Homeಅಂಕಣಗಳುರಾಸಲೀಲೆಯ ರಾಜಕೀಯ

ರಾಸಲೀಲೆಯ ರಾಜಕೀಯ

- Advertisement -
- Advertisement -

ವಿಧಾನಸಭೆಯಲ್ಲಿ ವಿರೋಧ ಪಕ್ಷವನ್ನು ಸರಿಯಾಗಿ ಜಾಡಿಸಿದ ಕುಮಾರಣ್ಣನ ಹಾವಭಾವ ಮತ್ತು ಭಾಷೆಯನ್ನು ಮೆಚ್ಚಿಕೊಂಡ ಬಿಜೆಪಿಗಳು ಅವರಿಗೆ ಭರ್ಜರಿ ಭೋಜನ ಹಾಕಿದರಂತಲ್ಲಾ. ಕುಮಾರಣ್ಣನನ್ನು ಮಧ್ಯದಲ್ಲಿ ಕೂರಿಸಿಕೊಂಡು ಅಕ್ಕಪಕ್ಕದಲ್ಲಿ ಎಡೂರಪ್ಪ ಮತ್ತು ಬೊಮ್ಮಾಯಿ ಕುಳಿತು ವಿಶೇಷ ಕಾಳಜಿಯಿಂದ ಉಣ್ಣಿಸುತ್ತಿರುವುದನ್ನು ನೋಡಿದ ಭೋಜನಪ್ರಿಯ ಬಿಜೆಪಿಗಳೇ ದಂಗುಬಡಿದು ಹೋದರಂತಲ್ಲಾ. ಕುಮಾರಣ್ಣನ ಮಾತುಗಳನ್ನು ಮಾಜಿ ಪ್ರಧಾನಿಗಳೇ ಮೆಚ್ಚಿಕೊಂಡ ಮೇಲೆ, ಅವರಿಗೆ ಊಟಹಾಕಿ ಉಪಚರಿಸುವುದು ನಮ್ಮ ಕರ್ತವ್ಯ ಎಂದು ಭಾವಿಸಿದ ಬೊಮ್ಮಾಯಿ, ಕುಮಾರಣ್ಣನ ಇಷ್ಟದ ಭೋಜನ ಬಡಿಸುತ್ತಿರಬೇಕಾದರೆ ಇದನ್ನ ನೋಡಿದ ಚನ್ನಪಟ್ಟಣದ ಮಾಜಿ ಮಂತ್ರಿಯಾದ ಯೋಗೇಶ್ವರ್‌ಗೆ ಹೊಟ್ಟೆಯುರಿಯುಂಟಾಗಿ, ’ನಮ್ಮ ಪಾರ್ಟಿಯವರಿಗೇನು ಬಂದಿದೆ, ನನ್ನನ್ನು ಸೋಲಿಸಿದವನನ್ನು ಕರೆದು ಊಟ ಹಾಕುತ್ತಿರಬೇಕಾದರೆ ಇದು ನನ್ನ ವಿರುದ್ಧದ ಷಡ್ಯಂತ್ರವಲ್ಲವೇ’ ಎಂದು ಭಾವಿಸಿದರಂತಲ್ಲಾ. ಕೂಡಲೆ, ತಾನೂ ಕೂಡ ಎಡೂರಪ್ಪನ ವಿರುದ್ಧ ಪಿತೂರಿ ನಡೆಸಿ, ದೆಹಲಿ ಮಟ್ಟದವರೆಗೂ ಹೋಗಿ, ವಿಜಯೇಂದ್ರನ ಹಾವಳಿ ವಿಪರೀತವಾಗಿದೆ ಎಂದು ದೂರು ಹೇಳಿ, ಅಂತೂ ಪರೀಕ್ಷೆ ಬರೆದಿದ್ದೇನೆಂದು ರಿಸಲ್ಟಿಗಾಗಿ ಕಾಯುತ್ತಿರಬೇಕಾದರೆ, ಎಡೂರಪ್ಪ ಇಳಿದು ಬೊಮ್ಮಾಯಿ ಏರಿದ ಮೇಲೆ ಯೋಗೇಶ್ವರನ ಮಂತ್ರಿಗಿರಿಯೇ ಹೋಯ್ತಂತಲ್ಲಾ. ಥೂತ್ತೇರಿ.

*****

ಸುಮ್ಮನೆ ಮಾತಿಗೆ ಹೇಳೋದಾದ್ರೆ ಎಡೂರಪ್ಪನ ಟೀಮು ಕುಮಾರಣ್ಣನ ಋಣದಲ್ಲಿದೆಯಂತಲ್ಲಾ. ಧರ್ಮರಾಯನ ಸರಕಾರದಂತೆ ನಡೆದುಕೊಂಡು ಹೋಗುತ್ತಿದ್ದ ಧರ್ಮಸಿಂಗ್ ಸರಕಾರವನ್ನ ಕೆಡವಿ ಎಮ್ಮೆಲ್ಲೆಗಳನ್ನೆಲ್ಲಾ ರೆಸಾರ್ಟಿನಿಂದ ಜಮೀರ್ ಅಹಮದ್ದನ ನ್ಯಾಷನಲ್ ಟ್ರಾವಲ್ ಬಸ್‌ನಲ್ಲಿ ತಂದು ವಿಧಾನಸೌಧದ ಮುಂದೆ ಸುರಿದುಕೊಂಡು, ಕುಮಾರಣ್ಣ ಮುಖ್ಯಮಂತ್ರಿಯಾಗಿ ಎಡೂರಪ್ಪ ಉಪಮುಖ್ಯಮಂತ್ರಿಯಾದ ಘಟನೆ ಸಾಮಾನ್ಯವೆ. ಪವರಿಲ್ಲದೆ ಮನೆಗೆ ಹೋಗುವ ಸ್ಥಿತಿಯಲ್ಲಿದ್ದ ಎಡೂರಪ್ಪ ಉಪಮುಖ್ಯಮಂತ್ರಿಯಾದದ್ದೂ ಅಲ್ಲದೆ, ಮೂರುಬಾರಿ ಮುಖ್ಯಮಂತ್ರಿಯಾದುದ್ದರಲ್ಲಿ ಕುಮಾರಣ್ಣನ ಕಾಂಟ್ರಿಬ್ಯೂಷನ್ ಕಡಿಮೆಯೇ! ಇದೆಲ್ಲಾ ನೆನಸಿಕೊಂಡು ಬಿಜೆಪಿಗಳು ಮತ್ತು ದಳದವರು ಖುಷಿಯಿಂದ ಮೆಲುಕು ಹಾಕುತ್ತಿರುವಾಗಲೇ ಇತಿಹಾಸ ಮರುಕಳಿಸಿದಂತೆ ಕುಮಾರಣ್ಣನ ಕೆಲಸವನ್ನ ಬಿಜೆಪಿ ಪಾರ್ಟಿಯೇ ಮಾಡಿಬಿಟ್ಟಿತಲ್ಲಾ. ಕುಮಾರಣ್ಣ ಶಾಸಕರನ್ನ ರೆಸಾರ್ಟಿಗೆ ಕರೆದುಕೊಂಡು ಹೋದರೆ ಬಿಜೆಪಿಯವರು ಬಾಂಬೆಗೆ ಕರೆದುಕೊಂಡು ಹೋಗಿ ತಾವು ಕದ್ದು ತಂದ ಶಾಸಕರಿಗೆ ಏನೇನನ್ನೆಲ್ಲಾ ಒದಗಿಸಿಕೊಟ್ಟು, ನಂತರ ಸಿಡಿ ಬಿಡುಗಡೆ ಮಾಡದಂತೆ ಸ್ಟೇ ತರುಬೇಕಾಗುವಂತೆ ಮಾಡಿ, ಖೆಡ್ಡಾದೊಳಕ್ಕೆ ಕೆಡವಿಕೊಂಡು ತಾವು ಬದುಕಿರುವವರೆಗೆ ಬಿಜೆಪಿ ಬಗ್ಗೆ ಉಸಿರೆತ್ತದಂತೆ ಮಾಡಿದ್ದಾರಲ್ಲಾ. ಹೀಗೆ ರಚನೆಗೊಂಡ ಸರಕಾರದ ಬಗ್ಗೆ ಕಿಡಿಕಾರುವುದು ಬಿಟ್ಟು ಅಪ್ಪ ಮಕ್ಕಳೇ ಬಿಜೆಪಿ ಸರಕಾರಕ್ಕೆ ಬೆಂಗಾವಲಾಗಿರುವುದನ್ನು ನೋಡಿದ ಜನ ದಳ ನಿಜಕ್ಕೂ ಬಿಜೆಪಿಯ ಬಿಟೀಂ ಎಂದರಂತಲ್ಲಾ. ಥೂತ್ತೇರಿ.

ದಳ ಬಿಜೆಪಿಯ ಬಿಟೀಮ್ ಆದುದಕ್ಕೆ ಭಯಂಕರ ಸಿಟ್ಟುಮಾಡಿಕೊಂಡಿರುವ ಯೋಗೇಶ್ ಕುಮಾರಣ್ಣನ ಬಗ್ಗೆ ಹೀನಾಯವಾಗಿ ಮಾತನಾಡಿದ್ದಾರಂತಲ್ಲಾ. ಈತ ನೆಲಕಚ್ಚಿದ ಪಾರ್ಟಿಯ ನಾಯಕ, ಮುಖ್ಯಮಂತ್ರಿಯಾಗಿದ್ದಾಗ ಹೋಟೆಲಿನಲ್ಲಿದ್ದು ರಾಸಲೀಲೆ ನಡೆಸಿದ ಗಿರಾಕಿ. ಈತ ನಡೆಸುತ್ತಿದ್ದ ಪ್ರಣಯಾಟಕ್ಕೆ ಸಮಯವಿಲ್ಲದಿದ್ದಾಗ, ಇನ್ನು ಮಂತ್ರಿ ಶಾಸಕರು ಜನಗಳನ್ನ ಮಾತನಾಡಿಸಲು ಬಿಡುವೆಲ್ಲಿ ಎಂದು ಕಿಡಿಕಾರಿ ಕರ್ನಾಟಕದ ಜನಕ್ಕೆ ಬಿಟ್ಟಿ ಮನರಂಜನೆ ಕೊಟ್ಟಿದ್ದಾರಲ್ಲಾ. ಕುಮಾರಣ್ಣನ ರಾಜಕೀಯ ಇತಿಹಾಸದಲ್ಲಿ ಇಷ್ಟು ಕಠೋರವಾಗಿ ಯಾರೂ ಟೀಕಿಸಿರಲಿಲ್ಲವಲ್ಲಾ. ಯೋಗೇಶ್ವರನ ಮಾತಿನಿಂದ ಕೆರಳಿದ ಕುಮಾರಣ್ಣ ನೀನೇನು ಸಾಚಾನೆ, ಮೆಗಾಸಿಟಿ ಹೆಸರಲ್ಲಿ ಜನಗಳ ದುಡ್ಡನ್ನು ಲಪಟಾಯಿಸಿ ಸಿನಿಮಾ ತೆಗೆದು ಹಣ ಹಾಕಿದವರನ್ನು ಹಾಳು ಮಾಡಿದ್ದಿ. ವೆಸ್ಟೆಂಡ್ ಹೋಟೆಲಿನ ರಾಸಲೀಲೆ ವಿಷಯಕ್ಕೆ ಬಂದರೆ ನನ್ನ ಜೊತೆ ಸಾರಾ ಮಹೇಶ್ ಇದ್ದರು. ಅವರ ಎದುರಲ್ಲೇ ಇನ್ನೂ ಹಲವರ ಜೊತೆಗೆ ವಿಶ್ರಾಂತಿಗೆ ಹೋಗುತ್ತಿದ್ದುದು ಅಲ್ಲಿಗೆ. ಕದ್ದುಮುಚ್ಚಿ ಏನನ್ನೂ ಮಾಡಿಲ್ಲ. ಅದರಲ್ಲೂ ಹೊರಗಡೆ ಪೊಲೀಸರಿದ್ದರು ಎಂದಿದ್ದಾರಲ್ಲಾ. ಆ ಪೊಲೀಸರ ಮುಖಾಂತರವೇ ನಾನು ಮಾಹಿತಿ ಸಂಗ್ರಹಿಸಿದ್ದು ಎಂದು ಯೋಗೇಶ್ವರ್ ಇನ್ನ ಹೇಳಿಲ್ಲವಂತಲ್ಲಾ. ಥೂತ್ತೇರಿ.

*****

ಕುಮಾರಣ್ಣನನ್ನು ನಡುವೆ ಕೂರಿಸಿಕೊಂಡಿದ್ದನ್ನು ನೋಡಿದ ದಳದವರು ಹೆದರಿಕೊಂಡು, ಇದೇನು ಕುಮಾರಣ್ಣ ನಮ್ಮನ್ನೆ ಬಲಿಕೊಡಲು ಹೊರಟಿದ್ದಾರಲ್ಲಾ ಎಂದು ಚರ್ಚಿಸಿದರಂತಲ್ಲಾ. ಇದಕ್ಕೆ ಬಿಜೆಪಿ ಉತ್ತರ ಪ್ರದೇಶದಲ್ಲಿ ಮಾಡಿದ ಮನೆಮುರುಕ ರಾಜಕಾರಣವೇ ಕಾರಣವಂತಲ್ಲಾ. ಅತ್ತ ಓವೈಸಿಯನ್ನು ಓಲೈಸುತ್ತ ಇತ್ತ ಮಾಯಾವತಿಯನ್ನು ಮರುಳುಮಾಡಿದ ಯೋಗಿ ಟೀಮು ಅವರ ಜೊತೆಯಲ್ಲೇ ಎಸ್ಪಿ ಯಾದವರನ್ನ ಮಕಾಡೆ ಮಲಗಿಸಿದ್ದನ್ನ ನೋಡಿದ ಭಾರತದ ಜನ ದಂಗುಬಡಿದು ಹೋಗಿದ್ದಾರಲ್ಲಾ. ದಳದ ಪಾರ್ಟಿ ಮುಖಂಡರಿಗೆ ಇದು ಹಳೆ ವರೆಸೆಯಾಗಿ ಕಾಣುತ್ತಿದೆ. ಕುಮಾರಣ್ಣ ವೆಸ್ಟೆಂಡ್ ಹೋಟೆಲು ಕಾಲಿ ಮಾಡುವಂತಾದುದರಲ್ಲಿ ತಮ್ಮ ಪಾತ್ರವಿಲ್ಲ ಎಂದು ಸಿದ್ದರಾಮಯ್ಯ ಎಷ್ಟೇ ಹೇಳಿದರೂ ದೇವು ಟೀಮು ನಂಬುತ್ತಿಲ್ಲವಂತಲ್ಲಾ.
ಆದ್ದರಿಂದ ದಳಪತಿಗಳಿಗೆ ಸಿದ್ದರಾಮಯ್ಯನ ಟೀಮು ನಿರ್ನಾಮವಾಗದ ಹೊರತು ಉಳಿಗಾಲವಿಲ್ಲ ಎನ್ನಿಸಿ ರಾಸಲೀಲೆಗೆ ಹೆಸರಾದವರು ಹೆಚ್ಚಿರುವ ಬಿಜೆಪಿಯ ಡೈನಿಂಗ್ ಹಾಲಿನಲ್ಲಿ ಕುಳಿತರಂತಲ್ಲಾ. ಥೂತ್ತೇರಿ.


ಇದನ್ನೂ ಓದಿ:  ಇವರೆಲ್ಲಾ ಸಂತೆಗೆ ಬಂದ ಹಗಲುಗಳ್ಳರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...