Homeಮುಖಪುಟನಿತೀಶ್‌ ಕುಮಾರ್‌ರವರ ಮೇಲೆ ಗೌರವವಿದೆ. ಆದರೆ ಅವರಿಂದ ಬಿಹಾರದ ಅಭಿವೃಧ್ದಿ ಸಾಧ್ಯವಿಲ್ಲ - ಪ್ರಶಾಂತ್‌ ಕಿಶೋರ್‌

ನಿತೀಶ್‌ ಕುಮಾರ್‌ರವರ ಮೇಲೆ ಗೌರವವಿದೆ. ಆದರೆ ಅವರಿಂದ ಬಿಹಾರದ ಅಭಿವೃಧ್ದಿ ಸಾಧ್ಯವಿಲ್ಲ – ಪ್ರಶಾಂತ್‌ ಕಿಶೋರ್‌

- Advertisement -
- Advertisement -

’ಬಾತ್‌ ಬಿಹಾರ್‌ ಕಿ’ ಎಂಬ ಚಳವಳಿ ಹಮ್ಮಿಕೊಳ್ಳುವ ಮೂಲಕ ಬಿಹಾರವನ್ನು ಹತ್ತು ವರ್ಷಗಳಲ್ಲಿ ದೇಶದ ಅಭಿವೃದ್ದಿಹೊಂದಿದ ಹತ್ತು ರಾಜ್ಯಗಳಲ್ಲಿ ಒಂದಾಗಿಸುತ್ತೇನೆ ಎಂದು ಚುನಾವಣಾ ತಂತ್ರಜ್ಞ ಮತ್ತು ರಾಜಕಾರಣಿ ಪ್ರಶಾಂತ್‌ ಕಿಶೋರ್‌ ಪಣತೊಟ್ಟಿದ್ದಾರೆ.

ಕಳೆದ ತಿಂಗಳು ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ರವರು ಪ್ರಶಾಂತ್‌ ಕಿಶೋರ್‌ರವರನ್ನು ಜೆಡಿಯು ರಾಷ್ಟ್ರೀಯ ಉಪಾಧ್ಯಕ್ಷ ಸ್ಥಾನದಿಂದ ಉಚ್ಚಾಟನೆ ಮಾಡಿದ್ದರು. ಹಾಗಾಗಿ ಕಿಶೋರ್‌ ಬೇರೊಂದು ರಾಜಕೀಯ ಪಕ್ಷ / ಮೈತ್ರಿಕೂಟವನ್ನು ಸೇರುತ್ತಾರೆ, ಇಲ್ಲವೇ ಅವರೇ ಹೊಸ ಪಕ್ಷವನ್ನು ಹುಟ್ಟುಹಾಕುತ್ತಾರೆ ಎಂಬ ವದಂತಿಗಳಿದ್ದವು.

ಈಗ ಅವೆಲ್ಲವುಗಳನ್ನು ತಳ್ಳಿ ಹಾಕಿರುವ ಪ್ರಶಾಂತ್‌ ಕಿಶೋರ್‌ ಇಂದು ಪತ್ರಿಕಾಗೋಷ್ಠಿ ನಡೆಸಿ ನನಗೆ ಇನ್ನೊಂದು ರಾಜಕೀಯ ಪಕ್ಷ ಅಥವಾ ಒಕ್ಕೂಟಕ್ಕೆ ಸೇರುವ ಉದ್ದೇಶವಿಲ್ಲ … ನನ್ನ ಏಕೈಕ ಗಮನವೆಂದರೆ ಮುಂದಿನ 100 ದಿನಗಳಲ್ಲಿ ನಾನು ‘ಬಾತ್ ಬಿಹಾರ ಕಿ’ ಪ್ರಾರಂಭಿಸುತ್ತೇನೆ. ಇದರಲ್ಲಿ ಬಿಹಾರದ ಹೊಸ ದೃಷ್ಟಿಕೋನವನ್ನು ನಂಬುವ ಎಲ್ಲ ಜನರಿಗೂ ಅವಕಾಶವಿದೆ. ನಿತೀಶ್‌ ಕುಮಾರ್‌ ನಮ್ಮ ಜೊತೆ ಬಂದರೆ ಅವರಿಗೂ ಸ್ವಾಗತವಿದೆ. ರಾಜ್ಯದ 8800 ಪಂಚಾಯಿತಿಗಳಿಗೂ ಭೇಟಿ ಯುವ ಕಾರ್ಯಕರ್ತರನ್ನು ತಯಾರುಗೊಳಿಸಬೇಕಿದೆ ಎಂದಿದ್ದಾರೆ.


ಇದನ್ನು ಓದಿ: 2014ರಲ್ಲಿ ಮೋದಿ ಗೆಲುವಿಗಾಗಿ ದುಡಿದ ಈಗ ಮೋದಿ ವಿರುದ್ಧವೇ ತೊಡೆ ತಟ್ಟಿರುವ ಈ ಪ್ರಶಾಂತ್ ಕಿಶೋರ್ ಯಾರು?


ದೇಶದ ಹಲವು ರಾಜ್ಯಗಳಲ್ಲಿ ಬಿಹಾರದ ಜನ ಕೆಲಸ ಮಾಡುತ್ತಿದ್ದಾರೆ. ಸೂರತ್‌, ಮುಂಬೈ, ಕರ್ನಾಟಕಕ್ಕೆ ವಲಸೆ ಹೋಗುತ್ತಿದ್ದಾರೆ. ಆದರೆ ಅಲ್ಲಿನ ಜನರೇಕೆ ಬಿಹಾರಕ್ಕೆ ಬಂದು ಕೆಲಸ ಮಾಡುವುದಿಲ್ಲ? ಇದು ನಿತೀಶ್‌ ಕುಮಾರ್‌ರವರ ವಿರುದ್ಧದ ಹೋರಾಟವಲ್ಲ. ಬಿಹಾರವನ್ನು ಅಭಿವೃದ್ದಿಹೊಂದಿದ ರಾಜ್ಯವನ್ನಾಗಿಸುವುದು ನನ್ನ ಗುರಿ ಎಂದಿದ್ದಾರೆ.

“ಬಿಹಾರ ಕಳೆದ 15 ವರ್ಷಗಳಲ್ಲಿ ಪ್ರಗತಿ ಸಾಧಿಸಿದೆ. ಆದರೆ ಇತರ ರಾಜ್ಯಗಳಿಗೆ ಹೋಲಿಸಿದರೆ ಬಿಹಾರದ ಅಭಿವೃದ್ಧಿ ತೀರಾ ಕಡಿಮೆಯಾಗಿದೆ. ಅದು ಏಕೆ? ಭಾರತದಲ್ಲಿ ಜಾರ್ಖಂಡ್ ಹೊರತುಪಡಿಸಿದರೆ ಬಿಹಾರ ಇನ್ನೂ ಹೆಚ್ಚು ಹಿಂದುಳಿದ ರಾಜ್ಯವಾಗಿದೆ. 2005 ರಲ್ಲಿ ಬಿಹಾರ ಅತ್ಯಂತ ಬಡ ರಾಜ್ಯವಾಗಿತ್ತು ಮತ್ತು ಹಾಗೆಯೇ ಮುಂದುವರೆದಿದೆ ಎಂದು ಅವರು ಹೇಳಿದ್ದಾರೆ.

ಆರ್‌ಜೆಡಿ ಮುಖ್ಯಸ್ಥ ಲಾಲು ಯಾದವ್ ರವರ ಅಭಿವೃದ್ದಿ ಮತ್ತು ಹೀಗಿನ ನಿತೀಶ್‌ ಕುಮಾರ್‌ರವರ ಅಭಿವೃದ್ದಿ ಕುರಿತು ಮಾತನಾಡಿದ ಅವರು, ಹೌದು, ಲಾಲು ಜಿ ಅವರ ಸಮಯಕ್ಕಿತಂತ ಹೀಗಿನ ನಿತೀಶ್ ಜಿ ಅವರ ಸಮಯದಲ್ಲಿ ಗಮನಾರ್ಹ ಪ್ರಗತಿಯಾಗಿದೆ. ಆದರೆ ಗುಜರಾತ್, ಮಹಾರಾಷ್ಟ್ರ, ಹರಿಯಾಣ, ಕರ್ನಾಟಕ ಮತ್ತು ತಮಿಳುನಾಡಿಗೆ ಹೋಲಿಸಿದರೆ ಬಿಹಾರ ಎಲ್ಲಿ ನಿಂತಿದೆ ಎಂಬುದನ್ನು ನೀವು ಜನರಿಗೆ ತಿಳಿಸಬೇಕು ಎಂದು ಅವರು ಹೇಳಿದ್ದಾರೆ.

ನಿತೀಶ್‌ ಕುಮಾರ್‌ರವರ ಮೇಲೆ ನನಗೆ ಗೌರವವಿದೆ ಎನ್ನುತ್ತಲೇ ಚುಚ್ಚಿದ ಅವರು, ಬಿಜೆಪಿಯೊಂದಿಗಿನ ಮೈತ್ರಿಯಲ್ಲಿ ಉಳಿಯಲು ನಿತೀಶ್ ಕುಮಾರ್ ಅವರು ಸೈದ್ಧಾಂತಿಕ ರಾಜಿ ಮಾಡಿಕೊಳ್ಳುತ್ತಿದ್ದಾರೆ. ಮಹಾತ್ಮ ಗಾಂಧಿ ಮತ್ತು ಅವರ ಕೊಲೆಗಾರ ನಾಥುರಾಮ್ ಗೋಡ್ಸೆಗೆ ಇಬ್ಬರಿಗೂ ಏಕಕಾಲದಲ್ಲಿ ಬೆಂಬಲ ನೀಡಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.

“ನಿತೀಶ್ ಕುಮಾರ್ ನನ್ನನ್ನು ಮಗನಂತೆ ನೋಡಿದರು ಮತ್ತು ನಾನು ಅವರನ್ನು ಯಾವಾಗಲೂ ತಂದೆಯಂತೆ ನೋಡುತ್ತಿದ್ದೆ. ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದು ಅಥವಾ ನನ್ನನ್ನು ಹೊರಹಾಕುವುದಕ್ಕೆ ನಿತೀಶ್ ಕುಮಾರ್‌ರವರಿಗೆ ಅಧಿಕಾರವಿದೆ. ನಾನು ಅವರನ್ನು ಯಾವಾಗಲೂ ಗೌರವಿಸುತ್ತೇನೆ” ಎಂದು ಹೇಳಿದರು.

ಸಿಎಎಯನ್ನು ಸ್ಪಷ್ಟವಾಗಿ ವಿರೋಧಿಸಿದ್ದ ಕಿಶೋರ್‌ ಈ ಕುರಿತು ತಮ್ಮ ಜೆಡಿಯು ಪಕ್ಷದ ನಿಲುವನ್ನು ಬಹಿರಂಗವಾಗಿ ಹಲವು ಬಾರಿ ಟೀಕಿಸಿದ್ದರು. ಹಾಗಾಗಿ ಅವರನ್ನು ಹೊರಹಾಕಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...