Homeಮುಖಪುಟಮತಗಟ್ಟೆಗಳ ಭದ್ರತಾ ಕ್ಯಾಮರಾ ದೃಶ್ಯ ಕೇಳಿ ಚುನಾವಣಾ ಆಯೋಗಕ್ಕೆ ಸಮಾಜವಾದಿ ಪಕ್ಷ ಪತ್ರ

ಮತಗಟ್ಟೆಗಳ ಭದ್ರತಾ ಕ್ಯಾಮರಾ ದೃಶ್ಯ ಕೇಳಿ ಚುನಾವಣಾ ಆಯೋಗಕ್ಕೆ ಸಮಾಜವಾದಿ ಪಕ್ಷ ಪತ್ರ

- Advertisement -
- Advertisement -

ಕಳೆದ ತಿಂಗಳು ಉತ್ತರ ಪ್ರದೇಶದಲ್ಲಿ ನಡೆದ ಏಳು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತಗಟ್ಟೆಗಳ ಭದ್ರತಾ ಕ್ಯಾಮೆರಾ ದೃಶ್ಯಗಳು ಮತ್ತು ವಿಡಿಯೋ ರೆಕಾರ್ಡಿಂಗ್‌ಗಳನ್ನು ಬಿಡುಗಡೆ ಮಾಡುವಂತೆ ಕೋರಿ ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿಗೆ ಜ್ಞಾಪಕ ಪತ್ರವನ್ನು ಸಲ್ಲಿಸಿರುವುದಾಗಿ ಸಮಾಜವಾದಿ ಪಕ್ಷ ಗುರುವಾರ ತಿಳಿಸಿದೆ. ಮತಗಟ್ಟೆಗಳ ಭದ್ರತಾ ಕ್ಯಾಮರಾ

ಕತೇಹಾರಿ, ಕುಂದರ್ಕಿ, ಫುಲ್‌ಪುರ್, ಮಜವಾನ್, ಮೀರಾಪುರ, ಖೈರ್ ಮತ್ತು ಗಾಜಿಯಾಬಾದ್ ಕ್ಷೇತ್ರಗಳಿಂದ ವೀಡಿಯೊ ದೃಶ್ಯಾವಳಿಗಳನ್ನು ನೀಡುವಂತೆ ಕೋರಲಾಗಿದೆ ಎಂದು ಪಕ್ಷವು ಹೇಳಿಕೆಯಲ್ಲಿ ತಿಳಿಸಿದೆ. ನವೆಂಬರ್ 13 ರಂದು ನಡೆದ ಉಪಚುನಾವಣೆಯಲ್ಲಿ ಸಮಾಜವಾದಿ ಪಕ್ಷವು ಈ ಎಲ್ಲಾ ಏಳು ಸ್ಥಾನಗಳನ್ನು ಕಳೆದುಕೊಂಡಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ನವೆಂಬರ್ 23 ರಂದು ಪ್ರಕಟವಾದ ಫಲಿತಾಂಶಗಳ ಪ್ರಕಾರ ಪಕ್ಷವು ಸಿಶಾಮ್ ಮತ್ತು ಕರ್ಹಾಲ್ ಕ್ಷೇತ್ರಗಳನ್ನು ಗೆದ್ದಿದೆ. ಈ ಉಪಚುನಾವಣೆಯಲ್ಲಿ ಬಿಜೆಪಿ ಆರು ಸ್ಥಾನಗಳನ್ನು ಗೆದ್ದರೆ, ಅದರ ಮಿತ್ರಪಕ್ಷವಾದ ರಾಷ್ಟ್ರೀಯ ಲೋಕದಳ ಒಂದು ಸ್ಥಾನವನ್ನು ಗಳಿಸಿತ್ತು. ಮತಗಟ್ಟೆಗಳ ಭದ್ರತಾ ಕ್ಯಾಮರಾ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು 1961 ರ ಚುನಾವಣಾ ನಿಯಮಗಳನ್ನು ತಿದ್ದುಪಡಿ ಮಾಡಿತ್ತು. ಡಿಸೆಂಬರ್ 20 ರಂದು ಮಾಡಿದ್ದ ತಿದ್ದುಪಡಿಯಲ್ಲಿ, ಮತದಾನಕ್ಕೆ ಸಂಬಂಧಿಸಿದ ದಾಖಲೆಗಳು ಸಾರ್ವಜನಿಕ ಲಭ್ಯವಾಗುವುದನ್ನು ಕೇಂದ್ರ ಸರ್ಕಾರವು ನಿರ್ಬಂಧಿಸಿತ್ತು. ಇದಾಗಿ ಕೆಲವು ದಿನಗಳ ನಂತರ ಸಮಾಜವಾದಿ ಪಕ್ಷವು ಈ ಜ್ಞಾಪಕ ಪತ್ರವನ್ನು ಸಲ್ಲಿಸಿದೆ.

ಹಳೆಯ ನಿಯಮವು, ಚುನಾವಣಾ ನಿಯಮಗಳ ನಿಯಮ 93(2)(ಎ) “ಚುನಾವಣೆಗೆ ಸಂಬಂಧಿಸಿದ ಎಲ್ಲಾ ಇತರ ದಾಖಲೆಗಳು ಸಾರ್ವಜನಿಕ ತಪಾಸಣೆಗೆ ಲಭ್ಯವಿರುತ್ತವೆ” ಎಂದು ಹೇಳುತ್ತದೆ. ಆದರೆ, ತಿದ್ದುಪಡಿ ಮಾಡಿದ ನಿಯಮವು, “ಚುನಾವಣೆಗೆ ಸಂಬಂಧಿಸಿದ ನಿಯಮಗಳಲ್ಲಿ ‘ನಿರ್ದಿಷ್ಟ’ಪಡಿಸಿದ ಎಲ್ಲಾ ಇತರ ದಾಖಲೆಗಳು ಸಾರ್ವಜನಿಕ ತಪಾಸಣೆಗೆ ಲಭ್ಯವಿರುತ್ತವೆ.” ಎಂದು ಹೇಳುತ್ತದೆ.

ಈ ಬದಲಾವಣೆಯೊಂದಿಗೆ, ಭದ್ರತಾ ಕ್ಯಾಮರಾ ಮತ್ತು ವೆಬ್‌ಕಾಸ್ಟಿಂಗ್ ದೃಶ್ಯಗಳು ಮತ್ತು ಅಭ್ಯರ್ಥಿಗಳ ವೀಡಿಯೊ ರೆಕಾರ್ಡಿಂಗ್‌ಗಳು ಸೇರಿದಂತೆ ಎಲ್ಲಾ ಚುನಾವಣೆಗೆ ಸಂಬಂಧಿತ ದಾಖಲೆಗಳನ್ನು ಸಾರ್ವಜನಿಕರಿಗೆ ಲಭ್ಯವಿರುವುದಿಲ್ಲ. ಚುನಾವಣಾ ನಿಯಮಗಳ ನಡವಳಿಕೆಯಲ್ಲಿ ನಿರ್ದಿಷ್ಟಪಡಿಸಿದ ದಾಖಲೆಗಳನ್ನು ಮಾತ್ರ ಸಾರ್ವಜನಿಕರು ಪರಿಶೀಲಿಸಬಹುದಾಗಿದೆ. ಈ ತಿದ್ದುಪಡಿಯನ್ನು ಸುಪ್ರಿಂಕೋರ್ಟ್‌ನಲ್ಲಿ ಪ್ರಶ್ನಿಸುವುದಾಗಿ ಮಂಗಳವಾರ ಕಾಂಗ್ರೆಸ್ ಹೇಳಿದೆ.

ಇದನ್ನೂ ಓದಿ: ಉಗುಳಲು ಆಗದ ಇತ್ತ ನುಂಗಲು ಆಗದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕುರಿತು ಒಂದೆರಡು ಮಾತು

ಉಗುಳಲು ಆಗದ ಇತ್ತ ನುಂಗಲು ಆಗದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕುರಿತು ಒಂದೆರಡು ಮಾತು….

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....