Homeಅಂತರಾಷ್ಟ್ರೀಯಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆ ಬಹಿಷ್ಕರಿಸಿದ ಪ್ರಮುಖ ವಿರೋಧ ಪಕ್ಷ: ದೇಶದಾದ್ಯಂತ ಹಿಂಸಾಚಾರ

ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆ ಬಹಿಷ್ಕರಿಸಿದ ಪ್ರಮುಖ ವಿರೋಧ ಪಕ್ಷ: ದೇಶದಾದ್ಯಂತ ಹಿಂಸಾಚಾರ

- Advertisement -
- Advertisement -

ಬಾಂಗ್ಲಾದೇಶದಲ್ಲಿ ನಾಳೆ ಸಾರ್ವತ್ರಿಕ ಚುನಾವಣೆ ನಡೆಯಲಿದೆ. ಇಂದು ರಾಜಧಾನಿ ಢಾಕಾದ ಹೊರವಲಯದಲ್ಲಿ 4 ಮತಗಟ್ಟೆಗಳು ಸೇರಿದಂತೆ ಕನಿಷ್ಠ 5 ಪ್ರಾಥಮಿಕ ಶಾಲೆಗಳಿಗೆ ಅಪರಿಚಿತರು ಬೆಂಕಿ ಹಚ್ಚಿದ್ದು, ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ದೇಶದಾದ್ಯಂತ ಹಿಂಸಾಚಾರಗಳು ವರದಿಯಾಗುತ್ತಿದೆ.

ಬಾಂಗ್ಲಾದೇಶದ ಪ್ರಮುಖ ವಿರೋಧ ಪಕ್ಷವಾದ ಬಾಂಗ್ಲಾದೇಶ ನ್ಯಾಶನಲಿಸ್ಟ್ ಪಾರ್ಟಿ (BNP) ದೇಶದಲ್ಲಿನ ಸಾರ್ವತ್ರಿಕ ಚುನಾವಣೆಯನ್ನು ಬಹಿಷ್ಕರಿಸಿದೆ. ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ನೀಡಿ ಉಸ್ತುವಾರಿ ಸರಕಾರದ ನೇತೃತ್ವದಲ್ಲಿ ಚುನಾವಣೆ ನಡೆಯಬೇಕು ಎಂದು ಬಿಎನ್‌ಪಿ ಆಗ್ರಹಿಸಿತ್ತು. ಪ್ರಧಾನಮಂತ್ರಿ ಶೇಖ್ ಹಸೀನಾ ಅವರ ಅವಾಮಿ ಲೀಗ್ ಪಕ್ಷ ನಾಲ್ಕನೇ ಬಾರಿಗೆ ನೇರ ಅಧಿಕಾರವನ್ನು ಪಡೆಯಲು ನಕಲಿ ಮತದ ಮೂಲಕ ಷಡ್ಯಂತರ ನಡೆಸಿದೆ ಎಂದು ಆರೋಪಿಸಿತ್ತು.

ಪ್ರತಿಪಕ್ಷ BNP ಮತದಾನದಿಂದ ದೂರವಿರಲು ನಾಗರಿಕರನ್ನು ಕೇಳಿಕೊಂಡಿದ್ದು, ಶನಿವಾರದಿಂದ ದೇಶದಲ್ಲಿ 2 ದಿನಗಳ ಮುಷ್ಕರಕ್ಕೆ ಕರೆ ನೀಡಿದೆ. ಸಾಮಾನ್ಯ ದಿನಗಳಲ್ಲಿ ದಟ್ಟಣೆಯಿಂದ ಕೂಡಿದ್ದ ಢಾಕಾದ ರಸ್ತೆಗಳು ಇಂದು ಬಹುತೇಕ ನಿರ್ಜನವಾಗಿದ್ದವು, ಭದ್ರತಾ ಪಡೆಗಳು ಶಸ್ತ್ರಸಜ್ಜಿತ ವಾಹನಗಳಲ್ಲಿ ನಗರದಲ್ಲಿ ಗಸ್ತು ತಿರುಗುತ್ತಿದ್ದರು.

ರಾಜೀನಾಮೆ ನೀಡಲು ಮತ್ತು ಉಸ್ತುವಾರಿ ಸರಕಾರದ ನೇತೃತ್ವದಲ್ಲಿ ಚುನಾವಣೆಯನ್ನು ನಡೆಸಲು ಅಧಿಕಾರವನ್ನು ಬಿಟ್ಟುಕೊಡಲು ಹಸೀನಾ ಅವರು ನಿರಾಕರಿಸಿದ್ದಾರೆ. ಸರ್ಕಾರ ವಿರೋಧಿ ಪ್ರತಿಭಟನೆಗೆ ಪ್ರತಿಪಕ್ಷಗಳು ಜನರನ್ನು ಪ್ರಚೋದಿಸುತ್ತಿದೆ. ಇದರಿಂದಾಗಿ ಅಕ್ಟೋಬರ್ ಅಂತ್ಯದಿಂದ ಢಾಕಾದಲ್ಲಿ ಕನಿಷ್ಠ 10 ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಹಸೀನಾ ಪ್ರತ್ಯಾರೋಪ ಮಾಡಿದ್ದಾರೆ.

ಗಾಜಿಪುರ ಪೊಲೀಸ್ ಮುಖ್ಯಸ್ಥ ಕಾಜಿ ಶಫೀಕುಲ್ ಆಲಂ ಈ ಕುರಿತು ಮಾಹಿತಿಯನ್ನು ನೀಡಿದ್ದು, ಚುನಾವಣೆಗೆ ಅಡ್ಡಿಪಡಿಸುವ ಗುರಿಯಿಂದ ಕೃತ್ಯ ನಡೆಸಲಾಗುತ್ತಿದೆ. ನಾವು ಗಸ್ತು ತಿರುಗುವಿಕೆಯನ್ನು ಹೆಚ್ಚಿಸಿದ್ದೇವೆ ಮತ್ತು ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಹೆಚ್ಚಿನ ಕ್ರಮವನ್ನು ಕೈಗೊಳ್ಳುತ್ತಿದ್ದೇವೆ ಎಂದು ಹೇಳಿದ್ದಾರೆ.

ಈಶಾನ್ಯ ಜಿಲ್ಲೆಗಳಾದ ಮೌಲವಿಬಜಾರ್ ಮತ್ತು ಹಬಿಗಂಜ್‌ನಲ್ಲಿ ಮತಗಟ್ಟೆಗಳ ಮೇಲೆ ಬೆಂಕಿ ಹಚ್ಚಲಾಗಿದೆ. ಕಳೆದ ಎರಡು ದಿನಗಳಿಂದ ದೇಶಾದ್ಯಂತ ಇದೇ ರೀತಿಯ ಘಟನೆಗಳು ವರದಿಯಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಂಗ್ಲಾ ಕರಾವಳಿ ಜಿಲ್ಲೆ ಖುಲ್ನಾದಲ್ಲಿ, ಶಾಲೆಗೆ ಬೆಂಕಿ ಹಚ್ಚಲು ಯತ್ನಿಸಿದವರನ್ನು ಹಿಡಿದು ಸ್ಥಳೀಯ ನಾಗರಿಕರು ಪೊಲೀಸರಿಗೆ ಒಪ್ಪಿಸಿದ್ದಾರೆ. ಶುಕ್ರವಾರ ಅದೇ ಪ್ರದೇಶದಲ್ಲಿ ಪ್ರಾಥಮಿಕ ಶಾಲಾ ಕಟ್ಟಡಕ್ಕೆ ಬೆಂಕಿ ಹಚ್ಚುವ ಮತ್ತೊಂದು ಪ್ರಯತ್ನವನ್ನು ಸ್ಥಳೀಯರು ತಪ್ಪಿಸಿದ್ದಾರೆ ಎಂದು ಖುಲ್ನಾ ಪೊಲೀಸ್ ಮುಖ್ಯಸ್ಥ ಸೈದುರ್ ರೆಹಮಾನ್ ಹೇಳಿದ್ದಾರೆ.

ಸುಮಾರು 8,00,000 ಪೊಲೀಸರು, ಅರೆಸೇನಾ ಪಡೆಯನ್ನು ಮತದಾನಕ್ಕೆ ನಿಯೋಜಿಸಲಾಗಿದೆ.  ಶಾಂತಿ ಕಾಪಾಡಲು ಸೇನೆ, ನೌಕಾಪಡೆ ಮತ್ತು ವಾಯುಪಡೆಯ ಅಧಿಕಾರಿಗಳನ್ನು ದೇಶಾದ್ಯಂತ ನಿಯೋಜಿಸಲಾಗಿದೆ.

ಶುಕ್ರವಾರ ರಾತ್ರಿ ನಡೆದ ಪ್ರತ್ಯೇಕ ಘಟನೆಯಲ್ಲಿ ಪ್ಯಾಸೆಂಜರ್ ರೈಲಿಗೆ ಬೆಂಕಿ ಹಚ್ಚಿದ ಶಂಕಿತ ದಾಳಿಯಲ್ಲಿ ಮಗು ಸೇರಿದಂತೆ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ. ಎಂಟು ಮಂದಿ ಗಾಯಗೊಂಡಿದ್ದಾರೆ. ಕಳೆದ ತಿಂಗಳು ಪ್ರತಿಪಕ್ಷಗಳು ಕರೆ ನೀಡಿದ್ದ ದೇಶವ್ಯಾಪಿ ಮುಷ್ಕರದ ವೇಳೆ ಪ್ರತಿಭಟನಾಕಾರರು ರೈಲಿಗೆ ಬೆಂಕಿ ಹಚ್ಚಿ ನಾಲ್ವರು ಸಾವನ್ನಪ್ಪಿದ್ದರು.

ಬೆನಾಪೋಲ್ ಎಕ್ಸ್‌ಪ್ರೆಸ್‌ನಲ್ಲಿ ಶುಕ್ರವಾರ ನಡೆದ ಘಟನೆಯು ನಿಸ್ಸಂದೇಹವಾಗಿ ಮಾನವೀಯತೆಯ ವಿರುದ್ಧದ ವಿಧ್ವಂಸಕ ಕ್ರೌರ್ಯ ಎಂದು ಬಿಎನ್‌ಪಿಯ ಹಿರಿಯ ನಾಯಕ ರುಹುಲ್ ಕಬೀರ್ ರಿಜ್ವಿ ಹೇಳಿದ್ದಾರೆ. ಘಟನೆಗೆ ಆಡಳಿತ ಪಕ್ಷವನ್ನು ದೂಷಿಸಿದ್ದಾರೆ.

ಬಾಂಗ್ಲಾದೇಶದಲ್ಲಿ ಭಾನುವಾರ (ನಾಳೆ) ಸಾರ್ವತ್ರಿಕ ಚುನಾವಣೆ ನಡೆಯಲಿದೆ. ಪ್ರಮುಖ ಪ್ರತಿಪಕ್ಷ ಬಾಂಗ್ಲಾದೇಶ್ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ಚುನಾವಣೆಯನ್ನು ಬಹಿಷ್ಕರಿಸಿದ್ದರಿಂದ ಪ್ರಧಾನಿ ಶೇಖ್ ಹಸೀನಾ ಅವರು ಸತತ ನಾಲ್ಕನೇ ಅವಧಿಗೆ ಗೆಲುವು ಸಾಧಿಸುವ ನಿರೀಕ್ಷೆಯಿದೆ. ಭ್ರಷ್ಟಾಚಾರದ ಆರೋಪದಲ್ಲಿ ಬಾಂಗ್ಲಾದೇಶ್ ನ್ಯಾಷನಲಿಸ್ಟ್ ಪಾರ್ಟಿ ನಾಯಕ, ಮಾಜಿ ಪ್ರಧಾನಿ ಖಲೀದಾ ಜಿಯಾ (78) ಗೃಹಬಂಧನದಲ್ಲಿದ್ದಾರೆ.

ಇದನ್ನು ಓದಿ: ‘ಒಂದು ರಾಷ್ಟ್ರ ಒಂದು ಚುನಾವಣೆ‘: ಸಾರ್ವಜನಿಕ ಸಲಹೆ ಕೇಳಿದ ಕೋವಿಂದ್‌ ಸಮಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...