Homeಅಂತರಾಷ್ಟ್ರೀಯಕೋವಿಶೀಲ್ಡ್‌ಗೆ ಯುರೋಪ್‍ ದೇಶಗಳಲ್ಲಿ ಮಾನ್ಯತೆ ಕೊಡಿಸಲು ಭಾರತ ಸರ್ಕಾರಕ್ಕೆ ಪೂನಾವಾಲಾ ಮನವಿ

ಕೋವಿಶೀಲ್ಡ್‌ಗೆ ಯುರೋಪ್‍ ದೇಶಗಳಲ್ಲಿ ಮಾನ್ಯತೆ ಕೊಡಿಸಲು ಭಾರತ ಸರ್ಕಾರಕ್ಕೆ ಪೂನಾವಾಲಾ ಮನವಿ

- Advertisement -
- Advertisement -

ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್‌ಐಐ) ತನ್ನ ಕೋವಿಶೀಲ್ಡ್ ಲಸಿಕೆಯನ್ನು ಯುರೋಪಿಯನ್ ಒಕ್ಕೂಟ ಮತ್ತು ಇತರ ದೇಶಗಳು ಮಾನ್ಯತೆ ಮಾಡುವಂತೆ ಕ್ರಮ ಜರುಗಿಸಲು ಸರ್ಕಾರವನ್ನು ಕೋರಿದೆ.

ಈಗಿನ ಅಮಾನ್ಯತೆಯು ವಿದ್ಯಾರ್ಥಿಗಳು ಮತ್ತು ಬ್ಯುಸಿನೆಸ್‍ ಪ್ರಯಾಣಿಕರ ಮೇಲೆ ಪರಿಣಾಮ ಬೀರುತ್ತದೆ ಮತ್ತು ತೀವ್ರ ಅಡ್ಡಿ ಉಂಟು ಮಾಡುತ್ತದೆ. ಕೋವಿಶೀಲ್ಡ್ ಪಡೆದವರಿಗೆ ಅಲ್ಲಿ ಪ್ರಯಾಣಕ್ಕೆ ಅಥವಾ ವಾಸ್ತವ್ಯಕ್ಕೆ ಅನುಮತಿ ಇಲ್ಲ. ಇದು ಭಾರತದ ಜೊತೆಗೇ ಜಾಗತಿಕ ಆರ್ಥಿಕತೆಗೆ ಹೊಡೆತ ನೀಡುತ್ತದೆ ಎಂದು ಸೀರಂ ಸಿಇಒ ಅದಾರ್ ಪೂನಾವಾಲಾ ಟ್ವೀಟ್‍ ಮಾಡಿದ್ದಾರೆ.

ಯುರೋಪಿಯನ್‍ ಒಕ್ಕೂಟದಲ್ಲಿ ಕೇವಲ ನಾಲ್ಕು ಲಸಿಕೆಗಳು ಮಾನ್ಯತೆ ಪಡೆದಿವೆ. ಫಿಜರ್ ಬಯೋಟೆಕ್‌ನ ಲಸಿಕೆ, ಮಾಡೆರ್ನಾ ಲಸಿಕೆ, ಅಸ್ಟ್ರಾಜಯೋನಿಕ್‍-ಆಕ್ಸ್‌ಫರ್ಡ್‍ನ Vaxzervria ಮತ್ತು ಜಾನ್‍ಸನ್‍ & ಜಾನ್‍ಸನ್‍ ಕಂಪನಿಯ ಜಾನ್‍ಸೀನ್‍ ಲಸಿಕೆಗಳಿಗೆ ಮಾತ್ರ ಅಲ್ಲಿ ಮಾನ್ಯತೆ ಇದೆ. ಈ ಲಸಿಕೆಗಳನ್ನು ಪಡೆದವರಿಗೆ ಮಾತ್ರ ವ್ಯಾಕ್ಸಿನೇಷನ್ ಪಾಸ್‌ಪೋರ್ಟ್‍ಗಳನ್ನು ನೀಡಲಾಗುವುದು ಮತ್ತು ಸಾಂಕ್ರಾಮಿಕ ಸಮಯದಲ್ಲಿ ಯುರೋಪಿಯನ್‍ ಒಕ್ಕೂಟದ ಒಳಗೆ ಪ್ರಯಾಣಿಸಲು ಅನುಮತಿಸಲಾಗುವುದು.

“ಭಾರತವು ಹೆಚ್ಚಿನ ಜನಸಂಖ್ಯೆಯನ್ನು ಹೊಂದಿದೆ. ಕೋವಿಶೀಲ್ಡ್ ಅನ್ನು ಯುರೋಪಿಯನ್‍ ಒಕ್ಕೂಟ ಕೋವಿಡ್ ವ್ಯಾಕ್ಸಿನೇಷನ್ ಪಾಸ್‌ಪೋರ್ಟ್‍ಗೆ ಸೇರಿಸದಿರುವುದು ಕೋವಿಶೀಲ್ಡ್ ಲಸಿಕೆ ಪಡೆದ ಜನರಿಗೆ ಯುರೋಪಿಯನ್ ದೇಶಗಳಿಗೆ ಪ್ರಯಾಣಿಸಲು ಅವಕಾಶ ನೀಡುವುದಿಲ್ಲ. ಇದು ವಿದ್ಯಾರ್ಥಿಗಳು ಮತ್ತು ಉದ್ಯಮಿಗಳ ಪ್ರಯಾಣ ಮತ್ತು ವಾಸ್ತವ್ಯದ ಮೇಲೆ ಪರಿಣಾಮ ಬೀರುತ್ತದೆ. ಇದರಿಂದ ನಮ್ಮ ಆರ್ಥಿಕತೆಗೆ ತೀವ್ರ ಅಡ್ಡಿ ಉಂಟು ಮಾಡುತ್ತದೆ ಮತ್ತು ಜಾಗತಿಕ ಆರ್ಥಿಕತೆಯ ಮೇಲೂ ಇದರ ಪರಿಣಾಮ ಆಗುತ್ತದೆ  ಎಂದು ಎಸ್‌ಐಐನ ಸಿಇಒ ಅದಾರ್  ಪೂನಾವಾಲಾ ಅವರು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ ಎಂದು ಮೂಲಗಳನ್ನು ಆಧರಿಸಿ ಟೆಲೆಗ್ರಾಫ್‍ ಇಂಡಿಯಾ ವರದಿ ಮಾಡಿದೆ.

ಕೋವಿಶೀಲ್ಡ್ ತೆಗೆದುಕೊಂಡ ಬಹಳಷ್ಟು ಭಾರತೀಯರು ಯುರೋಪಿಯನ್‍ ದೇಶಗಳಿಗೆ ಪ್ರಯಾಣಿಸುವಾಗ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ನಾನು ಅರಿತುಕೊಂಡಿದ್ದೇನೆ, ಎಲ್ಲರಿಗೂ ನಾನು ಭರವಸೆ ನೀಡುತ್ತೇನೆ, ನಾನು ಇದನ್ನು ಉನ್ನತ ಮಟ್ಟದಲ್ಲಿ ಚರ್ಚಿಸುತ್ತಿದ್ದೇನೆ. ವಿವಿಧ ದೇಶಗಳ ಔಷಧ ನಿಯಂತ್ರಕರು ಮತ್ತು ರಾಜತಾಂತ್ರಿಕ ಅಧಿಕಾರಿಗಳ ಜೊತೆ ಮಾತನಾಡಿ, ಶೀಘ್ರದಲ್ಲೇ ಈ ವಿಷಯವನ್ನು ಭಾರತ ಸರ್ಕಾರ ಪರಿಹರಿಸುತ್ತದೆ ಎಂದು ಆಶಿಸುತ್ತೇನೆ ಎಂದು ಪೂನಾವಾಲಾ ಟ್ವೀಟ್‍ ಮಾಡಿದ್ದಾರೆ.

ಎಸ್‌ಐಐನ ಸರ್ಕಾರಿ ಮತ್ತು ನಿಯಂತ್ರಣ ವ್ಯವಹಾರಗಳ ನಿರ್ದೇಶಕ ಪ್ರಕಾಶ್ ಕುಮಾರ್ ಸಿಂಗ್ ಅವರು ಪೂನಾವಾಲಾ ಅವರ ಪತ್ರವನ್ನು ಉಲ್ಲೇಖಿಸಿ, ಸಚಿವ ಜೈಶಂಕರ್ ಅವರ ಹಸ್ತಕ್ಷೇಪವನ್ನು ಕೋರಿದ್ದಾರೆ. “ಇದು ರಾಷ್ಟ್ರೀಯ ಹಿತಾಸಕ್ತಿ ಮತ್ತು ಜನರ ಹಿತದೃಷ್ಟಿಯಿಂದ ಕೂಡಿದೆ. ಕೋವಿಶೀಲ್ಡ್ ಲಸಿಕೆಯನ್ನು ಯುರೋಪಿಯನ್‍ ಒಕ್ಕೂಟದ ದೇಶಗಳು ಮತ್ತು ಇತರ ದೇಶಗಳು ಮಾನ್ಯ ಮಾಡುವಂತೆ ವ್ಯವಸ್ಥ ಮಾಡಬೇಕು ಎಂದು ಕೇಳಿದ್ದಾರೆ.

ಭಾರತದಲ್ಲಿ ಈಗಾಗಲೇ ಸುಮಾರು 30 ಕೋಟಿ ಜನರಿಗೆ ಕೋವಿಶೀಲ್ಡ್ ಲಸಿಕೆ ನೀಡಲಾಗಿದೆ ಎಂದು ಪೂನಾವಾಲಾ ಅವರು ಬರೆದಿರುವ ಪತ್ರದಲ್ಲಿ ಉಲ್ಲೇಖಿಸಲಾಗಿದ. ಅಂತಿಮವಾಗಿ ಕೋವಿಶೀಲ್ಡ್ ಲಸಿಕೆಯೊಂದಿಗೆ ಭಾರತೀಯ ಜನಸಂಖ್ಯೆಯ ಶೇಕಡಾ 50ಕ್ಕಿಂತ ಹೆಚ್ಚು ಜನರಿಗೆ ರಕ್ಷಣೆ ಸಿಗಲಿದೆ ಎಂದು ನಿರೀಕ್ಷಿಸಲಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

‘ಆಕ್ಸ್‌ಫರ್ಢ್-ಅಸ್ಟ್ರಾಜೆನೆಕಾದಿಂದ ತಂತ್ರಜ್ಞಾನ ವರ್ಗಾವಣೆಯಡಿಯಲ್ಲಿ ಅಸ್ಟ್ರಾಜೆನೆಕಾ-ಎಸ್‌ಐಐ ಸಹಯೋಗದಲ್ಲಿ ಕೋವಿಶೀಲ್ಡ್ ಅನ್ನು ತಯಾರಿಸಲಾಗಿದೆ, ಲಸಿಕೆಯ ಕ್ಲಿನಿಕಲ್ ಪ್ರಯೋಗಗಳನ್ನು ವಿದೇಶದಲ್ಲಿ ಯಶಸ್ವಿಯಾಗಿ ನಡೆಸಲಾಗಿದೆ ಮತ್ತು ತುರ್ತು ಬಳಕೆಯ ಅನುಮೋದನೆಗಾಗಿ ಎಂಹೆಚ್‌ಆರ್‌ಎ ಅನುಮೋದಿಸಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.


ಇದನ್ನೂ ಓದಿ; ಲಸಿಕೆ ನೀಡುವಲ್ಲಿ ಅಮೆರಿಕ ಹಿಂದಿಕ್ಕಿದ ಭಾರತ: ಪಿಳ್ಳಂಗೋವಿ ಪ್ರಚಾರವೆಂದು ನೆಟ್ಟಿಗರ ಟ್ರೋಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...