Homeಮುಖಪುಟಪೂಂಛ್‌ನಲ್ಲಿ ಸೈನಿಕರ ಚಿತ್ರಹಿಂಸೆಯಿಂದ ಮೂವರು ನಾಗರಿಕರು ಸಾವು?

ಪೂಂಛ್‌ನಲ್ಲಿ ಸೈನಿಕರ ಚಿತ್ರಹಿಂಸೆಯಿಂದ ಮೂವರು ನಾಗರಿಕರು ಸಾವು?

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಸೇನೆಯ ವಶದಲ್ಲಿದ್ದ ವೇಳೆ ಮೂವರು ನಾಗರಿಕರು  ಸಾವನ್ನಪ್ಪಿದ್ದಾರೆ. ಕಸ್ಟಡಿ ಹಿಂಸೆಯಿಂದಾಗಿ ಸಾವನ್ನಪ್ಪಿದ್ದಾರೆ ಎಂದು ಮೃತರ ಸಂಬಂಧಿಗಳು ಮತ್ತು ಸ್ಥಳೀಯರು ಆರೋಪಿಸಿದ್ದು, ಈ ಬಗ್ಗೆ ಜಮ್ಮು-ಕಾಶ್ಮೀರದ ಆಡಳಿತವಾಗಲೀ, ಸೇನೆಯಾಗಲಿ ಸ್ಪಷ್ಟ ಪ್ರತಿಕ್ರಿಯೆ ನೀಡಿಲ್ಲ. ಇದರಿಂದಾಗಿ ಪೂಂಛ್‌ನಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಐವರು ಯೋಧರು, ಉಗ್ರರೊಂದಿಗಿನ ಗುಂಡಿನ ಕಾಳಗದಲ್ಲಿ ಹುತಾತ್ಮರಾದ ಘಟನೆಗೆ ಸಂಬಂಧಿಸಿ ವಶಕ್ಕೆ ತೆಗೆದುಕೊಂಡ ಮೂವರು ನಾಗರಿಕರ ಹತ್ಯೆಗೆ ಯಾರು ಹೊಣೆ ಎಂದು ಸೇನೆ ಮತ್ತು ಜಮ್ಮು-ಕಾಶ್ಮೀರ ಹೇಳಿಲ್ಲವಾದರೂ, ಸೇನಾ ಕಸ್ಟಡಿಯಲ್ಲಿ ಪುರುಷರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಡಿ.21ರಂದು ಪೂಂಛ್‌ನಲ್ಲಿ ಭಯೋತ್ಪಾದಕರು ನಡೆಸಿದ್ದ ಹೊಂಚುದಾಳಿಯಲ್ಲಿ ಸೇನೆಯ ನಾಲ್ವರು ಯೋಧರು ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ 8 ಮಂದಿಯನ್ನು ವಿಚಾರಣೆಗಾಗಿ ಸೇನೆಯು ತನ್ನ ವಶಕ್ಕೆ ತೆಗೆದುಕೊಂಡಿತ್ತು. ಸೇನೆಯು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಂಡಿದ್ದ 8 ಜನರಲ್ಲಿ ಮೂವರು ನಾಗರಿಕರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.

ಸಫೀರ್ ಹುಸೇನ್ (48), ಮೊಹಮ್ಮದ್ ಶೋಕತ್ (28) ಮತ್ತು ಶಬ್ಬೀರ್ ಅಹ್ಮದ್ (25) ಅವರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಮೃತರ ಕುಟುಂಬದ ಸದಸ್ಯರು ಮತ್ತು ನೆರೆಹೊರೆಯವರು ಸೇನಾ ಸಿಬ್ಬಂದಿಗಳು ಥಳಿಸಿ ಹತ್ಯೆ ಮಾಡಿದ್ದಾರೆಂದು ಆರೋಪಿಸಿದ್ದು, ಸಂಸತ್ರಸ್ತರು ಸಮವಸ್ತ್ರಧಾರಿ ಸಿಬ್ಬಂದಿಗಳ ಬಳಿ ಜೀವಕ್ಕಾಗಿ ಅಂಗಲಾಚುವ ವಿಡಿಯೋಗಳನ್ನು ನೋಡಿರುವುದಾಗಿ ಹೇಳಿದ್ದಾರೆ.

ಕೇಂದ್ರಾಡಳಿತ ಪ್ರದೇಶದ ಆಡಳಿತವು ಕೇಂದ್ರ ಗೃಹ ಸಚಿವಾಲಯದ ಮೇಲ್ವಿಚಾರಣೆಯಡಿಯಲ್ಲಿ ಬರುತ್ತದೆ. ಈ ಬಗ್ಗೆ ಕೇಂದ್ರ ಗೃಹ ಸಚಿವಾಲಯವೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಭಾನುವಾರ ರಾತ್ರಿ ಅಪರಿಚಿತರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302ರ ಅಡಿಯಲ್ಲಿ ಎಫ್‌ಐಆರ್‌ನ್ನು ದಾಖಲಿಸಲಾಗಿದೆ.

ಈ ಬಗ್ಗೆ ಮಾತನಾಡಿದ ಗ್ರಾಮದ ಮುಖ್ಯಸ್ಥ ಮೆಹಮೂದ್ ಅಹ್ಮದ್,  ಶಬ್ಬೀರ್ ಮತ್ತು ಶೋಕತ್ ಅವರನ್ನು ವೈರಲ್ ವೀಡಿಯೊದಲ್ಲಿ ಗುರುತಿಸಿರುವುದಾಗಿ ಹೇಳಿದ್ದಾರೆ. ಇದರಲ್ಲಿ ಸೈನಿಕರು ಸೆರೆಯಾಳುಗಳನ್ನು ಕ್ರೂರವಾಗಿ ಥಳಿಸುವುದನ್ನು ಮತ್ತು ಕೆಲವರು ಪೃಷ್ಠದ ಮೇಲೆ ಮೆಣಸಿನ ಪುಡಿಯನ್ನು ಎರಚುವುದನ್ನು ಕಾಣಬಹುದು ಎಂದು ಹೇಳಿದ್ದಾರೆ.

ಸೇನಾ ಕಸ್ಟಡಿಯಲ್ಲಿ ಕೊಲ್ಲಲ್ಪಟ್ಟರು ಎಂದು ಹೇಳಲಾದ ಮೂವರು ನಾಗರಿಕರಲ್ಲಿ ಒಬ್ಬರಾದ ಮೊಹಮ್ಮದ್ ಶೌಕಾತ್‌ನ ಚಿಕ್ಕಪ್ಪ ಮೊಹಮ್ಮದ್ ಸಿದ್ದಿಕ್ ಮಾತನಾಡಿದ್ದು, ವೀಡಿಯೊದಲ್ಲಿ ಕಾಣಿಸಿಕೊಂಡಿರುವುದು ತನ್ನ ಸೋದರಳಿಯನೇ. ಲಾಠಿ ಬೀಸುವ ಸೈನಿಕನನ್ನು ಆತ ಕೈಮುಗಿದು ಬಿಟ್ಟು ಬಿಡುವಂತೆ ಬೇಡಿಕೊಂಡಿದ್ದಾನೆ. ಆದರೆ ಅವರ ಮನಕರಗಲಿಲ್ಲ. ವಿಡಿಯೋದಲ್ಲಿ ಕಾಣಿಸಿಕೊಂಡ ಕಪ್ಪು ಬಟ್ಟೆಯನ್ನು ಧರಿಸಿರುವ ವ್ಯಕ್ತಿ ಸಫೀರ್. ಅವರ ಸಹೋದರ ಗಡಿ ಭದ್ರತಾ ಪಡೆಯಲ್ಲಿ ಹೆಡ್ ಕಾನ್‌ಸ್ಟೆಬಲ್ ಆಗಿದ್ದಾರೆ. ವಿಡಿಯೋದಲ್ಲಿ ಕಂಡು ಬಂದ ಕೆಂಪು ಟೀ ಶರ್ಟ್ ಧರಿಸಿರುವ ಮೂರನೇ ಯುವಕ ಇರ್ಫಾನ್ ಅಹ್ಮದ್. ಅವರು 16 ವರ್ಷ ವಯಸ್ಸಿನವರಾಗಿದ್ದಾರೆ ಮತ್ತು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಡೀ ಘಟನೆಯು ಬಡತನ ಮತ್ತು ಹಕ್ಕುಗಳಿಗಾಗಿ ಹೋರಾಡುತ್ತಿರುವ ಸಮುದಾಯಕ್ಕೆ ಆಘಾತ ಉಂಟುಮಾಡಿದೆ ಎಂದು ಸಿದ್ದಿಕ್ ಹೇಳಿದರು.

ಮೃತ ನಾಗರಿಕರ ದೇಹಗಳನ್ನು ಅವರ ಕುಟುಂಬಗಳಿಗೆ ಹಸ್ತಾಂತರಿಸಿದಾಗಿನಿಂದ ಪೂಂಚ್‌ನ ಟೋಪಾ ಪೀರ್ ಗ್ರಾಮದಲ್ಲಿ ಕರ್ಪ್ಯೂ ವಿಧಿಸಲಾಗಿದೆ. ಸಂಪೂರ್ಣವಾಗಿ ಮಿಲಿಟರಿ ನಿಯೋಜಿಸಲಾಗಿದೆ. ಇಂಟರ್ನೆಟ್ ಸ್ಥಗಿತಗೊಳಿಸಲಾಗಿದೆ. ಸೇನೆಯು ಸುತ್ತುವರಿದಿರುವುದರಿಂದ ಗ್ರಾಮಸ್ಥರು ದುಃಖದ ಸಮಯದಲ್ಲಿ ಮೂರು ಕುಟುಂಬಗಳನ್ನು ಭೇಟಿ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಸರಪಂಚ್ ಅಹ್ಮದ್ ಹೇಳಿದ್ದಾರೆ.

ಮೃತ ಯುವಕ ಮೊಹಮ್ಮದ್ ಶಬ್ಬೀರ್ ಅವರ ತಂದೆ ವಾಲಿ ಮೊಹಮ್ಮದ್ ಅವರು ತಮ್ಮ ಮಗನ ಹತ್ಯೆ ಬಗ್ಗೆ ದುಃಖ ವ್ಯಕ್ತಪಡಿಸಿದ್ದು, ಅವರು ನನ್ನ ಸುಂದರವಾಗಿದ್ದ ಮಗನನ್ನು ಎಲ್ಲೆಡೆ ಹೊಲಿಗೆಗಳಿಂದ ತುಂಬಿದ ದೇಹವನ್ನಾಗಿ ಮಾಡಿದರು. ನನಗೆ 60 ವರ್ಷ, ನನ್ನ 27 ವರ್ಷದ ಮಗನನ್ನು ದೇಹದಾದ್ಯಂತ ಹೊಲಿಗೆಗಳಿಂದ ನನ್ನ ಬಳಿಗೆ ತಂದರು. ತಲೆ ಮತ್ತು ಎದೆಗೆ ಸಹ ಹೊಲಿಗೆಗಳನ್ನು ಹಾಕಲಾಗಿತ್ತು. ಮಗನಿಗೆ ಎಲೆಕ್ಟ್ರಿಕ್‌ ಶಾಕ್‌ ಕೂಡ ನೀಡಲಾಗಿದೆ ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಸೇನೆಯು, ಈ ವಿಷಯವು ತನಿಖೆಯ ಹಂತದಲ್ಲಿದೆ ಮತ್ತು ತನಿಖೆ ನಡೆಸುವಲ್ಲಿ ಸಂಪೂರ್ಣ ಬೆಂಬಲ ಮತ್ತು ಸಹಕಾರವನ್ನು ನೀಡುವುದಾಗಿ ಹೇಳಿದೆ. ಆದರೆ ಸ್ಥಳೀಯರು, ನಮ್ಮ ಮತ್ತು ಸೇನೆಯ ನಡುವಿನ ಬಾಂದವ್ಯವನ್ನು ಪುನರ್ನಿರ್ಮಿಸಲು ಬಹಳ ಸಮಯ ತೆಗೆದುಕೊಳ್ಳಬಹದು ಎಂದು ಹೇಳುತ್ತಿದ್ದಾರೆ.

ಜಮ್ಮು-ಕಾಶ್ಮೀರದ ಆಡಳಿತವು ಮೂವರು ನಾಗರಿಕರ ಸಾವಿಗೆ ಕಾರಣವನ್ನು ಹೇಳಿಲ್ಲ. ಆದರೆ ಕಾನೂನು ಕ್ರಮವನ್ನು ಪ್ರಾರಂಭಿಸಲಾಗಿದೆ ಮತ್ತು ಪರಿಹಾರವನ್ನು ಘೋಷಿಸಲಾಗಿದೆ ಎಂದು ಹೇಳಿಕೊಂಡು ಘಟನೆಯಿಂದ ನುಣುಚಿಕೊಂಡಿದೆ.

ಪಿಡಿಪಿ ನಾಯಕಿ ಮೆಹಬೂಬಾ ಮುಫ್ತಿ ಮೂವರು ಯುವಕರ ಹತ್ಯೆಯನ್ನು ಖಂಡಿಸಿದ್ದಾರೆ. ಇದು ಬೇರೆ ಯಾವುದೇ ಸರ್ಕಾರದ ಅಡಿಯಲ್ಲಿ ಸಂಭವಿಸಿದ್ದರೆ, ಗೋದಿ ಮಾದ್ಯ ಮವು ಪ್ರಶ್ನೆಗಳನ್ನು ಎತ್ತುತ್ತಿತ್ತು. ಅವರು ಚಿತ್ರಹಿಂಸೆಗೊಳಗಾದ 15 ಜನರನ್ನು ತಮ್ಮ ಮನೆಗಳಿಂದ ಎಳೆದುಕೊಂಡು ಹೋಗಿದ್ದರು. ಅವರಲ್ಲಿ ಮೂವರು ಈಗಾಗಲೇ ಸಾವನ್ನಪ್ಪಿದ್ದಾರೆ. ಈ ನಯಾ ಕಾಶ್ಮೀರ ಹೇಗಿದೆ? ಅಲ್ಲಿ ಸೈನಿಕರಾಗಲಿ ಅಥವಾ ಸಾಮಾನ್ಯ ಜನರಾಗಲಿ ಸುರಕ್ಷಿತವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಕೂಡ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಸೇನೆಯ ವಶದಲ್ಲಿದ್ದ ಮೂವರು ನಾಗರಿಕರನ್ನು ಕ್ರೂರವಾಗಿ ಹತ್ಯೆಗೈದಿರುವುದು ಬಲವಾಗಿ ಖಂಡಿಸಿದೆ. ಮೃತರ ಕುಟುಂಬಗಳಿಗೆ ಕೇವಲ ಪರಿಹಾರ ಘೋಷಿಸಿದರೆ ಸಾಕಾಗುವುದಿಲ್ಲ, ತ್ವರಿತ ತನಿಖೆಯಾಗಬೇಕು ಮತ್ತು ಹೊಣೆಗಾರರಿಗೆ ಶಿಕ್ಷೆ ವಿಧಿಸಬೇಕು ಎಂದು ಹೇಳಿದೆ.

ಇದನ್ನು ಓದಿ: ಬೆಂಗಳೂರು: ಕ್ರಿಸ್ ಮಸ್ ಟ್ರೀ ಪ್ರದರ್ಶನಕ್ಕೆ ವಿರೋಧಿಸಿ ಗಲಾಟೆ; ಪುನೀತ್ ಕೆರೆಹಳ್ಳಿ ಸೇರಿ ಐವರ ವಿರುದ್ಧ ಎಫ್‌ಐಆರ್‌

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...