Homeಮುಖಪುಟನಿತೀಶ್‌ ಕುಮಾರ್‌ರವರ ಮೇಲೆ ಗೌರವವಿದೆ. ಆದರೆ ಅವರಿಂದ ಬಿಹಾರದ ಅಭಿವೃಧ್ದಿ ಸಾಧ್ಯವಿಲ್ಲ - ಪ್ರಶಾಂತ್‌ ಕಿಶೋರ್‌

ನಿತೀಶ್‌ ಕುಮಾರ್‌ರವರ ಮೇಲೆ ಗೌರವವಿದೆ. ಆದರೆ ಅವರಿಂದ ಬಿಹಾರದ ಅಭಿವೃಧ್ದಿ ಸಾಧ್ಯವಿಲ್ಲ – ಪ್ರಶಾಂತ್‌ ಕಿಶೋರ್‌

- Advertisement -
- Advertisement -

’ಬಾತ್‌ ಬಿಹಾರ್‌ ಕಿ’ ಎಂಬ ಚಳವಳಿ ಹಮ್ಮಿಕೊಳ್ಳುವ ಮೂಲಕ ಬಿಹಾರವನ್ನು ಹತ್ತು ವರ್ಷಗಳಲ್ಲಿ ದೇಶದ ಅಭಿವೃದ್ದಿಹೊಂದಿದ ಹತ್ತು ರಾಜ್ಯಗಳಲ್ಲಿ ಒಂದಾಗಿಸುತ್ತೇನೆ ಎಂದು ಚುನಾವಣಾ ತಂತ್ರಜ್ಞ ಮತ್ತು ರಾಜಕಾರಣಿ ಪ್ರಶಾಂತ್‌ ಕಿಶೋರ್‌ ಪಣತೊಟ್ಟಿದ್ದಾರೆ.

ಕಳೆದ ತಿಂಗಳು ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ರವರು ಪ್ರಶಾಂತ್‌ ಕಿಶೋರ್‌ರವರನ್ನು ಜೆಡಿಯು ರಾಷ್ಟ್ರೀಯ ಉಪಾಧ್ಯಕ್ಷ ಸ್ಥಾನದಿಂದ ಉಚ್ಚಾಟನೆ ಮಾಡಿದ್ದರು. ಹಾಗಾಗಿ ಕಿಶೋರ್‌ ಬೇರೊಂದು ರಾಜಕೀಯ ಪಕ್ಷ / ಮೈತ್ರಿಕೂಟವನ್ನು ಸೇರುತ್ತಾರೆ, ಇಲ್ಲವೇ ಅವರೇ ಹೊಸ ಪಕ್ಷವನ್ನು ಹುಟ್ಟುಹಾಕುತ್ತಾರೆ ಎಂಬ ವದಂತಿಗಳಿದ್ದವು.

ಈಗ ಅವೆಲ್ಲವುಗಳನ್ನು ತಳ್ಳಿ ಹಾಕಿರುವ ಪ್ರಶಾಂತ್‌ ಕಿಶೋರ್‌ ಇಂದು ಪತ್ರಿಕಾಗೋಷ್ಠಿ ನಡೆಸಿ ನನಗೆ ಇನ್ನೊಂದು ರಾಜಕೀಯ ಪಕ್ಷ ಅಥವಾ ಒಕ್ಕೂಟಕ್ಕೆ ಸೇರುವ ಉದ್ದೇಶವಿಲ್ಲ … ನನ್ನ ಏಕೈಕ ಗಮನವೆಂದರೆ ಮುಂದಿನ 100 ದಿನಗಳಲ್ಲಿ ನಾನು ‘ಬಾತ್ ಬಿಹಾರ ಕಿ’ ಪ್ರಾರಂಭಿಸುತ್ತೇನೆ. ಇದರಲ್ಲಿ ಬಿಹಾರದ ಹೊಸ ದೃಷ್ಟಿಕೋನವನ್ನು ನಂಬುವ ಎಲ್ಲ ಜನರಿಗೂ ಅವಕಾಶವಿದೆ. ನಿತೀಶ್‌ ಕುಮಾರ್‌ ನಮ್ಮ ಜೊತೆ ಬಂದರೆ ಅವರಿಗೂ ಸ್ವಾಗತವಿದೆ. ರಾಜ್ಯದ 8800 ಪಂಚಾಯಿತಿಗಳಿಗೂ ಭೇಟಿ ಯುವ ಕಾರ್ಯಕರ್ತರನ್ನು ತಯಾರುಗೊಳಿಸಬೇಕಿದೆ ಎಂದಿದ್ದಾರೆ.


ಇದನ್ನು ಓದಿ: 2014ರಲ್ಲಿ ಮೋದಿ ಗೆಲುವಿಗಾಗಿ ದುಡಿದ ಈಗ ಮೋದಿ ವಿರುದ್ಧವೇ ತೊಡೆ ತಟ್ಟಿರುವ ಈ ಪ್ರಶಾಂತ್ ಕಿಶೋರ್ ಯಾರು?


ದೇಶದ ಹಲವು ರಾಜ್ಯಗಳಲ್ಲಿ ಬಿಹಾರದ ಜನ ಕೆಲಸ ಮಾಡುತ್ತಿದ್ದಾರೆ. ಸೂರತ್‌, ಮುಂಬೈ, ಕರ್ನಾಟಕಕ್ಕೆ ವಲಸೆ ಹೋಗುತ್ತಿದ್ದಾರೆ. ಆದರೆ ಅಲ್ಲಿನ ಜನರೇಕೆ ಬಿಹಾರಕ್ಕೆ ಬಂದು ಕೆಲಸ ಮಾಡುವುದಿಲ್ಲ? ಇದು ನಿತೀಶ್‌ ಕುಮಾರ್‌ರವರ ವಿರುದ್ಧದ ಹೋರಾಟವಲ್ಲ. ಬಿಹಾರವನ್ನು ಅಭಿವೃದ್ದಿಹೊಂದಿದ ರಾಜ್ಯವನ್ನಾಗಿಸುವುದು ನನ್ನ ಗುರಿ ಎಂದಿದ್ದಾರೆ.

“ಬಿಹಾರ ಕಳೆದ 15 ವರ್ಷಗಳಲ್ಲಿ ಪ್ರಗತಿ ಸಾಧಿಸಿದೆ. ಆದರೆ ಇತರ ರಾಜ್ಯಗಳಿಗೆ ಹೋಲಿಸಿದರೆ ಬಿಹಾರದ ಅಭಿವೃದ್ಧಿ ತೀರಾ ಕಡಿಮೆಯಾಗಿದೆ. ಅದು ಏಕೆ? ಭಾರತದಲ್ಲಿ ಜಾರ್ಖಂಡ್ ಹೊರತುಪಡಿಸಿದರೆ ಬಿಹಾರ ಇನ್ನೂ ಹೆಚ್ಚು ಹಿಂದುಳಿದ ರಾಜ್ಯವಾಗಿದೆ. 2005 ರಲ್ಲಿ ಬಿಹಾರ ಅತ್ಯಂತ ಬಡ ರಾಜ್ಯವಾಗಿತ್ತು ಮತ್ತು ಹಾಗೆಯೇ ಮುಂದುವರೆದಿದೆ ಎಂದು ಅವರು ಹೇಳಿದ್ದಾರೆ.

ಆರ್‌ಜೆಡಿ ಮುಖ್ಯಸ್ಥ ಲಾಲು ಯಾದವ್ ರವರ ಅಭಿವೃದ್ದಿ ಮತ್ತು ಹೀಗಿನ ನಿತೀಶ್‌ ಕುಮಾರ್‌ರವರ ಅಭಿವೃದ್ದಿ ಕುರಿತು ಮಾತನಾಡಿದ ಅವರು, ಹೌದು, ಲಾಲು ಜಿ ಅವರ ಸಮಯಕ್ಕಿತಂತ ಹೀಗಿನ ನಿತೀಶ್ ಜಿ ಅವರ ಸಮಯದಲ್ಲಿ ಗಮನಾರ್ಹ ಪ್ರಗತಿಯಾಗಿದೆ. ಆದರೆ ಗುಜರಾತ್, ಮಹಾರಾಷ್ಟ್ರ, ಹರಿಯಾಣ, ಕರ್ನಾಟಕ ಮತ್ತು ತಮಿಳುನಾಡಿಗೆ ಹೋಲಿಸಿದರೆ ಬಿಹಾರ ಎಲ್ಲಿ ನಿಂತಿದೆ ಎಂಬುದನ್ನು ನೀವು ಜನರಿಗೆ ತಿಳಿಸಬೇಕು ಎಂದು ಅವರು ಹೇಳಿದ್ದಾರೆ.

ನಿತೀಶ್‌ ಕುಮಾರ್‌ರವರ ಮೇಲೆ ನನಗೆ ಗೌರವವಿದೆ ಎನ್ನುತ್ತಲೇ ಚುಚ್ಚಿದ ಅವರು, ಬಿಜೆಪಿಯೊಂದಿಗಿನ ಮೈತ್ರಿಯಲ್ಲಿ ಉಳಿಯಲು ನಿತೀಶ್ ಕುಮಾರ್ ಅವರು ಸೈದ್ಧಾಂತಿಕ ರಾಜಿ ಮಾಡಿಕೊಳ್ಳುತ್ತಿದ್ದಾರೆ. ಮಹಾತ್ಮ ಗಾಂಧಿ ಮತ್ತು ಅವರ ಕೊಲೆಗಾರ ನಾಥುರಾಮ್ ಗೋಡ್ಸೆಗೆ ಇಬ್ಬರಿಗೂ ಏಕಕಾಲದಲ್ಲಿ ಬೆಂಬಲ ನೀಡಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.

“ನಿತೀಶ್ ಕುಮಾರ್ ನನ್ನನ್ನು ಮಗನಂತೆ ನೋಡಿದರು ಮತ್ತು ನಾನು ಅವರನ್ನು ಯಾವಾಗಲೂ ತಂದೆಯಂತೆ ನೋಡುತ್ತಿದ್ದೆ. ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದು ಅಥವಾ ನನ್ನನ್ನು ಹೊರಹಾಕುವುದಕ್ಕೆ ನಿತೀಶ್ ಕುಮಾರ್‌ರವರಿಗೆ ಅಧಿಕಾರವಿದೆ. ನಾನು ಅವರನ್ನು ಯಾವಾಗಲೂ ಗೌರವಿಸುತ್ತೇನೆ” ಎಂದು ಹೇಳಿದರು.

ಸಿಎಎಯನ್ನು ಸ್ಪಷ್ಟವಾಗಿ ವಿರೋಧಿಸಿದ್ದ ಕಿಶೋರ್‌ ಈ ಕುರಿತು ತಮ್ಮ ಜೆಡಿಯು ಪಕ್ಷದ ನಿಲುವನ್ನು ಬಹಿರಂಗವಾಗಿ ಹಲವು ಬಾರಿ ಟೀಕಿಸಿದ್ದರು. ಹಾಗಾಗಿ ಅವರನ್ನು ಹೊರಹಾಕಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಸ್ಕರ್‌ 2026 : ಮೈಕೆಲ್ ಬಿ. ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ, ಒನ್ ಬ್ಯಾಟಲ್ ಆಫ್ಟರ್ ಅನದರ್‌ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

ಪ್ರತಿಷ್ಠಿತ 98ನೇ ಅಕಾಡೆಮಿ ಪ್ರಶಸ್ತಿ (ಆಸ್ಕರ್ 2026) ಸಮಾರಂಭ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಮಾರ್ಚ್ 15ರಂದು (ಭಾರತೀಯ ಕಾಲಮಾನ ಮಾರ್ಚ್ 16) ನಡೆಯಿತು. ಖ್ಯಾತ ಹಾಸ್ಯನಟ ಕೋನನ್ ಒಬ್ರೇನ್ ಅವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು....

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...