Homeಮುಖಪುಟಕೊರೊನಾ ನಿರ್ವಹಣೆ ಬಗ್ಗೆ ಭಾರಿ ಟೀಕೆ: ವರ್ಚಸ್ಸು ಹೆಚ್ಚಿಸಿಕೊಳ್ಳಲು ಮೋದಿ ಸರ್ಕಾರದ ಪ್ರಯತ್ನ

ಕೊರೊನಾ ನಿರ್ವಹಣೆ ಬಗ್ಗೆ ಭಾರಿ ಟೀಕೆ: ವರ್ಚಸ್ಸು ಹೆಚ್ಚಿಸಿಕೊಳ್ಳಲು ಮೋದಿ ಸರ್ಕಾರದ ಪ್ರಯತ್ನ

- Advertisement -
- Advertisement -

ದೇಶದಲ್ಲಿ ಕೊರೊನಾ ಎರಡನೇ ಅಲೆಯನ್ನು ಸರಿಯಾಗಿ ನಿರ್ವಹಿಸದೇ ಟೀಕೆಗಳಿಗೆ ಗುರಿಯಾಗಿರುವ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಈಗ ತನ್ನ ವರ್ಚಸ್ಸು ಹೆಚ್ಚಿಸಿಕೊಳ್ಳಲು ಭಾರಿ ಪ್ರಯತ್ನ ನಡೆಸುತ್ತಿದೆ. ತನ್ನ ಮಾತೃ ಸಂಘಟನೆಯಾದ ಆರ್‌ಎಸ್‌ಎಸ್‌ನಿಂದ ಕೆಲವು ಸಹಾಯಗಳನ್ನು ಪಡೆದು ಬಿಜೆಪಿ ತನಗಾಗಿರುವ ಹಿನ್ನಡೆಯನ್ನು ಮರೆಮಾಚಿಕೊಳ್ಳಲು ಕಾರ್ಯತಂತ್ರವನ್ನು ರೂಪಿಸುತ್ತಿದೆ.

ಸರ್ಕಾರದ ಎಲ್ಲಾ ಸಚಿವಾಲಯಗಳು, ಇಲಾಖೆಗಳು ಮತ್ತು ಏಜೆನ್ಸಿಗಳಿಗೆ ತಾವು ಮಾಡುತ್ತಿರುವ ಸಕಾರಾತ್ಮಕ ಕಾರ್ಯಗಳ ಕುರಿತು ಭಾರಿ ಪ್ರಮಾಣದಲ್ಲಿ ಪ್ರಚಾರ ಮಾಡಲು ಸಂದೇಶವನ್ನು ಕಳಿಸಿದೆ. ವರ್ಚಸ್ಸು ಹೆಚ್ಚಿಸಿಕೊಳ್ಳಲು ಬಿಜೆಪಿ ಮತ್ತು ಒಕ್ಕೂಟ ಸರ್ಕಾರ ಗುರಿಯಾಗಿಸಿರುವ 5 ಪ್ರಮುಖ ವಿಷಯಗಳು ಇಲ್ಲಿವೆ.

  1. ವಂಚನೆ ಮಾಡಿ ಪರಾರಿಯಾದವರನ್ನು ಭಾರತಕ್ಕೆ ಮರಳಿ ತರುವುದು:

ವಂಚಿಸಿ ದೇಶದಿಂದ ಪರಾರಿಯಾದ ಉದ್ಯಮಿ ಮೆಹುಲ್ ಚೋಕ್ಸಿಯನ್ನು ಡೊಮಿನಿಕಾದಿಂದ ಭಾರತಕ್ಕೆ ಹಸ್ತಾಂತರಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್‌ಬಿ) ವಂಚನೆ ಪ್ರಕರಣದ ಆರೋಪಿ ಡಯಾಮಂಟೈರ್ ಚೋಕ್ಸಿಯನ್ನು ಡೊಮಿನಿಕಾದಲ್ಲಿ ಬಂಧಿಸಲಾಗಿದ್ದು, ಅಲ್ಲಿಂದ ನೇರವಾಗಿ ಇಂಟರ್‌ಪೋಲ್‌ನ ರೆಡ್ ಕಾರ್ನರ್ ನೋಟಿಸ್‌ನ ಆಧಾರದ ಮೇಲೆ ಅವರನ್ನು ಭಾರತಕ್ಕೆ ಕರೆತರಲು ಪ್ರಯತ್ನಿಸಲಾಗುತ್ತಿದೆ.

ಚೋಕ್ಸಿಯ ಸೋದರಳಿಯ ನೀರವ್ ಮೋದಿ ಮತ್ತು ವಿಜಯ್ ಮಲ್ಯ ಅವರ ಹಸ್ತಾಂತರ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಭಾರತವು ರಾಜತಾಂತ್ರಿಕ ಮಾರ್ಗಗಳ ಮೂಲಕ ಯುಕೆಗೆ ವಿನಂತಿಸಿದೆ ಎಂದು ಹೇಳಲಾಗಿದೆ. ನೀರವ್ ಮೋದಿಯವರ ಮೇಲ್ಮನವಿಯನ್ನು ನವೆಂಬರ್‌ನಲ್ಲಿ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಸಲಾಗುವುದು ಮತ್ತು ಮಲ್ಯ ಅವರ ಆಶ್ರಯ ಪ್ರಕರಣದ ವಿಚಾರಣೆಯು ಉನ್ನತ ನ್ಯಾಯಾಲಯದಲ್ಲಿದೆ.

ದೇಶಕ್ಕೆ ವಂಚಿಸಿ ಪರಾರಿಯಾದವರಲ್ಲಿ ಯಾರನ್ನಾದರೂ ಶೀಘ್ರದಲ್ಲೇ ಮರಳಿ ಕರೆತರಲು ಸಾಧ್ಯವಾದರೆ. ಇದರಿಂದ ತಮ್ಮ ಪಕ್ಷದ  ವರ್ಚಸ್ಸು ಮತ್ತು ಚಿತ್ರಣವನ್ನು ದೇಶಾದ್ಯಂತ ಬಲಪಡಿಸಿಕೊಳ್ಳಬಹುದು ಎಂದು ಬಿಜೆಪಿ ಭಾವಿಸಿದೆ.

ಇದನ್ನೂ ಓದಿ: ದೇವರ ವಿಗ್ರಹಕ್ಕೆ ಹಾನಿ: ರೈತರಿಗೆ 21 ಸಾವಿರ ದಂಡ, ಸಾಮಾಜಿಕ ಬಹಿಷ್ಕಾರದ ಬೆದರಿಕೆ

2) ಸಚಿವಾಲಯಗಳ ವಿಮರ್ಶೆ ಮತ್ತು ಕ್ಯಾಬಿನೆಟ್ ಪುನರ್‌ರಚನೆ:

ಪ್ರಧಾನಿ ನರೇಂದ್ರ ಮೋದಿ ಅವರು ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಸಮ್ಮುಖದಲ್ಲಿ ತಮ್ಮ ಕಾರ್ಯಗಳನ್ನು ಪರಿಶೀಲಿಸಲು ವಿವಿಧ ಸಚಿವರನ್ನು ಭೇಟಿ ಮಾಡುತ್ತಿದ್ದಾರೆ. ಕ್ಯಾಬಿನೆಟ್‌ನ ಪುನರ್‌ರಚನೆ ಮತ್ತು ವಿಸ್ತರಣೆಯ ಬಗ್ಗೆ ಊಹಾಪೋಹಗಳು ವರದಿಯಾಗುತ್ತಿವೆ. ಕಾರ್ಯನಿರ್ವಹಿಸದ ಮಂತ್ರಿಗಳಿಗೆ ಗೇಟ್‌ಪಾಸ್‌ ಕೊಡುವುದು. ಶಿರೋಮಣಿ ಅಕಾಲಿ ದಳ (ಎಸ್‌ಎಡಿ) ಮತ್ತು ಶಿವಸೇನೆ ಎನ್‌ಡಿಎಯಿಂದ ನಿರ್ಗಮನ, ಎಲ್‌ಜೆಪಿ ಮುಖ್ಯಸ್ಥ ರಾಮ್ ವಿಲಾಸ್ ಪಾಸ್ವಾನ್ ಅವರ ನಿಧನದ ಕಾರಣದಿಂದಾಗಿ ಸಂಪುಟದಲ್ಲಿ ಖಾಲಿ ಹುದ್ದೆಗಳಿವೆ. ಅನೇಕ ಮಂತ್ರಿಗಳು ಒಂದಕ್ಕಿಂತ ಹೆಚ್ಚು ಖಾತೆಗಳನ್ನು ನಿರ್ವಹಿಸುತ್ತಿದ್ದಾರೆ. ಜ್ಯೋತಿರಾದಿತ್ಯ ಸಿಂಧಿಯಾ, ಸುಶೀಲ್ ಮೋದಿ ಮತ್ತು ಸರ್ಬಾನಂದ ಸೋನೊವಾಲ್ ಅವರಂತಹ ನಾಯಕರು ಸಂಪುಟದೊಳಗೆ ಹೊಂದಾಣಿಕೆ ಮಾಡಿಕೊಳ್ಳಬೇಕಾಗಿದೆ. ಮುಂದಿನ ಸುತ್ತಿನ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಉತ್ತರ ಪ್ರದೇಶ ಮತ್ತು ಪಂಜಾಬ್‌ನ ಕೆಲವು ನಾಯಕರು ಕ್ಯಾಬಿನೆಟ್‌ಗೆ ಕಾಲಿಡಬಹುದು ಎಂದು ಮೂಲಗಳು ಹೇಳುತ್ತಿವೆ.

3) ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ನಾಯಕತ್ವದ ವಿಮರ್ಶೆ:

ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗಳು ಮತ್ತು ರಾಜ್ಯ ನಾಯಕತ್ವದಿಂದ ಕೊರೊನಾ ವೈರಸ್  ನಿರ್ವಹಣೆ ಬಗ್ಗೆ ವಿಮರ್ಶಾತ್ಮಕ ವರದಿಗಳು ಬಂದಿರುವುದರಿಂದ ಯುಪಿ ಕ್ಯಾಬಿನೆಟ್‌ನ ಪುನರ್ರಚನೆ ನಡೆಯುವ ಸಾಧ್ಯತೆಯಿದೆ. ಚುನಾವಣೆಗೆ ಮುಂಚಿತವಾಗಿ ವಿವಿಧ ಜಾತಿ ಮತ್ತು ಸಮುದಾಯಗಳಿಗೆ ಉತ್ತಮ ಪ್ರಾತಿನಿಧ್ಯವನ್ನು ನೀಡಲಾಗುತ್ತದೆ ಎಂದು ನಿರೀಕ್ಷಿಸಲಾಗಿದೆ.

ಬಿಜೆಪಿ ಅಧಿಕಾರದಲ್ಲಿರುವ ಇತರ ರಾಜ್ಯಗಳ ಬಗ್ಗೆ ಕೇಂದ್ರ ನಾಯಕತ್ವವು ಕಾಳಜಿಯನ್ನು ಹೊಂದಿದೆ ಎಂದು ಕಾಣಿಸುತ್ತಿದೆ. ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮಧ್ಯಪ್ರದೇಶ ಮತ್ತು ಹಿಮಾಚಲ ಪ್ರದೇಶದಲ್ಲಿ ನಾಯಕತ್ವದ ಬದಲಾವಣೆಯ ಬಗ್ಗೆಯೂ ಊಹಾಪೋಹಗಳಿದ್ದವು. ಕೇಂದ್ರ ನಾಯಕತ್ವವು ಸದ್ಯಕ್ಕೆ ಮಧ್ಯಪ್ರದೇಶ ಮತ್ತು ಹಿಮಾಚಲದಲ್ಲಿ ಶಾಂತಿಯನ್ನು ಖಾತ್ರಿಪಡಿಸಿಕೊಂಡಿದೆ. ಆದರೆ, ಕರ್ನಾಟಕದಲ್ಲಿ ಲಿಂಗಾಯತ ಪ್ರಬಲ ವ್ಯಕ್ತಿಯ ವಿರುದ್ಧ ಭಿನ್ನಾಭಿಪ್ರಾಯದ ಆಂತರಿಕ ಅಸಮಾಧಾನ ಪ್ರಬಲವಾಗುತ್ತಿದೆ.

ಕೇಂದ್ರ ನಾಯಕತ್ವವು ಈ ಹಿಂದೆ ತ್ರಿಪುರ ಮುಖ್ಯಮಂತ್ರಿ ಬಿಪ್ಲಾಬ್ ಕುಮಾರ್ ದೇಬ್ ವಿರುದ್ಧದ ಪ್ರತಿಭಟನೆಯನ್ನು ತಗ್ಗಿಸಿತು. ಆದರೆ ಉತ್ತರಾಖಂಡದಲ್ಲಿ ಶಾಸಕರು ಸಿಎಂ ವಿರುದ್ಧ ದಂಗೆ ಎದ್ದ ನಂತರ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಅವರನ್ನು ಬದಲಿಸಬೇಕಾಯಿತು.

ಪಕ್ಷದೊಳಗಿನ ಗಲಾಟೆಗಳ ಬಗ್ಗೆ ಆರ್‌ಎಸ್‌ಎಸ್ ಚಿಂತಿಸುತ್ತಿದೆ ಮತ್ತು “ತನ್ನ ರಾಜ್ಯ ನಾಯಕರನ್ನು ನಿಯಂತ್ರಿಸಲು” ಬಿಜೆಪಿಯನ್ನು ಕೇಳಿದೆ ಎಂದು ಮೂಲಗಳು ಹೇಳುತ್ತವೆ.

ಇದನ್ನೂ ಓದಿ: ಕೊರೊನಾದಿಂದ ಅನಾಥರಾದ ಮಕ್ಕಳ ಜವಾಬ್ದಾರಿ ಪಡೆದ ರಾಜ್ಯಗಳ ಸಾಲಿಗೆ ಉತ್ತರ ಪ್ರದೇಶ

4) ವಲಸೆ ಬಂದ ನಾಯಕರು:

ತೃಣಮೂಲ ಕಾಂಗ್ರೆಸ್‌ನಿಂದ ಬಿಜೆಪಿಗೆ ಬಂದ ಕೆಲವು ನಾಯಕರ ಬಗ್ಗೆ ಬಿಜೆಪಿ ತನ್ನ ಭರವಸೆಯನ್ನು ಪೂರೈಸದೇ ಇರಬಹುದು. ಆದರೆ, ಪಕ್ಷವು ಜಿತಿನ್ ಪ್ರಸಾದ ಅವರಂತಹ ಕಾಂಗ್ರೆಸ್ಸಿಗರನ್ನು ಆಕರ್ಷಿಸುತ್ತಲೇ ಇದೆ. ಈ ಹಿಂದೆ ಸಿಂಧಿಯಾ ಅವರು ತಮ್ಮ ಬೆಂಬಲಿಗ ಶಾಸಕರೊಂದಿಗೆ ಕಳೆದ ವರ್ಷ ಬಿಜೆಪಿಗೆ ಸೇರಲು ಕಾಂಗ್ರೆಸ್ ತೊರೆದಿದ್ದರು. ಇದರಿಂದ ಕಮಲ್ ನಾಥ್ ಸರ್ಕಾರವು ಮಧ್ಯಪ್ರದೇಶದಲ್ಲಿ ಬಹುಮತವನ್ನು ಕಳೆದುಕೊಳ್ಳಲು ಕಾರಣವಾಯಿತು. ಅಲ್ಲದೆ, ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ಕರೆತಂದಿತು.

ಸಚಿನ್ ಪೈಲಟ್ ಮತ್ತು ಆರ್.ಪಿ.ಎನ್ ಸಿಂಗ್‌ ಸೇರಿದಂತೆ ಕಾಂಗ್ರೆಸ್‌ನ ಇತರ ಯುವ ನಾಯಕರನ್ನು ಬಿಜೆಪಿ ಸಕ್ರಿಯವಾಗಿ ಸಂಧಿಸುತ್ತಿದೆ ಎಂದು ಮೂಲಗಳು ತಿಳಿಸಿವೆ. ಅದು ಯಶಸ್ವಿಯಾದರೆ,  ಕಾಂಗ್ರೆಸ್‌ಗೆ ದೊಡ್ಡ ಹೊಡೆತವಾಗಲಿದೆ. ಇತ್ತೀಚೆಗೆ ಟಿಆರ್‌ಎಸ್ ಮುಖಂಡ ಈಟೆಲಾ ರಾಜೇಂದರ್ ಕೂಡ ಬಿಜೆಪಿಗೆ ಸೇರಿದ್ದಾರೆ.

5) ಕೆಲವು ನೀತಿಗಳ ತಿದ್ದುಪಡಿ

ಹಿರಿಯ ಬಿಜೆಪಿ ನಾಯಕತ್ವ ಮತ್ತು ಆರ್‌ಎಸ್‌ಎಸ್ ನಡುವಿನ ಸರಣಿ ಸಭೆಗಳಲ್ಲಿ ಸಕಾರಾತ್ಮಕ ವಾತಾವರಣವನ್ನು ಸೃಷ್ಟಿಸಲು ನಿರ್ಧರಿಸಲಾಗಿದೆ. ಮೋದಿ ಸರ್ಕಾರದ ಲಸಿಕೆ ಖರೀದಿ ನೀತಿಯನ್ನು ಹಿಮ್ಮೆಟ್ಟಿಸುವುದು ಸಹ ತಂತ್ರದ ಒಂದು ಭಾಗವೆಂದು ಹೇಳಲಾಗಿದೆ. ಲಸಿಕೆ ವಿತರಣೆಯ ವಿಚಾರದಲ್ಲಿ ಒಕ್ಕೂಟ ಸರ್ಕಾರದ ಧೋರಣೆಯ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನಿಸಿದ ನಂತರ, ಪ್ರಧಾನಿ ಅವರು ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡುವಾಗ ಲಸಿಕೆ ವಿತರಣಾ ನೀತಿಯ ಬದಲಾವಣೆಯನ್ನು ಘೋಷಿಸಿದ್ದರು.

ಇನ್ನೂ ವಿವಾದಿತ ಕೃಷಿ ಕಾಯ್ದೆಗಳ ವಿರುದ್ದ ನಡೆಯುತ್ತಿರುವ ಪ್ರತಿಭಟನೆಗಳಿಂದ ತಮ್ಮನ್ನು ರಕ್ಷಿಸಿಕೊಳ್ಳಲು, ಕೇಂದ್ರವು ಭತ್ತ ಮತ್ತು ಇತರ ಖಾರಿಫ್ ಬೆಳೆಗಳ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಯನ್ನು ಹೆಚ್ಚಿಸಿದೆ. ಈ ನಿರ್ಧಾರವು ಪ್ರತಿಭಟನಾ ನಿರತ ರೈತರನ್ನು ಆಕರ್ಷಿಸಿಲ್ಲವಾದರೂ, ಇದು ವಿಶ್ವಾಸಾರ್ಹತೆಯಾಗಿದೆ ಎಂದು ಸರ್ಕಾರ ಹೇಳುತ್ತದೆ.

ಬಿಜೆಪಿ ಅಧ್ಯಕ್ಷ ನಡ್ಡಾ ಅವರು ದೇಶಾದ್ಯಂತದ ‘ಸೇವಾ ಹಿ ಸಂಘಟನ್’ ಪ್ರೋಗ್ರಾಮ್ ಅಡಿಯಲ್ಲಿ ಪಕ್ಷದ ಕಾರ್ಯಕರ್ತರು ಕೈಗೊಂಡ ಕೋವಿಡ್ ಪರಿಹಾರ ಕಾರ್ಯಗಳನ್ನು ನಿರಂತರವಾಗಿ ಪರಿಶೀಲಿಸುತ್ತಿದ್ದಾರೆ. ಆರ್‌ಎಸ್‌ಎಸ್‌ನ ಕೆಲವು ನಾಯಕರು “ಬಿಜೆಪಿ ಕಾರ್ಯಕರ್ತರ ಗೈರುಹಾಜರಿ” ಬಗ್ಗೆ ಟೀಕೆಗೆ ಗುರಿಯಾಗಿದ್ದರಿಂದ ಇದನ್ನು ಮಾಡಲಾಗಿದೆ.

ಮೂಲ: ಔಟ್‌ಲುಕ್‌

ಕನ್ನಡಕ್ಕೆ: ಸೋಮಶೇಖರ್ ಚಲ್ಯ


ಇದನ್ನೂ ಓದಿ: ಕೊರೊನಾ ನಿರ್ವಹಣೆ ಲೋಪ ಮುಚ್ಚಿಕೊಳ್ಳಲು ಜಾಹೀರಾತುಗಳಿಗೆ ಹಣ ಸುರಿಯುತ್ತಿರುವ ಕರ್ನಾಟಕ ಮತ್ತು ಉತ್ತರ ಪ್ರದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...