Homeಕರ್ನಾಟಕಸೆ.27 ರಂದು ಉಡುಪಿಯಲ್ಲಿ 'ಪೂನಾ ಒಪ್ಪಂದ ದಿನ'ದ ನೆನಪಿನ ಕಾರ್ಯಕ್ರಮ

ಸೆ.27 ರಂದು ಉಡುಪಿಯಲ್ಲಿ ‘ಪೂನಾ ಒಪ್ಪಂದ ದಿನ’ದ ನೆನಪಿನ ಕಾರ್ಯಕ್ರಮ

ಅಮೂಲ್ಯವಾದ ಹಣ್ಣೊಂದನ್ನು ನನ್ನ ಜನಗಳಿಗೆಂದು ತಂದಿದ್ದೆ. ಆದರೆ ಅದನ್ನು ಅದನ್ನು ಮಣ್ಣುಪಾಲು ಮಾಡಿ, ಬರೀ ಸಿಪ್ಪೆಯನ್ನು ನನ್ನ ಮುಖಕ್ಕೆ ಎಸೆದಿದ್ದಾರೆ - ಅಂಬೇಡ್ಕರ್

- Advertisement -
- Advertisement -

ಕರ್ನಾಟಕ ದಲಿತ ಸಮಘರ್ಷ ಸಮಿತಿ (ಅಂಬೇಡ್ಕರ್‌ವಾದ) ವತಿಯಿಂದ, ಗಾಂಧೀಜಿ ಮತ್ತು ಅಂಬೇಡ್ಕರ್ ನಡುವೆ ಏರ್ಪಟ್ಟಿದ್ದ 1932 ಸೆ.24 ರ ಒಪ್ಪಂದವನ್ನು “ಪೂನಾ ಒಪ್ಪಂದ ದಿನ” ಎಂದು ಸ್ಮರಿಸುವ ಕಾರ್ಯಕ್ರಮವನ್ನು ಇದೇ ಸೆ. 27ರಂದು ಉಡುಪಿಯ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಪೂನಾ ಒಪ್ಪಂದದ ಚಾರಿತ್ರಿಕ ಮಹತ್ವದ ಕುರಿತು ವಕೀಲರಾದ ಮಂಜುನಾಥ್.ವಿ ಮುಖ್ಯ ಭಾಷಣ ಮಾತನಾಡಲಿದ್ದಾರೆ ಎಂದು ಕಾರ್ಯಕ್ರಮದ ಆಯೋಜಕರಾದ ಸುಂದರ್ ಮಾಸ್ತರ್ ನಾನುಗೌರಿ.ಕಾಂಗೆ ತಿಳಿಸಿದರು.

“ಸೆ.24 ಪೂನಾ ಒಪ್ಪಂದ ನಡೆದ ದಿನ. ಗಾಂಧಿ ಮತ್ತು ಅಂಬೇಡ್ಕರ್ ನಡುವೆ ಒಪ್ಪಂದ ಏರ್ಪಟ್ಟು, ದಲಿತರ ಪಾಲಿಗೆ ಐತಿಹಾಸಿಕ ಪ್ರಮಾದವಾದ ದಿನ. 1932 ರಲ್ಲಿ ಲಂಡನ್‌ನಲ್ಲಿ ನಡೆದ ದುಂಡು ಮೇಜಿನ ಸಭೆಯಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಭಾರತದ ದಲಿತರಿಗೆ ಎರಡು ಮತಗಳ ಹಕ್ಕನ್ನು ತಂದುಕೊಟ್ಟಿದ್ದರು. ಆದರೆ ಇದರಿಂದ ಹಿಂದೂ ಸಮಾಜ ವಿಭಜನೆಯಾಗುತ್ತದೆ ಎಂಬ ನೆಪವೊಡ್ಡಿ, ಇದನ್ನು ವಿರೋಧಿಸಿ ಗಾಂಧೀಜಿಯವರು ಎರವಾಡ ಜೈಲಿನಲ್ಲಿ 21 ದಿನಗಳ ಅಮರಣಾಂತ ಉಪವಾಸ ಕುಳಿತಿದ್ದರು” ಎಂದು  ದಸಂಸದ ಜಿಲ್ಲಾ ಪ್ರಧಾನ ಸಂಚಾಲಕರಾದ ಸುಂದರ್ ಮಾಸ್ತರ್ ಹೇಳಿದರು.

ಇದನ್ನೂ ಓದಿ: ದಲಿತರ ಮೀಸಲಾತಿ: ಬೆಳಕಾಗಬೇಕಾಗಿದೆ ಬೆಂಕಿ – ಡಾ.ರವಿಕುಮಾರ್ ನೀಹ 

“ಎರಡು ಮತಗಳ ಹಕ್ಕಿನ ಪ್ರಸ್ತಾವವನ್ನು ಕೈಬಿಡುವಂತೆ ಅಂಬೇಡ್ಕರ್‌ಗೆ ಬೆದರಿಕೆಗಳು ಬಂದರೂ ಜಗ್ಗಲಿಲ್ಲ. ರಾಷ್ಟ್ರದ್ರೋಹವನ್ನು ಮಾಡುತ್ತಿದ್ದೀರಿ, ಗಾಂಧಿಯವರ ಸಾವಿಗೆ ನೀವೇ ಕಾರಣರಾಗುತ್ತೀರಿ ಎಂದೆಲ್ಲಾ ಹೇಳಿ, ಕೊನೆಗೆ ಕಸ್ತೂರ್ ಬಾ ಗಾಂಧಿಯವರ ಬೇಡಿಕೆಯನ್ನು ಮನ್ನಿಸಿ ಅಂಬೇಡ್ಕರ್ ಈ ಒಪ್ಪಂದಕ್ಕೆ ಸಹಿ ಹಾಕಿದರು. ಅಂದೇನಾದರೂ ಇದು ನಡೆಯದಿದ್ದರೆ, ಇಂದು ದಲಿತರು ರಾಜಕೀಯವಾಗಿ ಇಂತಹ ಸ್ಥಿತಿಯಲ್ಲಿರುತ್ತಿರಲಿಲ್ಲ. ಹಾಗಾಗಿಯೇ ಈ ದಿನವನ್ನು ಸ್ಮರಿಸುವ ಸಲುವಾಗಿ ಮತ್ತು ದಲಿತರಿಗಾದ ಅನ್ಯಾಯವನ್ನು ತಿಳಿಸುವ ಸಲುವಾಗಿ ಸೆ. 27ರಂದು ಬ್ರಹ್ಮಾವರದಲ್ಲಿರುವ ಅಂಬೇಡ್ಕರ್ ಭವನದಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ರಾಜ್ಯದಾದ್ಯಂತ ಈ ಕಾರ್ಯಕ್ರಮ ನಡೆಯುತ್ತಿದೆ. ಇಲ್ಲಿ ನಾವು ಮಾಡುತ್ತಿದ್ದೇವೆ” ಎಂದು ಅವರು ಹೇಳಿದ್ದಾರೆ.

ಎರಡು ಮತಗಳ ಹಕ್ಕನ್ನು ನಿರಾಕರಿಸಿ, ದಲಿತರಿಗೆಂದೇ ದೇಶದಾದ್ಯಂತ ಸುಮಾರು 148 ಮೀಸಲು ಕ್ಷೇತ್ರಗಳನ್ನು ಬಿಟ್ಟುಕೊಡಲಾಯಿತು. ಆದರೆ ಅಂಬೇಡ್ಕರ್ ಅವರಿಗೆ ಸಮಾಧಾನವಾಗಿರಲಿಲ್ಲ. ಈ ಸಂಸರ್ಭದಲ್ಲಿ ಪತ್ರಿಕೆಗಳೊಂದಿಗೆ ಮಾತನಾಡಿದ ಅಂಬೇಡ್ಕರ್, “ಅಮೂಲ್ಯವಾದ ಹಣ್ಣೊಂದನ್ನು ನನ್ನ ಜನಗಳಿಗೆಂದು ತಂದಿದ್ದೆ. ಆದರೆ ಅದನ್ನು ಅದನ್ನು ಮಣ್ಣುಪಾಲು ಮಾಡಿ, ಬರೀ ಸಿಪ್ಪೆಯನ್ನು ನನ್ನ ಮುಖಕ್ಕೆ ಎಸೆದಿದ್ದಾರೆ” ಎಂದು ವಿಷಾದ ವ್ಯಕ್ತಪಡಿಸಿದ್ದರು.


ಇದನ್ನೂ ಓದಿ: ಯುವಜನತೆಗೆ ಕೇಳಿಸಿದ ಗಾಂಧಿ, ಓದಿಸಿದ ಗಾಂಧಿ ಮತ್ತು ನಂಬಿಸಿದ ಗಾಂಧಿಯ ಕುರಿತು…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...