Homeಮುಖಪುಟಪೂಂಛ್‌ನಲ್ಲಿ ಸೈನಿಕರ ಚಿತ್ರಹಿಂಸೆಯಿಂದ ಮೂವರು ನಾಗರಿಕರು ಸಾವು?

ಪೂಂಛ್‌ನಲ್ಲಿ ಸೈನಿಕರ ಚಿತ್ರಹಿಂಸೆಯಿಂದ ಮೂವರು ನಾಗರಿಕರು ಸಾವು?

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಸೇನೆಯ ವಶದಲ್ಲಿದ್ದ ವೇಳೆ ಮೂವರು ನಾಗರಿಕರು  ಸಾವನ್ನಪ್ಪಿದ್ದಾರೆ. ಕಸ್ಟಡಿ ಹಿಂಸೆಯಿಂದಾಗಿ ಸಾವನ್ನಪ್ಪಿದ್ದಾರೆ ಎಂದು ಮೃತರ ಸಂಬಂಧಿಗಳು ಮತ್ತು ಸ್ಥಳೀಯರು ಆರೋಪಿಸಿದ್ದು, ಈ ಬಗ್ಗೆ ಜಮ್ಮು-ಕಾಶ್ಮೀರದ ಆಡಳಿತವಾಗಲೀ, ಸೇನೆಯಾಗಲಿ ಸ್ಪಷ್ಟ ಪ್ರತಿಕ್ರಿಯೆ ನೀಡಿಲ್ಲ. ಇದರಿಂದಾಗಿ ಪೂಂಛ್‌ನಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಐವರು ಯೋಧರು, ಉಗ್ರರೊಂದಿಗಿನ ಗುಂಡಿನ ಕಾಳಗದಲ್ಲಿ ಹುತಾತ್ಮರಾದ ಘಟನೆಗೆ ಸಂಬಂಧಿಸಿ ವಶಕ್ಕೆ ತೆಗೆದುಕೊಂಡ ಮೂವರು ನಾಗರಿಕರ ಹತ್ಯೆಗೆ ಯಾರು ಹೊಣೆ ಎಂದು ಸೇನೆ ಮತ್ತು ಜಮ್ಮು-ಕಾಶ್ಮೀರ ಹೇಳಿಲ್ಲವಾದರೂ, ಸೇನಾ ಕಸ್ಟಡಿಯಲ್ಲಿ ಪುರುಷರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಡಿ.21ರಂದು ಪೂಂಛ್‌ನಲ್ಲಿ ಭಯೋತ್ಪಾದಕರು ನಡೆಸಿದ್ದ ಹೊಂಚುದಾಳಿಯಲ್ಲಿ ಸೇನೆಯ ನಾಲ್ವರು ಯೋಧರು ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ 8 ಮಂದಿಯನ್ನು ವಿಚಾರಣೆಗಾಗಿ ಸೇನೆಯು ತನ್ನ ವಶಕ್ಕೆ ತೆಗೆದುಕೊಂಡಿತ್ತು. ಸೇನೆಯು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಂಡಿದ್ದ 8 ಜನರಲ್ಲಿ ಮೂವರು ನಾಗರಿಕರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.

ಸಫೀರ್ ಹುಸೇನ್ (48), ಮೊಹಮ್ಮದ್ ಶೋಕತ್ (28) ಮತ್ತು ಶಬ್ಬೀರ್ ಅಹ್ಮದ್ (25) ಅವರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಮೃತರ ಕುಟುಂಬದ ಸದಸ್ಯರು ಮತ್ತು ನೆರೆಹೊರೆಯವರು ಸೇನಾ ಸಿಬ್ಬಂದಿಗಳು ಥಳಿಸಿ ಹತ್ಯೆ ಮಾಡಿದ್ದಾರೆಂದು ಆರೋಪಿಸಿದ್ದು, ಸಂಸತ್ರಸ್ತರು ಸಮವಸ್ತ್ರಧಾರಿ ಸಿಬ್ಬಂದಿಗಳ ಬಳಿ ಜೀವಕ್ಕಾಗಿ ಅಂಗಲಾಚುವ ವಿಡಿಯೋಗಳನ್ನು ನೋಡಿರುವುದಾಗಿ ಹೇಳಿದ್ದಾರೆ.

ಕೇಂದ್ರಾಡಳಿತ ಪ್ರದೇಶದ ಆಡಳಿತವು ಕೇಂದ್ರ ಗೃಹ ಸಚಿವಾಲಯದ ಮೇಲ್ವಿಚಾರಣೆಯಡಿಯಲ್ಲಿ ಬರುತ್ತದೆ. ಈ ಬಗ್ಗೆ ಕೇಂದ್ರ ಗೃಹ ಸಚಿವಾಲಯವೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಭಾನುವಾರ ರಾತ್ರಿ ಅಪರಿಚಿತರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302ರ ಅಡಿಯಲ್ಲಿ ಎಫ್‌ಐಆರ್‌ನ್ನು ದಾಖಲಿಸಲಾಗಿದೆ.

ಈ ಬಗ್ಗೆ ಮಾತನಾಡಿದ ಗ್ರಾಮದ ಮುಖ್ಯಸ್ಥ ಮೆಹಮೂದ್ ಅಹ್ಮದ್,  ಶಬ್ಬೀರ್ ಮತ್ತು ಶೋಕತ್ ಅವರನ್ನು ವೈರಲ್ ವೀಡಿಯೊದಲ್ಲಿ ಗುರುತಿಸಿರುವುದಾಗಿ ಹೇಳಿದ್ದಾರೆ. ಇದರಲ್ಲಿ ಸೈನಿಕರು ಸೆರೆಯಾಳುಗಳನ್ನು ಕ್ರೂರವಾಗಿ ಥಳಿಸುವುದನ್ನು ಮತ್ತು ಕೆಲವರು ಪೃಷ್ಠದ ಮೇಲೆ ಮೆಣಸಿನ ಪುಡಿಯನ್ನು ಎರಚುವುದನ್ನು ಕಾಣಬಹುದು ಎಂದು ಹೇಳಿದ್ದಾರೆ.

ಸೇನಾ ಕಸ್ಟಡಿಯಲ್ಲಿ ಕೊಲ್ಲಲ್ಪಟ್ಟರು ಎಂದು ಹೇಳಲಾದ ಮೂವರು ನಾಗರಿಕರಲ್ಲಿ ಒಬ್ಬರಾದ ಮೊಹಮ್ಮದ್ ಶೌಕಾತ್‌ನ ಚಿಕ್ಕಪ್ಪ ಮೊಹಮ್ಮದ್ ಸಿದ್ದಿಕ್ ಮಾತನಾಡಿದ್ದು, ವೀಡಿಯೊದಲ್ಲಿ ಕಾಣಿಸಿಕೊಂಡಿರುವುದು ತನ್ನ ಸೋದರಳಿಯನೇ. ಲಾಠಿ ಬೀಸುವ ಸೈನಿಕನನ್ನು ಆತ ಕೈಮುಗಿದು ಬಿಟ್ಟು ಬಿಡುವಂತೆ ಬೇಡಿಕೊಂಡಿದ್ದಾನೆ. ಆದರೆ ಅವರ ಮನಕರಗಲಿಲ್ಲ. ವಿಡಿಯೋದಲ್ಲಿ ಕಾಣಿಸಿಕೊಂಡ ಕಪ್ಪು ಬಟ್ಟೆಯನ್ನು ಧರಿಸಿರುವ ವ್ಯಕ್ತಿ ಸಫೀರ್. ಅವರ ಸಹೋದರ ಗಡಿ ಭದ್ರತಾ ಪಡೆಯಲ್ಲಿ ಹೆಡ್ ಕಾನ್‌ಸ್ಟೆಬಲ್ ಆಗಿದ್ದಾರೆ. ವಿಡಿಯೋದಲ್ಲಿ ಕಂಡು ಬಂದ ಕೆಂಪು ಟೀ ಶರ್ಟ್ ಧರಿಸಿರುವ ಮೂರನೇ ಯುವಕ ಇರ್ಫಾನ್ ಅಹ್ಮದ್. ಅವರು 16 ವರ್ಷ ವಯಸ್ಸಿನವರಾಗಿದ್ದಾರೆ ಮತ್ತು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಡೀ ಘಟನೆಯು ಬಡತನ ಮತ್ತು ಹಕ್ಕುಗಳಿಗಾಗಿ ಹೋರಾಡುತ್ತಿರುವ ಸಮುದಾಯಕ್ಕೆ ಆಘಾತ ಉಂಟುಮಾಡಿದೆ ಎಂದು ಸಿದ್ದಿಕ್ ಹೇಳಿದರು.

ಮೃತ ನಾಗರಿಕರ ದೇಹಗಳನ್ನು ಅವರ ಕುಟುಂಬಗಳಿಗೆ ಹಸ್ತಾಂತರಿಸಿದಾಗಿನಿಂದ ಪೂಂಚ್‌ನ ಟೋಪಾ ಪೀರ್ ಗ್ರಾಮದಲ್ಲಿ ಕರ್ಪ್ಯೂ ವಿಧಿಸಲಾಗಿದೆ. ಸಂಪೂರ್ಣವಾಗಿ ಮಿಲಿಟರಿ ನಿಯೋಜಿಸಲಾಗಿದೆ. ಇಂಟರ್ನೆಟ್ ಸ್ಥಗಿತಗೊಳಿಸಲಾಗಿದೆ. ಸೇನೆಯು ಸುತ್ತುವರಿದಿರುವುದರಿಂದ ಗ್ರಾಮಸ್ಥರು ದುಃಖದ ಸಮಯದಲ್ಲಿ ಮೂರು ಕುಟುಂಬಗಳನ್ನು ಭೇಟಿ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಸರಪಂಚ್ ಅಹ್ಮದ್ ಹೇಳಿದ್ದಾರೆ.

ಮೃತ ಯುವಕ ಮೊಹಮ್ಮದ್ ಶಬ್ಬೀರ್ ಅವರ ತಂದೆ ವಾಲಿ ಮೊಹಮ್ಮದ್ ಅವರು ತಮ್ಮ ಮಗನ ಹತ್ಯೆ ಬಗ್ಗೆ ದುಃಖ ವ್ಯಕ್ತಪಡಿಸಿದ್ದು, ಅವರು ನನ್ನ ಸುಂದರವಾಗಿದ್ದ ಮಗನನ್ನು ಎಲ್ಲೆಡೆ ಹೊಲಿಗೆಗಳಿಂದ ತುಂಬಿದ ದೇಹವನ್ನಾಗಿ ಮಾಡಿದರು. ನನಗೆ 60 ವರ್ಷ, ನನ್ನ 27 ವರ್ಷದ ಮಗನನ್ನು ದೇಹದಾದ್ಯಂತ ಹೊಲಿಗೆಗಳಿಂದ ನನ್ನ ಬಳಿಗೆ ತಂದರು. ತಲೆ ಮತ್ತು ಎದೆಗೆ ಸಹ ಹೊಲಿಗೆಗಳನ್ನು ಹಾಕಲಾಗಿತ್ತು. ಮಗನಿಗೆ ಎಲೆಕ್ಟ್ರಿಕ್‌ ಶಾಕ್‌ ಕೂಡ ನೀಡಲಾಗಿದೆ ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಸೇನೆಯು, ಈ ವಿಷಯವು ತನಿಖೆಯ ಹಂತದಲ್ಲಿದೆ ಮತ್ತು ತನಿಖೆ ನಡೆಸುವಲ್ಲಿ ಸಂಪೂರ್ಣ ಬೆಂಬಲ ಮತ್ತು ಸಹಕಾರವನ್ನು ನೀಡುವುದಾಗಿ ಹೇಳಿದೆ. ಆದರೆ ಸ್ಥಳೀಯರು, ನಮ್ಮ ಮತ್ತು ಸೇನೆಯ ನಡುವಿನ ಬಾಂದವ್ಯವನ್ನು ಪುನರ್ನಿರ್ಮಿಸಲು ಬಹಳ ಸಮಯ ತೆಗೆದುಕೊಳ್ಳಬಹದು ಎಂದು ಹೇಳುತ್ತಿದ್ದಾರೆ.

ಜಮ್ಮು-ಕಾಶ್ಮೀರದ ಆಡಳಿತವು ಮೂವರು ನಾಗರಿಕರ ಸಾವಿಗೆ ಕಾರಣವನ್ನು ಹೇಳಿಲ್ಲ. ಆದರೆ ಕಾನೂನು ಕ್ರಮವನ್ನು ಪ್ರಾರಂಭಿಸಲಾಗಿದೆ ಮತ್ತು ಪರಿಹಾರವನ್ನು ಘೋಷಿಸಲಾಗಿದೆ ಎಂದು ಹೇಳಿಕೊಂಡು ಘಟನೆಯಿಂದ ನುಣುಚಿಕೊಂಡಿದೆ.

ಪಿಡಿಪಿ ನಾಯಕಿ ಮೆಹಬೂಬಾ ಮುಫ್ತಿ ಮೂವರು ಯುವಕರ ಹತ್ಯೆಯನ್ನು ಖಂಡಿಸಿದ್ದಾರೆ. ಇದು ಬೇರೆ ಯಾವುದೇ ಸರ್ಕಾರದ ಅಡಿಯಲ್ಲಿ ಸಂಭವಿಸಿದ್ದರೆ, ಗೋದಿ ಮಾದ್ಯ ಮವು ಪ್ರಶ್ನೆಗಳನ್ನು ಎತ್ತುತ್ತಿತ್ತು. ಅವರು ಚಿತ್ರಹಿಂಸೆಗೊಳಗಾದ 15 ಜನರನ್ನು ತಮ್ಮ ಮನೆಗಳಿಂದ ಎಳೆದುಕೊಂಡು ಹೋಗಿದ್ದರು. ಅವರಲ್ಲಿ ಮೂವರು ಈಗಾಗಲೇ ಸಾವನ್ನಪ್ಪಿದ್ದಾರೆ. ಈ ನಯಾ ಕಾಶ್ಮೀರ ಹೇಗಿದೆ? ಅಲ್ಲಿ ಸೈನಿಕರಾಗಲಿ ಅಥವಾ ಸಾಮಾನ್ಯ ಜನರಾಗಲಿ ಸುರಕ್ಷಿತವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಕೂಡ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಸೇನೆಯ ವಶದಲ್ಲಿದ್ದ ಮೂವರು ನಾಗರಿಕರನ್ನು ಕ್ರೂರವಾಗಿ ಹತ್ಯೆಗೈದಿರುವುದು ಬಲವಾಗಿ ಖಂಡಿಸಿದೆ. ಮೃತರ ಕುಟುಂಬಗಳಿಗೆ ಕೇವಲ ಪರಿಹಾರ ಘೋಷಿಸಿದರೆ ಸಾಕಾಗುವುದಿಲ್ಲ, ತ್ವರಿತ ತನಿಖೆಯಾಗಬೇಕು ಮತ್ತು ಹೊಣೆಗಾರರಿಗೆ ಶಿಕ್ಷೆ ವಿಧಿಸಬೇಕು ಎಂದು ಹೇಳಿದೆ.

ಇದನ್ನು ಓದಿ: ಬೆಂಗಳೂರು: ಕ್ರಿಸ್ ಮಸ್ ಟ್ರೀ ಪ್ರದರ್ಶನಕ್ಕೆ ವಿರೋಧಿಸಿ ಗಲಾಟೆ; ಪುನೀತ್ ಕೆರೆಹಳ್ಳಿ ಸೇರಿ ಐವರ ವಿರುದ್ಧ ಎಫ್‌ಐಆರ್‌

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...