Homeಅಂಕಣಗಳುರಾಜಕಾರಣವನ್ನು ಹೊಲಸು ಮಾಡಿದ ರಾಜಕೀಯ

ರಾಜಕಾರಣವನ್ನು ಹೊಲಸು ಮಾಡಿದ ರಾಜಕೀಯ

- Advertisement -
- Advertisement -

ಪ್ರಜಾಪ್ರಭುತ್ವ ವ್ಯವಸ್ಥೆಯಡಿಯಲ್ಲಿ ಜನರು ತಮ್ಮ ಪ್ರತಿನಿಧಿಗಳನ್ನು ಚುನಾಯಿಸುವುದು ಹಕ್ಕು ಅಥವಾ ಕರ್ತವ್ಯವೆಂದು ಭಾವಿಸುತ್ತಲೇ ಬಂದದ್ದಾರೆ, ಇದಕ್ಕೆ ಅಪವಾದಗಳಿರಲೂ ಸಾಧ್ಯ. ಭಾರತೀಯ ನಾಗರರಿಕರೂ ಸಹ 1952ರಿಂದ ಇದೇ ರೀತಿಯ ಪ್ರಕ್ರಿಯೆಯಲ್ಲಿ ಭಾಗವಹಿಸುವ ಅನುಭವವನ್ನು ಪಡೆದಿದ್ದಾರೆ ಮತ್ತು ಸಹಜವಾಗಿಯೇ ಈ ಪ್ರತಿನಿಧಿಗಳು ತಮ್ಮ ಜೀವನವನ್ನು ಹಸನುಗೊಳಿಸುವ ಎಲ್ಲ ಪ್ರಯತ್ನಗಳನ್ನೂ ಮಾಡುತ್ತಾರೆ ಎಂದು ನಂಬುವ ಜನ ಇವರು ಎಂದು ಹೇಳಲಾಗಿದೆ. ಆದರೆ ಅಂದಿನಿಂದ ಇಂದಿನವರೆಗೆ ಅಧಿಕಾರದಲ್ಲಿ ಕುಳಿತಿರುವ ಪಕ್ಷಗಳು, ಅವುಗಳ ನಾಯಕರು ಜನರ ಇಂಥ ನಿರೀಕ್ಷೆಗಳನ್ನು ಎಷ್ಟರ ಮಟ್ಟಿಗೆ ನಿಜವಾಗಿಸಿದ್ದಾರೆ ಎಂಬ ಪ್ರಶ್ನೆ ಮುಖ್ಯವಾಗಿ ಚುನಾವಣೆಗಳು ಎದುರಾದಾಗ ನಮ್ಮ ಮುಂದೆ ನಿಲ್ಲುತ್ತದೆ.
ಆದರೆ ಚುನಾವಣೆ ಎಂಬ ಪ್ರಕ್ರಿಯೆಯೇ ಪ್ರಜಾತಂತ್ರದ ಅತ್ಯಂತ ಪ್ರಮುಖ ಅಂಶ ಎಂದಾಯಿತು. ಕೆಲವು ಬಾರಿ ಚುನಾವಣೆ ನಡೆಸುವುದೇ, ಅದರಲ್ಲಿ ಭಾಗವಹಿಸಿ ಮತ ‘ದಾನ’ ಮಾಡುವುದೇ ಪ್ರಜಾತಂತ್ರ ಎನ್ನುವ ಅತಿರೇಕದ ಮಾತುಗಳೂ ಕೇಳಿಬರುತ್ತಿವೆ. ಭಾರತ ಜಗತ್ತಿನ ಅತಿ ‘ದೊಡ್ಡ’ ಪ್ರಜಾಪ್ರಭುತ್ವ ರಾಷ್ಟ್ರ (ಜನಸಂಖ್ಯೆಯ ದೃಷ್ಟಿಯಿಂದ ಎನ್ನುವ ಮಾತಿನ ಹಿಂದಿನ ಪ್ರೇರಣೆ ಇದೆ) ಆದರೆ ಈ ಮಾತನ್ನು ಹೇಳುವವರು, ಅದನ್ನು ಪ್ರಶ್ನೆ ಮಾಡದೇ ಒಪ್ಪುವವರು ಮರೆಯುವ ಒಂದು ವಿಷಯವೇನೆಂದರೆ ಪ್ರಜಾತಂತ್ರವೆಂದರೆ ಕೇವಲ ಚುನಾವಣೆಗಳನ್ನು ನಡೆಸುವುದಲ್ಲ, ಮತ ಚಲಾಯಿಸುವುದಲ್ಲ, ಬದಲಿಗೆ ಅದು ಸಾಮಾಜಿಕ ಮೌಲ್ಯ ಎಂಬುದು. ನಮ್ಮ ಸಮಾಜ ಇನ್ನೂ ಉಳಿದುಕೊಂಡೇ ಬಂದಿರುವ ಸಾಮಾಜಿಕ, ಆರ್ಥಿಕ ಅಂತರಗಳು, ತಾರತಮ್ಯಗಳು, ಅವುಗಳ ಹೆಸರಿನಲ್ಲಿ ನಡೆಯುವ ದೌರ್ಜನ್ಯಗಳು ಭಾರತವನ್ನು ಒಂದು ಪ್ರಜಾಪ್ರಭುತ್ವ ರಾಷ್ಟ್ರ ಎಂದು ಹೇಳಿ ಹೊರಟವರ ನಾಲಿಗೆಯನ್ನು ಕಟ್ಟಿಹಾಕುತ್ತವೆ. ಹೀಗಿದ್ದೂ, ಈ ಮಾತನ್ನು ಹೇಳಿದ್ದೇವೆಂದರೆ ನಮ್ಮನ್ನು ನಾವು ಮೋಸಗೊಳಿಸಿಕೊಳ್ಳುತ್ತಿದ್ದೇವೆಂದೇ ಹೇಳಬೇಕು.
ರಾಜಕಾರಣವು ‘ಸಾಧ್ಯತೆಗಳ ಕಲೆ’ (ಪಾಲಿಟಿಕ್ಸ್ ಇಸ್ ದ ಆರ್ಟ್ ಆಫ್ ಪಾಸಿಬಲ್) ಎಂದು ಜರ್ಮನಿಯ ಏಕೀಕರಣದ ರೂವಾರಿಯೆಂದೂ, ಉಕ್ಕಿನ ಮನುಷ್ಯನೆಂದೂ ಬಣ್ಣಿಸಲಾದ ಬಿಸ್ಮಾರ್ಕ್ ಹೇಳಿದನೆಂದು ಪ್ರಚಲಿತವಿದೆ. ಅಂದರೆ ರಾಜಕಾರಣದಲ್ಲಿ ತೊಡಗಿರುವವರು ಆದರ್ಶಗಳ ಬೆನ್ನು ಹತ್ತದೆ ತಮ್ಮ ಸಾಮಥ್ರ್ಯ ಹಾಗೂ ಮಿತಿಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಸಾಧ್ಯತೆಗಳನ್ನು ಗುರುತಿಸಿ ಅವುಗಳನ್ನು ಕಾರ್ಯರೂಪಕ್ಕೆ ಇಳಿಸುತ್ತಾರೆ ಎಂಬ ಮಾತಿದು. ಆದರೆ ಆ ಸಾಧ್ಯತೆಗಳು ಎಂಥವು, ಯಾರಿಗೆ ಒಳ್ಳೆಯದನ್ನು ಮಾಡುತ್ತವೆ ಎಂಬುದು ಪ್ರಶ್ನೆ. ಈ ಆಚರಣಯೋಗ್ಯ ಯೋಜನೆಗಳಿಂದಾಗಿ ನಾಯಕರಿಗೆ ಮಾತ್ರ ಲಾಭ ಸಿಗುತ್ತದೋ, ಅಥವಾ ಸಮಾಜದಲ್ಲಿ ಈಗಾಗಲೇ ಸವಲತ್ತುಗಳನ್ನು ಅನುಭವಿಸುವವರು ಉಪಯುಕ್ತರಾಗುತ್ತಾರೋ, ಅಥವಾ ದುರ್ಭರ ಜೀವನವನ್ನು ನಡೆಸುವವರ ಬಾಳು ಹಸನಾಗುತ್ತದೋ ಎನ್ನುವುದರ ಮೇಲೆ ಆ ಸಾಧ್ಯತೆಗಳ ಗುಣಾವಗುಣಗಳನ್ನು ವಿಶ್ಲೇಷಿಸಬೇಕಾಗುತ್ತದೆ.
ಸಮಕಾಲೀನ ರಾಜಕಾರಣವು ರಾಜಕೀಯವಾಗಿರುವ ಬಗೆಯ ಹಿನ್ನೆಲೆಯಲ್ಲಿ ನಮ್ಮ ರಾಜಕೀಯ ಸನ್ನಿವೇಷವನ್ನು ಅರ್ಥಮಾಡಿಕೊಳ್ಳಬಹುದು. ದುರಂತವೆಂದರೆ ಭಾರತದ ಬಹುತೇಕ ರಾಜಕೀಯ ನಾಯಕರು ಈ ಸಾಧ್ಯತೆಗಳನ್ನು ತೀರಾ ವೈಯಕ್ತಿಕ ನೆಲೆಯಲ್ಲಿಯೇ ಸ್ವೀಕರಿಸುತ್ತಿದ್ದಾರೆ. ಹಾಗಾಗಿ ಧನಾತ್ಮಕ ಶಬ್ದವಾದ ‘ರಾಜಕಾರಣ’ ಇಂದು ಋಣಾತ್ಮಕವಾದ ‘ರಾಜಕೀಯ’ವಾಗಿದೆ. ಅದೆಷ್ಟರಮಟ್ಟಿಗೆಂದರೆ ಯಾವನಾದರು ಕುತಂತ್ರಿಯೆಂದರೆ ಅವನು ರಾಜಕೀಯ ಮಾಡುತ್ತಾನೆ ಎಂದು ಹೇಳುವುದು ಸಾಮಾನ್ಯವಾಗಿದೆ.
ಅಧಿಕಾರವನ್ನು ಪಡೆಯಲು ಮತ್ತು ಸಿಕ್ಕ ಅಧಿಕಾರವನ್ನು ಉಳಿಸಿಕೊಳ್ಳಲು ಏನು ಮಾಡಿದರೂ ಸರಿ ಎಂಬುದು ಇಂದು ರಾಜಕಾರಣಿಗಳ ನಡುವೆ ಮಾತ್ರವಲ್ಲ, ಅವರನ್ನು ಚುನಾಯಿಸುವ ಪ್ರಜೆಗಳ ನಡುವೆಯೂ ಒಪ್ಪಿತ ಮೌಲ್ಯವೇ ಆಗಿದೆ. ಹಣ ಸಂಪಾದನೆಗಾಗಿ ಬಂಡವಾಳ ಹೂಡುವಂತೆ ಅಧಿಕಾರ (ಆ ಮೂಲಕ ಹಣ) ಸಂಪಾದನೆಗಾಗಿ ಹಣದ ಹೊಳೆ ಹರಿಸುವುದು ನಮಗೆ ಆಶ್ಚರ್ಯವನ್ನು ಉಂಟುಮಾಡುವುದೇ ಇಲ್ಲ. ಯಾರಾದರೂ ಕೆಲವರು ಹಣವನ್ನು ಖರ್ಚುಮಾಡದೆ ಚುನಾವಣೆಯಲ್ಲಿ ಸ್ಪರ್ಧಿಸಲು ಹೊರಟರೆ ಅಂಥವರನ್ನು ತಲೆಕೆಟ್ಟವರೆಂದೇ ಕರೆಯಲಾಗುವ ಹಂತಕ್ಕೆ ಸಮಾಜ ತಲುಪಿದೆ. ಇಂಥ ಅವನತಿಗೆ ಕಾರಣವೇನು? ಒಂದು ಓಟಿಗೆ ನಿಗಿದಿತ ಮೊತ್ತವನ್ನೋ, ಬೆಳೆ ಬಾಳುವ ವಸ್ತುವನ್ನೋ ನೀಡದಿದ್ದರೆ ಮತ‘ದಾನ’ ಮಾಡುವ ಗೋಜಿಗೆ ಹೋಗದ ಜನರಿದ್ದಾರೆ. ಮತ‘ದಾನ’ಯೆಂಬುದು ವ್ಯವಹಾರವಾಗಿ ‘ಮತ’ವು ಒಂದು ಸರಕಿನ ಸ್ಥಿತಿಯನ್ನು ತಲುಪುವಂತೆ ಮಾಡುವಲ್ಲಿ ಜನನಾಯಕರೆನ್ನಿಸಿಕೊಳ್ಳುವವರ ಪಾತ್ರವೇ ದೊಡ್ಡದು. ಆಗ ಮತ ಪವಿತ್ರವೆಂದೂ ಮತ‘ದಾನ’ ಕರ್ತವ್ಯವೆಂದೂ, ಆ ಕರ್ತವ್ಯವನ್ನೇ ಮಾಡದಿರುವವರು ಪ್ರಭುತ್ವವನ್ನು ಪ್ರಶ್ನಿಸುವ ಹಕ್ಕನ್ನೇ ಕಳೆದುಕೊಳ್ಳುತ್ತಾರೆಂದೂ ಹೇಳುವುದು ಹುಂಬತನದ ಮಾತುಗಳು ಮಾತ್ರವಾಗುತ್ತವೆ.
ಇನ್ನು ಈ ದೇಶದ ಹಲವು ಮೂಲೆಗಳಲ್ಲಿ ನಡೆಯುವ ಚಳವಳಿಗಳು ಪ್ರಜಾತಂತ್ರವೆಂಬ ಮೌಲ್ಯವನ್ನು ಜನರಲ್ಲಿ ಅರ್ಥಪೂರಿತವಾಗಿ ನೆಡುವಲ್ಲಿ ಎಷ್ಟರಮಟ್ಟಿಗೆ ಯಶಸ್ವಿಯಾಗಿದೆ ಎಂಬುದು ಮತ್ತೊಂದು ಪ್ರಶ್ನೆ. ಚುನಾವಣೆಗಳೇ ಪ್ರಜಾತಂತ್ರ ಎಂಬ ಭ್ರಮೆಯಲ್ಲಿ ಜನ ತೇಲುವಂತೆ ಮಾಡಲು ಜನನಾಯಕರೆನಿಸಿಕೊಳ್ಳುವವರು ಯಾವಾಗಲೂ ಪ್ರಯತ್ನಿಸುತ್ತಲೇ ಇರುವುದರಿಂದ ಈ ಚಳವಳಿಗಳು ಜನರನ್ನು ಆಕರ್ಷಿಸುವುದು ಅಸಾಧ್ಯವಲ್ಲದಿದ್ದರೂ ಕಷ್ಟದ ಮಾತು.
2019ನೇ ಇಸವಿಯಲ್ಲಿ ನಡೆಯುತ್ತಿರುವ ಚುನಾವಣೆಗಳಿಗೆ ಈ ಎಲ್ಲ ಮಾತುಗಳು ಅನ್ವಯವಾಗುತ್ತವೆ. ಇದುವರೆಗೂ ಜನರ ಹೆಸರಿನಲ್ಲಿಯೇ ಸಂವಿಧಾನದ ಸಾಕ್ಷಿಯಾಗಿ ಅಧಿಕಾರವನ್ನು ಅನುಭವಿಸಿದ ಸರ್ಕಾರಗಳ ಸೋಲನ್ನೇ ತನ್ನ ಚಿಮ್ಮುವ ಹಲಗೆಯನ್ನಾಗಿ ಮಾಡಿಕೊಂಡು ಯಶಸ್ಸನ್ನು ಗಳಿಸಿದ ಭಾರತೀಯ ಜನತಾ ಪಕ್ಷ ತನ್ನ ಒಬ್ಬ ನಾಯಕನನ್ನು ಅತಿಮಾನುಷನಂತೆ ಚಿತ್ರಿಸುತ್ತಾ ಇಲ್ಲಿಯವರೆಗೂ ತೋರಿಕೆಗಾಗಿಯಾದರೂ ಕಾಣಿಸಿಕೊಳ್ಳುತ್ತಿದ್ದ ಪ್ರಜಾತಂತ್ರವನ್ನು ಹಾಳುಮಾಡಲು ಹೊರಟಿದೆ. ಸಂಸದೀಯ ಪ್ರಜಾಪ್ರಭುತ್ವ ನಮ್ಮದು ಎಂಬ ಮಾತನ್ನೇ ಮರೆಮಾಚಿ, ಈ ದೇಶದ ಪ್ರಧಾನಿಯನ್ನು ನೇರವಾಗಿ ಚುನಾಯಿಸುತ್ತೇವೆಂದು ಅಥವಾ ಸೋಲಿಸುತ್ತೇವೆಂದು ಜನರು ನಂಬುವಂತೆ, ಹೇಳುವಂತೆ ಆಗಿದೆ. ಆ ಪಕ್ಷ ನಾಯಕರು ತಮ್ಮ ಸೇನಾಪತಿಯನ್ನು ಮುಂದಿಟ್ಟುಕೊಂಡು ಮಾಧ್ಯಮಗಳ ಭಾಷೆಯಲ್ಲಿ ಸಮರಕ್ಕೇ ಹೊರಟಿದ್ದಾರೆ. ಇದೆಲ್ಲಾ ಒಂದು ಮಹಾಯುದ್ಧವೇನೊ ಎಂಬಂತೆ ಇಲ್ಲಿನ ಜನ ಪ್ರೇಕ್ಷಕರಾಗಿದ್ದಾರೆ. ಇನ್ನು ಪ್ರಜಾತಂತ್ರಕ್ಕೇ ಇಲ್ಲಿ ಜಾಗವೆಲ್ಲಿದೆ? ಇಬ್ಬರು ಯೋಧರ ನಡುವೆ ನಡೆಯುವ ಯುದ್ಧದೋಪಾದಿಯಲ್ಲಿ ಈ ಚುನಾವಣೆಗಳು ನಮ್ಮ ಮುಂದೆ ವಿಜೃಂಭಿಸುತ್ತಿವೆ.
ಸರ್ಕಾರದ ಹಲವು ವೈಫಲ್ಯಗಳು, ಸುಳ್ಳುಗಳು, ಅವರ ಕೃಪಾಪೋಷಿತ ಪುಂಡರುಗಳ ದಾಂಧಲೆಗಳು ಢಾಳಾಗಿ ಕಾಣಿಸಿಕೊಳ್ಳುತ್ತಿದ್ದರೂ ಇಲ್ಲಿನ ಮಾಧ್ಯಮ, ಮೇಲ್ವರ್ಗದ ಜನ ಮತ್ತು ನವಉದಾರವಾದಿ ವ್ಯವಸ್ಥೆಯ ಫಲಾನುಭವಿಗಳು ಈ ಎಲ್ಲಾ ವಾಸ್ತವಗಳಿಗೆ ಕಣ್ಣು ಮುಚ್ಚಿದ್ದಾರೆ. ತಮ್ಮ ಎದುರಾಳಿಗಳನ್ನು ಅಂದರೆ ತಮ್ಮ ಮಾತುಗಳನ್ನು ಒಪ್ಪದವರನ್ನು ‘ನಗರದ ನಕ್ಸಲರು’, ದೇಶದ್ರೋಹಿಗಳು, ‘ತುಕಡೆ ತುಕಡೆ’ ಗುಂಪುಗಳು ಮುಂತಾದ ಹೆಸರುಗಳಿಂದ ಕರೆದು, ಅಶ್ಲೀಲ ಭಾಷೆಯಲ್ಲಿ ಟೀಕಿಸಿ ವಿಚಿತ್ರ ಸಂತೋಷವನ್ನು ಅನುಭವಿಸುತ್ತಿದ್ದಾರೆ. ಇಂಥವರು ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿದ್ದು, ಇತರರ ದನಿ ಅಡಗಿ ಹೋಗುವಷ್ಟು ಗಲಾಟೆ ಮಾಡುತ್ತಾರೆ. ಇಂಥ ಸಂದರ್ಭದಲ್ಲಿ ಹಲವರು ಮೌನಕ್ಕೆ ಶರಣು ಹೋಗಿದ್ದಾರೆ. ಅಸಡ್ಡೆಯಿಂದ, ಹೆದರಿಕೆಯಿಂದ, ನಿರಾಸಕ್ತಿಯಿಂದ.
ಇನ್ನು, ಇಲ್ಲಿನ ವಿರೋಧ ಪಕ್ಷಗಳ ನಡವಳಿಕೆ ಏನು ಪ್ರಶ್ನಾತೀತವಾಗಿ ಉಳಿದಿಲ್ಲ. ತಮ್ಮ ಸಣ್ಣತನಗಳು, ಒಳಜಗಳಗಳು, ಪ್ರತಿಷ್ಠೆಗಳು, ಅಧಿಕಾರದಾಹ ಇವುಗಳಿಂದಲೂ ಸಂಪೂರ್ಣವಾಗಿ ಮುಕ್ತರಾಗದ ಇವರು ಯಾವ ಕ್ಷಣದಲ್ಲಿ ಯಾವ ನಿಲುವು ತಾಳುತ್ತಾರೆ ಎಂಬುದು ಉತ್ತರವಿಲ್ಲದ ಪ್ರಶ್ನೆ. ಇಂಥವರನ್ನು ನಂಬಿ ಇವರ ಕೈಗೆ ಅಧಿಕಾರವನ್ನು ಕೊಡುವುದು ಹೇಗೆ ಎನ್ನುವುದು ಜನಸಾಮಾನ್ಯರ, ಈ ವಿಷಯವನ್ನು ಗಂಭೀರವಾಗಿ ತೆಗೆದುಕೊಳ್ಳುವವರ ಚಿಂತೆ
ಚುನಾವಣೆಗಳೂ ಪ್ರಜಾತಂತ್ರದ ಒಂದು ಪ್ರಕ್ರಿಯೆ, ಮುಖ್ಯವಾದ ಪ್ರಕ್ರಿಯೆ ಎಂದು ಅರ್ಥಮಾಡಿಕೊಂಡು, ಪ್ರಜಾತಂತ್ರವೆಂದರೆ ಜನರೆಲ್ಲರ ಸಾರ್ಥಕ ಪಾಲುಗೊಳ್ಳುವಿಕೆ ಎಂಬುದನ್ನು ಆಚರಣೆಗೆ ತರುವವರೆಗೂ ನಮ್ಮ ಅತಿ ದೊಡ್ಡ ಪ್ರಜಾತಂತ್ರದ ಈ ಗೊಂದಲಗಳು ಮುಂದುವರೆಯುವಂಥವೇ. ಚಳವಳಿಗಳ ಯಶಸ್ಸಿನ ಬಗ್ಗೆ ಎಷ್ಟೇ ಅನುಮಾಗಳಿರಲಿ, ಅಂತಿಮವಾಗಿ ಜನರನ್ನು ನಿಜವಾದ ಅರ್ಥದಲ್ಲಿ ಪ್ರಜಾತಂತ್ರವಾದಿಗಳನ್ನಾಗಿ ಮಾಡುವಂಥ ಶಕ್ತಿ ಇರುವುದು ಜನಪರ ಚಳವಳಿಗೆ ಮಾತ್ರ ಎನ್ನುವ ಮಾತನ್ನು ನಂಬಿ ಕಾರ್ಯಪ್ರವೃತ್ತರಾಗುವುದೊಂದೇ ಇಲ್ಲಿನ ಪ್ರಜಾತಾಂತ್ರಿಕ ಶಕ್ತಿಗಳಿಗೆ ಉಳಿದಿರುವ ದಾರಿ. ರಾಜಕೀಯದ ಜಾಗದಲ್ಲಿ ರಾಜಕಾರಣವನ್ನು ನಮ್ಮದಾಗಿಸಿಕೊಳ್ಳಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋವಾ ನೈಟ್ ಕ್ಲಬ್ ಮಾಲೀಕರ ಮಧ್ಯಂತರ ಜಾಮೀನು ನಿರಾಕರಿಸಿದ ದೆಹಲಿ ನ್ಯಾಯಾಲಯ: ಥೈಲ್ಯಾಂಡ್‌ನಿಂದಲೂ ಗಡಿಪಾರು ಪ್ರಕ್ರಿಯೆ ಆರಂಭ 

ನವದೆಹಲಿ: ಕಳೆದ ವಾರ ಕನಿಷ್ಠ 25 ಜನರ ಸಾವಿಗೆ ಕಾರಣವಾಗಿದ್ದ, ಗೋವಾದ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಮತ್ತು ಗೌರವ್ ಲುಥ್ರಾಸ್ ಅವರ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ಅರ್ಜಿಯನ್ನು...

ಮಾದಕ ದ್ರವ್ಯ ಬಳಕೆ-ಮಾರಾಟದ ಶಿಕ್ಷೆಯ ಕುರಿತು ಶಾಲಾ-ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮ: ಪರಮೇಶ್ವರ್

ಮಾದಕ ದ್ರವ್ಯ ಬಳಕೆಯ ದುಷ್ಪರಿಣಾಮ, ಮಾರಾಟದ ಶಿಕ್ಷೆಯ ಕುರಿತು ಶಾಲಾ-ಕಾಲೇಜುಗಳಲ್ಲಿ, ಪೊಲೀಸ್ ಠಾಣೆಗಳಲ್ಲಿ ನಿಯಮಿತವಾಗಿ ಜಾಗೃತಿ ಕಾರ್ಯಕ್ರಮಗಳನ್ನು ಮಾಡಲಾಗಿರುತ್ತದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದರು. ಗುರುವಾರ ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್ ಸದಸ್ಯ...

ದುಡ್ಡು ಕೊಟ್ಟವರಿಗೆ ರಾಜಾತಿಥ್ಯ, ಪೌರತ್ವಕ್ಕೆ ರಹದಾರಿ : ಏನಿದು ‘ಟ್ರಂಪ್ ಗೋಲ್ಡ್ ಕಾರ್ಡ್’

ಟ್ರಂಪ್ ಆಡಳಿತವು ಬುಧವಾರ (ಡಿಸೆಂಬರ್ 10) ಔಪಚಾರಿಕವಾಗಿ 'ಟ್ರಂಪ್ ಗೋಲ್ಡ್ ಕಾರ್ಡ್'ಗಾಗಿ ಅರ್ಜಿಗಳನ್ನು ಸ್ವೀಕರಿಸಲು ಪ್ರಾರಂಭಿಸಿದೆ. ಇದನ್ನು ಅಮೆರಿಕ ಸರ್ಕಾರ ಕನಿಷ್ಠ 1 ಮಿಲಿಯನ್ ಡಾಲರ್ ಪಾವತಿಸುವ ಜನರಿಗೆ ನೀಡಲು ಯೋಜಿಸಿದೆ. 'ಟ್ರಂಪ್ ಗೋಲ್ಡ್...

ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಜೈಲು ಶಿಕ್ಷೆ ಅಮಾನತು ಮನವಿ ನಿರಾಕರಿಸಿದ ಸುಪ್ರೀಂ ಕೋರ್ಟ್

1996 ರ ಮಾದಕ ದ್ರವ್ಯ ವಶ ಪ್ರಕರಣದಲ್ಲಿ ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಅವರ 20 ವರ್ಷಗಳ ಜೈಲು ಶಿಕ್ಷೆಯನ್ನು ಅಮಾನತುಗೊಳಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದರಿಂದ ಗುರುವಾರ ಅವರ ಬಿಡುಗಡೆಗಾಗಿನ ಪ್ರಯತ್ನ...

ಅರುಣಾಚಲ ಪ್ರದೇಶ: ಟ್ರಕ್ ಕಂದಕಕ್ಕೆ ಉರುಳಿ ಅಸ್ಸಾಂ ಮೂಲದ 21 ಕಾರ್ಮಿಕರು ಸಾವನ್ನಪ್ಪಿರುವ ಶಂಕೆ, 18 ಮೃತದೇಹಗಳು ಪತ್ತೆ

ಅರುಣಾಚಲ ಪ್ರದೇಶದ ಅಂಜಾವ್ ಜಿಲ್ಲೆಯಲ್ಲಿ ಅಸ್ಸಾಂನಿಂದ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟ್ರಕ್ ಆಳವಾದ ಕಂದಕಕ್ಕೆ ಉರುಳಿದ್ದು, 21 ಜನರು ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ಇಲ್ಲಿಯವರೆಗೆ 18 ಶವಗಳನ್ನು ಹೊರತೆಗೆಯಲಾಗಿದೆ ಎಂಬ ಮಾಹಿತಿ ಸಿಕ್ಕಿದೆ.  ಡಿಸೆಂಬರ್ 8ನೇ...

ಜಾರ್ಖಂಡ್‌ನ 27 ಮಕ್ಕಳು ನೇಪಾಳಕ್ಕೆ ಕಳ್ಳಸಾಗಣೆ; ತನಿಖೆ ಆರಂಭಿಸಿದ ಪೊಲೀಸರು

ಉತ್ತಮ ಶಿಕ್ಷಣ ಒದಗಿಸುವ ನೆಪದಲ್ಲಿ 27 ಮಕ್ಕಳನ್ನು ನೇಪಾಳಕ್ಕೆ ಕಳ್ಳಸಾಗಣೆ ಮಾಡಲಾಗಿದೆ ಎಂಬ ಆರೋಪದ ಮೇಲೆ ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯ ಪೊಲೀಸರು ಗುರುವಾರ ತನಿಖೆ ಆರಂಭಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಕ್ಕಳನ್ನು...

ಉಮರ್ ಖಾಲಿದ್‌ಗೆ 14 ದಿನಗಳ ಮಧ್ಯಂತರ ಜಾಮೀನು; ಸಹೋದರಿಯ ಮದುವೆಯಲ್ಲಿ ಪಾಲ್ಗೊಳ್ಳಲು ಅವಕಾಶ

ಸಾಮಾಜಿಕ ಕಾರ್ಯಕರ್ತ ಉಮರ್ ಖಾಲಿದ್ ಅವರಿಗೆ ಡಿಸೆಂಬರ್ 27 ರಂದು ನಿಗದಿಯಾಗಿದ್ದ ತಮ್ಮ ಸಹೋದರಿಯ ಮದುವೆಯಲ್ಲಿ ಪಾಲ್ಗೊಳ್ಳಲು ಡಿಸೆಂಬರ್ 16 ರಿಂದ 29 ರವರೆಗೆ 14 ದಿನಗಳ ಕಾಲ ಮಧ್ಯಂತರ ಜಾಮೀನು ನೀಡಲಾಯಿತು....

ಜಾತ್ಯತೀತತೆಯನ್ನು ಮಾತ್ರ ನಂಬುತ್ತೇನೆ; ಕೋಮುವಾದವನ್ನಲ್ಲ: ಮಮತಾ ಬ್ಯಾನರ್ಜಿ

ನಾನು ಕೋಮುವಾದದಲ್ಲಿ ನಂಬಿಕೆ ಇಡುವುದಿಲ್ಲ. ಜಾತ್ಯತೀತತೆಯನ್ನು ಮಾತ್ರ ನಂಬುತ್ತೇನೆ. ಚುನಾವಣೆ ಸಮೀಪಿಸಿದಾಗಲೆಲ್ಲಾ, ಬಿಜೆಪಿ ಹಣವನ್ನು ಬಳಸಿ ಇತರ ರಾಜ್ಯಗಳಿಂದ ಜನರನ್ನು ಕರೆತಂದು ಸಾರ್ವಜನಿಕರನ್ನು ವಿಭಜಿಸಲು ಪ್ರಯತ್ನಿಸುತ್ತದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ...

ಅತ್ಯಾಚಾರ ಪ್ರಕರಣದ ವಿಚಾರಣೆ ವರ್ಗಾವಣೆ ಕೋರಿ ಪ್ರಜ್ವಲ್ ರೇವಣ್ಣ ಮನವಿ : ತಿರಸ್ಕರಿಸಿದ ಸುಪ್ರೀಂ ಕೋರ್ಟ್‌

ಬೆಂಗಳೂರಿನ 81ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಧೀಶರು ವಿಚಾರಣೆ ನಡೆಸುತ್ತಿರುವ ತಮ್ಮ ವಿರುದ್ಧದ ಎರಡು ಅತ್ಯಾಚಾರ ಪ್ರಕರಣಗಳನ್ನು ಬೇರೆ ಸೆಷನ್ಸ್‌ ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಕೋರಿ ಜೆಡಿಎಸ್‌ ಮಾಜಿ ಸಂಸದ ಪ್ರಜ್ವಲ್‌...

ಭಗವದ್ಗೀತೆ ಕಾರ್ಯಕ್ರಮದಲ್ಲಿ ಚಿಕನ್ ಪಫ್ಸ್ ಮಾರಿದ ಮುಸ್ಲಿಂ ವ್ಯಾಪಾರಿಗೆ ಥಳಿತ : ಮೂವರ ಬಂಧನ

ಲಕ್ಷ ಕಂಠ ಗೀತಾ ಪಾರಾಯಣ (ಸುಮಾರು 5 ಲಕ್ಷ ಜನರಿಂದ ಭಗವದ್ಗೀತೆ ಪಾರಾಯಣ) ಕಾರ್ಯಕ್ರಮದಲ್ಲಿ ಚಿಕನ್ ಪಫ್ಸ್ ಮಾರಿದ ಬಡ ಮುಸ್ಲಿಂ ವ್ಯಾಪಾರಿಗೆ ಥಳಿಸಿದ ಘಟನೆ ಭಾನುವಾರ (ಡಿಸೆಂಬರ್ 7) ಕೋಲ್ಕತ್ತಾದ ಬ್ರಿಗೇಡ್...