Homeಕರ್ನಾಟಕಸೆ.27 ರಂದು ಉಡುಪಿಯಲ್ಲಿ 'ಪೂನಾ ಒಪ್ಪಂದ ದಿನ'ದ ನೆನಪಿನ ಕಾರ್ಯಕ್ರಮ

ಸೆ.27 ರಂದು ಉಡುಪಿಯಲ್ಲಿ ‘ಪೂನಾ ಒಪ್ಪಂದ ದಿನ’ದ ನೆನಪಿನ ಕಾರ್ಯಕ್ರಮ

ಅಮೂಲ್ಯವಾದ ಹಣ್ಣೊಂದನ್ನು ನನ್ನ ಜನಗಳಿಗೆಂದು ತಂದಿದ್ದೆ. ಆದರೆ ಅದನ್ನು ಅದನ್ನು ಮಣ್ಣುಪಾಲು ಮಾಡಿ, ಬರೀ ಸಿಪ್ಪೆಯನ್ನು ನನ್ನ ಮುಖಕ್ಕೆ ಎಸೆದಿದ್ದಾರೆ - ಅಂಬೇಡ್ಕರ್

- Advertisement -
- Advertisement -

ಕರ್ನಾಟಕ ದಲಿತ ಸಮಘರ್ಷ ಸಮಿತಿ (ಅಂಬೇಡ್ಕರ್‌ವಾದ) ವತಿಯಿಂದ, ಗಾಂಧೀಜಿ ಮತ್ತು ಅಂಬೇಡ್ಕರ್ ನಡುವೆ ಏರ್ಪಟ್ಟಿದ್ದ 1932 ಸೆ.24 ರ ಒಪ್ಪಂದವನ್ನು “ಪೂನಾ ಒಪ್ಪಂದ ದಿನ” ಎಂದು ಸ್ಮರಿಸುವ ಕಾರ್ಯಕ್ರಮವನ್ನು ಇದೇ ಸೆ. 27ರಂದು ಉಡುಪಿಯ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಪೂನಾ ಒಪ್ಪಂದದ ಚಾರಿತ್ರಿಕ ಮಹತ್ವದ ಕುರಿತು ವಕೀಲರಾದ ಮಂಜುನಾಥ್.ವಿ ಮುಖ್ಯ ಭಾಷಣ ಮಾತನಾಡಲಿದ್ದಾರೆ ಎಂದು ಕಾರ್ಯಕ್ರಮದ ಆಯೋಜಕರಾದ ಸುಂದರ್ ಮಾಸ್ತರ್ ನಾನುಗೌರಿ.ಕಾಂಗೆ ತಿಳಿಸಿದರು.

“ಸೆ.24 ಪೂನಾ ಒಪ್ಪಂದ ನಡೆದ ದಿನ. ಗಾಂಧಿ ಮತ್ತು ಅಂಬೇಡ್ಕರ್ ನಡುವೆ ಒಪ್ಪಂದ ಏರ್ಪಟ್ಟು, ದಲಿತರ ಪಾಲಿಗೆ ಐತಿಹಾಸಿಕ ಪ್ರಮಾದವಾದ ದಿನ. 1932 ರಲ್ಲಿ ಲಂಡನ್‌ನಲ್ಲಿ ನಡೆದ ದುಂಡು ಮೇಜಿನ ಸಭೆಯಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಭಾರತದ ದಲಿತರಿಗೆ ಎರಡು ಮತಗಳ ಹಕ್ಕನ್ನು ತಂದುಕೊಟ್ಟಿದ್ದರು. ಆದರೆ ಇದರಿಂದ ಹಿಂದೂ ಸಮಾಜ ವಿಭಜನೆಯಾಗುತ್ತದೆ ಎಂಬ ನೆಪವೊಡ್ಡಿ, ಇದನ್ನು ವಿರೋಧಿಸಿ ಗಾಂಧೀಜಿಯವರು ಎರವಾಡ ಜೈಲಿನಲ್ಲಿ 21 ದಿನಗಳ ಅಮರಣಾಂತ ಉಪವಾಸ ಕುಳಿತಿದ್ದರು” ಎಂದು  ದಸಂಸದ ಜಿಲ್ಲಾ ಪ್ರಧಾನ ಸಂಚಾಲಕರಾದ ಸುಂದರ್ ಮಾಸ್ತರ್ ಹೇಳಿದರು.

ಇದನ್ನೂ ಓದಿ: ದಲಿತರ ಮೀಸಲಾತಿ: ಬೆಳಕಾಗಬೇಕಾಗಿದೆ ಬೆಂಕಿ – ಡಾ.ರವಿಕುಮಾರ್ ನೀಹ 

“ಎರಡು ಮತಗಳ ಹಕ್ಕಿನ ಪ್ರಸ್ತಾವವನ್ನು ಕೈಬಿಡುವಂತೆ ಅಂಬೇಡ್ಕರ್‌ಗೆ ಬೆದರಿಕೆಗಳು ಬಂದರೂ ಜಗ್ಗಲಿಲ್ಲ. ರಾಷ್ಟ್ರದ್ರೋಹವನ್ನು ಮಾಡುತ್ತಿದ್ದೀರಿ, ಗಾಂಧಿಯವರ ಸಾವಿಗೆ ನೀವೇ ಕಾರಣರಾಗುತ್ತೀರಿ ಎಂದೆಲ್ಲಾ ಹೇಳಿ, ಕೊನೆಗೆ ಕಸ್ತೂರ್ ಬಾ ಗಾಂಧಿಯವರ ಬೇಡಿಕೆಯನ್ನು ಮನ್ನಿಸಿ ಅಂಬೇಡ್ಕರ್ ಈ ಒಪ್ಪಂದಕ್ಕೆ ಸಹಿ ಹಾಕಿದರು. ಅಂದೇನಾದರೂ ಇದು ನಡೆಯದಿದ್ದರೆ, ಇಂದು ದಲಿತರು ರಾಜಕೀಯವಾಗಿ ಇಂತಹ ಸ್ಥಿತಿಯಲ್ಲಿರುತ್ತಿರಲಿಲ್ಲ. ಹಾಗಾಗಿಯೇ ಈ ದಿನವನ್ನು ಸ್ಮರಿಸುವ ಸಲುವಾಗಿ ಮತ್ತು ದಲಿತರಿಗಾದ ಅನ್ಯಾಯವನ್ನು ತಿಳಿಸುವ ಸಲುವಾಗಿ ಸೆ. 27ರಂದು ಬ್ರಹ್ಮಾವರದಲ್ಲಿರುವ ಅಂಬೇಡ್ಕರ್ ಭವನದಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ರಾಜ್ಯದಾದ್ಯಂತ ಈ ಕಾರ್ಯಕ್ರಮ ನಡೆಯುತ್ತಿದೆ. ಇಲ್ಲಿ ನಾವು ಮಾಡುತ್ತಿದ್ದೇವೆ” ಎಂದು ಅವರು ಹೇಳಿದ್ದಾರೆ.

ಎರಡು ಮತಗಳ ಹಕ್ಕನ್ನು ನಿರಾಕರಿಸಿ, ದಲಿತರಿಗೆಂದೇ ದೇಶದಾದ್ಯಂತ ಸುಮಾರು 148 ಮೀಸಲು ಕ್ಷೇತ್ರಗಳನ್ನು ಬಿಟ್ಟುಕೊಡಲಾಯಿತು. ಆದರೆ ಅಂಬೇಡ್ಕರ್ ಅವರಿಗೆ ಸಮಾಧಾನವಾಗಿರಲಿಲ್ಲ. ಈ ಸಂಸರ್ಭದಲ್ಲಿ ಪತ್ರಿಕೆಗಳೊಂದಿಗೆ ಮಾತನಾಡಿದ ಅಂಬೇಡ್ಕರ್, “ಅಮೂಲ್ಯವಾದ ಹಣ್ಣೊಂದನ್ನು ನನ್ನ ಜನಗಳಿಗೆಂದು ತಂದಿದ್ದೆ. ಆದರೆ ಅದನ್ನು ಅದನ್ನು ಮಣ್ಣುಪಾಲು ಮಾಡಿ, ಬರೀ ಸಿಪ್ಪೆಯನ್ನು ನನ್ನ ಮುಖಕ್ಕೆ ಎಸೆದಿದ್ದಾರೆ” ಎಂದು ವಿಷಾದ ವ್ಯಕ್ತಪಡಿಸಿದ್ದರು.


ಇದನ್ನೂ ಓದಿ: ಯುವಜನತೆಗೆ ಕೇಳಿಸಿದ ಗಾಂಧಿ, ಓದಿಸಿದ ಗಾಂಧಿ ಮತ್ತು ನಂಬಿಸಿದ ಗಾಂಧಿಯ ಕುರಿತು…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...