Homeಮುಖಪುಟಪೊಲ್ಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣ: 9 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣ: 9 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

- Advertisement -
- Advertisement -

ತಮಿಳುನಾಡಿನ ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣದ ಒಂಬತ್ತು ಅಪರಾಧಿಗಳಿಗೆ ಕೊಯಮತ್ತೂರಿನ ಮಹಿಳಾ ನ್ಯಾಯಾಲಯ ಮಂಗಳವಾರ (ಮೇ 13) ಜೀವಾವಧಿ ಶಿಕ್ಷೆ ವಿಧಿಸಿದೆ.

ಆರು ವರ್ಷಗಳ ಹಿಂದೆ ತಮಿಳುನಾಡನ್ನು ಬೆಚ್ಚಿಬೀಳಿಸಿದ್ದ ಪ್ರಕರಣದ ತೀರ್ಪನ್ನು ನ್ಯಾಯಾಧೀಶೆ ಆರ್. ನಂದಿನಿ ದೇವಿ ಪ್ರಕಟಿಸಿದ್ದಾರೆ. ಸಂತ್ರಸ್ತ ಮಹಿಳೆಯರಿಗೆ ಒಟ್ಟು 85 ಲಕ್ಷ ರೂಪಾಯಿ ಪರಿಹಾರ ನೀಡುವಂತೆಯೂ ಆದೇಶಿಸಿದ್ದಾರೆ.

ಪ್ರಕರಣದ ಆರೋಪಿಗಳಾಗಿದ್ದ ಕೆ. ತಿರುನಾವುಕ್ಕರಸು (34), ಎನ್. ರಿಶ್ವಂತ್ ಅಲಿಯಾಸ್ ಶಬರಿರಾಜನ್ (32), ಎಂ. ಸತೀಶ್ (33), ಟಿ. ವಸಂತ ಕುಮಾರ್ (30), ಆರ್. ಮಣಿವಣ್ಣನ್ (32), ಹೆರಾನ್ ಪಾಲ್ (32), ಪಿ. ಬಾಬು, ಅಲಿಯಾಸ್ ಬೈಕ್ ಬಾಬು (33), ಕೆ. ಅರುಳಾನಂದಂ (39) ಮತ್ತು ಎಂ. ಅರುಣ್‌ಕುಮಾರ್ ಅನ್ನು ದೋಷಿಗಳು ಎಂದು ನ್ಯಾಯಾಲಯ ಮಂಗಳವಾರ ಬೆಳಿಗ್ಗೆ ಘೋಷಿಸಿತ್ತು. ಮಧ್ಯಾಹ್ನದ ನಂತರ ಶಿಕ್ಷೆ ಪ್ರಕಟಿಸಿದೆ.

2016 ಮತ್ತು 2018ರ ನಡುವೆ ನಡೆದ ಬ್ಲ್ಯಾಕ್‌ಮೇಲ್ ಸೇರಿದಂತೆ ಹಲವಾರು ಪ್ರಕರಣಗಳ ಸಂಬಂಧ ಈ ಅಪರಾಧಿಗಳ ಮೇಲೆ ಕ್ರಿಮಿನಲ್ ಪಿತೂರಿ, ಲೈಂಗಿಕ ಕಿರುಕುಳ, ಅತ್ಯಾಚಾರ, ಸಾಮೂಹಿಕ ಅತ್ಯಾಚಾರ ಮತ್ತು ಸುಲಿಗೆ ಆರೋಪ ಹೊರಿಸಲಾಗಿದೆ.

“ಅಪರಾಧಿಗಳ ವಯಸ್ಸು ಮತ್ತು ಕೌಟುಂಬಿಕ ಹಿನ್ನೆಲೆ ಉಲ್ಲೇಖಿಸಿರುವ ಅವರ ವಕೀಲರು, ಶಿಕ್ಷೆ ಪ್ರಮಾಣದಲ್ಲಿ ಸಡಿಲಿಕೆ ಮಾಡುವಂತೆ ಕೋರಿದ್ದಾರೆ. ಆದರೆ, ಗಂಭೀರ ಅಪರಾಧಕ್ಕಾಗಿ ಎಲ್ಲಾ ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದೇವೆ. ಐಪಿಸಿ ಸೆಕ್ಷನ್ 376 ಡಿ ಅಡಿಯಲ್ಲಿ ಅಪರಾಧಿಗಳಿಗೆ ಗರಿಷ್ಠ 20 ವರ್ಷಗಳ ಜೈಲು ಶಿಕ್ಷೆ ವಿಧಿಸಬಹುದು” ಎಂದು ನ್ಯಾಯಾಲಯ ಆರೋಪಿಗಳನ್ನು ದೋಷಿಗಳು ಎಂದು ಘೋಷಿಸಿದ ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಿಬಿಐ ಪರ ವಾದ ಮಂಡಿಸಿದ ವಿಶೇಷ ಸಾರ್ವಜನಿಕ ಅಭಿಯೋಜಕ ವಿ. ಸುರೇಂದ್ರ ಮೋಹನ್ ಹೇಳಿದ್ದರು.

“ಪ್ರಕರಣದ ವಿಚಾರಣೆ ವೇಳೆ ಒಟ್ಟು ಎಂಟು ಸಂತ್ರಸ್ತರು ನ್ಯಾಯಾಲಯಕ್ಕೆ ಹಾಜರಾಗಿ ಆರೋಪಿಗಳ ವಿರುದ್ಧ ಸಾಕ್ಷ್ಯ ನುಡಿದಿದ್ದರು. ಎಲ್ಲಾ 48 ಸಾಕ್ಷಿಗಳು ಕೂಡ ನ್ಯಾಯಾಲಯದ ಮುಂದೆ ಹಾಜರಾಗಿ ಆರೋಪಿಗಳ ವಿರುದ್ಧ ತಮ್ಮ ಸಾಕ್ಷ್ಯ ಹೇಳಿದ್ದರು” ಎಂದು ಸುರೇಂದ್ರ ಮೋಹನ್ ತಿಳಿಸಿದ್ದಾರೆ.

ಫೆಬ್ರವರಿ 24, 2019ರಂದು 19 ವರ್ಷದ ಸಂತ್ರಸ್ತೆಯೊಬ್ಬರು ಸಲ್ಲಿಸಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದ ಪೊಲೀಸರು ಮೇ 21, 2019ರಂದು ಕೊಯಮತ್ತೂರು ಮಹಿಳಾ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು. ಆದಾಗ್ಯೂ, ಕಾರ್ಯವಿಧಾನದ ವಿಳಂಬದ ಕಾರಣ ಮದ್ರಾಸ್ ಹೈಕೋರ್ಟ್ ಮಧ್ಯಪ್ರವೇಶಿಸಿ, ಈ ಪ್ರಕರಣವನ್ನು ಕೊಯಮತ್ತೂರಿನ ಇಂಟಿಗ್ರೇಟೆಡ್ ಕೋರ್ಟ್ ಕಾಂಪ್ಲೆಕ್ಸ್‌ಗೆ ವರ್ಗಾಯಿಸಿ, ಅಲ್ಲಿ ಪ್ರತ್ಯೇಕ ನ್ಯಾಯಾಲಯ ಕೊಠಡಿಯನ್ನು ಸ್ಥಾಪಿಸುವಂತೆ ನಿರ್ದೇಶಿಸಿತ್ತು.

ಪ್ರಾಸಿಕ್ಯೂಷನ್ ಮತ್ತು ಪ್ರತಿವಾದಿಗಳ ವಾದಗಳು ಪೂರ್ಣಗೊಂಡ ನಂತರ, ನ್ಯಾಯಾಲಯವು ಮಂಗಳವಾರ ತನ್ನ ತೀರ್ಪನ್ನು ಪ್ರಕಟಿಸಿದೆ.

ತೀರ್ಪು ಪ್ರಕಟವಾಗುವ ಸಮಯದಲ್ಲಿ ಕೊಯಮತ್ತೂರು ನ್ಯಾಯಾಲಯ ಸಂಕೀರ್ಣದಲ್ಲಿ ಭಾರೀ ಜನಸಮೂಹ ಜಮಾಯಿಸಿತ್ತು. ಅಪರಾಧಿಗಳ ಕುಟುಂಬ ಸದಸ್ಯರು ಕೋರ್ಟ್ ಕ್ಯಾಂಪಸ್‌ನಲ್ಲಿ ಹಾಜರಿದ್ದರು.

ಇದಕ್ಕೂ ಮೊದಲು, ಬೆಳಿಗ್ಗೆ 8:30ಕ್ಕೆ ಸೇಲಂ ಕೇಂದ್ರ ಕಾರಾಗೃಹದಿಂದ ಅಪರಾಧಿಗಳನ್ನು ಸಂಪೂರ್ಣ ಭದ್ರತಾ ವ್ಯವಸ್ಥೆಗಳೊಂದಿಗೆ ನ್ಯಾಯಾಲಯಕ್ಕೆ ಕರೆತರಲಾಯಿತು. ಅಖಿಲ ಭಾರತ ಪ್ರಜಾಸತ್ತಾತ್ಮಕ ಮಹಿಳಾ ಸಂಘದ ಸದಸ್ಯರು ನ್ಯಾಯಾಲಯದ ಆವರಣದಲ್ಲಿ ಜಮಾಯಿಸಿ ತೀರ್ಪನ್ನು ಬೆಂಬಲಿಸಿ ಘೋಷಣೆಗಳನ್ನು ಕೂಗಿದರು.

ತಮಿಳುನಾಡಿನಾಡನ್ನು ಬೆಚ್ಚಿ ಬೀಳಿಸಿದ ಈ ಪ್ರಕರಣವು ಫೆಬ್ರವರಿ 2019ರಲ್ಲಿ ಕಾಲೇಜು ವಿದ್ಯಾರ್ಥಿಗಳು ಮತ್ತು ಇತರ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಸಂತ್ರಸ್ತರನ್ನು ಬೆದರಿಸಲು ಅಶ್ಲೀಲ ವಿಡಿಯೋಗಳನ್ನು ಮಾಡಿ ಪ್ರಸಾರ ಮಾಡಿದ್ದಕ್ಕೆ ಸಂಬಂಧಿಸಿದೆ.

ಆರಂಭದಲ್ಲಿ ಪೊಲ್ಲಾಚಿ ಪೂರ್ವ ಪೊಲೀಸರು ತನಿಖೆ ನಡೆಸಿದ್ದ ಈ ಪ್ರಕರಣವನ್ನು ಮಾರ್ಚ್ 12, 2019 ರಂದು ಸಿಬಿ-ಸಿಐಡಿಗೆ ಹಸ್ತಾಂತರಿಸಲಾಗಿತ್ತು. ನಂತರ ಸಾರ್ವಜನಿಕ ವಲಯದಿಂದ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಏಪ್ರಿಲ್ 25, 2019ರಂದು ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಲಾಗಿತ್ತು.

ತನಿಖೆ ವೇಳೆ, ಅಪರಾಧಿಗಳ ಗುಂಪಿನ ಯಾರಾದರು ಒಬ್ಬ ವ್ಯಕ್ತಿ ಕಾಲೇಜು ಹುಡುಗಿ ಅಥವಾ ಮಹಿಳೆಯನ್ನು ಪ್ರೀತಿಯ ನಾಟಕವಾಡಿ ತನ್ನ ಬಲೆಗೆ ಬೀಳಿಸಿಕೊಳ್ಳುತ್ತಿದ್ದ. ನಂತರ ಅವರನ್ನು ಏಕಾಂತದ ಸ್ಥಳಗಳಿಗೆ ಕರೆಸಿ ಅಲ್ಲಿ ಲೈಂಗಿಕ ದೌರ್ಜನ್ಯಕ್ಕೆ ನಡೆಸುತ್ತಿದ್ದ ಮತ್ತು ಹಲ್ಲೆ ಮಾಡುತ್ತಿದ್ದ. ಈ ವೇಳೆ ಕೃತ್ಯವನ್ನು ರಹಸ್ಯವಾಗಿ ವಿಡಿಯೋ ಮಾಡಿಕೊಳ್ಳುತ್ತಿದ್ದ ಗುಂಪಿನ ಸದಸ್ಯರು, ನಂತರ ಆ ವಿಡಿಯೋ ಬಳಸಿಕೊಂಡು ಸಂತ್ರಸ್ತರನ್ನು ಬ್ಲ್ಯಾಕ್ ಮೇಲ್ ಮಾಡುತ್ತಿದ್ದರು ಎಂಬುವುದು ಬಯಲಾಗಿತ್ತು.

2019 ರ ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣ | ಎಲ್ಲಾ ಒಂಬತ್ತು ಆರೋಪಿಗಳು ದೋಷಿಗಳು ಎಂದು ತೀರ್ಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...