Homeಮುಖಪುಟಪ್ರಧಾನಿ ಕುರಿತು ಟೀಕೆ: ಪ್ರಿಯಾಂಕಾ ಗಾಂಧಿ, ಕೇಜ್ರಿವಾಲ್‌ಗೆ ಚುನಾವಣಾ ಸಮಿತಿ ನೋಟಿಸ್

ಪ್ರಧಾನಿ ಕುರಿತು ಟೀಕೆ: ಪ್ರಿಯಾಂಕಾ ಗಾಂಧಿ, ಕೇಜ್ರಿವಾಲ್‌ಗೆ ಚುನಾವಣಾ ಸಮಿತಿ ನೋಟಿಸ್

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ- ಉದ್ಯಮಿ ಗೌತಮ್ ಅವರಿಗೆ ಇರುವ ಸಂಬಂಧದ ಬಗ್ಗೆ ಹಾಗೂ ಇನ್ನಿತರ ಟೀಕೆ ಮಾಡಿರುವ ಮುಖ್ಯಮಂತ್ರಿ ಅರವಿಂದ ಕೇಜಿವಾಲ್, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಗೆ ಅನಧೀಕೃತ ಹಾಗೂ ಸುಳ್ಳು ಅಪಾದನೆ ಮಾಡಿದ ಆರೋಪದ ಮೇಲೆ ಚುನಾವಣಾ ಆಯೋಗವು ಶೋಕಾಸ್ ನೋಟಿಸ್ ಜಾರಿ ಮಾಡಿದೆ.

ಪ್ರಧಾನಿ ಅವರನ್ನು ಅವಹೇಳನ ಮಾಡಲಾಗಿದೆ ಎನ್ನುವ ಆರೋಪದಲ್ಲಿ ಆಮ್ ಆದ್ಮ ಪಕ್ಷಕ್ಕೂ ಶೋಕಾಸ್ ನೋಟಿಸ್‌ ನೀಡಲಾಗಿದೆ.

ಮಧ್ಯಪ್ರದೇಶದ ಚುನಾವಣಾ ಪ್ರಚಾರ ಸಭೆಯಲ್ಲಿ ಪ್ರಿಯಾಂಕಾ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅನಧೀಕೃತ ಹಾಗೂ ಸುಳ್ಳು ಆಪಾದನೆ ಮಾಡಿದ್ದಾರೆ ಎಂದು ನವೆಂಬರ್ 10ರಂದು ಬಿಜೆಪಿ ದೂರು ನೀಡಿತ್ತು. ಈ ಬಗ್ಗೆ ನವೆಂಬರ್ 16ರ ರಾತ್ರಿ 8ರ ಒಳಗೆ ಉತ್ತರ ನೀಡಬೇಕು ಎಂದು ಚುನಾವಣಾ ಆಯೋಗವು ನೋಟಿಸ್ ಜಾರಿ ಮಾಡಿದೆ. ಆಮ್ ಆದ್ಮ ಪಕ್ಷಕ್ಕೂ ಅದೇ ದಿನದ ಒಳಗಾಗಿ ಉತ್ತರಿಸುವಂತೆ ಸೂಚಿಸಲಾಗಿದೆ.

ನವೆಂಬರ್ 10ರಂದು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ, ಬಿಜೆಪಿ ರಾಜ್ಯಸಭಾ ಸದಸ್ಯ ಅನಿಲ್ ಬಲೂನಿ, ಬಿಜೆಪಿ ನಾಯಕ ಓಂ ಪಟ್ನಾಯಕ್ ಅವರ ನಿಯೋಗ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿತ್ತು.

ಚುನಾವಣಾ ಆಯೋಗಕ್ಕೆ ನೀಡಿದ ತನ್ನ ದೂರಿನಲ್ಲಿ, ”ನರೇಂದ್ರ ಮೋದಿ ಸರ್ಕಾರವು ಸಾರ್ವಜನಿಕ ವಲಯದ ಉದ್ಯಮಗಳನ್ನು ಖಾಸಗೀಕರಣಗೊಳಿಸಿದೆ ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ. ಆದರೆ ಇದು ‘ಆಧಾರರಹಿತ ಮತ್ತು ಸುಳ್ಳು’ ಹೇಳಿಕೆ ಎಂದು ಬಿಜೆಪಿ ಆರೋಪಿಸಿದೆ.

”ಎಕ್ಸ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಹಾಗೂ ಅವಮಾನಕಾರಿ ಪೋಸ್ಟ್‌ಗಳನ್ನು ಮಾಡಲಾಗಿತ್ತು. ಆರೋಪಗಳು ‘ಅಸ್ಪಷ್ಟ ಮತ್ತು ದುರುದ್ದೇಶಪೂರಿತವಾಗಿತ್ತು” ಎಂದು ಬಿಜೆಪಿ ದೂರು ನೀಡಿದ್ದಾಗಿ ಆಮ್ ಆದ್ಮ ಪಕ್ಷದ ವಿರುದ್ಧದ ದೂರಿನ ಬಗ್ಗೆ ಚುನಾವಣಾ ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಧಾನಿ ನರೇಂದ್ರ ಮೋದಿ ಹಾಗೂ ಉದ್ಯಮಿ ಗೌತಮ್ ಅವರಿಗೆ ಇರುವ ಸಂಬಂಧದ ಕುರಿತು ಎಎಪಿ ಪೋಸ್ಟ್ ಮಾಡಿತ್ತು ಎಂದು ಆಯೋಗ ಮಾಹಿತಿ ನೀಡಿದೆ.

ಪ್ರಸ್ತುತ ಆಪಾದಿತ ವಿಷಯವನ್ನು ಆಮ್ ಆದ್ಮ ಪಕ್ಷದ ಹ್ಯಾಂಡಲ್‌ನಿಂದ ಪೋಸ್ಟ್ ಮಾಡಲಾಗಿದೆ ಎಂದು ಕಂಡುಬಂದಿದೆ. ಎಎಪಿ ರಾಷ್ಟ್ರೀಯ ಪಕ್ಷವಾಗಿರುವುದರಿಂದ ಸಾರ್ವಜನಿಕವಾಗಿ ಅಂತಹ ವಿಷಯಗಳನ್ನು ಪ್ರಸ್ತಾಪಿಸುವ ಮೊದಲು ಸತ್ಯಾಸತ್ಯತೆಯನ್ನು ಪರಿಶೀಲಿಸಬೇಕು ಎಂದಿರುವ ಚುನಾವಣಾ ಆಯೋಗವು, ಇದು ನೀತಿ ಸಂಹಿತೆಯ ಉಲ್ಲಂಘನೆ ಎಂದಿದೆ.

ಈ ಬಗ್ಗೆ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಮಾಧ್ಯಮದವರ ಜೊತೆ ಮಾತನಾಡಿದ್ದು, ”ಎಎಪಿ ತನ್ನ ಅಧಿಕೃತ ಹ್ಯಾಂಡಲ್‌ನ ಎಕ್ಸ್‌ನಲ್ಲಿವೀಡಿಯೊ ಮತ್ತು ಎರಡು ಪೋಸ್ಟ್‌ಗಳನ್ನು ಪೋಸ್ಟ್ ಮಾಡಿದೆ, ಇದರಲ್ಲಿ ಅದು ಪ್ರಜಾಸತ್ತಾತ್ಮಕವಾಗಿ ಚುನಾಯಿತ ಸರ್ಕಾರದ ಮುಖ್ಯಸ್ಥರ ಬಗ್ಗೆ ಸ್ವೀಕಾರಾರ್ಹವಲ್ಲ, ಖಂಡನೀಯ, ಚೇಷ್ಟೆಯ ಮತ್ತು ಅನೈತಿಕ ವಿಷಯಗಳನ್ನು ಹೇಳಿದೆ” ಎಂದು ಹೇಳಿದ್ದಾರೆ.

”ನಿಗದಿತ ಸಮಯದೊಳಗೆ ನಿಮ್ಮ ಕಡೆಯಿಂದ ಯಾವುದೇ ಪ್ರತಿಕ್ರಿಯೆ ನೀಡದಿದ್ದರೆ ಕ್ರಮ ಕೈಗೊಳ್ಳಬೇಕಾಗುತ್ತದೆ” ಎಂದು ಚುನಾವಣಾ ಆಯೋಗ ಹೇಳಿದೆ.

ಇದನ್ನೂ ಓದಿ: ಅದಾನಿ ಸಮೂಹದ ಉದ್ಯೋಗಿಯನ್ನು ಕೇಂದ್ರದ EAC ಸಮಿತಿಗೆ ನೇಮಕ: ಪ್ರತಿಪಕ್ಷಗಳಿಂದ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...