Homeಮುಖಪುಟಪೊಲ್ಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣ: 9 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣ: 9 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

- Advertisement -
- Advertisement -

ತಮಿಳುನಾಡಿನ ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣದ ಒಂಬತ್ತು ಅಪರಾಧಿಗಳಿಗೆ ಕೊಯಮತ್ತೂರಿನ ಮಹಿಳಾ ನ್ಯಾಯಾಲಯ ಮಂಗಳವಾರ (ಮೇ 13) ಜೀವಾವಧಿ ಶಿಕ್ಷೆ ವಿಧಿಸಿದೆ.

ಆರು ವರ್ಷಗಳ ಹಿಂದೆ ತಮಿಳುನಾಡನ್ನು ಬೆಚ್ಚಿಬೀಳಿಸಿದ್ದ ಪ್ರಕರಣದ ತೀರ್ಪನ್ನು ನ್ಯಾಯಾಧೀಶೆ ಆರ್. ನಂದಿನಿ ದೇವಿ ಪ್ರಕಟಿಸಿದ್ದಾರೆ. ಸಂತ್ರಸ್ತ ಮಹಿಳೆಯರಿಗೆ ಒಟ್ಟು 85 ಲಕ್ಷ ರೂಪಾಯಿ ಪರಿಹಾರ ನೀಡುವಂತೆಯೂ ಆದೇಶಿಸಿದ್ದಾರೆ.

ಪ್ರಕರಣದ ಆರೋಪಿಗಳಾಗಿದ್ದ ಕೆ. ತಿರುನಾವುಕ್ಕರಸು (34), ಎನ್. ರಿಶ್ವಂತ್ ಅಲಿಯಾಸ್ ಶಬರಿರಾಜನ್ (32), ಎಂ. ಸತೀಶ್ (33), ಟಿ. ವಸಂತ ಕುಮಾರ್ (30), ಆರ್. ಮಣಿವಣ್ಣನ್ (32), ಹೆರಾನ್ ಪಾಲ್ (32), ಪಿ. ಬಾಬು, ಅಲಿಯಾಸ್ ಬೈಕ್ ಬಾಬು (33), ಕೆ. ಅರುಳಾನಂದಂ (39) ಮತ್ತು ಎಂ. ಅರುಣ್‌ಕುಮಾರ್ ಅನ್ನು ದೋಷಿಗಳು ಎಂದು ನ್ಯಾಯಾಲಯ ಮಂಗಳವಾರ ಬೆಳಿಗ್ಗೆ ಘೋಷಿಸಿತ್ತು. ಮಧ್ಯಾಹ್ನದ ನಂತರ ಶಿಕ್ಷೆ ಪ್ರಕಟಿಸಿದೆ.

2016 ಮತ್ತು 2018ರ ನಡುವೆ ನಡೆದ ಬ್ಲ್ಯಾಕ್‌ಮೇಲ್ ಸೇರಿದಂತೆ ಹಲವಾರು ಪ್ರಕರಣಗಳ ಸಂಬಂಧ ಈ ಅಪರಾಧಿಗಳ ಮೇಲೆ ಕ್ರಿಮಿನಲ್ ಪಿತೂರಿ, ಲೈಂಗಿಕ ಕಿರುಕುಳ, ಅತ್ಯಾಚಾರ, ಸಾಮೂಹಿಕ ಅತ್ಯಾಚಾರ ಮತ್ತು ಸುಲಿಗೆ ಆರೋಪ ಹೊರಿಸಲಾಗಿದೆ.

“ಅಪರಾಧಿಗಳ ವಯಸ್ಸು ಮತ್ತು ಕೌಟುಂಬಿಕ ಹಿನ್ನೆಲೆ ಉಲ್ಲೇಖಿಸಿರುವ ಅವರ ವಕೀಲರು, ಶಿಕ್ಷೆ ಪ್ರಮಾಣದಲ್ಲಿ ಸಡಿಲಿಕೆ ಮಾಡುವಂತೆ ಕೋರಿದ್ದಾರೆ. ಆದರೆ, ಗಂಭೀರ ಅಪರಾಧಕ್ಕಾಗಿ ಎಲ್ಲಾ ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದೇವೆ. ಐಪಿಸಿ ಸೆಕ್ಷನ್ 376 ಡಿ ಅಡಿಯಲ್ಲಿ ಅಪರಾಧಿಗಳಿಗೆ ಗರಿಷ್ಠ 20 ವರ್ಷಗಳ ಜೈಲು ಶಿಕ್ಷೆ ವಿಧಿಸಬಹುದು” ಎಂದು ನ್ಯಾಯಾಲಯ ಆರೋಪಿಗಳನ್ನು ದೋಷಿಗಳು ಎಂದು ಘೋಷಿಸಿದ ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಿಬಿಐ ಪರ ವಾದ ಮಂಡಿಸಿದ ವಿಶೇಷ ಸಾರ್ವಜನಿಕ ಅಭಿಯೋಜಕ ವಿ. ಸುರೇಂದ್ರ ಮೋಹನ್ ಹೇಳಿದ್ದರು.

“ಪ್ರಕರಣದ ವಿಚಾರಣೆ ವೇಳೆ ಒಟ್ಟು ಎಂಟು ಸಂತ್ರಸ್ತರು ನ್ಯಾಯಾಲಯಕ್ಕೆ ಹಾಜರಾಗಿ ಆರೋಪಿಗಳ ವಿರುದ್ಧ ಸಾಕ್ಷ್ಯ ನುಡಿದಿದ್ದರು. ಎಲ್ಲಾ 48 ಸಾಕ್ಷಿಗಳು ಕೂಡ ನ್ಯಾಯಾಲಯದ ಮುಂದೆ ಹಾಜರಾಗಿ ಆರೋಪಿಗಳ ವಿರುದ್ಧ ತಮ್ಮ ಸಾಕ್ಷ್ಯ ಹೇಳಿದ್ದರು” ಎಂದು ಸುರೇಂದ್ರ ಮೋಹನ್ ತಿಳಿಸಿದ್ದಾರೆ.

ಫೆಬ್ರವರಿ 24, 2019ರಂದು 19 ವರ್ಷದ ಸಂತ್ರಸ್ತೆಯೊಬ್ಬರು ಸಲ್ಲಿಸಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದ ಪೊಲೀಸರು ಮೇ 21, 2019ರಂದು ಕೊಯಮತ್ತೂರು ಮಹಿಳಾ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು. ಆದಾಗ್ಯೂ, ಕಾರ್ಯವಿಧಾನದ ವಿಳಂಬದ ಕಾರಣ ಮದ್ರಾಸ್ ಹೈಕೋರ್ಟ್ ಮಧ್ಯಪ್ರವೇಶಿಸಿ, ಈ ಪ್ರಕರಣವನ್ನು ಕೊಯಮತ್ತೂರಿನ ಇಂಟಿಗ್ರೇಟೆಡ್ ಕೋರ್ಟ್ ಕಾಂಪ್ಲೆಕ್ಸ್‌ಗೆ ವರ್ಗಾಯಿಸಿ, ಅಲ್ಲಿ ಪ್ರತ್ಯೇಕ ನ್ಯಾಯಾಲಯ ಕೊಠಡಿಯನ್ನು ಸ್ಥಾಪಿಸುವಂತೆ ನಿರ್ದೇಶಿಸಿತ್ತು.

ಪ್ರಾಸಿಕ್ಯೂಷನ್ ಮತ್ತು ಪ್ರತಿವಾದಿಗಳ ವಾದಗಳು ಪೂರ್ಣಗೊಂಡ ನಂತರ, ನ್ಯಾಯಾಲಯವು ಮಂಗಳವಾರ ತನ್ನ ತೀರ್ಪನ್ನು ಪ್ರಕಟಿಸಿದೆ.

ತೀರ್ಪು ಪ್ರಕಟವಾಗುವ ಸಮಯದಲ್ಲಿ ಕೊಯಮತ್ತೂರು ನ್ಯಾಯಾಲಯ ಸಂಕೀರ್ಣದಲ್ಲಿ ಭಾರೀ ಜನಸಮೂಹ ಜಮಾಯಿಸಿತ್ತು. ಅಪರಾಧಿಗಳ ಕುಟುಂಬ ಸದಸ್ಯರು ಕೋರ್ಟ್ ಕ್ಯಾಂಪಸ್‌ನಲ್ಲಿ ಹಾಜರಿದ್ದರು.

ಇದಕ್ಕೂ ಮೊದಲು, ಬೆಳಿಗ್ಗೆ 8:30ಕ್ಕೆ ಸೇಲಂ ಕೇಂದ್ರ ಕಾರಾಗೃಹದಿಂದ ಅಪರಾಧಿಗಳನ್ನು ಸಂಪೂರ್ಣ ಭದ್ರತಾ ವ್ಯವಸ್ಥೆಗಳೊಂದಿಗೆ ನ್ಯಾಯಾಲಯಕ್ಕೆ ಕರೆತರಲಾಯಿತು. ಅಖಿಲ ಭಾರತ ಪ್ರಜಾಸತ್ತಾತ್ಮಕ ಮಹಿಳಾ ಸಂಘದ ಸದಸ್ಯರು ನ್ಯಾಯಾಲಯದ ಆವರಣದಲ್ಲಿ ಜಮಾಯಿಸಿ ತೀರ್ಪನ್ನು ಬೆಂಬಲಿಸಿ ಘೋಷಣೆಗಳನ್ನು ಕೂಗಿದರು.

ತಮಿಳುನಾಡಿನಾಡನ್ನು ಬೆಚ್ಚಿ ಬೀಳಿಸಿದ ಈ ಪ್ರಕರಣವು ಫೆಬ್ರವರಿ 2019ರಲ್ಲಿ ಕಾಲೇಜು ವಿದ್ಯಾರ್ಥಿಗಳು ಮತ್ತು ಇತರ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಸಂತ್ರಸ್ತರನ್ನು ಬೆದರಿಸಲು ಅಶ್ಲೀಲ ವಿಡಿಯೋಗಳನ್ನು ಮಾಡಿ ಪ್ರಸಾರ ಮಾಡಿದ್ದಕ್ಕೆ ಸಂಬಂಧಿಸಿದೆ.

ಆರಂಭದಲ್ಲಿ ಪೊಲ್ಲಾಚಿ ಪೂರ್ವ ಪೊಲೀಸರು ತನಿಖೆ ನಡೆಸಿದ್ದ ಈ ಪ್ರಕರಣವನ್ನು ಮಾರ್ಚ್ 12, 2019 ರಂದು ಸಿಬಿ-ಸಿಐಡಿಗೆ ಹಸ್ತಾಂತರಿಸಲಾಗಿತ್ತು. ನಂತರ ಸಾರ್ವಜನಿಕ ವಲಯದಿಂದ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಏಪ್ರಿಲ್ 25, 2019ರಂದು ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಲಾಗಿತ್ತು.

ತನಿಖೆ ವೇಳೆ, ಅಪರಾಧಿಗಳ ಗುಂಪಿನ ಯಾರಾದರು ಒಬ್ಬ ವ್ಯಕ್ತಿ ಕಾಲೇಜು ಹುಡುಗಿ ಅಥವಾ ಮಹಿಳೆಯನ್ನು ಪ್ರೀತಿಯ ನಾಟಕವಾಡಿ ತನ್ನ ಬಲೆಗೆ ಬೀಳಿಸಿಕೊಳ್ಳುತ್ತಿದ್ದ. ನಂತರ ಅವರನ್ನು ಏಕಾಂತದ ಸ್ಥಳಗಳಿಗೆ ಕರೆಸಿ ಅಲ್ಲಿ ಲೈಂಗಿಕ ದೌರ್ಜನ್ಯಕ್ಕೆ ನಡೆಸುತ್ತಿದ್ದ ಮತ್ತು ಹಲ್ಲೆ ಮಾಡುತ್ತಿದ್ದ. ಈ ವೇಳೆ ಕೃತ್ಯವನ್ನು ರಹಸ್ಯವಾಗಿ ವಿಡಿಯೋ ಮಾಡಿಕೊಳ್ಳುತ್ತಿದ್ದ ಗುಂಪಿನ ಸದಸ್ಯರು, ನಂತರ ಆ ವಿಡಿಯೋ ಬಳಸಿಕೊಂಡು ಸಂತ್ರಸ್ತರನ್ನು ಬ್ಲ್ಯಾಕ್ ಮೇಲ್ ಮಾಡುತ್ತಿದ್ದರು ಎಂಬುವುದು ಬಯಲಾಗಿತ್ತು.

2019 ರ ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣ | ಎಲ್ಲಾ ಒಂಬತ್ತು ಆರೋಪಿಗಳು ದೋಷಿಗಳು ಎಂದು ತೀರ್ಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...