರ್ಕಾರದ ಮಂದಿ ಕೇರಳದ ಮಾಟಮಂತ್ರ ತಜ್ಞರೂ ನಾಚಿ ನೀರಾಗುವ ಹಾಗೆ ಬುರುಡೆ ಮಂತ್ರವಾದಿಗಳಂತೆ ಆಡುತ್ತಿರುವುದನ್ನು ಕಂಡು ಧಡಿಯೂರಪ್ಪ ಗಾಬರಿಯಾಗಿದ್ದಾರೆಂದು ಸುದ್ದಿ ಲಭ್ಯವಾಗಿದೆ. ತಮ್ಮ ಪಕ್ಷವೇ ಅಧಿಕಾರದಲ್ಲಿದ್ರೆ ಏನೇನು ನೌಟಂಕಿ ಆಟವಾಡುತ್ತಿದ್ದೆವೋ, ಅದೆಲ್ಲವನ್ನೂ ತಮ್ಮ ಎದುರಾಳಿಗಳೇ ಕಚ್ಚೆ ಬಿಚ್ಚಿಕೊಂಡು ಆಡುತ್ತಿರುವುದನ್ನು ಕಂಡು ಧಡಿಯೂರಪ್ಪ, ತಮ್ಮ ಪಕ್ಷದೋರು ಯಾರು? ಬೆರಕೆ ಸರ್ಕಾರದ ಪಕ್ಷದೋರು ಯಾರು? ಎಂದು ಗುರುತಿಸಲಾಗದ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆಂದು ಸ್ಕೋಪಕ್ಕನವರು ಚೀಟಿ ರೆವಿಗೆ ವಾಟ್ಸಾಪ್ ಮೆಸೇಜ್ ಮಾಡಿದ್ದಾರೆಂದು ಗೊತ್ತಾಗಿದೆ.

****

ಭೀಮ ಕೊರೆಗಾಂವ್ ಮೆರವಣಿಗೆಯಲ್ಲಿ ತನ್ನ ಪಟಾಲಂನಿಂದ ದಲಿತರ ಮೇಲೆ ಹಲ್ಲೆ ನಡೆಸಿದ್ದ ಮಹಾರಾಷ್ಟ್ರದ ಪೊರಕೆ ಮೀಸೆ ಸಂಘಿ ಮುದುಕನೊಬ್ಬ ತಾನು ತನ್ನ ತೋಟದಲ್ಲಿ ಬೆಳೆಯೋ ಮಾವಿನಹಣ್ಣು ತಿಂದ್ರೆ ಗಂಡು ಮಕ್ಕಳಾಗ್ತವೆ, ಅಂಥ ವಿಶೇಷ ಶಕ್ತಿ ತನ್ನ ಮ್ಯಾಂಗೋಗಳಿಗೆ ಇದೆಯೆಂದು ಕಕ್ಕಿಕೊಂಡಿದ್ದಾನೆ. ಸಂಘಿ ಮಂಗಿಗಳ ಈ ಮ್ಯಾಂಗೋ ಸಂತಾನ ಪ್ರಾಪ್ತಿ ಮ್ಯಾಜಿಕ್ ಥಿಯರಿ ಕೇಳಿದ ದೇಶದ ಜನರು ನಗಬಾರದ ಜಾಗದಲ್ಲೆಲ್ಲ ನಗುತ್ತ “ಅಲ್ಲಾ ಕಣೋ ಬುಡ್ಡಾ, ಮ್ಯಾಂಗೋ ತಿಂದ್ರೆ ಮಕ್ಕಳಾಗ್ತವೆ ಅಂದ್ರೆ ಜನ ಬಾಟಾ ಕಂಪನಿ ಮೆಟ್ಟು ತಗೊಂಡು ಅಟ್ಟಿಸಿಕೊಂಡು ಬಂದು ಬಡೀತಾರೆ” ಎಂದು ಆಡಿಕೊಳ್ಳುತ್ತಿರುವ ಸುದ್ದಿ ತಡವಾಗಿ ವರದಿಯಾಗಿದೆ. ಬೆದರಿದ ಸಂಘಿ ಮುದುಕನು ಮಹಾರಾಷ್ಟ್ರ ಸಿಎಂ ಭಡ್ನಊಸು ಕಚೇರಿಯ ಶೌಚಾಲಯದಲ್ಲಿ ಕದ್ದು ಕುಳಿತಿದ್ದಾನೆ ಎಂದು ಗುಪ್ತಚರ ಮೂಲಗಳು ತಿಳಿಸಿವೆ.
ಇಲ್ಲಿಗೆ ಆಘಾತಕಾರಿ ಸುದ್ದಿಗಳನ್ನು ನಿಮ್ಮ ಮುಂದಿಡುವ ‘ಆಘಾತವಾಣಿ’ ವಾರ್ತೆಗಳು ಮುಕ್ತಾಯವಾಯಿತು. ಮತ್ತೆ ನಮ್ಮ ನಿಮ್ಮ ಭೇಟಿ ಮುಂದಿನ ವಾರ. ನಮಸ್ತೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...