Homeಅಂತರಾಷ್ಟ್ರೀಯಕೋವಿಶೀಲ್ಡ್‌ಗೆ ಯುರೋಪ್‍ ದೇಶಗಳಲ್ಲಿ ಮಾನ್ಯತೆ ಕೊಡಿಸಲು ಭಾರತ ಸರ್ಕಾರಕ್ಕೆ ಪೂನಾವಾಲಾ ಮನವಿ

ಕೋವಿಶೀಲ್ಡ್‌ಗೆ ಯುರೋಪ್‍ ದೇಶಗಳಲ್ಲಿ ಮಾನ್ಯತೆ ಕೊಡಿಸಲು ಭಾರತ ಸರ್ಕಾರಕ್ಕೆ ಪೂನಾವಾಲಾ ಮನವಿ

- Advertisement -
- Advertisement -

ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್‌ಐಐ) ತನ್ನ ಕೋವಿಶೀಲ್ಡ್ ಲಸಿಕೆಯನ್ನು ಯುರೋಪಿಯನ್ ಒಕ್ಕೂಟ ಮತ್ತು ಇತರ ದೇಶಗಳು ಮಾನ್ಯತೆ ಮಾಡುವಂತೆ ಕ್ರಮ ಜರುಗಿಸಲು ಸರ್ಕಾರವನ್ನು ಕೋರಿದೆ.

ಈಗಿನ ಅಮಾನ್ಯತೆಯು ವಿದ್ಯಾರ್ಥಿಗಳು ಮತ್ತು ಬ್ಯುಸಿನೆಸ್‍ ಪ್ರಯಾಣಿಕರ ಮೇಲೆ ಪರಿಣಾಮ ಬೀರುತ್ತದೆ ಮತ್ತು ತೀವ್ರ ಅಡ್ಡಿ ಉಂಟು ಮಾಡುತ್ತದೆ. ಕೋವಿಶೀಲ್ಡ್ ಪಡೆದವರಿಗೆ ಅಲ್ಲಿ ಪ್ರಯಾಣಕ್ಕೆ ಅಥವಾ ವಾಸ್ತವ್ಯಕ್ಕೆ ಅನುಮತಿ ಇಲ್ಲ. ಇದು ಭಾರತದ ಜೊತೆಗೇ ಜಾಗತಿಕ ಆರ್ಥಿಕತೆಗೆ ಹೊಡೆತ ನೀಡುತ್ತದೆ ಎಂದು ಸೀರಂ ಸಿಇಒ ಅದಾರ್ ಪೂನಾವಾಲಾ ಟ್ವೀಟ್‍ ಮಾಡಿದ್ದಾರೆ.

ಯುರೋಪಿಯನ್‍ ಒಕ್ಕೂಟದಲ್ಲಿ ಕೇವಲ ನಾಲ್ಕು ಲಸಿಕೆಗಳು ಮಾನ್ಯತೆ ಪಡೆದಿವೆ. ಫಿಜರ್ ಬಯೋಟೆಕ್‌ನ ಲಸಿಕೆ, ಮಾಡೆರ್ನಾ ಲಸಿಕೆ, ಅಸ್ಟ್ರಾಜಯೋನಿಕ್‍-ಆಕ್ಸ್‌ಫರ್ಡ್‍ನ Vaxzervria ಮತ್ತು ಜಾನ್‍ಸನ್‍ & ಜಾನ್‍ಸನ್‍ ಕಂಪನಿಯ ಜಾನ್‍ಸೀನ್‍ ಲಸಿಕೆಗಳಿಗೆ ಮಾತ್ರ ಅಲ್ಲಿ ಮಾನ್ಯತೆ ಇದೆ. ಈ ಲಸಿಕೆಗಳನ್ನು ಪಡೆದವರಿಗೆ ಮಾತ್ರ ವ್ಯಾಕ್ಸಿನೇಷನ್ ಪಾಸ್‌ಪೋರ್ಟ್‍ಗಳನ್ನು ನೀಡಲಾಗುವುದು ಮತ್ತು ಸಾಂಕ್ರಾಮಿಕ ಸಮಯದಲ್ಲಿ ಯುರೋಪಿಯನ್‍ ಒಕ್ಕೂಟದ ಒಳಗೆ ಪ್ರಯಾಣಿಸಲು ಅನುಮತಿಸಲಾಗುವುದು.

“ಭಾರತವು ಹೆಚ್ಚಿನ ಜನಸಂಖ್ಯೆಯನ್ನು ಹೊಂದಿದೆ. ಕೋವಿಶೀಲ್ಡ್ ಅನ್ನು ಯುರೋಪಿಯನ್‍ ಒಕ್ಕೂಟ ಕೋವಿಡ್ ವ್ಯಾಕ್ಸಿನೇಷನ್ ಪಾಸ್‌ಪೋರ್ಟ್‍ಗೆ ಸೇರಿಸದಿರುವುದು ಕೋವಿಶೀಲ್ಡ್ ಲಸಿಕೆ ಪಡೆದ ಜನರಿಗೆ ಯುರೋಪಿಯನ್ ದೇಶಗಳಿಗೆ ಪ್ರಯಾಣಿಸಲು ಅವಕಾಶ ನೀಡುವುದಿಲ್ಲ. ಇದು ವಿದ್ಯಾರ್ಥಿಗಳು ಮತ್ತು ಉದ್ಯಮಿಗಳ ಪ್ರಯಾಣ ಮತ್ತು ವಾಸ್ತವ್ಯದ ಮೇಲೆ ಪರಿಣಾಮ ಬೀರುತ್ತದೆ. ಇದರಿಂದ ನಮ್ಮ ಆರ್ಥಿಕತೆಗೆ ತೀವ್ರ ಅಡ್ಡಿ ಉಂಟು ಮಾಡುತ್ತದೆ ಮತ್ತು ಜಾಗತಿಕ ಆರ್ಥಿಕತೆಯ ಮೇಲೂ ಇದರ ಪರಿಣಾಮ ಆಗುತ್ತದೆ  ಎಂದು ಎಸ್‌ಐಐನ ಸಿಇಒ ಅದಾರ್  ಪೂನಾವಾಲಾ ಅವರು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ ಎಂದು ಮೂಲಗಳನ್ನು ಆಧರಿಸಿ ಟೆಲೆಗ್ರಾಫ್‍ ಇಂಡಿಯಾ ವರದಿ ಮಾಡಿದೆ.

ಕೋವಿಶೀಲ್ಡ್ ತೆಗೆದುಕೊಂಡ ಬಹಳಷ್ಟು ಭಾರತೀಯರು ಯುರೋಪಿಯನ್‍ ದೇಶಗಳಿಗೆ ಪ್ರಯಾಣಿಸುವಾಗ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ನಾನು ಅರಿತುಕೊಂಡಿದ್ದೇನೆ, ಎಲ್ಲರಿಗೂ ನಾನು ಭರವಸೆ ನೀಡುತ್ತೇನೆ, ನಾನು ಇದನ್ನು ಉನ್ನತ ಮಟ್ಟದಲ್ಲಿ ಚರ್ಚಿಸುತ್ತಿದ್ದೇನೆ. ವಿವಿಧ ದೇಶಗಳ ಔಷಧ ನಿಯಂತ್ರಕರು ಮತ್ತು ರಾಜತಾಂತ್ರಿಕ ಅಧಿಕಾರಿಗಳ ಜೊತೆ ಮಾತನಾಡಿ, ಶೀಘ್ರದಲ್ಲೇ ಈ ವಿಷಯವನ್ನು ಭಾರತ ಸರ್ಕಾರ ಪರಿಹರಿಸುತ್ತದೆ ಎಂದು ಆಶಿಸುತ್ತೇನೆ ಎಂದು ಪೂನಾವಾಲಾ ಟ್ವೀಟ್‍ ಮಾಡಿದ್ದಾರೆ.

ಎಸ್‌ಐಐನ ಸರ್ಕಾರಿ ಮತ್ತು ನಿಯಂತ್ರಣ ವ್ಯವಹಾರಗಳ ನಿರ್ದೇಶಕ ಪ್ರಕಾಶ್ ಕುಮಾರ್ ಸಿಂಗ್ ಅವರು ಪೂನಾವಾಲಾ ಅವರ ಪತ್ರವನ್ನು ಉಲ್ಲೇಖಿಸಿ, ಸಚಿವ ಜೈಶಂಕರ್ ಅವರ ಹಸ್ತಕ್ಷೇಪವನ್ನು ಕೋರಿದ್ದಾರೆ. “ಇದು ರಾಷ್ಟ್ರೀಯ ಹಿತಾಸಕ್ತಿ ಮತ್ತು ಜನರ ಹಿತದೃಷ್ಟಿಯಿಂದ ಕೂಡಿದೆ. ಕೋವಿಶೀಲ್ಡ್ ಲಸಿಕೆಯನ್ನು ಯುರೋಪಿಯನ್‍ ಒಕ್ಕೂಟದ ದೇಶಗಳು ಮತ್ತು ಇತರ ದೇಶಗಳು ಮಾನ್ಯ ಮಾಡುವಂತೆ ವ್ಯವಸ್ಥ ಮಾಡಬೇಕು ಎಂದು ಕೇಳಿದ್ದಾರೆ.

ಭಾರತದಲ್ಲಿ ಈಗಾಗಲೇ ಸುಮಾರು 30 ಕೋಟಿ ಜನರಿಗೆ ಕೋವಿಶೀಲ್ಡ್ ಲಸಿಕೆ ನೀಡಲಾಗಿದೆ ಎಂದು ಪೂನಾವಾಲಾ ಅವರು ಬರೆದಿರುವ ಪತ್ರದಲ್ಲಿ ಉಲ್ಲೇಖಿಸಲಾಗಿದ. ಅಂತಿಮವಾಗಿ ಕೋವಿಶೀಲ್ಡ್ ಲಸಿಕೆಯೊಂದಿಗೆ ಭಾರತೀಯ ಜನಸಂಖ್ಯೆಯ ಶೇಕಡಾ 50ಕ್ಕಿಂತ ಹೆಚ್ಚು ಜನರಿಗೆ ರಕ್ಷಣೆ ಸಿಗಲಿದೆ ಎಂದು ನಿರೀಕ್ಷಿಸಲಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

‘ಆಕ್ಸ್‌ಫರ್ಢ್-ಅಸ್ಟ್ರಾಜೆನೆಕಾದಿಂದ ತಂತ್ರಜ್ಞಾನ ವರ್ಗಾವಣೆಯಡಿಯಲ್ಲಿ ಅಸ್ಟ್ರಾಜೆನೆಕಾ-ಎಸ್‌ಐಐ ಸಹಯೋಗದಲ್ಲಿ ಕೋವಿಶೀಲ್ಡ್ ಅನ್ನು ತಯಾರಿಸಲಾಗಿದೆ, ಲಸಿಕೆಯ ಕ್ಲಿನಿಕಲ್ ಪ್ರಯೋಗಗಳನ್ನು ವಿದೇಶದಲ್ಲಿ ಯಶಸ್ವಿಯಾಗಿ ನಡೆಸಲಾಗಿದೆ ಮತ್ತು ತುರ್ತು ಬಳಕೆಯ ಅನುಮೋದನೆಗಾಗಿ ಎಂಹೆಚ್‌ಆರ್‌ಎ ಅನುಮೋದಿಸಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.


ಇದನ್ನೂ ಓದಿ; ಲಸಿಕೆ ನೀಡುವಲ್ಲಿ ಅಮೆರಿಕ ಹಿಂದಿಕ್ಕಿದ ಭಾರತ: ಪಿಳ್ಳಂಗೋವಿ ಪ್ರಚಾರವೆಂದು ನೆಟ್ಟಿಗರ ಟ್ರೋಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...