Homeಮುಖಪುಟನಿತೀಶ್‌ ಕುಮಾರ್‌ರವರ ಮೇಲೆ ಗೌರವವಿದೆ. ಆದರೆ ಅವರಿಂದ ಬಿಹಾರದ ಅಭಿವೃಧ್ದಿ ಸಾಧ್ಯವಿಲ್ಲ - ಪ್ರಶಾಂತ್‌ ಕಿಶೋರ್‌

ನಿತೀಶ್‌ ಕುಮಾರ್‌ರವರ ಮೇಲೆ ಗೌರವವಿದೆ. ಆದರೆ ಅವರಿಂದ ಬಿಹಾರದ ಅಭಿವೃಧ್ದಿ ಸಾಧ್ಯವಿಲ್ಲ – ಪ್ರಶಾಂತ್‌ ಕಿಶೋರ್‌

- Advertisement -
- Advertisement -

’ಬಾತ್‌ ಬಿಹಾರ್‌ ಕಿ’ ಎಂಬ ಚಳವಳಿ ಹಮ್ಮಿಕೊಳ್ಳುವ ಮೂಲಕ ಬಿಹಾರವನ್ನು ಹತ್ತು ವರ್ಷಗಳಲ್ಲಿ ದೇಶದ ಅಭಿವೃದ್ದಿಹೊಂದಿದ ಹತ್ತು ರಾಜ್ಯಗಳಲ್ಲಿ ಒಂದಾಗಿಸುತ್ತೇನೆ ಎಂದು ಚುನಾವಣಾ ತಂತ್ರಜ್ಞ ಮತ್ತು ರಾಜಕಾರಣಿ ಪ್ರಶಾಂತ್‌ ಕಿಶೋರ್‌ ಪಣತೊಟ್ಟಿದ್ದಾರೆ.

ಕಳೆದ ತಿಂಗಳು ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ರವರು ಪ್ರಶಾಂತ್‌ ಕಿಶೋರ್‌ರವರನ್ನು ಜೆಡಿಯು ರಾಷ್ಟ್ರೀಯ ಉಪಾಧ್ಯಕ್ಷ ಸ್ಥಾನದಿಂದ ಉಚ್ಚಾಟನೆ ಮಾಡಿದ್ದರು. ಹಾಗಾಗಿ ಕಿಶೋರ್‌ ಬೇರೊಂದು ರಾಜಕೀಯ ಪಕ್ಷ / ಮೈತ್ರಿಕೂಟವನ್ನು ಸೇರುತ್ತಾರೆ, ಇಲ್ಲವೇ ಅವರೇ ಹೊಸ ಪಕ್ಷವನ್ನು ಹುಟ್ಟುಹಾಕುತ್ತಾರೆ ಎಂಬ ವದಂತಿಗಳಿದ್ದವು.

ಈಗ ಅವೆಲ್ಲವುಗಳನ್ನು ತಳ್ಳಿ ಹಾಕಿರುವ ಪ್ರಶಾಂತ್‌ ಕಿಶೋರ್‌ ಇಂದು ಪತ್ರಿಕಾಗೋಷ್ಠಿ ನಡೆಸಿ ನನಗೆ ಇನ್ನೊಂದು ರಾಜಕೀಯ ಪಕ್ಷ ಅಥವಾ ಒಕ್ಕೂಟಕ್ಕೆ ಸೇರುವ ಉದ್ದೇಶವಿಲ್ಲ … ನನ್ನ ಏಕೈಕ ಗಮನವೆಂದರೆ ಮುಂದಿನ 100 ದಿನಗಳಲ್ಲಿ ನಾನು ‘ಬಾತ್ ಬಿಹಾರ ಕಿ’ ಪ್ರಾರಂಭಿಸುತ್ತೇನೆ. ಇದರಲ್ಲಿ ಬಿಹಾರದ ಹೊಸ ದೃಷ್ಟಿಕೋನವನ್ನು ನಂಬುವ ಎಲ್ಲ ಜನರಿಗೂ ಅವಕಾಶವಿದೆ. ನಿತೀಶ್‌ ಕುಮಾರ್‌ ನಮ್ಮ ಜೊತೆ ಬಂದರೆ ಅವರಿಗೂ ಸ್ವಾಗತವಿದೆ. ರಾಜ್ಯದ 8800 ಪಂಚಾಯಿತಿಗಳಿಗೂ ಭೇಟಿ ಯುವ ಕಾರ್ಯಕರ್ತರನ್ನು ತಯಾರುಗೊಳಿಸಬೇಕಿದೆ ಎಂದಿದ್ದಾರೆ.


ಇದನ್ನು ಓದಿ: 2014ರಲ್ಲಿ ಮೋದಿ ಗೆಲುವಿಗಾಗಿ ದುಡಿದ ಈಗ ಮೋದಿ ವಿರುದ್ಧವೇ ತೊಡೆ ತಟ್ಟಿರುವ ಈ ಪ್ರಶಾಂತ್ ಕಿಶೋರ್ ಯಾರು?


ದೇಶದ ಹಲವು ರಾಜ್ಯಗಳಲ್ಲಿ ಬಿಹಾರದ ಜನ ಕೆಲಸ ಮಾಡುತ್ತಿದ್ದಾರೆ. ಸೂರತ್‌, ಮುಂಬೈ, ಕರ್ನಾಟಕಕ್ಕೆ ವಲಸೆ ಹೋಗುತ್ತಿದ್ದಾರೆ. ಆದರೆ ಅಲ್ಲಿನ ಜನರೇಕೆ ಬಿಹಾರಕ್ಕೆ ಬಂದು ಕೆಲಸ ಮಾಡುವುದಿಲ್ಲ? ಇದು ನಿತೀಶ್‌ ಕುಮಾರ್‌ರವರ ವಿರುದ್ಧದ ಹೋರಾಟವಲ್ಲ. ಬಿಹಾರವನ್ನು ಅಭಿವೃದ್ದಿಹೊಂದಿದ ರಾಜ್ಯವನ್ನಾಗಿಸುವುದು ನನ್ನ ಗುರಿ ಎಂದಿದ್ದಾರೆ.

“ಬಿಹಾರ ಕಳೆದ 15 ವರ್ಷಗಳಲ್ಲಿ ಪ್ರಗತಿ ಸಾಧಿಸಿದೆ. ಆದರೆ ಇತರ ರಾಜ್ಯಗಳಿಗೆ ಹೋಲಿಸಿದರೆ ಬಿಹಾರದ ಅಭಿವೃದ್ಧಿ ತೀರಾ ಕಡಿಮೆಯಾಗಿದೆ. ಅದು ಏಕೆ? ಭಾರತದಲ್ಲಿ ಜಾರ್ಖಂಡ್ ಹೊರತುಪಡಿಸಿದರೆ ಬಿಹಾರ ಇನ್ನೂ ಹೆಚ್ಚು ಹಿಂದುಳಿದ ರಾಜ್ಯವಾಗಿದೆ. 2005 ರಲ್ಲಿ ಬಿಹಾರ ಅತ್ಯಂತ ಬಡ ರಾಜ್ಯವಾಗಿತ್ತು ಮತ್ತು ಹಾಗೆಯೇ ಮುಂದುವರೆದಿದೆ ಎಂದು ಅವರು ಹೇಳಿದ್ದಾರೆ.

ಆರ್‌ಜೆಡಿ ಮುಖ್ಯಸ್ಥ ಲಾಲು ಯಾದವ್ ರವರ ಅಭಿವೃದ್ದಿ ಮತ್ತು ಹೀಗಿನ ನಿತೀಶ್‌ ಕುಮಾರ್‌ರವರ ಅಭಿವೃದ್ದಿ ಕುರಿತು ಮಾತನಾಡಿದ ಅವರು, ಹೌದು, ಲಾಲು ಜಿ ಅವರ ಸಮಯಕ್ಕಿತಂತ ಹೀಗಿನ ನಿತೀಶ್ ಜಿ ಅವರ ಸಮಯದಲ್ಲಿ ಗಮನಾರ್ಹ ಪ್ರಗತಿಯಾಗಿದೆ. ಆದರೆ ಗುಜರಾತ್, ಮಹಾರಾಷ್ಟ್ರ, ಹರಿಯಾಣ, ಕರ್ನಾಟಕ ಮತ್ತು ತಮಿಳುನಾಡಿಗೆ ಹೋಲಿಸಿದರೆ ಬಿಹಾರ ಎಲ್ಲಿ ನಿಂತಿದೆ ಎಂಬುದನ್ನು ನೀವು ಜನರಿಗೆ ತಿಳಿಸಬೇಕು ಎಂದು ಅವರು ಹೇಳಿದ್ದಾರೆ.

ನಿತೀಶ್‌ ಕುಮಾರ್‌ರವರ ಮೇಲೆ ನನಗೆ ಗೌರವವಿದೆ ಎನ್ನುತ್ತಲೇ ಚುಚ್ಚಿದ ಅವರು, ಬಿಜೆಪಿಯೊಂದಿಗಿನ ಮೈತ್ರಿಯಲ್ಲಿ ಉಳಿಯಲು ನಿತೀಶ್ ಕುಮಾರ್ ಅವರು ಸೈದ್ಧಾಂತಿಕ ರಾಜಿ ಮಾಡಿಕೊಳ್ಳುತ್ತಿದ್ದಾರೆ. ಮಹಾತ್ಮ ಗಾಂಧಿ ಮತ್ತು ಅವರ ಕೊಲೆಗಾರ ನಾಥುರಾಮ್ ಗೋಡ್ಸೆಗೆ ಇಬ್ಬರಿಗೂ ಏಕಕಾಲದಲ್ಲಿ ಬೆಂಬಲ ನೀಡಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.

“ನಿತೀಶ್ ಕುಮಾರ್ ನನ್ನನ್ನು ಮಗನಂತೆ ನೋಡಿದರು ಮತ್ತು ನಾನು ಅವರನ್ನು ಯಾವಾಗಲೂ ತಂದೆಯಂತೆ ನೋಡುತ್ತಿದ್ದೆ. ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದು ಅಥವಾ ನನ್ನನ್ನು ಹೊರಹಾಕುವುದಕ್ಕೆ ನಿತೀಶ್ ಕುಮಾರ್‌ರವರಿಗೆ ಅಧಿಕಾರವಿದೆ. ನಾನು ಅವರನ್ನು ಯಾವಾಗಲೂ ಗೌರವಿಸುತ್ತೇನೆ” ಎಂದು ಹೇಳಿದರು.

ಸಿಎಎಯನ್ನು ಸ್ಪಷ್ಟವಾಗಿ ವಿರೋಧಿಸಿದ್ದ ಕಿಶೋರ್‌ ಈ ಕುರಿತು ತಮ್ಮ ಜೆಡಿಯು ಪಕ್ಷದ ನಿಲುವನ್ನು ಬಹಿರಂಗವಾಗಿ ಹಲವು ಬಾರಿ ಟೀಕಿಸಿದ್ದರು. ಹಾಗಾಗಿ ಅವರನ್ನು ಹೊರಹಾಕಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಬ್ಬರು ಮಕ್ಕಳ ಸಾವಿನ ಬಳಿಕ ಮಣಿಪುರದಲ್ಲಿ ಭುಗಿಲೆದ್ದ ಪ್ರತಿಭಟನೆ; ಅಶ್ರುವಾಯು ಪ್ರಯೋಗಿಸಿದ ಪೊಲೀಸರು

ಏಪ್ರಿಲ್ 7 ರಂದು ಬಿಷ್ಣುಪುರ ಜಿಲ್ಲೆಯಲ್ಲಿ ಬಾಂಬ್ ದಾಳಿಯಲ್ಲಿ ಇಬ್ಬರು ಅಪ್ರಾಪ್ತ ಮಕ್ಕಳು ಸಾವನ್ನಪ್ಪಿದ ನಂತರ ಕಣಿವೆ ರಾಜ್ಯದಲ್ಲಿ ವ್ಯಾಪಕ ಪ್ರತಿಭಟನೆಗಳು ಭುಗಿಲೆದ್ದ ಕಾರಣ ಬುಧವಾರ (ಏಪ್ರಿಲ್ 8) ಮಣಿಪುರದಾದ್ಯಂತ ಉದ್ವಿಗ್ನತೆ ಉಂಟಾಗಿತ್ತು....

ಮತಕ್ಕಾಗಿ ನಗದು ಪ್ರಕರಣ: ಪಾಲಕ್ಕಾಡ್‌ನಲ್ಲಿ ಎನ್‌ಡಿಎ ಕಾರ್ಯಕರ್ತರ ವಿರುದ್ಧ ಎಫ್‌ಐಆರ್

ಮತದಾನದ ಒಂದು ದಿನಕ್ಕೆ ಮುಂಚಿತವಾಗಿ ಮತದಾರರಿಗೆ ಲಂಚ ನೀಡಿದ ಆರೋಪದ ಮೇಲೆ ಪಾಲಕ್ಕಾಡ್ ಕ್ಷೇತ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಪ್ರತಿನಿಧಿಗಳ ವಿರುದ್ಧ ಬುಧವಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಏಪ್ರಿಲ್ 8 ರಂದು ಬೆಳಿಗ್ಗೆ 10...

ಮಾದಕ ವ್ಯಸನ : 10 ವರ್ಷದಲ್ಲಿ ಐವರು ಗಂಡು ಮಕ್ಕಳನ್ನು ಕಳೆದುಕೊಂಡ ವೃದ್ಧ ದಂಪತಿ

ಡ್ರಗ್ ಕಾರಣದಿಂದ ವೃದ್ದ ದಂಪತಿ ತನ್ನ ಐವರು ಗಂಡು ಮಕ್ಕಳನ್ನು ಕಳೆದುಕೊಂಡ ಹೃದಯ ವಿದ್ರಾವಕ ಮತ್ತು ಆಘಾತಕಾರಿ ವರದಿ ಪಂಜಾಬ್‌ನ ಕಪುರ್ಥಲಾ ಜಿಲ್ಲೆಯ ಸುಲ್ತಾನ್‌ಪುರ ಲೋಧಿಯಿಂದ ಬಂದಿದೆ. ಸುಲ್ತಾನ್‌ಪುರ ಲೋಧಿಯ ಪಂಡೋರಿ ಮೊಹಲ್ಲಾ ಎಂಬ ಪ್ರದೇಶದಲ್ಲಿ ವಾಸಿಸುತ್ತಿರುವ...

ಜಮ್ಮು-ಕಾಶ್ಮೀರ: 28 ವರ್ಷಗಳ ಕಾಲ ಸೇನಾ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ಘೋಷಿಸಿದ ಶ್ರೀನಗರ ನ್ಯಾಯಾಲಯ

1997 ರಲ್ಲಿ ಸೇನಾ ಕಸ್ಟಡಿಗೆ ತೆಗೆದುಕೊಂಡ ಸುಮಾರು 28 ವರ್ಷಗಳ ನಂತರ ಶ್ರೀನಗರ ನ್ಯಾಯಾಲಯವು ಒಬ್ಬ ವ್ಯಕ್ತಿಯನ್ನು ಸತ್ತನೆಂದು ಘೋಷಿಸಿದೆ. ಬಂಧನದಲ್ಲಿದ್ದಾಗ ಕೊಲ್ಲಲ್ಪಟ್ಟಿದ್ದಾನೆ ಎಂಬ ತನಿಖಾ ಸಂಶೋಧನೆಗಳನ್ನು ಉಲ್ಲೇಖಿಸಿ ಮತ್ತು ಸಾವಿನ ಕಾನೂನುಬದ್ಧ...

ದೆಹಲಿ: ವೇತನ ಕೇಳಿದ್ದಕ್ಕೆ ಅಪಾಯಕಾರಿ ಚರಂಡಿ ಸ್ವಚ್ಛಗೊಳಿಸಲು ಒತ್ತಾಯ; ಸುರಕ್ಷತಾ ಸಾಧನಗಳಿಲ್ಲದೆ ಚರಂಡಿಗಿಳಿದ ನೈರ್ಮಲ್ಯ ಕಾರ್ಮಿಕ ಸಾವು

ವಾಲ್ಮೀಕಿ ಸಮುದಾಯದ ಗುತ್ತಿಗೆ ನೈರ್ಮಲ್ಯ ಕಾರ್ಮಿಕ ರಾಹುಲ್ (32) ಮಾರ್ಚ್ 30 ರಂದು ದಿಲ್ಶಾದ್ ಗಾರ್ಡನ್‌ನ ತಹಿರ್‌ಪುರದಲ್ಲಿ 8 ರಿಂದ 10 ಅಡಿ ಆಳದ ಚರಂಡಿಯನ್ನು ಹಸ್ತಚಾಲಿತವಾಗಿ ಹೂಳು ತೆಗೆಯುವಾಗ ಯಾವುದೇ ಸುರಕ್ಷತಾ...

ಗಾಝಾ | ಇಸ್ರೇಲ್ ದಾಳಿಯಲ್ಲಿ ಅಲ್‌-ಜಝೀರಾ ಪತ್ರಕರ್ತ ಸಾವು : ತೀವ್ರ ಖಂಡನೆ ವ್ಯಕ್ತಪಡಿಸಿದ ಮಾಧ್ಯಮ ಸಂಸ್ಥೆ

ಗಾಝಾ ಪಟ್ಟಿಯಲ್ಲಿ ಇಸ್ರೇಲ್ ನಡೆಸಿದ ಡ್ರೋನ್ ದಾಳಿಯಲ್ಲಿ ಅಲ್-ಜಝೀರಾ ಮಾಧ್ಯಮ ಸಂಸ್ಥೆಯ ಪತ್ರಕರ್ತ ಮೊಹಮ್ಮದ್ ವಿಶಾಹ್ ಸಾವನ್ನಪ್ಪಿದ್ದಾರೆ. ಗಾಝಾ ನಗರದ ಪಶ್ಚಿಮ ಭಾಗದಲ್ಲಿರುವ ಕರಾವಳಿ ರಸ್ತೆಯಾದ ಅಲ್-ರಶೀದ್ ಸ್ಟ್ರೀಟ್‌ನಲ್ಲಿ ಬುಧವಾರ (ಏ.8) ಕಾರಿನ...

ಅಸ್ಸಾಂ : ಮತದಾನದ ಹಿಂದಿನ ದಿನ ಪಕ್ಷಕ್ಕೆ ರಾಜೀನಾಮೆ ನೀಡಿದ ಕಾಂಗ್ರೆಸ್ ಅಭ್ಯರ್ಥಿ!

ಅಸ್ಸಾಂ ವಿಧಾನಸಭೆ ಚುನಾವಣೆಗೆ ಕೇವಲ ಒಂದು ದಿನ ಬಾಕಿ ಇರುವಾಗ, ಉದಲ್ಗುರಿ (ಎಸ್‌ಟಿ) ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುರೇನ್ ದೈಮರಿ ಅವರು ಪಕ್ಷಕ್ಕೆ ರಾಜೀನಾಮೆ ನೀಡಿ ತಮ್ಮ ಉಮೇದುವಾರಿಕೆಯನ್ನು ಹಿಂಪಡೆದಿದ್ದಾರೆ ಎಂದು ವರದಿಯಾಗಿದೆ. ಪಕ್ಷದ ನಾಯಕತ್ವದಿಂದ...

ವಿಧಾನಸಭೆ ಚುನಾವಣೆ : ಅಸ್ಸಾಂ, ಕೇರಳ, ಪುದುಚೇರಿಯಲ್ಲಿ ಇಂದು ಮತದಾನ

ಅಸ್ಸಾಂ, ಕೇರಳ ಮತ್ತು ಪುದುಚೇರಿ ವಿಧಾನಸಭೆಯ ಚುನಾವಣೆಯ ಮತದಾನ ಇಂದು (ಏ.9, 2026) ಒಂದೇ ಹಂತದಲ್ಲಿ ನಡೆಯಲಿದೆ. ಈಗಾಗಲೇ ಮತದಾನ ಆರಂಭಗೊಂಡಿದೆ. ಅಸ್ಸಾಂನ 126 ಸದಸ್ಯ ಬಲದ ವಿಧಾನಸಭೆಗೆ ನಡೆಯಲಿರುವ ಚುನಾವಣೆಯು...

‘ಯುದ್ಧ ಮುಂದುವರಿಸಲು ಸಾಧ್ಯವಾಗದೆ ಅಮೆರಿಕ ಬಲವಂತವಾಗಿ ಕದನ ವಿರಾಮ ಘೋಷಿಸಿತು’: ಭಾರತದಲ್ಲಿ ಇರಾನ್ ಸುಪ್ರೀಂ ಲೀಡರ್ ಪ್ರತಿನಿಧಿ

ನವದೆಹಲಿ: ಸಂಘರ್ಷವನ್ನು ಮುುಂದುವರಿಸಲು ವಿಫಲವಾದ ನಂತರ ಅಮೆರಿಕವು ಇರಾನ್ ಜೊತೆ ಕದನ ವಿರಾಮ ಘೋಷಿಸಲು ಒತ್ತಾಯಿಸಲ್ಪಟ್ಟಿತು ಮತ್ತು ನಿರಂತರ ಹಗೆತನವು ವಾಷಿಂಗ್ಟನ್‌ಗೆ ಮತ್ತಷ್ಟು ಹಿನ್ನಡೆಗೆ ಕಾರಣವಾಗುತ್ತಿತ್ತು ಎಂದು ಇರಾನ್‌ನ ಸರ್ವೋಚ್ಚ ನಾಯಕನ ಭಾರತದಲ್ಲಿನ...

ಶಾರದಾ ಚಿಟ್ ಫಂಡ್ ಹಗರಣ: 13 ವರ್ಷಗಳ ನಂತರ ಪ್ರಮುಖ ಆರೋಪಿ ಸುದೀಪ್ತ ಸೇನ್ ಗೆ ಜಾಮೀನು ಮಂಜೂರು ಮಾಡಿದ ಕೊಲ್ಕತ್ತಾ ಹೈಕೋರ್ಟ್

ಕೊಲ್ಕತ್ತಾ ಹೈಕೋರ್ಟ್ ಬುಧವಾರ ಬಹುಕೋಟಿ ಶಾರದಾ ಚಿಟ್ ಫಂಡ್ ಹಗರಣದ ಪ್ರಮುಖ ಆರೋಪಿ ಸುದೀಪ್ತ ಸೇನ್ ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದು, 13 ವರ್ಷಗಳ ನಂತರ ಜೈಲಿನಿಂದ ಬಿಡುಗಡೆಯಾಗಲು ದಾರಿ ಸುಗಮವಾಗಿದೆ. ಪಶ್ಚಿಮ...