Homeಅಂತರಾಷ್ಟ್ರೀಯಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆ ಬಹಿಷ್ಕರಿಸಿದ ಪ್ರಮುಖ ವಿರೋಧ ಪಕ್ಷ: ದೇಶದಾದ್ಯಂತ ಹಿಂಸಾಚಾರ

ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆ ಬಹಿಷ್ಕರಿಸಿದ ಪ್ರಮುಖ ವಿರೋಧ ಪಕ್ಷ: ದೇಶದಾದ್ಯಂತ ಹಿಂಸಾಚಾರ

- Advertisement -
- Advertisement -

ಬಾಂಗ್ಲಾದೇಶದಲ್ಲಿ ನಾಳೆ ಸಾರ್ವತ್ರಿಕ ಚುನಾವಣೆ ನಡೆಯಲಿದೆ. ಇಂದು ರಾಜಧಾನಿ ಢಾಕಾದ ಹೊರವಲಯದಲ್ಲಿ 4 ಮತಗಟ್ಟೆಗಳು ಸೇರಿದಂತೆ ಕನಿಷ್ಠ 5 ಪ್ರಾಥಮಿಕ ಶಾಲೆಗಳಿಗೆ ಅಪರಿಚಿತರು ಬೆಂಕಿ ಹಚ್ಚಿದ್ದು, ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ದೇಶದಾದ್ಯಂತ ಹಿಂಸಾಚಾರಗಳು ವರದಿಯಾಗುತ್ತಿದೆ.

ಬಾಂಗ್ಲಾದೇಶದ ಪ್ರಮುಖ ವಿರೋಧ ಪಕ್ಷವಾದ ಬಾಂಗ್ಲಾದೇಶ ನ್ಯಾಶನಲಿಸ್ಟ್ ಪಾರ್ಟಿ (BNP) ದೇಶದಲ್ಲಿನ ಸಾರ್ವತ್ರಿಕ ಚುನಾವಣೆಯನ್ನು ಬಹಿಷ್ಕರಿಸಿದೆ. ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ನೀಡಿ ಉಸ್ತುವಾರಿ ಸರಕಾರದ ನೇತೃತ್ವದಲ್ಲಿ ಚುನಾವಣೆ ನಡೆಯಬೇಕು ಎಂದು ಬಿಎನ್‌ಪಿ ಆಗ್ರಹಿಸಿತ್ತು. ಪ್ರಧಾನಮಂತ್ರಿ ಶೇಖ್ ಹಸೀನಾ ಅವರ ಅವಾಮಿ ಲೀಗ್ ಪಕ್ಷ ನಾಲ್ಕನೇ ಬಾರಿಗೆ ನೇರ ಅಧಿಕಾರವನ್ನು ಪಡೆಯಲು ನಕಲಿ ಮತದ ಮೂಲಕ ಷಡ್ಯಂತರ ನಡೆಸಿದೆ ಎಂದು ಆರೋಪಿಸಿತ್ತು.

ಪ್ರತಿಪಕ್ಷ BNP ಮತದಾನದಿಂದ ದೂರವಿರಲು ನಾಗರಿಕರನ್ನು ಕೇಳಿಕೊಂಡಿದ್ದು, ಶನಿವಾರದಿಂದ ದೇಶದಲ್ಲಿ 2 ದಿನಗಳ ಮುಷ್ಕರಕ್ಕೆ ಕರೆ ನೀಡಿದೆ. ಸಾಮಾನ್ಯ ದಿನಗಳಲ್ಲಿ ದಟ್ಟಣೆಯಿಂದ ಕೂಡಿದ್ದ ಢಾಕಾದ ರಸ್ತೆಗಳು ಇಂದು ಬಹುತೇಕ ನಿರ್ಜನವಾಗಿದ್ದವು, ಭದ್ರತಾ ಪಡೆಗಳು ಶಸ್ತ್ರಸಜ್ಜಿತ ವಾಹನಗಳಲ್ಲಿ ನಗರದಲ್ಲಿ ಗಸ್ತು ತಿರುಗುತ್ತಿದ್ದರು.

ರಾಜೀನಾಮೆ ನೀಡಲು ಮತ್ತು ಉಸ್ತುವಾರಿ ಸರಕಾರದ ನೇತೃತ್ವದಲ್ಲಿ ಚುನಾವಣೆಯನ್ನು ನಡೆಸಲು ಅಧಿಕಾರವನ್ನು ಬಿಟ್ಟುಕೊಡಲು ಹಸೀನಾ ಅವರು ನಿರಾಕರಿಸಿದ್ದಾರೆ. ಸರ್ಕಾರ ವಿರೋಧಿ ಪ್ರತಿಭಟನೆಗೆ ಪ್ರತಿಪಕ್ಷಗಳು ಜನರನ್ನು ಪ್ರಚೋದಿಸುತ್ತಿದೆ. ಇದರಿಂದಾಗಿ ಅಕ್ಟೋಬರ್ ಅಂತ್ಯದಿಂದ ಢಾಕಾದಲ್ಲಿ ಕನಿಷ್ಠ 10 ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಹಸೀನಾ ಪ್ರತ್ಯಾರೋಪ ಮಾಡಿದ್ದಾರೆ.

ಗಾಜಿಪುರ ಪೊಲೀಸ್ ಮುಖ್ಯಸ್ಥ ಕಾಜಿ ಶಫೀಕುಲ್ ಆಲಂ ಈ ಕುರಿತು ಮಾಹಿತಿಯನ್ನು ನೀಡಿದ್ದು, ಚುನಾವಣೆಗೆ ಅಡ್ಡಿಪಡಿಸುವ ಗುರಿಯಿಂದ ಕೃತ್ಯ ನಡೆಸಲಾಗುತ್ತಿದೆ. ನಾವು ಗಸ್ತು ತಿರುಗುವಿಕೆಯನ್ನು ಹೆಚ್ಚಿಸಿದ್ದೇವೆ ಮತ್ತು ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಹೆಚ್ಚಿನ ಕ್ರಮವನ್ನು ಕೈಗೊಳ್ಳುತ್ತಿದ್ದೇವೆ ಎಂದು ಹೇಳಿದ್ದಾರೆ.

ಈಶಾನ್ಯ ಜಿಲ್ಲೆಗಳಾದ ಮೌಲವಿಬಜಾರ್ ಮತ್ತು ಹಬಿಗಂಜ್‌ನಲ್ಲಿ ಮತಗಟ್ಟೆಗಳ ಮೇಲೆ ಬೆಂಕಿ ಹಚ್ಚಲಾಗಿದೆ. ಕಳೆದ ಎರಡು ದಿನಗಳಿಂದ ದೇಶಾದ್ಯಂತ ಇದೇ ರೀತಿಯ ಘಟನೆಗಳು ವರದಿಯಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಂಗ್ಲಾ ಕರಾವಳಿ ಜಿಲ್ಲೆ ಖುಲ್ನಾದಲ್ಲಿ, ಶಾಲೆಗೆ ಬೆಂಕಿ ಹಚ್ಚಲು ಯತ್ನಿಸಿದವರನ್ನು ಹಿಡಿದು ಸ್ಥಳೀಯ ನಾಗರಿಕರು ಪೊಲೀಸರಿಗೆ ಒಪ್ಪಿಸಿದ್ದಾರೆ. ಶುಕ್ರವಾರ ಅದೇ ಪ್ರದೇಶದಲ್ಲಿ ಪ್ರಾಥಮಿಕ ಶಾಲಾ ಕಟ್ಟಡಕ್ಕೆ ಬೆಂಕಿ ಹಚ್ಚುವ ಮತ್ತೊಂದು ಪ್ರಯತ್ನವನ್ನು ಸ್ಥಳೀಯರು ತಪ್ಪಿಸಿದ್ದಾರೆ ಎಂದು ಖುಲ್ನಾ ಪೊಲೀಸ್ ಮುಖ್ಯಸ್ಥ ಸೈದುರ್ ರೆಹಮಾನ್ ಹೇಳಿದ್ದಾರೆ.

ಸುಮಾರು 8,00,000 ಪೊಲೀಸರು, ಅರೆಸೇನಾ ಪಡೆಯನ್ನು ಮತದಾನಕ್ಕೆ ನಿಯೋಜಿಸಲಾಗಿದೆ.  ಶಾಂತಿ ಕಾಪಾಡಲು ಸೇನೆ, ನೌಕಾಪಡೆ ಮತ್ತು ವಾಯುಪಡೆಯ ಅಧಿಕಾರಿಗಳನ್ನು ದೇಶಾದ್ಯಂತ ನಿಯೋಜಿಸಲಾಗಿದೆ.

ಶುಕ್ರವಾರ ರಾತ್ರಿ ನಡೆದ ಪ್ರತ್ಯೇಕ ಘಟನೆಯಲ್ಲಿ ಪ್ಯಾಸೆಂಜರ್ ರೈಲಿಗೆ ಬೆಂಕಿ ಹಚ್ಚಿದ ಶಂಕಿತ ದಾಳಿಯಲ್ಲಿ ಮಗು ಸೇರಿದಂತೆ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ. ಎಂಟು ಮಂದಿ ಗಾಯಗೊಂಡಿದ್ದಾರೆ. ಕಳೆದ ತಿಂಗಳು ಪ್ರತಿಪಕ್ಷಗಳು ಕರೆ ನೀಡಿದ್ದ ದೇಶವ್ಯಾಪಿ ಮುಷ್ಕರದ ವೇಳೆ ಪ್ರತಿಭಟನಾಕಾರರು ರೈಲಿಗೆ ಬೆಂಕಿ ಹಚ್ಚಿ ನಾಲ್ವರು ಸಾವನ್ನಪ್ಪಿದ್ದರು.

ಬೆನಾಪೋಲ್ ಎಕ್ಸ್‌ಪ್ರೆಸ್‌ನಲ್ಲಿ ಶುಕ್ರವಾರ ನಡೆದ ಘಟನೆಯು ನಿಸ್ಸಂದೇಹವಾಗಿ ಮಾನವೀಯತೆಯ ವಿರುದ್ಧದ ವಿಧ್ವಂಸಕ ಕ್ರೌರ್ಯ ಎಂದು ಬಿಎನ್‌ಪಿಯ ಹಿರಿಯ ನಾಯಕ ರುಹುಲ್ ಕಬೀರ್ ರಿಜ್ವಿ ಹೇಳಿದ್ದಾರೆ. ಘಟನೆಗೆ ಆಡಳಿತ ಪಕ್ಷವನ್ನು ದೂಷಿಸಿದ್ದಾರೆ.

ಬಾಂಗ್ಲಾದೇಶದಲ್ಲಿ ಭಾನುವಾರ (ನಾಳೆ) ಸಾರ್ವತ್ರಿಕ ಚುನಾವಣೆ ನಡೆಯಲಿದೆ. ಪ್ರಮುಖ ಪ್ರತಿಪಕ್ಷ ಬಾಂಗ್ಲಾದೇಶ್ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ಚುನಾವಣೆಯನ್ನು ಬಹಿಷ್ಕರಿಸಿದ್ದರಿಂದ ಪ್ರಧಾನಿ ಶೇಖ್ ಹಸೀನಾ ಅವರು ಸತತ ನಾಲ್ಕನೇ ಅವಧಿಗೆ ಗೆಲುವು ಸಾಧಿಸುವ ನಿರೀಕ್ಷೆಯಿದೆ. ಭ್ರಷ್ಟಾಚಾರದ ಆರೋಪದಲ್ಲಿ ಬಾಂಗ್ಲಾದೇಶ್ ನ್ಯಾಷನಲಿಸ್ಟ್ ಪಾರ್ಟಿ ನಾಯಕ, ಮಾಜಿ ಪ್ರಧಾನಿ ಖಲೀದಾ ಜಿಯಾ (78) ಗೃಹಬಂಧನದಲ್ಲಿದ್ದಾರೆ.

ಇದನ್ನು ಓದಿ: ‘ಒಂದು ರಾಷ್ಟ್ರ ಒಂದು ಚುನಾವಣೆ‘: ಸಾರ್ವಜನಿಕ ಸಲಹೆ ಕೇಳಿದ ಕೋವಿಂದ್‌ ಸಮಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...