Homeಮುಖಪುಟಕಳಪೆ ಶಿಕ್ಷಣ, ಉದ್ಯೋಗಿಗಳ ಕೌಶಲ್ಯಗಳನ್ನು ಮೊದಲು ಸುಧಾರಿಸಬೇಕು: ರಘುರಾಮ್ ರಾಜನ್

ಕಳಪೆ ಶಿಕ್ಷಣ, ಉದ್ಯೋಗಿಗಳ ಕೌಶಲ್ಯಗಳನ್ನು ಮೊದಲು ಸುಧಾರಿಸಬೇಕು: ರಘುರಾಮ್ ರಾಜನ್

- Advertisement -
- Advertisement -

ಆರ್‌ಬಿಐನ ಮಾಜಿ ಗವರ್ನರ್ ರಘುರಾಮ್ ರಾಜನ್ ಅವರು ಭಾರತದ ಆರ್ಥಿಕ ಬೆಳವಣಿಗೆಯ ಕುರಿತು ತಮ್ಮ ಹೇಳಿಕೆಗಳಿಗಾಗಿ ಟೀಕೆಗೆ ಗುರಿಯಾಗಿದ್ದಾರೆ. ‘ದೇಶದ ಗಮನಾರ್ಹ ರಚನಾತ್ಮಕ ಸಮಸ್ಯೆಗಳನ್ನು ಸರಿಪಡಿಸಬೇಕಾಗಿದೆ. ಭಾರತವು ತನ್ನ ಬಲವಾದ ಆರ್ಥಿಕ ಬೆಳವಣಿಗೆಯ ಸುತ್ತಲಿನ “ಹೈಪ್” ಅನ್ನು ನಂಬುವ ದೊಡ್ಡ ತಪ್ಪನ್ನು ಮಾಡುತ್ತಿದೆ. ಅದನ್ನು ನಿಜಗೊಳಿಸಲು ಹಲವು ವರ್ಷಗಳ ಕಠಿಣ ಪರಿಶ್ರಮ ಇನ್ನೂ ಉಳಿದಿದೆ’ ಎಂದು ಅವರು ಬ್ಲೂಮ್‌ಬರ್ಗ್‌ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಭಾರತವು ತನ್ನ ನಿಜವಾದ ಸಾಮರ್ಥ್ಯವನ್ನು ಪೂರೈಸಲು ಕಳಪೆ ಶಿಕ್ಷಣ ಮತ್ತು ಉದ್ಯೋಗಿಗಳ ಕೌಶಲ್ಯ ಸೇರಿದಂತೆ ತನ್ನ ರಚನಾತ್ಮಕ ಸಮಸ್ಯೆಗಳನ್ನು ಮೊದಲು ಸುಧಾರಿಸಬೇಕಾಗಿದೆ. 2024 ರ ಸಾರ್ವತ್ರಿಕ ಚುನಾವಣೆಯ ನಂತರ ಪ್ರಮಾಣವಚನ ಸ್ವೀಕರಿಸಿದ ಹೊಸ ಸರ್ಕಾರವು ಈ ಬಾಕಿ ಉಳಿದಿರುವ ಸಮಸ್ಯೆಗಳನ್ನು ಸರಿಪಡಿಸಲು ಆದ್ಯತೆ ನೀಡಬೇಕು ಎಂದು ಅವರು ಒತ್ತಿ ಹೇಳಿದ್ದಾರೆ.

2047ರ ವೇಳೆಗೆ ಭಾರತವು ಅಭಿವೃದ್ಧಿ ಹೊಂದಿದ ಆರ್ಥಿಕತೆಯಾಗುವುದು ಅಸಂಭವ; ನಿಮ್ಮ ಅನೇಕ ಮಕ್ಕಳು ಹೈಸ್ಕೂಲ್ ಶಿಕ್ಷಣವನ್ನು ಹೊಂದಿಲ್ಲದಿದ್ದರೆ, ಹೆಚ್ಚಿನ ಡ್ರಾಪ್-ಔಟ್ ದರಗಳು ಉಳಿದಿದ್ದರೆ ಆ ಗುರಿಯ ಬಗ್ಗೆ ಮಾತನಾಡುವುದು ಅಸಂಬದ್ಧ” ಎಂದು ಹೇಳಿದರು.

ಅವರ ವಾದವನ್ನು ದೇಶದ ಕೆಲವು ಅರ್ಥಶಾಸ್ತ್ರಜ್ಞರು “ಸಿಲ್ಲಿ” ಎಂದು ಕರೆದಿದ್ದಾರೆ; ‘ಭಾರತದ ನೆಲದ ವಾಸ್ತವಕ್ಕೆ ಸಂಬಂಧಿಸಿಲ್ಲ’ ಎಂದು ತಳ್ಳಿಹಾಕಿದ್ದಾರೆ.

“ರಘುರಾಮ್ ರಾಜನ್ ಅವರ ಸಿಲ್ಲಿ ವಾದಗಳು, ಶಾಲೆ ಬಿಡುವವರ ಪ್ರಮಾಣ ಕಡಿಮೆಯಾಗಿದೆ, ಕಾಲೇಜು ದಾಖಲಾತಿ ಹೆಚ್ಚಾಗಿದೆ. ಬೃಹತ್ ಉದ್ಯೋಗಗಳು ಸೃಷ್ಟಿಯಾಗಿವೆ” ಎಂದು ಮಣಿಪಾಲ್ ಗ್ಲೋಬಲ್ ಎಜುಕೇಶನ್‌ನ ಅಧ್ಯಕ್ಷ ಮೋಹನ್‌ದಾಸ್ ಪೈ ಹೇಳಿದರು.

ನೀತಿ (NITI) ಆಯೋಗದ ಸದಸ್ಯ ಮತ್ತು ಸ್ಥೂಲ ಅರ್ಥಶಾಸ್ತ್ರಜ್ಞ ಅರವಿಂದ್ ವಿರ್ಮಾನಿ ಕೂಡ ರಘುರಾಮ್ ರಾಜನ್ ಅವರ ಹೇಳಿಕೆಗಳು ಭಾರತಕ್ಕೆ ಭೇಟಿ ನೀಡದ ಜಾಗತಿಕ ತಜ್ಞರು ಮಾಡಿದ ಅಭಿಪ್ರಾಯದಂತೆ ತೋರುತ್ತಿದೆ ಎಂದು ಹೇಳಿದರು.

“1990 ರ ಬಿಒಪಿ ಬಿಕ್ಕಟ್ಟಿನ ಸಮಯದಲ್ಲಿ, ನಾವು ಡಬ್ಲ್ಯೂಬಿ, ಐಎಮ್‌ಎಫ್‌ ಮತ್ತು ಇತರ ಎಂಡಿಬಿ ಅರ್ಥಶಾಸ್ತ್ರಜ್ಞರನ್ನು ಭೇಟಿ ಮಾಡಲು “ಪ್ಯಾರಾಚೂಟ್ ಅರ್ಥಶಾಸ್ತ್ರಜ್ಞರು” ಎಂಬ ಒಂದು ಪದವನ್ನು ಹೊಂದಿದ್ದೇವೆ. ಆರ್‌ಬಿಐ ಮಾಜಿ ಗವರ್ನರ್ ಭಾರತೀಯ ಆರ್ಥಿಕತೆಯ ಮೇಲೆ ಅರ್ಧ ಶತಮಾನ ಕೆಲಸ ಮಾಡಿದವರಿಗೆ ಹಾಗೆ ಕೇಳಿರುವುದು ದುಃಖವಾಗಿದೆ” ಎಂದು ಆರ್ಥೀಕ ತಜ್ಞ ವೀರಮಣಿ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಚಿಕಾಗೋ ವಿಶ್ವವಿದ್ಯಾನಿಲಯದ ಬೂತ್ ಸ್ಕೂಲ್ ಆಫ್ ಬ್ಯುಸಿನೆಸ್‌ನಲ್ಲಿ ಹಣಕಾಸು ವಿಭಾಗದ ಪ್ರಾಧ್ಯಾಪಕರಾಗಿರುವ ರಾಜನ್, ಭಾರತವು ಸುಸ್ಥಿರ ಆಧಾರದ ಮೇಲೆ ಶೇಕಡಾ 8 ರಷ್ಟು ಬೆಳವಣಿಗೆಯನ್ನು ಸಾಧಿಸಲು ಹೆಚ್ಚಿನ ಪ್ರಯತ್ನವನ್ನು ಮಾಡಬೇಕಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಶಿಕ್ಷಣ ವ್ಯವಸ್ಥೆಯನ್ನು ಸರಿಪಡಿಸುವ ಕೆಲಸವನ್ನು ಮಾಡುವ ಬದಲು ಚಿಪ್ ತಯಾರಿಕೆಯಂತಹ ಉನ್ನತ ಯೋಜನೆಗಳತ್ತ ಗಮನ ಹರಿಸುತ್ತಿದೆ ಎಂದು ಅವರು ಟೀಕಿಸಿದರು.

ಇದನ್ನೂ ಓದಿ; ‘ಬ್ರಾಹ್ಮಣ-ಬನಿಯಾವಾದ್ ಮುರ್ದಾಬಾದ್..’ ಎಂದು ಘೋಷಣೆ ಕೂಗಿದ ಅಶೋಕ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....

ವೈಜಾಗ್ ಸ್ಟೀಲ್ ಅಪಘಾತಕ್ಕೆ 8 ಮಂದಿ ಬಲಿ: ಸಿಬ್ಬಂದಿ ಕೊರತೆಯ ಬಗ್ಗೆ ಕಾರ್ಮಿಕ ಸಂಘಗಳ ಆರೋಪ: ಸಾವಿನ ಅಂಚಿನಲ್ಲೂ ಕುಟುಂಬಕ್ಕಾಗಿ ಮಿಡಿದ ಕಾರ್ಮಿಕ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಪ್ರಸಿದ್ಧ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಸೋಮವಾರ (ಜೂನ್ 8, 2026) ಸಂಜೆ ಭೀಕರ ಕೈಗಾರಿಕಾ ದುರಂತವೊಂದು ಸಂಭವಿಸಿದೆ. ಸ್ಥಾವರದ ಸ್ಟೀಲ್ ಮೆಲ್ಟ್ ಶಾಪ್-1 (SMS-1)...

ಅಂದು ಪಿಣರಾಯಿ ಮನೆ ಮೇಲೆ ದಾಳಿ; ಈಗ ವೀಣಾ ವಿಜಯನ್‌ಗೆ ಸಮನ್ಸ್‌: ಹಿರಿಯ ಕಮ್ಯುನಿಸ್ಟ್‌ ನಾಯಕನ ಕುಟುಂಬದ ಮೇಲೆ ಇಡಿ ಕಣ್ಣು

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮನೆ ಮೇಲೆ ಕಳೆದ ತಿಂಗಳು ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಕೊನೆಗೆ ಅಲ್ಲಿ ಏನೂ ಸಿಗದೆ ಬರಿಗೈನಲ್ಲಿ ಅಧಿಕಾರಿಗಳು...

ಮೋದಿ ಸರ್ಕಾರಕ್ಕೆ 12 ವರ್ಷ : 12 ರಿಂದ 4ಕ್ಕೆ ಇಳಿದ ಉಜ್ವಲ ಯೋಜನೆ ಸಿಲಿಂಡರ್

ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರ 12 ವರ್ಷಗಳ ಆಡಳಿತಾವಧಿಯನ್ನು ಪೂರ್ಣಗೊಳಿಸಿದೆ ಅಥವಾ ಮೋದಿ ಅವರು ಮೂರನೇ ಅವಧಿಗೆ ಪ್ರಧಾನಿಯಾಗಿ 2026ರ ಜೂನ್ 9ಕ್ಕೆ ಎರಡು ವರ್ಷಗಳು ಪೂರ್ಣಗೊಂಡಿವೆ....

ಬಿರ್ಸಾ ಮುಂಡಾ 150ನೇ ಜಯಂತಿ ಹೆಸರಿನಲ್ಲಿ ಆದಿವಾಸಿ ಹಕ್ಕುಗಳ ಮೇಲೆ ಸಂಘ ಪರಿವಾರದ ಕಣ್ಣು?

ಮೇ 24 ರಂದು ನವದೆಹಲಿಯ ಕೆಂಪುಕೋಟೆಯಲ್ಲಿ (Red Fort) ಭಾರತದಾದ್ಯಂತದ ಲಕ್ಷಾಂತರ ಪರಿಶಿಷ್ಟ ಪಂಗಡದ (ST) ಸಮುದಾಯಗಳ ಜನರು ಒಟ್ಟಿಗೆ ಸೇರಿದ್ದರು. ‘ಜಂಜಾತಿ ಸುರಕ್ಷಾ ಮಂಚ್’ (ಬುಡಕಟ್ಟು ರಕ್ಷಣಾ ವೇದಿಕೆ) ಆಯೋಜಿಸಿದ್ದ ಈ...

ಆಪರೇಷನ್ ಕಮಲ ಭೀತಿ: ರಾಜ್ಯಸಭಾ ಚುನಾವಣೆಗೂ ಮುನ್ನ ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರು ಕರ್ನಾಟಕಕ್ಕೆ ಶಿಫ್ಟ್‌?

ಜೂನ್ 18 ರ ರಾಜ್ಯಸಭಾ ಚುನಾವಣೆಗೆ ಮುನ್ನ ಬಿಜೆಪಿಯಿಂದ ಅಕ್ರಮವಾಗಿ ಹಣ ವರ್ಗಾವಣೆ ಪ್ರಯತ್ನಗಳು ನಡೆಯುತ್ತಿವೆ ಎಂದು ಮಧ್ಯಪ್ರದೇಶ ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಅಡ್ಡ ಮತದಾನ ತಡೆಗಟ್ಟುವ ಜೊತೆಗೆ ತನ್ನ ಶಿಬಿರದ ಒಗ್ಗಟ್ಟು...

ವೀರಪ್ಪನ್ ಹೇಳಿದ ಕಥೆಗೆ 30 ವರ್ಷಗಳ ಬಳಿಕ ಕ್ಲೈಮ್ಯಾಕ್ಸ್ : ಸನ್ ಟಿವಿ ವಿರುದ್ಧ ಕಾನೂನು ಸಮರದಲ್ಲಿ ಗೆದ್ದ ನಟಿ ಸುಕನ್ಯಾ​

ತೊಂಬತ್ತರ ದಶಕದಲ್ಲಿ ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಪ್ರಮುಖ ನಟರೊಂದಿಗೆ ನಟಿಸಿ, ಅಪಾರ ಜನಪ್ರಿಯತೆ ಗಳಿಸಿದ್ದ ನಟಿ ಸುಕನ್ಯಾ ರಮೇಶ್, ಪ್ರಸ್ತುತ ಕೆಲವು ಅಪರೂಪದ ಪಾತ್ರಗಳನ್ನು ಹೊರತುಪಡಿಸಿದರೆ ಚಿತ್ರರಂಗದಲ್ಲಿ ಅಷ್ಟಾಗಿ ಸಕ್ರಿಯರಾಗಿಲ್ಲ. ಈ ನಡುವೆ 2024ರಲ್ಲಿ...

“ರಾಜೀನಾಮೆ ನೀಡಿ, ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ”: ಟಿಎಂಸಿ ಬಂಡುಕೋರರಿಗೆ ಮಹುವಾ ಮೊಯಿತ್ರಾ ನೇರ ಸವಾಲು

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗೆ ತೀವ್ರ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟಕ್ಕೆ ಬೆಂಬಲ ನೀಡಲು ಮುಂದಾಗಿರುವ ಸ್ವಪಕ್ಷದ ಬಂಡಾಯ ಸಂಸದರ ವಿರುದ್ಧ ಟಿಎಂಸಿ ಸಂಸದೆ...

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...