Homeಕರ್ನಾಟಕಸೆ.27 ರಂದು ಉಡುಪಿಯಲ್ಲಿ 'ಪೂನಾ ಒಪ್ಪಂದ ದಿನ'ದ ನೆನಪಿನ ಕಾರ್ಯಕ್ರಮ

ಸೆ.27 ರಂದು ಉಡುಪಿಯಲ್ಲಿ ‘ಪೂನಾ ಒಪ್ಪಂದ ದಿನ’ದ ನೆನಪಿನ ಕಾರ್ಯಕ್ರಮ

ಅಮೂಲ್ಯವಾದ ಹಣ್ಣೊಂದನ್ನು ನನ್ನ ಜನಗಳಿಗೆಂದು ತಂದಿದ್ದೆ. ಆದರೆ ಅದನ್ನು ಅದನ್ನು ಮಣ್ಣುಪಾಲು ಮಾಡಿ, ಬರೀ ಸಿಪ್ಪೆಯನ್ನು ನನ್ನ ಮುಖಕ್ಕೆ ಎಸೆದಿದ್ದಾರೆ - ಅಂಬೇಡ್ಕರ್

- Advertisement -
- Advertisement -

ಕರ್ನಾಟಕ ದಲಿತ ಸಮಘರ್ಷ ಸಮಿತಿ (ಅಂಬೇಡ್ಕರ್‌ವಾದ) ವತಿಯಿಂದ, ಗಾಂಧೀಜಿ ಮತ್ತು ಅಂಬೇಡ್ಕರ್ ನಡುವೆ ಏರ್ಪಟ್ಟಿದ್ದ 1932 ಸೆ.24 ರ ಒಪ್ಪಂದವನ್ನು “ಪೂನಾ ಒಪ್ಪಂದ ದಿನ” ಎಂದು ಸ್ಮರಿಸುವ ಕಾರ್ಯಕ್ರಮವನ್ನು ಇದೇ ಸೆ. 27ರಂದು ಉಡುಪಿಯ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಪೂನಾ ಒಪ್ಪಂದದ ಚಾರಿತ್ರಿಕ ಮಹತ್ವದ ಕುರಿತು ವಕೀಲರಾದ ಮಂಜುನಾಥ್.ವಿ ಮುಖ್ಯ ಭಾಷಣ ಮಾತನಾಡಲಿದ್ದಾರೆ ಎಂದು ಕಾರ್ಯಕ್ರಮದ ಆಯೋಜಕರಾದ ಸುಂದರ್ ಮಾಸ್ತರ್ ನಾನುಗೌರಿ.ಕಾಂಗೆ ತಿಳಿಸಿದರು.

“ಸೆ.24 ಪೂನಾ ಒಪ್ಪಂದ ನಡೆದ ದಿನ. ಗಾಂಧಿ ಮತ್ತು ಅಂಬೇಡ್ಕರ್ ನಡುವೆ ಒಪ್ಪಂದ ಏರ್ಪಟ್ಟು, ದಲಿತರ ಪಾಲಿಗೆ ಐತಿಹಾಸಿಕ ಪ್ರಮಾದವಾದ ದಿನ. 1932 ರಲ್ಲಿ ಲಂಡನ್‌ನಲ್ಲಿ ನಡೆದ ದುಂಡು ಮೇಜಿನ ಸಭೆಯಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಭಾರತದ ದಲಿತರಿಗೆ ಎರಡು ಮತಗಳ ಹಕ್ಕನ್ನು ತಂದುಕೊಟ್ಟಿದ್ದರು. ಆದರೆ ಇದರಿಂದ ಹಿಂದೂ ಸಮಾಜ ವಿಭಜನೆಯಾಗುತ್ತದೆ ಎಂಬ ನೆಪವೊಡ್ಡಿ, ಇದನ್ನು ವಿರೋಧಿಸಿ ಗಾಂಧೀಜಿಯವರು ಎರವಾಡ ಜೈಲಿನಲ್ಲಿ 21 ದಿನಗಳ ಅಮರಣಾಂತ ಉಪವಾಸ ಕುಳಿತಿದ್ದರು” ಎಂದು  ದಸಂಸದ ಜಿಲ್ಲಾ ಪ್ರಧಾನ ಸಂಚಾಲಕರಾದ ಸುಂದರ್ ಮಾಸ್ತರ್ ಹೇಳಿದರು.

ಇದನ್ನೂ ಓದಿ: ದಲಿತರ ಮೀಸಲಾತಿ: ಬೆಳಕಾಗಬೇಕಾಗಿದೆ ಬೆಂಕಿ – ಡಾ.ರವಿಕುಮಾರ್ ನೀಹ 

“ಎರಡು ಮತಗಳ ಹಕ್ಕಿನ ಪ್ರಸ್ತಾವವನ್ನು ಕೈಬಿಡುವಂತೆ ಅಂಬೇಡ್ಕರ್‌ಗೆ ಬೆದರಿಕೆಗಳು ಬಂದರೂ ಜಗ್ಗಲಿಲ್ಲ. ರಾಷ್ಟ್ರದ್ರೋಹವನ್ನು ಮಾಡುತ್ತಿದ್ದೀರಿ, ಗಾಂಧಿಯವರ ಸಾವಿಗೆ ನೀವೇ ಕಾರಣರಾಗುತ್ತೀರಿ ಎಂದೆಲ್ಲಾ ಹೇಳಿ, ಕೊನೆಗೆ ಕಸ್ತೂರ್ ಬಾ ಗಾಂಧಿಯವರ ಬೇಡಿಕೆಯನ್ನು ಮನ್ನಿಸಿ ಅಂಬೇಡ್ಕರ್ ಈ ಒಪ್ಪಂದಕ್ಕೆ ಸಹಿ ಹಾಕಿದರು. ಅಂದೇನಾದರೂ ಇದು ನಡೆಯದಿದ್ದರೆ, ಇಂದು ದಲಿತರು ರಾಜಕೀಯವಾಗಿ ಇಂತಹ ಸ್ಥಿತಿಯಲ್ಲಿರುತ್ತಿರಲಿಲ್ಲ. ಹಾಗಾಗಿಯೇ ಈ ದಿನವನ್ನು ಸ್ಮರಿಸುವ ಸಲುವಾಗಿ ಮತ್ತು ದಲಿತರಿಗಾದ ಅನ್ಯಾಯವನ್ನು ತಿಳಿಸುವ ಸಲುವಾಗಿ ಸೆ. 27ರಂದು ಬ್ರಹ್ಮಾವರದಲ್ಲಿರುವ ಅಂಬೇಡ್ಕರ್ ಭವನದಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ರಾಜ್ಯದಾದ್ಯಂತ ಈ ಕಾರ್ಯಕ್ರಮ ನಡೆಯುತ್ತಿದೆ. ಇಲ್ಲಿ ನಾವು ಮಾಡುತ್ತಿದ್ದೇವೆ” ಎಂದು ಅವರು ಹೇಳಿದ್ದಾರೆ.

ಎರಡು ಮತಗಳ ಹಕ್ಕನ್ನು ನಿರಾಕರಿಸಿ, ದಲಿತರಿಗೆಂದೇ ದೇಶದಾದ್ಯಂತ ಸುಮಾರು 148 ಮೀಸಲು ಕ್ಷೇತ್ರಗಳನ್ನು ಬಿಟ್ಟುಕೊಡಲಾಯಿತು. ಆದರೆ ಅಂಬೇಡ್ಕರ್ ಅವರಿಗೆ ಸಮಾಧಾನವಾಗಿರಲಿಲ್ಲ. ಈ ಸಂಸರ್ಭದಲ್ಲಿ ಪತ್ರಿಕೆಗಳೊಂದಿಗೆ ಮಾತನಾಡಿದ ಅಂಬೇಡ್ಕರ್, “ಅಮೂಲ್ಯವಾದ ಹಣ್ಣೊಂದನ್ನು ನನ್ನ ಜನಗಳಿಗೆಂದು ತಂದಿದ್ದೆ. ಆದರೆ ಅದನ್ನು ಅದನ್ನು ಮಣ್ಣುಪಾಲು ಮಾಡಿ, ಬರೀ ಸಿಪ್ಪೆಯನ್ನು ನನ್ನ ಮುಖಕ್ಕೆ ಎಸೆದಿದ್ದಾರೆ” ಎಂದು ವಿಷಾದ ವ್ಯಕ್ತಪಡಿಸಿದ್ದರು.


ಇದನ್ನೂ ಓದಿ: ಯುವಜನತೆಗೆ ಕೇಳಿಸಿದ ಗಾಂಧಿ, ಓದಿಸಿದ ಗಾಂಧಿ ಮತ್ತು ನಂಬಿಸಿದ ಗಾಂಧಿಯ ಕುರಿತು…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...