Homeಅಂತರಾಷ್ಟ್ರೀಯಕೋವಿಶೀಲ್ಡ್‌ಗೆ ಯುರೋಪ್‍ ದೇಶಗಳಲ್ಲಿ ಮಾನ್ಯತೆ ಕೊಡಿಸಲು ಭಾರತ ಸರ್ಕಾರಕ್ಕೆ ಪೂನಾವಾಲಾ ಮನವಿ

ಕೋವಿಶೀಲ್ಡ್‌ಗೆ ಯುರೋಪ್‍ ದೇಶಗಳಲ್ಲಿ ಮಾನ್ಯತೆ ಕೊಡಿಸಲು ಭಾರತ ಸರ್ಕಾರಕ್ಕೆ ಪೂನಾವಾಲಾ ಮನವಿ

- Advertisement -
- Advertisement -

ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್‌ಐಐ) ತನ್ನ ಕೋವಿಶೀಲ್ಡ್ ಲಸಿಕೆಯನ್ನು ಯುರೋಪಿಯನ್ ಒಕ್ಕೂಟ ಮತ್ತು ಇತರ ದೇಶಗಳು ಮಾನ್ಯತೆ ಮಾಡುವಂತೆ ಕ್ರಮ ಜರುಗಿಸಲು ಸರ್ಕಾರವನ್ನು ಕೋರಿದೆ.

ಈಗಿನ ಅಮಾನ್ಯತೆಯು ವಿದ್ಯಾರ್ಥಿಗಳು ಮತ್ತು ಬ್ಯುಸಿನೆಸ್‍ ಪ್ರಯಾಣಿಕರ ಮೇಲೆ ಪರಿಣಾಮ ಬೀರುತ್ತದೆ ಮತ್ತು ತೀವ್ರ ಅಡ್ಡಿ ಉಂಟು ಮಾಡುತ್ತದೆ. ಕೋವಿಶೀಲ್ಡ್ ಪಡೆದವರಿಗೆ ಅಲ್ಲಿ ಪ್ರಯಾಣಕ್ಕೆ ಅಥವಾ ವಾಸ್ತವ್ಯಕ್ಕೆ ಅನುಮತಿ ಇಲ್ಲ. ಇದು ಭಾರತದ ಜೊತೆಗೇ ಜಾಗತಿಕ ಆರ್ಥಿಕತೆಗೆ ಹೊಡೆತ ನೀಡುತ್ತದೆ ಎಂದು ಸೀರಂ ಸಿಇಒ ಅದಾರ್ ಪೂನಾವಾಲಾ ಟ್ವೀಟ್‍ ಮಾಡಿದ್ದಾರೆ.

ಯುರೋಪಿಯನ್‍ ಒಕ್ಕೂಟದಲ್ಲಿ ಕೇವಲ ನಾಲ್ಕು ಲಸಿಕೆಗಳು ಮಾನ್ಯತೆ ಪಡೆದಿವೆ. ಫಿಜರ್ ಬಯೋಟೆಕ್‌ನ ಲಸಿಕೆ, ಮಾಡೆರ್ನಾ ಲಸಿಕೆ, ಅಸ್ಟ್ರಾಜಯೋನಿಕ್‍-ಆಕ್ಸ್‌ಫರ್ಡ್‍ನ Vaxzervria ಮತ್ತು ಜಾನ್‍ಸನ್‍ & ಜಾನ್‍ಸನ್‍ ಕಂಪನಿಯ ಜಾನ್‍ಸೀನ್‍ ಲಸಿಕೆಗಳಿಗೆ ಮಾತ್ರ ಅಲ್ಲಿ ಮಾನ್ಯತೆ ಇದೆ. ಈ ಲಸಿಕೆಗಳನ್ನು ಪಡೆದವರಿಗೆ ಮಾತ್ರ ವ್ಯಾಕ್ಸಿನೇಷನ್ ಪಾಸ್‌ಪೋರ್ಟ್‍ಗಳನ್ನು ನೀಡಲಾಗುವುದು ಮತ್ತು ಸಾಂಕ್ರಾಮಿಕ ಸಮಯದಲ್ಲಿ ಯುರೋಪಿಯನ್‍ ಒಕ್ಕೂಟದ ಒಳಗೆ ಪ್ರಯಾಣಿಸಲು ಅನುಮತಿಸಲಾಗುವುದು.

“ಭಾರತವು ಹೆಚ್ಚಿನ ಜನಸಂಖ್ಯೆಯನ್ನು ಹೊಂದಿದೆ. ಕೋವಿಶೀಲ್ಡ್ ಅನ್ನು ಯುರೋಪಿಯನ್‍ ಒಕ್ಕೂಟ ಕೋವಿಡ್ ವ್ಯಾಕ್ಸಿನೇಷನ್ ಪಾಸ್‌ಪೋರ್ಟ್‍ಗೆ ಸೇರಿಸದಿರುವುದು ಕೋವಿಶೀಲ್ಡ್ ಲಸಿಕೆ ಪಡೆದ ಜನರಿಗೆ ಯುರೋಪಿಯನ್ ದೇಶಗಳಿಗೆ ಪ್ರಯಾಣಿಸಲು ಅವಕಾಶ ನೀಡುವುದಿಲ್ಲ. ಇದು ವಿದ್ಯಾರ್ಥಿಗಳು ಮತ್ತು ಉದ್ಯಮಿಗಳ ಪ್ರಯಾಣ ಮತ್ತು ವಾಸ್ತವ್ಯದ ಮೇಲೆ ಪರಿಣಾಮ ಬೀರುತ್ತದೆ. ಇದರಿಂದ ನಮ್ಮ ಆರ್ಥಿಕತೆಗೆ ತೀವ್ರ ಅಡ್ಡಿ ಉಂಟು ಮಾಡುತ್ತದೆ ಮತ್ತು ಜಾಗತಿಕ ಆರ್ಥಿಕತೆಯ ಮೇಲೂ ಇದರ ಪರಿಣಾಮ ಆಗುತ್ತದೆ  ಎಂದು ಎಸ್‌ಐಐನ ಸಿಇಒ ಅದಾರ್  ಪೂನಾವಾಲಾ ಅವರು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ ಎಂದು ಮೂಲಗಳನ್ನು ಆಧರಿಸಿ ಟೆಲೆಗ್ರಾಫ್‍ ಇಂಡಿಯಾ ವರದಿ ಮಾಡಿದೆ.

ಕೋವಿಶೀಲ್ಡ್ ತೆಗೆದುಕೊಂಡ ಬಹಳಷ್ಟು ಭಾರತೀಯರು ಯುರೋಪಿಯನ್‍ ದೇಶಗಳಿಗೆ ಪ್ರಯಾಣಿಸುವಾಗ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ನಾನು ಅರಿತುಕೊಂಡಿದ್ದೇನೆ, ಎಲ್ಲರಿಗೂ ನಾನು ಭರವಸೆ ನೀಡುತ್ತೇನೆ, ನಾನು ಇದನ್ನು ಉನ್ನತ ಮಟ್ಟದಲ್ಲಿ ಚರ್ಚಿಸುತ್ತಿದ್ದೇನೆ. ವಿವಿಧ ದೇಶಗಳ ಔಷಧ ನಿಯಂತ್ರಕರು ಮತ್ತು ರಾಜತಾಂತ್ರಿಕ ಅಧಿಕಾರಿಗಳ ಜೊತೆ ಮಾತನಾಡಿ, ಶೀಘ್ರದಲ್ಲೇ ಈ ವಿಷಯವನ್ನು ಭಾರತ ಸರ್ಕಾರ ಪರಿಹರಿಸುತ್ತದೆ ಎಂದು ಆಶಿಸುತ್ತೇನೆ ಎಂದು ಪೂನಾವಾಲಾ ಟ್ವೀಟ್‍ ಮಾಡಿದ್ದಾರೆ.

ಎಸ್‌ಐಐನ ಸರ್ಕಾರಿ ಮತ್ತು ನಿಯಂತ್ರಣ ವ್ಯವಹಾರಗಳ ನಿರ್ದೇಶಕ ಪ್ರಕಾಶ್ ಕುಮಾರ್ ಸಿಂಗ್ ಅವರು ಪೂನಾವಾಲಾ ಅವರ ಪತ್ರವನ್ನು ಉಲ್ಲೇಖಿಸಿ, ಸಚಿವ ಜೈಶಂಕರ್ ಅವರ ಹಸ್ತಕ್ಷೇಪವನ್ನು ಕೋರಿದ್ದಾರೆ. “ಇದು ರಾಷ್ಟ್ರೀಯ ಹಿತಾಸಕ್ತಿ ಮತ್ತು ಜನರ ಹಿತದೃಷ್ಟಿಯಿಂದ ಕೂಡಿದೆ. ಕೋವಿಶೀಲ್ಡ್ ಲಸಿಕೆಯನ್ನು ಯುರೋಪಿಯನ್‍ ಒಕ್ಕೂಟದ ದೇಶಗಳು ಮತ್ತು ಇತರ ದೇಶಗಳು ಮಾನ್ಯ ಮಾಡುವಂತೆ ವ್ಯವಸ್ಥ ಮಾಡಬೇಕು ಎಂದು ಕೇಳಿದ್ದಾರೆ.

ಭಾರತದಲ್ಲಿ ಈಗಾಗಲೇ ಸುಮಾರು 30 ಕೋಟಿ ಜನರಿಗೆ ಕೋವಿಶೀಲ್ಡ್ ಲಸಿಕೆ ನೀಡಲಾಗಿದೆ ಎಂದು ಪೂನಾವಾಲಾ ಅವರು ಬರೆದಿರುವ ಪತ್ರದಲ್ಲಿ ಉಲ್ಲೇಖಿಸಲಾಗಿದ. ಅಂತಿಮವಾಗಿ ಕೋವಿಶೀಲ್ಡ್ ಲಸಿಕೆಯೊಂದಿಗೆ ಭಾರತೀಯ ಜನಸಂಖ್ಯೆಯ ಶೇಕಡಾ 50ಕ್ಕಿಂತ ಹೆಚ್ಚು ಜನರಿಗೆ ರಕ್ಷಣೆ ಸಿಗಲಿದೆ ಎಂದು ನಿರೀಕ್ಷಿಸಲಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

‘ಆಕ್ಸ್‌ಫರ್ಢ್-ಅಸ್ಟ್ರಾಜೆನೆಕಾದಿಂದ ತಂತ್ರಜ್ಞಾನ ವರ್ಗಾವಣೆಯಡಿಯಲ್ಲಿ ಅಸ್ಟ್ರಾಜೆನೆಕಾ-ಎಸ್‌ಐಐ ಸಹಯೋಗದಲ್ಲಿ ಕೋವಿಶೀಲ್ಡ್ ಅನ್ನು ತಯಾರಿಸಲಾಗಿದೆ, ಲಸಿಕೆಯ ಕ್ಲಿನಿಕಲ್ ಪ್ರಯೋಗಗಳನ್ನು ವಿದೇಶದಲ್ಲಿ ಯಶಸ್ವಿಯಾಗಿ ನಡೆಸಲಾಗಿದೆ ಮತ್ತು ತುರ್ತು ಬಳಕೆಯ ಅನುಮೋದನೆಗಾಗಿ ಎಂಹೆಚ್‌ಆರ್‌ಎ ಅನುಮೋದಿಸಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.


ಇದನ್ನೂ ಓದಿ; ಲಸಿಕೆ ನೀಡುವಲ್ಲಿ ಅಮೆರಿಕ ಹಿಂದಿಕ್ಕಿದ ಭಾರತ: ಪಿಳ್ಳಂಗೋವಿ ಪ್ರಚಾರವೆಂದು ನೆಟ್ಟಿಗರ ಟ್ರೋಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...

‘ದಿ ಕೇರಳ ಸ್ಟೋರಿ-2’ ಚಲನಚಿತ್ರ ಜಾತ್ಯತೀತತೆಗೆ ಬೆದರಿಕೆ: ಮುಖ್ಯಮಂತ್ರಿ ಪಿಣರಾಯಿ ವಿಜಯನ್

'ದಿ ಕೇರಳ ಸ್ಟೋರಿ' ಚಿತ್ರದ ಎರಡನೇ ಭಾಗ ಬಿಡುಗಡೆಯಾಗುತ್ತಿರುವ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದು, ಇದರ ಮೊದಲ ಭಾಗವು "ರಾಜ್ಯದ ವಿರುದ್ಧ ದ್ವೇಷವನ್ನು ಹರಡುವ ಮತ್ತು ನಮ್ಮ ಜಾತ್ಯತೀತ...

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...