Homeಮುಖಪುಟಮತಗಟ್ಟೆಗಳ ಭದ್ರತಾ ಕ್ಯಾಮರಾ ದೃಶ್ಯ ಕೇಳಿ ಚುನಾವಣಾ ಆಯೋಗಕ್ಕೆ ಸಮಾಜವಾದಿ ಪಕ್ಷ ಪತ್ರ

ಮತಗಟ್ಟೆಗಳ ಭದ್ರತಾ ಕ್ಯಾಮರಾ ದೃಶ್ಯ ಕೇಳಿ ಚುನಾವಣಾ ಆಯೋಗಕ್ಕೆ ಸಮಾಜವಾದಿ ಪಕ್ಷ ಪತ್ರ

- Advertisement -
- Advertisement -

ಕಳೆದ ತಿಂಗಳು ಉತ್ತರ ಪ್ರದೇಶದಲ್ಲಿ ನಡೆದ ಏಳು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತಗಟ್ಟೆಗಳ ಭದ್ರತಾ ಕ್ಯಾಮೆರಾ ದೃಶ್ಯಗಳು ಮತ್ತು ವಿಡಿಯೋ ರೆಕಾರ್ಡಿಂಗ್‌ಗಳನ್ನು ಬಿಡುಗಡೆ ಮಾಡುವಂತೆ ಕೋರಿ ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿಗೆ ಜ್ಞಾಪಕ ಪತ್ರವನ್ನು ಸಲ್ಲಿಸಿರುವುದಾಗಿ ಸಮಾಜವಾದಿ ಪಕ್ಷ ಗುರುವಾರ ತಿಳಿಸಿದೆ. ಮತಗಟ್ಟೆಗಳ ಭದ್ರತಾ ಕ್ಯಾಮರಾ

ಕತೇಹಾರಿ, ಕುಂದರ್ಕಿ, ಫುಲ್‌ಪುರ್, ಮಜವಾನ್, ಮೀರಾಪುರ, ಖೈರ್ ಮತ್ತು ಗಾಜಿಯಾಬಾದ್ ಕ್ಷೇತ್ರಗಳಿಂದ ವೀಡಿಯೊ ದೃಶ್ಯಾವಳಿಗಳನ್ನು ನೀಡುವಂತೆ ಕೋರಲಾಗಿದೆ ಎಂದು ಪಕ್ಷವು ಹೇಳಿಕೆಯಲ್ಲಿ ತಿಳಿಸಿದೆ. ನವೆಂಬರ್ 13 ರಂದು ನಡೆದ ಉಪಚುನಾವಣೆಯಲ್ಲಿ ಸಮಾಜವಾದಿ ಪಕ್ಷವು ಈ ಎಲ್ಲಾ ಏಳು ಸ್ಥಾನಗಳನ್ನು ಕಳೆದುಕೊಂಡಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ನವೆಂಬರ್ 23 ರಂದು ಪ್ರಕಟವಾದ ಫಲಿತಾಂಶಗಳ ಪ್ರಕಾರ ಪಕ್ಷವು ಸಿಶಾಮ್ ಮತ್ತು ಕರ್ಹಾಲ್ ಕ್ಷೇತ್ರಗಳನ್ನು ಗೆದ್ದಿದೆ. ಈ ಉಪಚುನಾವಣೆಯಲ್ಲಿ ಬಿಜೆಪಿ ಆರು ಸ್ಥಾನಗಳನ್ನು ಗೆದ್ದರೆ, ಅದರ ಮಿತ್ರಪಕ್ಷವಾದ ರಾಷ್ಟ್ರೀಯ ಲೋಕದಳ ಒಂದು ಸ್ಥಾನವನ್ನು ಗಳಿಸಿತ್ತು. ಮತಗಟ್ಟೆಗಳ ಭದ್ರತಾ ಕ್ಯಾಮರಾ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು 1961 ರ ಚುನಾವಣಾ ನಿಯಮಗಳನ್ನು ತಿದ್ದುಪಡಿ ಮಾಡಿತ್ತು. ಡಿಸೆಂಬರ್ 20 ರಂದು ಮಾಡಿದ್ದ ತಿದ್ದುಪಡಿಯಲ್ಲಿ, ಮತದಾನಕ್ಕೆ ಸಂಬಂಧಿಸಿದ ದಾಖಲೆಗಳು ಸಾರ್ವಜನಿಕ ಲಭ್ಯವಾಗುವುದನ್ನು ಕೇಂದ್ರ ಸರ್ಕಾರವು ನಿರ್ಬಂಧಿಸಿತ್ತು. ಇದಾಗಿ ಕೆಲವು ದಿನಗಳ ನಂತರ ಸಮಾಜವಾದಿ ಪಕ್ಷವು ಈ ಜ್ಞಾಪಕ ಪತ್ರವನ್ನು ಸಲ್ಲಿಸಿದೆ.

ಹಳೆಯ ನಿಯಮವು, ಚುನಾವಣಾ ನಿಯಮಗಳ ನಿಯಮ 93(2)(ಎ) “ಚುನಾವಣೆಗೆ ಸಂಬಂಧಿಸಿದ ಎಲ್ಲಾ ಇತರ ದಾಖಲೆಗಳು ಸಾರ್ವಜನಿಕ ತಪಾಸಣೆಗೆ ಲಭ್ಯವಿರುತ್ತವೆ” ಎಂದು ಹೇಳುತ್ತದೆ. ಆದರೆ, ತಿದ್ದುಪಡಿ ಮಾಡಿದ ನಿಯಮವು, “ಚುನಾವಣೆಗೆ ಸಂಬಂಧಿಸಿದ ನಿಯಮಗಳಲ್ಲಿ ‘ನಿರ್ದಿಷ್ಟ’ಪಡಿಸಿದ ಎಲ್ಲಾ ಇತರ ದಾಖಲೆಗಳು ಸಾರ್ವಜನಿಕ ತಪಾಸಣೆಗೆ ಲಭ್ಯವಿರುತ್ತವೆ.” ಎಂದು ಹೇಳುತ್ತದೆ.

ಈ ಬದಲಾವಣೆಯೊಂದಿಗೆ, ಭದ್ರತಾ ಕ್ಯಾಮರಾ ಮತ್ತು ವೆಬ್‌ಕಾಸ್ಟಿಂಗ್ ದೃಶ್ಯಗಳು ಮತ್ತು ಅಭ್ಯರ್ಥಿಗಳ ವೀಡಿಯೊ ರೆಕಾರ್ಡಿಂಗ್‌ಗಳು ಸೇರಿದಂತೆ ಎಲ್ಲಾ ಚುನಾವಣೆಗೆ ಸಂಬಂಧಿತ ದಾಖಲೆಗಳನ್ನು ಸಾರ್ವಜನಿಕರಿಗೆ ಲಭ್ಯವಿರುವುದಿಲ್ಲ. ಚುನಾವಣಾ ನಿಯಮಗಳ ನಡವಳಿಕೆಯಲ್ಲಿ ನಿರ್ದಿಷ್ಟಪಡಿಸಿದ ದಾಖಲೆಗಳನ್ನು ಮಾತ್ರ ಸಾರ್ವಜನಿಕರು ಪರಿಶೀಲಿಸಬಹುದಾಗಿದೆ. ಈ ತಿದ್ದುಪಡಿಯನ್ನು ಸುಪ್ರಿಂಕೋರ್ಟ್‌ನಲ್ಲಿ ಪ್ರಶ್ನಿಸುವುದಾಗಿ ಮಂಗಳವಾರ ಕಾಂಗ್ರೆಸ್ ಹೇಳಿದೆ.

ಇದನ್ನೂ ಓದಿ: ಉಗುಳಲು ಆಗದ ಇತ್ತ ನುಂಗಲು ಆಗದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕುರಿತು ಒಂದೆರಡು ಮಾತು

ಉಗುಳಲು ಆಗದ ಇತ್ತ ನುಂಗಲು ಆಗದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕುರಿತು ಒಂದೆರಡು ಮಾತು….

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...