Homeಅಂತರಾಷ್ಟ್ರೀಯಕೋವಿಶೀಲ್ಡ್‌ಗೆ ಯುರೋಪ್‍ ದೇಶಗಳಲ್ಲಿ ಮಾನ್ಯತೆ ಕೊಡಿಸಲು ಭಾರತ ಸರ್ಕಾರಕ್ಕೆ ಪೂನಾವಾಲಾ ಮನವಿ

ಕೋವಿಶೀಲ್ಡ್‌ಗೆ ಯುರೋಪ್‍ ದೇಶಗಳಲ್ಲಿ ಮಾನ್ಯತೆ ಕೊಡಿಸಲು ಭಾರತ ಸರ್ಕಾರಕ್ಕೆ ಪೂನಾವಾಲಾ ಮನವಿ

- Advertisement -
- Advertisement -

ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್‌ಐಐ) ತನ್ನ ಕೋವಿಶೀಲ್ಡ್ ಲಸಿಕೆಯನ್ನು ಯುರೋಪಿಯನ್ ಒಕ್ಕೂಟ ಮತ್ತು ಇತರ ದೇಶಗಳು ಮಾನ್ಯತೆ ಮಾಡುವಂತೆ ಕ್ರಮ ಜರುಗಿಸಲು ಸರ್ಕಾರವನ್ನು ಕೋರಿದೆ.

ಈಗಿನ ಅಮಾನ್ಯತೆಯು ವಿದ್ಯಾರ್ಥಿಗಳು ಮತ್ತು ಬ್ಯುಸಿನೆಸ್‍ ಪ್ರಯಾಣಿಕರ ಮೇಲೆ ಪರಿಣಾಮ ಬೀರುತ್ತದೆ ಮತ್ತು ತೀವ್ರ ಅಡ್ಡಿ ಉಂಟು ಮಾಡುತ್ತದೆ. ಕೋವಿಶೀಲ್ಡ್ ಪಡೆದವರಿಗೆ ಅಲ್ಲಿ ಪ್ರಯಾಣಕ್ಕೆ ಅಥವಾ ವಾಸ್ತವ್ಯಕ್ಕೆ ಅನುಮತಿ ಇಲ್ಲ. ಇದು ಭಾರತದ ಜೊತೆಗೇ ಜಾಗತಿಕ ಆರ್ಥಿಕತೆಗೆ ಹೊಡೆತ ನೀಡುತ್ತದೆ ಎಂದು ಸೀರಂ ಸಿಇಒ ಅದಾರ್ ಪೂನಾವಾಲಾ ಟ್ವೀಟ್‍ ಮಾಡಿದ್ದಾರೆ.

ಯುರೋಪಿಯನ್‍ ಒಕ್ಕೂಟದಲ್ಲಿ ಕೇವಲ ನಾಲ್ಕು ಲಸಿಕೆಗಳು ಮಾನ್ಯತೆ ಪಡೆದಿವೆ. ಫಿಜರ್ ಬಯೋಟೆಕ್‌ನ ಲಸಿಕೆ, ಮಾಡೆರ್ನಾ ಲಸಿಕೆ, ಅಸ್ಟ್ರಾಜಯೋನಿಕ್‍-ಆಕ್ಸ್‌ಫರ್ಡ್‍ನ Vaxzervria ಮತ್ತು ಜಾನ್‍ಸನ್‍ & ಜಾನ್‍ಸನ್‍ ಕಂಪನಿಯ ಜಾನ್‍ಸೀನ್‍ ಲಸಿಕೆಗಳಿಗೆ ಮಾತ್ರ ಅಲ್ಲಿ ಮಾನ್ಯತೆ ಇದೆ. ಈ ಲಸಿಕೆಗಳನ್ನು ಪಡೆದವರಿಗೆ ಮಾತ್ರ ವ್ಯಾಕ್ಸಿನೇಷನ್ ಪಾಸ್‌ಪೋರ್ಟ್‍ಗಳನ್ನು ನೀಡಲಾಗುವುದು ಮತ್ತು ಸಾಂಕ್ರಾಮಿಕ ಸಮಯದಲ್ಲಿ ಯುರೋಪಿಯನ್‍ ಒಕ್ಕೂಟದ ಒಳಗೆ ಪ್ರಯಾಣಿಸಲು ಅನುಮತಿಸಲಾಗುವುದು.

“ಭಾರತವು ಹೆಚ್ಚಿನ ಜನಸಂಖ್ಯೆಯನ್ನು ಹೊಂದಿದೆ. ಕೋವಿಶೀಲ್ಡ್ ಅನ್ನು ಯುರೋಪಿಯನ್‍ ಒಕ್ಕೂಟ ಕೋವಿಡ್ ವ್ಯಾಕ್ಸಿನೇಷನ್ ಪಾಸ್‌ಪೋರ್ಟ್‍ಗೆ ಸೇರಿಸದಿರುವುದು ಕೋವಿಶೀಲ್ಡ್ ಲಸಿಕೆ ಪಡೆದ ಜನರಿಗೆ ಯುರೋಪಿಯನ್ ದೇಶಗಳಿಗೆ ಪ್ರಯಾಣಿಸಲು ಅವಕಾಶ ನೀಡುವುದಿಲ್ಲ. ಇದು ವಿದ್ಯಾರ್ಥಿಗಳು ಮತ್ತು ಉದ್ಯಮಿಗಳ ಪ್ರಯಾಣ ಮತ್ತು ವಾಸ್ತವ್ಯದ ಮೇಲೆ ಪರಿಣಾಮ ಬೀರುತ್ತದೆ. ಇದರಿಂದ ನಮ್ಮ ಆರ್ಥಿಕತೆಗೆ ತೀವ್ರ ಅಡ್ಡಿ ಉಂಟು ಮಾಡುತ್ತದೆ ಮತ್ತು ಜಾಗತಿಕ ಆರ್ಥಿಕತೆಯ ಮೇಲೂ ಇದರ ಪರಿಣಾಮ ಆಗುತ್ತದೆ  ಎಂದು ಎಸ್‌ಐಐನ ಸಿಇಒ ಅದಾರ್  ಪೂನಾವಾಲಾ ಅವರು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ ಎಂದು ಮೂಲಗಳನ್ನು ಆಧರಿಸಿ ಟೆಲೆಗ್ರಾಫ್‍ ಇಂಡಿಯಾ ವರದಿ ಮಾಡಿದೆ.

ಕೋವಿಶೀಲ್ಡ್ ತೆಗೆದುಕೊಂಡ ಬಹಳಷ್ಟು ಭಾರತೀಯರು ಯುರೋಪಿಯನ್‍ ದೇಶಗಳಿಗೆ ಪ್ರಯಾಣಿಸುವಾಗ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ನಾನು ಅರಿತುಕೊಂಡಿದ್ದೇನೆ, ಎಲ್ಲರಿಗೂ ನಾನು ಭರವಸೆ ನೀಡುತ್ತೇನೆ, ನಾನು ಇದನ್ನು ಉನ್ನತ ಮಟ್ಟದಲ್ಲಿ ಚರ್ಚಿಸುತ್ತಿದ್ದೇನೆ. ವಿವಿಧ ದೇಶಗಳ ಔಷಧ ನಿಯಂತ್ರಕರು ಮತ್ತು ರಾಜತಾಂತ್ರಿಕ ಅಧಿಕಾರಿಗಳ ಜೊತೆ ಮಾತನಾಡಿ, ಶೀಘ್ರದಲ್ಲೇ ಈ ವಿಷಯವನ್ನು ಭಾರತ ಸರ್ಕಾರ ಪರಿಹರಿಸುತ್ತದೆ ಎಂದು ಆಶಿಸುತ್ತೇನೆ ಎಂದು ಪೂನಾವಾಲಾ ಟ್ವೀಟ್‍ ಮಾಡಿದ್ದಾರೆ.

ಎಸ್‌ಐಐನ ಸರ್ಕಾರಿ ಮತ್ತು ನಿಯಂತ್ರಣ ವ್ಯವಹಾರಗಳ ನಿರ್ದೇಶಕ ಪ್ರಕಾಶ್ ಕುಮಾರ್ ಸಿಂಗ್ ಅವರು ಪೂನಾವಾಲಾ ಅವರ ಪತ್ರವನ್ನು ಉಲ್ಲೇಖಿಸಿ, ಸಚಿವ ಜೈಶಂಕರ್ ಅವರ ಹಸ್ತಕ್ಷೇಪವನ್ನು ಕೋರಿದ್ದಾರೆ. “ಇದು ರಾಷ್ಟ್ರೀಯ ಹಿತಾಸಕ್ತಿ ಮತ್ತು ಜನರ ಹಿತದೃಷ್ಟಿಯಿಂದ ಕೂಡಿದೆ. ಕೋವಿಶೀಲ್ಡ್ ಲಸಿಕೆಯನ್ನು ಯುರೋಪಿಯನ್‍ ಒಕ್ಕೂಟದ ದೇಶಗಳು ಮತ್ತು ಇತರ ದೇಶಗಳು ಮಾನ್ಯ ಮಾಡುವಂತೆ ವ್ಯವಸ್ಥ ಮಾಡಬೇಕು ಎಂದು ಕೇಳಿದ್ದಾರೆ.

ಭಾರತದಲ್ಲಿ ಈಗಾಗಲೇ ಸುಮಾರು 30 ಕೋಟಿ ಜನರಿಗೆ ಕೋವಿಶೀಲ್ಡ್ ಲಸಿಕೆ ನೀಡಲಾಗಿದೆ ಎಂದು ಪೂನಾವಾಲಾ ಅವರು ಬರೆದಿರುವ ಪತ್ರದಲ್ಲಿ ಉಲ್ಲೇಖಿಸಲಾಗಿದ. ಅಂತಿಮವಾಗಿ ಕೋವಿಶೀಲ್ಡ್ ಲಸಿಕೆಯೊಂದಿಗೆ ಭಾರತೀಯ ಜನಸಂಖ್ಯೆಯ ಶೇಕಡಾ 50ಕ್ಕಿಂತ ಹೆಚ್ಚು ಜನರಿಗೆ ರಕ್ಷಣೆ ಸಿಗಲಿದೆ ಎಂದು ನಿರೀಕ್ಷಿಸಲಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

‘ಆಕ್ಸ್‌ಫರ್ಢ್-ಅಸ್ಟ್ರಾಜೆನೆಕಾದಿಂದ ತಂತ್ರಜ್ಞಾನ ವರ್ಗಾವಣೆಯಡಿಯಲ್ಲಿ ಅಸ್ಟ್ರಾಜೆನೆಕಾ-ಎಸ್‌ಐಐ ಸಹಯೋಗದಲ್ಲಿ ಕೋವಿಶೀಲ್ಡ್ ಅನ್ನು ತಯಾರಿಸಲಾಗಿದೆ, ಲಸಿಕೆಯ ಕ್ಲಿನಿಕಲ್ ಪ್ರಯೋಗಗಳನ್ನು ವಿದೇಶದಲ್ಲಿ ಯಶಸ್ವಿಯಾಗಿ ನಡೆಸಲಾಗಿದೆ ಮತ್ತು ತುರ್ತು ಬಳಕೆಯ ಅನುಮೋದನೆಗಾಗಿ ಎಂಹೆಚ್‌ಆರ್‌ಎ ಅನುಮೋದಿಸಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.


ಇದನ್ನೂ ಓದಿ; ಲಸಿಕೆ ನೀಡುವಲ್ಲಿ ಅಮೆರಿಕ ಹಿಂದಿಕ್ಕಿದ ಭಾರತ: ಪಿಳ್ಳಂಗೋವಿ ಪ್ರಚಾರವೆಂದು ನೆಟ್ಟಿಗರ ಟ್ರೋಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...