Homeಮುಖಪುಟನಿತೀಶ್‌ ಕುಮಾರ್‌ರವರ ಮೇಲೆ ಗೌರವವಿದೆ. ಆದರೆ ಅವರಿಂದ ಬಿಹಾರದ ಅಭಿವೃಧ್ದಿ ಸಾಧ್ಯವಿಲ್ಲ - ಪ್ರಶಾಂತ್‌ ಕಿಶೋರ್‌

ನಿತೀಶ್‌ ಕುಮಾರ್‌ರವರ ಮೇಲೆ ಗೌರವವಿದೆ. ಆದರೆ ಅವರಿಂದ ಬಿಹಾರದ ಅಭಿವೃಧ್ದಿ ಸಾಧ್ಯವಿಲ್ಲ – ಪ್ರಶಾಂತ್‌ ಕಿಶೋರ್‌

- Advertisement -
- Advertisement -

’ಬಾತ್‌ ಬಿಹಾರ್‌ ಕಿ’ ಎಂಬ ಚಳವಳಿ ಹಮ್ಮಿಕೊಳ್ಳುವ ಮೂಲಕ ಬಿಹಾರವನ್ನು ಹತ್ತು ವರ್ಷಗಳಲ್ಲಿ ದೇಶದ ಅಭಿವೃದ್ದಿಹೊಂದಿದ ಹತ್ತು ರಾಜ್ಯಗಳಲ್ಲಿ ಒಂದಾಗಿಸುತ್ತೇನೆ ಎಂದು ಚುನಾವಣಾ ತಂತ್ರಜ್ಞ ಮತ್ತು ರಾಜಕಾರಣಿ ಪ್ರಶಾಂತ್‌ ಕಿಶೋರ್‌ ಪಣತೊಟ್ಟಿದ್ದಾರೆ.

ಕಳೆದ ತಿಂಗಳು ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ರವರು ಪ್ರಶಾಂತ್‌ ಕಿಶೋರ್‌ರವರನ್ನು ಜೆಡಿಯು ರಾಷ್ಟ್ರೀಯ ಉಪಾಧ್ಯಕ್ಷ ಸ್ಥಾನದಿಂದ ಉಚ್ಚಾಟನೆ ಮಾಡಿದ್ದರು. ಹಾಗಾಗಿ ಕಿಶೋರ್‌ ಬೇರೊಂದು ರಾಜಕೀಯ ಪಕ್ಷ / ಮೈತ್ರಿಕೂಟವನ್ನು ಸೇರುತ್ತಾರೆ, ಇಲ್ಲವೇ ಅವರೇ ಹೊಸ ಪಕ್ಷವನ್ನು ಹುಟ್ಟುಹಾಕುತ್ತಾರೆ ಎಂಬ ವದಂತಿಗಳಿದ್ದವು.

ಈಗ ಅವೆಲ್ಲವುಗಳನ್ನು ತಳ್ಳಿ ಹಾಕಿರುವ ಪ್ರಶಾಂತ್‌ ಕಿಶೋರ್‌ ಇಂದು ಪತ್ರಿಕಾಗೋಷ್ಠಿ ನಡೆಸಿ ನನಗೆ ಇನ್ನೊಂದು ರಾಜಕೀಯ ಪಕ್ಷ ಅಥವಾ ಒಕ್ಕೂಟಕ್ಕೆ ಸೇರುವ ಉದ್ದೇಶವಿಲ್ಲ … ನನ್ನ ಏಕೈಕ ಗಮನವೆಂದರೆ ಮುಂದಿನ 100 ದಿನಗಳಲ್ಲಿ ನಾನು ‘ಬಾತ್ ಬಿಹಾರ ಕಿ’ ಪ್ರಾರಂಭಿಸುತ್ತೇನೆ. ಇದರಲ್ಲಿ ಬಿಹಾರದ ಹೊಸ ದೃಷ್ಟಿಕೋನವನ್ನು ನಂಬುವ ಎಲ್ಲ ಜನರಿಗೂ ಅವಕಾಶವಿದೆ. ನಿತೀಶ್‌ ಕುಮಾರ್‌ ನಮ್ಮ ಜೊತೆ ಬಂದರೆ ಅವರಿಗೂ ಸ್ವಾಗತವಿದೆ. ರಾಜ್ಯದ 8800 ಪಂಚಾಯಿತಿಗಳಿಗೂ ಭೇಟಿ ಯುವ ಕಾರ್ಯಕರ್ತರನ್ನು ತಯಾರುಗೊಳಿಸಬೇಕಿದೆ ಎಂದಿದ್ದಾರೆ.


ಇದನ್ನು ಓದಿ: 2014ರಲ್ಲಿ ಮೋದಿ ಗೆಲುವಿಗಾಗಿ ದುಡಿದ ಈಗ ಮೋದಿ ವಿರುದ್ಧವೇ ತೊಡೆ ತಟ್ಟಿರುವ ಈ ಪ್ರಶಾಂತ್ ಕಿಶೋರ್ ಯಾರು?


ದೇಶದ ಹಲವು ರಾಜ್ಯಗಳಲ್ಲಿ ಬಿಹಾರದ ಜನ ಕೆಲಸ ಮಾಡುತ್ತಿದ್ದಾರೆ. ಸೂರತ್‌, ಮುಂಬೈ, ಕರ್ನಾಟಕಕ್ಕೆ ವಲಸೆ ಹೋಗುತ್ತಿದ್ದಾರೆ. ಆದರೆ ಅಲ್ಲಿನ ಜನರೇಕೆ ಬಿಹಾರಕ್ಕೆ ಬಂದು ಕೆಲಸ ಮಾಡುವುದಿಲ್ಲ? ಇದು ನಿತೀಶ್‌ ಕುಮಾರ್‌ರವರ ವಿರುದ್ಧದ ಹೋರಾಟವಲ್ಲ. ಬಿಹಾರವನ್ನು ಅಭಿವೃದ್ದಿಹೊಂದಿದ ರಾಜ್ಯವನ್ನಾಗಿಸುವುದು ನನ್ನ ಗುರಿ ಎಂದಿದ್ದಾರೆ.

“ಬಿಹಾರ ಕಳೆದ 15 ವರ್ಷಗಳಲ್ಲಿ ಪ್ರಗತಿ ಸಾಧಿಸಿದೆ. ಆದರೆ ಇತರ ರಾಜ್ಯಗಳಿಗೆ ಹೋಲಿಸಿದರೆ ಬಿಹಾರದ ಅಭಿವೃದ್ಧಿ ತೀರಾ ಕಡಿಮೆಯಾಗಿದೆ. ಅದು ಏಕೆ? ಭಾರತದಲ್ಲಿ ಜಾರ್ಖಂಡ್ ಹೊರತುಪಡಿಸಿದರೆ ಬಿಹಾರ ಇನ್ನೂ ಹೆಚ್ಚು ಹಿಂದುಳಿದ ರಾಜ್ಯವಾಗಿದೆ. 2005 ರಲ್ಲಿ ಬಿಹಾರ ಅತ್ಯಂತ ಬಡ ರಾಜ್ಯವಾಗಿತ್ತು ಮತ್ತು ಹಾಗೆಯೇ ಮುಂದುವರೆದಿದೆ ಎಂದು ಅವರು ಹೇಳಿದ್ದಾರೆ.

ಆರ್‌ಜೆಡಿ ಮುಖ್ಯಸ್ಥ ಲಾಲು ಯಾದವ್ ರವರ ಅಭಿವೃದ್ದಿ ಮತ್ತು ಹೀಗಿನ ನಿತೀಶ್‌ ಕುಮಾರ್‌ರವರ ಅಭಿವೃದ್ದಿ ಕುರಿತು ಮಾತನಾಡಿದ ಅವರು, ಹೌದು, ಲಾಲು ಜಿ ಅವರ ಸಮಯಕ್ಕಿತಂತ ಹೀಗಿನ ನಿತೀಶ್ ಜಿ ಅವರ ಸಮಯದಲ್ಲಿ ಗಮನಾರ್ಹ ಪ್ರಗತಿಯಾಗಿದೆ. ಆದರೆ ಗುಜರಾತ್, ಮಹಾರಾಷ್ಟ್ರ, ಹರಿಯಾಣ, ಕರ್ನಾಟಕ ಮತ್ತು ತಮಿಳುನಾಡಿಗೆ ಹೋಲಿಸಿದರೆ ಬಿಹಾರ ಎಲ್ಲಿ ನಿಂತಿದೆ ಎಂಬುದನ್ನು ನೀವು ಜನರಿಗೆ ತಿಳಿಸಬೇಕು ಎಂದು ಅವರು ಹೇಳಿದ್ದಾರೆ.

ನಿತೀಶ್‌ ಕುಮಾರ್‌ರವರ ಮೇಲೆ ನನಗೆ ಗೌರವವಿದೆ ಎನ್ನುತ್ತಲೇ ಚುಚ್ಚಿದ ಅವರು, ಬಿಜೆಪಿಯೊಂದಿಗಿನ ಮೈತ್ರಿಯಲ್ಲಿ ಉಳಿಯಲು ನಿತೀಶ್ ಕುಮಾರ್ ಅವರು ಸೈದ್ಧಾಂತಿಕ ರಾಜಿ ಮಾಡಿಕೊಳ್ಳುತ್ತಿದ್ದಾರೆ. ಮಹಾತ್ಮ ಗಾಂಧಿ ಮತ್ತು ಅವರ ಕೊಲೆಗಾರ ನಾಥುರಾಮ್ ಗೋಡ್ಸೆಗೆ ಇಬ್ಬರಿಗೂ ಏಕಕಾಲದಲ್ಲಿ ಬೆಂಬಲ ನೀಡಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.

“ನಿತೀಶ್ ಕುಮಾರ್ ನನ್ನನ್ನು ಮಗನಂತೆ ನೋಡಿದರು ಮತ್ತು ನಾನು ಅವರನ್ನು ಯಾವಾಗಲೂ ತಂದೆಯಂತೆ ನೋಡುತ್ತಿದ್ದೆ. ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದು ಅಥವಾ ನನ್ನನ್ನು ಹೊರಹಾಕುವುದಕ್ಕೆ ನಿತೀಶ್ ಕುಮಾರ್‌ರವರಿಗೆ ಅಧಿಕಾರವಿದೆ. ನಾನು ಅವರನ್ನು ಯಾವಾಗಲೂ ಗೌರವಿಸುತ್ತೇನೆ” ಎಂದು ಹೇಳಿದರು.

ಸಿಎಎಯನ್ನು ಸ್ಪಷ್ಟವಾಗಿ ವಿರೋಧಿಸಿದ್ದ ಕಿಶೋರ್‌ ಈ ಕುರಿತು ತಮ್ಮ ಜೆಡಿಯು ಪಕ್ಷದ ನಿಲುವನ್ನು ಬಹಿರಂಗವಾಗಿ ಹಲವು ಬಾರಿ ಟೀಕಿಸಿದ್ದರು. ಹಾಗಾಗಿ ಅವರನ್ನು ಹೊರಹಾಕಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...