Homeಮುಖಪುಟನಿತೀಶ್‌ ಕುಮಾರ್‌ರವರ ಮೇಲೆ ಗೌರವವಿದೆ. ಆದರೆ ಅವರಿಂದ ಬಿಹಾರದ ಅಭಿವೃಧ್ದಿ ಸಾಧ್ಯವಿಲ್ಲ - ಪ್ರಶಾಂತ್‌ ಕಿಶೋರ್‌

ನಿತೀಶ್‌ ಕುಮಾರ್‌ರವರ ಮೇಲೆ ಗೌರವವಿದೆ. ಆದರೆ ಅವರಿಂದ ಬಿಹಾರದ ಅಭಿವೃಧ್ದಿ ಸಾಧ್ಯವಿಲ್ಲ – ಪ್ರಶಾಂತ್‌ ಕಿಶೋರ್‌

- Advertisement -
- Advertisement -

’ಬಾತ್‌ ಬಿಹಾರ್‌ ಕಿ’ ಎಂಬ ಚಳವಳಿ ಹಮ್ಮಿಕೊಳ್ಳುವ ಮೂಲಕ ಬಿಹಾರವನ್ನು ಹತ್ತು ವರ್ಷಗಳಲ್ಲಿ ದೇಶದ ಅಭಿವೃದ್ದಿಹೊಂದಿದ ಹತ್ತು ರಾಜ್ಯಗಳಲ್ಲಿ ಒಂದಾಗಿಸುತ್ತೇನೆ ಎಂದು ಚುನಾವಣಾ ತಂತ್ರಜ್ಞ ಮತ್ತು ರಾಜಕಾರಣಿ ಪ್ರಶಾಂತ್‌ ಕಿಶೋರ್‌ ಪಣತೊಟ್ಟಿದ್ದಾರೆ.

ಕಳೆದ ತಿಂಗಳು ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ರವರು ಪ್ರಶಾಂತ್‌ ಕಿಶೋರ್‌ರವರನ್ನು ಜೆಡಿಯು ರಾಷ್ಟ್ರೀಯ ಉಪಾಧ್ಯಕ್ಷ ಸ್ಥಾನದಿಂದ ಉಚ್ಚಾಟನೆ ಮಾಡಿದ್ದರು. ಹಾಗಾಗಿ ಕಿಶೋರ್‌ ಬೇರೊಂದು ರಾಜಕೀಯ ಪಕ್ಷ / ಮೈತ್ರಿಕೂಟವನ್ನು ಸೇರುತ್ತಾರೆ, ಇಲ್ಲವೇ ಅವರೇ ಹೊಸ ಪಕ್ಷವನ್ನು ಹುಟ್ಟುಹಾಕುತ್ತಾರೆ ಎಂಬ ವದಂತಿಗಳಿದ್ದವು.

ಈಗ ಅವೆಲ್ಲವುಗಳನ್ನು ತಳ್ಳಿ ಹಾಕಿರುವ ಪ್ರಶಾಂತ್‌ ಕಿಶೋರ್‌ ಇಂದು ಪತ್ರಿಕಾಗೋಷ್ಠಿ ನಡೆಸಿ ನನಗೆ ಇನ್ನೊಂದು ರಾಜಕೀಯ ಪಕ್ಷ ಅಥವಾ ಒಕ್ಕೂಟಕ್ಕೆ ಸೇರುವ ಉದ್ದೇಶವಿಲ್ಲ … ನನ್ನ ಏಕೈಕ ಗಮನವೆಂದರೆ ಮುಂದಿನ 100 ದಿನಗಳಲ್ಲಿ ನಾನು ‘ಬಾತ್ ಬಿಹಾರ ಕಿ’ ಪ್ರಾರಂಭಿಸುತ್ತೇನೆ. ಇದರಲ್ಲಿ ಬಿಹಾರದ ಹೊಸ ದೃಷ್ಟಿಕೋನವನ್ನು ನಂಬುವ ಎಲ್ಲ ಜನರಿಗೂ ಅವಕಾಶವಿದೆ. ನಿತೀಶ್‌ ಕುಮಾರ್‌ ನಮ್ಮ ಜೊತೆ ಬಂದರೆ ಅವರಿಗೂ ಸ್ವಾಗತವಿದೆ. ರಾಜ್ಯದ 8800 ಪಂಚಾಯಿತಿಗಳಿಗೂ ಭೇಟಿ ಯುವ ಕಾರ್ಯಕರ್ತರನ್ನು ತಯಾರುಗೊಳಿಸಬೇಕಿದೆ ಎಂದಿದ್ದಾರೆ.


ಇದನ್ನು ಓದಿ: 2014ರಲ್ಲಿ ಮೋದಿ ಗೆಲುವಿಗಾಗಿ ದುಡಿದ ಈಗ ಮೋದಿ ವಿರುದ್ಧವೇ ತೊಡೆ ತಟ್ಟಿರುವ ಈ ಪ್ರಶಾಂತ್ ಕಿಶೋರ್ ಯಾರು?


ದೇಶದ ಹಲವು ರಾಜ್ಯಗಳಲ್ಲಿ ಬಿಹಾರದ ಜನ ಕೆಲಸ ಮಾಡುತ್ತಿದ್ದಾರೆ. ಸೂರತ್‌, ಮುಂಬೈ, ಕರ್ನಾಟಕಕ್ಕೆ ವಲಸೆ ಹೋಗುತ್ತಿದ್ದಾರೆ. ಆದರೆ ಅಲ್ಲಿನ ಜನರೇಕೆ ಬಿಹಾರಕ್ಕೆ ಬಂದು ಕೆಲಸ ಮಾಡುವುದಿಲ್ಲ? ಇದು ನಿತೀಶ್‌ ಕುಮಾರ್‌ರವರ ವಿರುದ್ಧದ ಹೋರಾಟವಲ್ಲ. ಬಿಹಾರವನ್ನು ಅಭಿವೃದ್ದಿಹೊಂದಿದ ರಾಜ್ಯವನ್ನಾಗಿಸುವುದು ನನ್ನ ಗುರಿ ಎಂದಿದ್ದಾರೆ.

“ಬಿಹಾರ ಕಳೆದ 15 ವರ್ಷಗಳಲ್ಲಿ ಪ್ರಗತಿ ಸಾಧಿಸಿದೆ. ಆದರೆ ಇತರ ರಾಜ್ಯಗಳಿಗೆ ಹೋಲಿಸಿದರೆ ಬಿಹಾರದ ಅಭಿವೃದ್ಧಿ ತೀರಾ ಕಡಿಮೆಯಾಗಿದೆ. ಅದು ಏಕೆ? ಭಾರತದಲ್ಲಿ ಜಾರ್ಖಂಡ್ ಹೊರತುಪಡಿಸಿದರೆ ಬಿಹಾರ ಇನ್ನೂ ಹೆಚ್ಚು ಹಿಂದುಳಿದ ರಾಜ್ಯವಾಗಿದೆ. 2005 ರಲ್ಲಿ ಬಿಹಾರ ಅತ್ಯಂತ ಬಡ ರಾಜ್ಯವಾಗಿತ್ತು ಮತ್ತು ಹಾಗೆಯೇ ಮುಂದುವರೆದಿದೆ ಎಂದು ಅವರು ಹೇಳಿದ್ದಾರೆ.

ಆರ್‌ಜೆಡಿ ಮುಖ್ಯಸ್ಥ ಲಾಲು ಯಾದವ್ ರವರ ಅಭಿವೃದ್ದಿ ಮತ್ತು ಹೀಗಿನ ನಿತೀಶ್‌ ಕುಮಾರ್‌ರವರ ಅಭಿವೃದ್ದಿ ಕುರಿತು ಮಾತನಾಡಿದ ಅವರು, ಹೌದು, ಲಾಲು ಜಿ ಅವರ ಸಮಯಕ್ಕಿತಂತ ಹೀಗಿನ ನಿತೀಶ್ ಜಿ ಅವರ ಸಮಯದಲ್ಲಿ ಗಮನಾರ್ಹ ಪ್ರಗತಿಯಾಗಿದೆ. ಆದರೆ ಗುಜರಾತ್, ಮಹಾರಾಷ್ಟ್ರ, ಹರಿಯಾಣ, ಕರ್ನಾಟಕ ಮತ್ತು ತಮಿಳುನಾಡಿಗೆ ಹೋಲಿಸಿದರೆ ಬಿಹಾರ ಎಲ್ಲಿ ನಿಂತಿದೆ ಎಂಬುದನ್ನು ನೀವು ಜನರಿಗೆ ತಿಳಿಸಬೇಕು ಎಂದು ಅವರು ಹೇಳಿದ್ದಾರೆ.

ನಿತೀಶ್‌ ಕುಮಾರ್‌ರವರ ಮೇಲೆ ನನಗೆ ಗೌರವವಿದೆ ಎನ್ನುತ್ತಲೇ ಚುಚ್ಚಿದ ಅವರು, ಬಿಜೆಪಿಯೊಂದಿಗಿನ ಮೈತ್ರಿಯಲ್ಲಿ ಉಳಿಯಲು ನಿತೀಶ್ ಕುಮಾರ್ ಅವರು ಸೈದ್ಧಾಂತಿಕ ರಾಜಿ ಮಾಡಿಕೊಳ್ಳುತ್ತಿದ್ದಾರೆ. ಮಹಾತ್ಮ ಗಾಂಧಿ ಮತ್ತು ಅವರ ಕೊಲೆಗಾರ ನಾಥುರಾಮ್ ಗೋಡ್ಸೆಗೆ ಇಬ್ಬರಿಗೂ ಏಕಕಾಲದಲ್ಲಿ ಬೆಂಬಲ ನೀಡಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.

“ನಿತೀಶ್ ಕುಮಾರ್ ನನ್ನನ್ನು ಮಗನಂತೆ ನೋಡಿದರು ಮತ್ತು ನಾನು ಅವರನ್ನು ಯಾವಾಗಲೂ ತಂದೆಯಂತೆ ನೋಡುತ್ತಿದ್ದೆ. ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದು ಅಥವಾ ನನ್ನನ್ನು ಹೊರಹಾಕುವುದಕ್ಕೆ ನಿತೀಶ್ ಕುಮಾರ್‌ರವರಿಗೆ ಅಧಿಕಾರವಿದೆ. ನಾನು ಅವರನ್ನು ಯಾವಾಗಲೂ ಗೌರವಿಸುತ್ತೇನೆ” ಎಂದು ಹೇಳಿದರು.

ಸಿಎಎಯನ್ನು ಸ್ಪಷ್ಟವಾಗಿ ವಿರೋಧಿಸಿದ್ದ ಕಿಶೋರ್‌ ಈ ಕುರಿತು ತಮ್ಮ ಜೆಡಿಯು ಪಕ್ಷದ ನಿಲುವನ್ನು ಬಹಿರಂಗವಾಗಿ ಹಲವು ಬಾರಿ ಟೀಕಿಸಿದ್ದರು. ಹಾಗಾಗಿ ಅವರನ್ನು ಹೊರಹಾಕಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...