Homeಕರ್ನಾಟಕಸೆ.27 ರಂದು ಉಡುಪಿಯಲ್ಲಿ 'ಪೂನಾ ಒಪ್ಪಂದ ದಿನ'ದ ನೆನಪಿನ ಕಾರ್ಯಕ್ರಮ

ಸೆ.27 ರಂದು ಉಡುಪಿಯಲ್ಲಿ ‘ಪೂನಾ ಒಪ್ಪಂದ ದಿನ’ದ ನೆನಪಿನ ಕಾರ್ಯಕ್ರಮ

ಅಮೂಲ್ಯವಾದ ಹಣ್ಣೊಂದನ್ನು ನನ್ನ ಜನಗಳಿಗೆಂದು ತಂದಿದ್ದೆ. ಆದರೆ ಅದನ್ನು ಅದನ್ನು ಮಣ್ಣುಪಾಲು ಮಾಡಿ, ಬರೀ ಸಿಪ್ಪೆಯನ್ನು ನನ್ನ ಮುಖಕ್ಕೆ ಎಸೆದಿದ್ದಾರೆ - ಅಂಬೇಡ್ಕರ್

- Advertisement -
- Advertisement -

ಕರ್ನಾಟಕ ದಲಿತ ಸಮಘರ್ಷ ಸಮಿತಿ (ಅಂಬೇಡ್ಕರ್‌ವಾದ) ವತಿಯಿಂದ, ಗಾಂಧೀಜಿ ಮತ್ತು ಅಂಬೇಡ್ಕರ್ ನಡುವೆ ಏರ್ಪಟ್ಟಿದ್ದ 1932 ಸೆ.24 ರ ಒಪ್ಪಂದವನ್ನು “ಪೂನಾ ಒಪ್ಪಂದ ದಿನ” ಎಂದು ಸ್ಮರಿಸುವ ಕಾರ್ಯಕ್ರಮವನ್ನು ಇದೇ ಸೆ. 27ರಂದು ಉಡುಪಿಯ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಪೂನಾ ಒಪ್ಪಂದದ ಚಾರಿತ್ರಿಕ ಮಹತ್ವದ ಕುರಿತು ವಕೀಲರಾದ ಮಂಜುನಾಥ್.ವಿ ಮುಖ್ಯ ಭಾಷಣ ಮಾತನಾಡಲಿದ್ದಾರೆ ಎಂದು ಕಾರ್ಯಕ್ರಮದ ಆಯೋಜಕರಾದ ಸುಂದರ್ ಮಾಸ್ತರ್ ನಾನುಗೌರಿ.ಕಾಂಗೆ ತಿಳಿಸಿದರು.

“ಸೆ.24 ಪೂನಾ ಒಪ್ಪಂದ ನಡೆದ ದಿನ. ಗಾಂಧಿ ಮತ್ತು ಅಂಬೇಡ್ಕರ್ ನಡುವೆ ಒಪ್ಪಂದ ಏರ್ಪಟ್ಟು, ದಲಿತರ ಪಾಲಿಗೆ ಐತಿಹಾಸಿಕ ಪ್ರಮಾದವಾದ ದಿನ. 1932 ರಲ್ಲಿ ಲಂಡನ್‌ನಲ್ಲಿ ನಡೆದ ದುಂಡು ಮೇಜಿನ ಸಭೆಯಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಭಾರತದ ದಲಿತರಿಗೆ ಎರಡು ಮತಗಳ ಹಕ್ಕನ್ನು ತಂದುಕೊಟ್ಟಿದ್ದರು. ಆದರೆ ಇದರಿಂದ ಹಿಂದೂ ಸಮಾಜ ವಿಭಜನೆಯಾಗುತ್ತದೆ ಎಂಬ ನೆಪವೊಡ್ಡಿ, ಇದನ್ನು ವಿರೋಧಿಸಿ ಗಾಂಧೀಜಿಯವರು ಎರವಾಡ ಜೈಲಿನಲ್ಲಿ 21 ದಿನಗಳ ಅಮರಣಾಂತ ಉಪವಾಸ ಕುಳಿತಿದ್ದರು” ಎಂದು  ದಸಂಸದ ಜಿಲ್ಲಾ ಪ್ರಧಾನ ಸಂಚಾಲಕರಾದ ಸುಂದರ್ ಮಾಸ್ತರ್ ಹೇಳಿದರು.

ಇದನ್ನೂ ಓದಿ: ದಲಿತರ ಮೀಸಲಾತಿ: ಬೆಳಕಾಗಬೇಕಾಗಿದೆ ಬೆಂಕಿ – ಡಾ.ರವಿಕುಮಾರ್ ನೀಹ 

“ಎರಡು ಮತಗಳ ಹಕ್ಕಿನ ಪ್ರಸ್ತಾವವನ್ನು ಕೈಬಿಡುವಂತೆ ಅಂಬೇಡ್ಕರ್‌ಗೆ ಬೆದರಿಕೆಗಳು ಬಂದರೂ ಜಗ್ಗಲಿಲ್ಲ. ರಾಷ್ಟ್ರದ್ರೋಹವನ್ನು ಮಾಡುತ್ತಿದ್ದೀರಿ, ಗಾಂಧಿಯವರ ಸಾವಿಗೆ ನೀವೇ ಕಾರಣರಾಗುತ್ತೀರಿ ಎಂದೆಲ್ಲಾ ಹೇಳಿ, ಕೊನೆಗೆ ಕಸ್ತೂರ್ ಬಾ ಗಾಂಧಿಯವರ ಬೇಡಿಕೆಯನ್ನು ಮನ್ನಿಸಿ ಅಂಬೇಡ್ಕರ್ ಈ ಒಪ್ಪಂದಕ್ಕೆ ಸಹಿ ಹಾಕಿದರು. ಅಂದೇನಾದರೂ ಇದು ನಡೆಯದಿದ್ದರೆ, ಇಂದು ದಲಿತರು ರಾಜಕೀಯವಾಗಿ ಇಂತಹ ಸ್ಥಿತಿಯಲ್ಲಿರುತ್ತಿರಲಿಲ್ಲ. ಹಾಗಾಗಿಯೇ ಈ ದಿನವನ್ನು ಸ್ಮರಿಸುವ ಸಲುವಾಗಿ ಮತ್ತು ದಲಿತರಿಗಾದ ಅನ್ಯಾಯವನ್ನು ತಿಳಿಸುವ ಸಲುವಾಗಿ ಸೆ. 27ರಂದು ಬ್ರಹ್ಮಾವರದಲ್ಲಿರುವ ಅಂಬೇಡ್ಕರ್ ಭವನದಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ರಾಜ್ಯದಾದ್ಯಂತ ಈ ಕಾರ್ಯಕ್ರಮ ನಡೆಯುತ್ತಿದೆ. ಇಲ್ಲಿ ನಾವು ಮಾಡುತ್ತಿದ್ದೇವೆ” ಎಂದು ಅವರು ಹೇಳಿದ್ದಾರೆ.

ಎರಡು ಮತಗಳ ಹಕ್ಕನ್ನು ನಿರಾಕರಿಸಿ, ದಲಿತರಿಗೆಂದೇ ದೇಶದಾದ್ಯಂತ ಸುಮಾರು 148 ಮೀಸಲು ಕ್ಷೇತ್ರಗಳನ್ನು ಬಿಟ್ಟುಕೊಡಲಾಯಿತು. ಆದರೆ ಅಂಬೇಡ್ಕರ್ ಅವರಿಗೆ ಸಮಾಧಾನವಾಗಿರಲಿಲ್ಲ. ಈ ಸಂಸರ್ಭದಲ್ಲಿ ಪತ್ರಿಕೆಗಳೊಂದಿಗೆ ಮಾತನಾಡಿದ ಅಂಬೇಡ್ಕರ್, “ಅಮೂಲ್ಯವಾದ ಹಣ್ಣೊಂದನ್ನು ನನ್ನ ಜನಗಳಿಗೆಂದು ತಂದಿದ್ದೆ. ಆದರೆ ಅದನ್ನು ಅದನ್ನು ಮಣ್ಣುಪಾಲು ಮಾಡಿ, ಬರೀ ಸಿಪ್ಪೆಯನ್ನು ನನ್ನ ಮುಖಕ್ಕೆ ಎಸೆದಿದ್ದಾರೆ” ಎಂದು ವಿಷಾದ ವ್ಯಕ್ತಪಡಿಸಿದ್ದರು.


ಇದನ್ನೂ ಓದಿ: ಯುವಜನತೆಗೆ ಕೇಳಿಸಿದ ಗಾಂಧಿ, ಓದಿಸಿದ ಗಾಂಧಿ ಮತ್ತು ನಂಬಿಸಿದ ಗಾಂಧಿಯ ಕುರಿತು…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...