Homeಮುಖಪುಟಪೊಲ್ಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣ: 9 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣ: 9 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

- Advertisement -
- Advertisement -

ತಮಿಳುನಾಡಿನ ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣದ ಒಂಬತ್ತು ಅಪರಾಧಿಗಳಿಗೆ ಕೊಯಮತ್ತೂರಿನ ಮಹಿಳಾ ನ್ಯಾಯಾಲಯ ಮಂಗಳವಾರ (ಮೇ 13) ಜೀವಾವಧಿ ಶಿಕ್ಷೆ ವಿಧಿಸಿದೆ.

ಆರು ವರ್ಷಗಳ ಹಿಂದೆ ತಮಿಳುನಾಡನ್ನು ಬೆಚ್ಚಿಬೀಳಿಸಿದ್ದ ಪ್ರಕರಣದ ತೀರ್ಪನ್ನು ನ್ಯಾಯಾಧೀಶೆ ಆರ್. ನಂದಿನಿ ದೇವಿ ಪ್ರಕಟಿಸಿದ್ದಾರೆ. ಸಂತ್ರಸ್ತ ಮಹಿಳೆಯರಿಗೆ ಒಟ್ಟು 85 ಲಕ್ಷ ರೂಪಾಯಿ ಪರಿಹಾರ ನೀಡುವಂತೆಯೂ ಆದೇಶಿಸಿದ್ದಾರೆ.

ಪ್ರಕರಣದ ಆರೋಪಿಗಳಾಗಿದ್ದ ಕೆ. ತಿರುನಾವುಕ್ಕರಸು (34), ಎನ್. ರಿಶ್ವಂತ್ ಅಲಿಯಾಸ್ ಶಬರಿರಾಜನ್ (32), ಎಂ. ಸತೀಶ್ (33), ಟಿ. ವಸಂತ ಕುಮಾರ್ (30), ಆರ್. ಮಣಿವಣ್ಣನ್ (32), ಹೆರಾನ್ ಪಾಲ್ (32), ಪಿ. ಬಾಬು, ಅಲಿಯಾಸ್ ಬೈಕ್ ಬಾಬು (33), ಕೆ. ಅರುಳಾನಂದಂ (39) ಮತ್ತು ಎಂ. ಅರುಣ್‌ಕುಮಾರ್ ಅನ್ನು ದೋಷಿಗಳು ಎಂದು ನ್ಯಾಯಾಲಯ ಮಂಗಳವಾರ ಬೆಳಿಗ್ಗೆ ಘೋಷಿಸಿತ್ತು. ಮಧ್ಯಾಹ್ನದ ನಂತರ ಶಿಕ್ಷೆ ಪ್ರಕಟಿಸಿದೆ.

2016 ಮತ್ತು 2018ರ ನಡುವೆ ನಡೆದ ಬ್ಲ್ಯಾಕ್‌ಮೇಲ್ ಸೇರಿದಂತೆ ಹಲವಾರು ಪ್ರಕರಣಗಳ ಸಂಬಂಧ ಈ ಅಪರಾಧಿಗಳ ಮೇಲೆ ಕ್ರಿಮಿನಲ್ ಪಿತೂರಿ, ಲೈಂಗಿಕ ಕಿರುಕುಳ, ಅತ್ಯಾಚಾರ, ಸಾಮೂಹಿಕ ಅತ್ಯಾಚಾರ ಮತ್ತು ಸುಲಿಗೆ ಆರೋಪ ಹೊರಿಸಲಾಗಿದೆ.

“ಅಪರಾಧಿಗಳ ವಯಸ್ಸು ಮತ್ತು ಕೌಟುಂಬಿಕ ಹಿನ್ನೆಲೆ ಉಲ್ಲೇಖಿಸಿರುವ ಅವರ ವಕೀಲರು, ಶಿಕ್ಷೆ ಪ್ರಮಾಣದಲ್ಲಿ ಸಡಿಲಿಕೆ ಮಾಡುವಂತೆ ಕೋರಿದ್ದಾರೆ. ಆದರೆ, ಗಂಭೀರ ಅಪರಾಧಕ್ಕಾಗಿ ಎಲ್ಲಾ ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದೇವೆ. ಐಪಿಸಿ ಸೆಕ್ಷನ್ 376 ಡಿ ಅಡಿಯಲ್ಲಿ ಅಪರಾಧಿಗಳಿಗೆ ಗರಿಷ್ಠ 20 ವರ್ಷಗಳ ಜೈಲು ಶಿಕ್ಷೆ ವಿಧಿಸಬಹುದು” ಎಂದು ನ್ಯಾಯಾಲಯ ಆರೋಪಿಗಳನ್ನು ದೋಷಿಗಳು ಎಂದು ಘೋಷಿಸಿದ ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಿಬಿಐ ಪರ ವಾದ ಮಂಡಿಸಿದ ವಿಶೇಷ ಸಾರ್ವಜನಿಕ ಅಭಿಯೋಜಕ ವಿ. ಸುರೇಂದ್ರ ಮೋಹನ್ ಹೇಳಿದ್ದರು.

“ಪ್ರಕರಣದ ವಿಚಾರಣೆ ವೇಳೆ ಒಟ್ಟು ಎಂಟು ಸಂತ್ರಸ್ತರು ನ್ಯಾಯಾಲಯಕ್ಕೆ ಹಾಜರಾಗಿ ಆರೋಪಿಗಳ ವಿರುದ್ಧ ಸಾಕ್ಷ್ಯ ನುಡಿದಿದ್ದರು. ಎಲ್ಲಾ 48 ಸಾಕ್ಷಿಗಳು ಕೂಡ ನ್ಯಾಯಾಲಯದ ಮುಂದೆ ಹಾಜರಾಗಿ ಆರೋಪಿಗಳ ವಿರುದ್ಧ ತಮ್ಮ ಸಾಕ್ಷ್ಯ ಹೇಳಿದ್ದರು” ಎಂದು ಸುರೇಂದ್ರ ಮೋಹನ್ ತಿಳಿಸಿದ್ದಾರೆ.

ಫೆಬ್ರವರಿ 24, 2019ರಂದು 19 ವರ್ಷದ ಸಂತ್ರಸ್ತೆಯೊಬ್ಬರು ಸಲ್ಲಿಸಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದ ಪೊಲೀಸರು ಮೇ 21, 2019ರಂದು ಕೊಯಮತ್ತೂರು ಮಹಿಳಾ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು. ಆದಾಗ್ಯೂ, ಕಾರ್ಯವಿಧಾನದ ವಿಳಂಬದ ಕಾರಣ ಮದ್ರಾಸ್ ಹೈಕೋರ್ಟ್ ಮಧ್ಯಪ್ರವೇಶಿಸಿ, ಈ ಪ್ರಕರಣವನ್ನು ಕೊಯಮತ್ತೂರಿನ ಇಂಟಿಗ್ರೇಟೆಡ್ ಕೋರ್ಟ್ ಕಾಂಪ್ಲೆಕ್ಸ್‌ಗೆ ವರ್ಗಾಯಿಸಿ, ಅಲ್ಲಿ ಪ್ರತ್ಯೇಕ ನ್ಯಾಯಾಲಯ ಕೊಠಡಿಯನ್ನು ಸ್ಥಾಪಿಸುವಂತೆ ನಿರ್ದೇಶಿಸಿತ್ತು.

ಪ್ರಾಸಿಕ್ಯೂಷನ್ ಮತ್ತು ಪ್ರತಿವಾದಿಗಳ ವಾದಗಳು ಪೂರ್ಣಗೊಂಡ ನಂತರ, ನ್ಯಾಯಾಲಯವು ಮಂಗಳವಾರ ತನ್ನ ತೀರ್ಪನ್ನು ಪ್ರಕಟಿಸಿದೆ.

ತೀರ್ಪು ಪ್ರಕಟವಾಗುವ ಸಮಯದಲ್ಲಿ ಕೊಯಮತ್ತೂರು ನ್ಯಾಯಾಲಯ ಸಂಕೀರ್ಣದಲ್ಲಿ ಭಾರೀ ಜನಸಮೂಹ ಜಮಾಯಿಸಿತ್ತು. ಅಪರಾಧಿಗಳ ಕುಟುಂಬ ಸದಸ್ಯರು ಕೋರ್ಟ್ ಕ್ಯಾಂಪಸ್‌ನಲ್ಲಿ ಹಾಜರಿದ್ದರು.

ಇದಕ್ಕೂ ಮೊದಲು, ಬೆಳಿಗ್ಗೆ 8:30ಕ್ಕೆ ಸೇಲಂ ಕೇಂದ್ರ ಕಾರಾಗೃಹದಿಂದ ಅಪರಾಧಿಗಳನ್ನು ಸಂಪೂರ್ಣ ಭದ್ರತಾ ವ್ಯವಸ್ಥೆಗಳೊಂದಿಗೆ ನ್ಯಾಯಾಲಯಕ್ಕೆ ಕರೆತರಲಾಯಿತು. ಅಖಿಲ ಭಾರತ ಪ್ರಜಾಸತ್ತಾತ್ಮಕ ಮಹಿಳಾ ಸಂಘದ ಸದಸ್ಯರು ನ್ಯಾಯಾಲಯದ ಆವರಣದಲ್ಲಿ ಜಮಾಯಿಸಿ ತೀರ್ಪನ್ನು ಬೆಂಬಲಿಸಿ ಘೋಷಣೆಗಳನ್ನು ಕೂಗಿದರು.

ತಮಿಳುನಾಡಿನಾಡನ್ನು ಬೆಚ್ಚಿ ಬೀಳಿಸಿದ ಈ ಪ್ರಕರಣವು ಫೆಬ್ರವರಿ 2019ರಲ್ಲಿ ಕಾಲೇಜು ವಿದ್ಯಾರ್ಥಿಗಳು ಮತ್ತು ಇತರ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಸಂತ್ರಸ್ತರನ್ನು ಬೆದರಿಸಲು ಅಶ್ಲೀಲ ವಿಡಿಯೋಗಳನ್ನು ಮಾಡಿ ಪ್ರಸಾರ ಮಾಡಿದ್ದಕ್ಕೆ ಸಂಬಂಧಿಸಿದೆ.

ಆರಂಭದಲ್ಲಿ ಪೊಲ್ಲಾಚಿ ಪೂರ್ವ ಪೊಲೀಸರು ತನಿಖೆ ನಡೆಸಿದ್ದ ಈ ಪ್ರಕರಣವನ್ನು ಮಾರ್ಚ್ 12, 2019 ರಂದು ಸಿಬಿ-ಸಿಐಡಿಗೆ ಹಸ್ತಾಂತರಿಸಲಾಗಿತ್ತು. ನಂತರ ಸಾರ್ವಜನಿಕ ವಲಯದಿಂದ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಏಪ್ರಿಲ್ 25, 2019ರಂದು ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಲಾಗಿತ್ತು.

ತನಿಖೆ ವೇಳೆ, ಅಪರಾಧಿಗಳ ಗುಂಪಿನ ಯಾರಾದರು ಒಬ್ಬ ವ್ಯಕ್ತಿ ಕಾಲೇಜು ಹುಡುಗಿ ಅಥವಾ ಮಹಿಳೆಯನ್ನು ಪ್ರೀತಿಯ ನಾಟಕವಾಡಿ ತನ್ನ ಬಲೆಗೆ ಬೀಳಿಸಿಕೊಳ್ಳುತ್ತಿದ್ದ. ನಂತರ ಅವರನ್ನು ಏಕಾಂತದ ಸ್ಥಳಗಳಿಗೆ ಕರೆಸಿ ಅಲ್ಲಿ ಲೈಂಗಿಕ ದೌರ್ಜನ್ಯಕ್ಕೆ ನಡೆಸುತ್ತಿದ್ದ ಮತ್ತು ಹಲ್ಲೆ ಮಾಡುತ್ತಿದ್ದ. ಈ ವೇಳೆ ಕೃತ್ಯವನ್ನು ರಹಸ್ಯವಾಗಿ ವಿಡಿಯೋ ಮಾಡಿಕೊಳ್ಳುತ್ತಿದ್ದ ಗುಂಪಿನ ಸದಸ್ಯರು, ನಂತರ ಆ ವಿಡಿಯೋ ಬಳಸಿಕೊಂಡು ಸಂತ್ರಸ್ತರನ್ನು ಬ್ಲ್ಯಾಕ್ ಮೇಲ್ ಮಾಡುತ್ತಿದ್ದರು ಎಂಬುವುದು ಬಯಲಾಗಿತ್ತು.

2019 ರ ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣ | ಎಲ್ಲಾ ಒಂಬತ್ತು ಆರೋಪಿಗಳು ದೋಷಿಗಳು ಎಂದು ತೀರ್ಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...