Homeಮುಖಪುಟಕೊರೊನಾ ನಿರ್ವಹಣೆ ಬಗ್ಗೆ ಭಾರಿ ಟೀಕೆ: ವರ್ಚಸ್ಸು ಹೆಚ್ಚಿಸಿಕೊಳ್ಳಲು ಮೋದಿ ಸರ್ಕಾರದ ಪ್ರಯತ್ನ

ಕೊರೊನಾ ನಿರ್ವಹಣೆ ಬಗ್ಗೆ ಭಾರಿ ಟೀಕೆ: ವರ್ಚಸ್ಸು ಹೆಚ್ಚಿಸಿಕೊಳ್ಳಲು ಮೋದಿ ಸರ್ಕಾರದ ಪ್ರಯತ್ನ

- Advertisement -
- Advertisement -

ದೇಶದಲ್ಲಿ ಕೊರೊನಾ ಎರಡನೇ ಅಲೆಯನ್ನು ಸರಿಯಾಗಿ ನಿರ್ವಹಿಸದೇ ಟೀಕೆಗಳಿಗೆ ಗುರಿಯಾಗಿರುವ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಈಗ ತನ್ನ ವರ್ಚಸ್ಸು ಹೆಚ್ಚಿಸಿಕೊಳ್ಳಲು ಭಾರಿ ಪ್ರಯತ್ನ ನಡೆಸುತ್ತಿದೆ. ತನ್ನ ಮಾತೃ ಸಂಘಟನೆಯಾದ ಆರ್‌ಎಸ್‌ಎಸ್‌ನಿಂದ ಕೆಲವು ಸಹಾಯಗಳನ್ನು ಪಡೆದು ಬಿಜೆಪಿ ತನಗಾಗಿರುವ ಹಿನ್ನಡೆಯನ್ನು ಮರೆಮಾಚಿಕೊಳ್ಳಲು ಕಾರ್ಯತಂತ್ರವನ್ನು ರೂಪಿಸುತ್ತಿದೆ.

ಸರ್ಕಾರದ ಎಲ್ಲಾ ಸಚಿವಾಲಯಗಳು, ಇಲಾಖೆಗಳು ಮತ್ತು ಏಜೆನ್ಸಿಗಳಿಗೆ ತಾವು ಮಾಡುತ್ತಿರುವ ಸಕಾರಾತ್ಮಕ ಕಾರ್ಯಗಳ ಕುರಿತು ಭಾರಿ ಪ್ರಮಾಣದಲ್ಲಿ ಪ್ರಚಾರ ಮಾಡಲು ಸಂದೇಶವನ್ನು ಕಳಿಸಿದೆ. ವರ್ಚಸ್ಸು ಹೆಚ್ಚಿಸಿಕೊಳ್ಳಲು ಬಿಜೆಪಿ ಮತ್ತು ಒಕ್ಕೂಟ ಸರ್ಕಾರ ಗುರಿಯಾಗಿಸಿರುವ 5 ಪ್ರಮುಖ ವಿಷಯಗಳು ಇಲ್ಲಿವೆ.

  1. ವಂಚನೆ ಮಾಡಿ ಪರಾರಿಯಾದವರನ್ನು ಭಾರತಕ್ಕೆ ಮರಳಿ ತರುವುದು:

ವಂಚಿಸಿ ದೇಶದಿಂದ ಪರಾರಿಯಾದ ಉದ್ಯಮಿ ಮೆಹುಲ್ ಚೋಕ್ಸಿಯನ್ನು ಡೊಮಿನಿಕಾದಿಂದ ಭಾರತಕ್ಕೆ ಹಸ್ತಾಂತರಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್‌ಬಿ) ವಂಚನೆ ಪ್ರಕರಣದ ಆರೋಪಿ ಡಯಾಮಂಟೈರ್ ಚೋಕ್ಸಿಯನ್ನು ಡೊಮಿನಿಕಾದಲ್ಲಿ ಬಂಧಿಸಲಾಗಿದ್ದು, ಅಲ್ಲಿಂದ ನೇರವಾಗಿ ಇಂಟರ್‌ಪೋಲ್‌ನ ರೆಡ್ ಕಾರ್ನರ್ ನೋಟಿಸ್‌ನ ಆಧಾರದ ಮೇಲೆ ಅವರನ್ನು ಭಾರತಕ್ಕೆ ಕರೆತರಲು ಪ್ರಯತ್ನಿಸಲಾಗುತ್ತಿದೆ.

ಚೋಕ್ಸಿಯ ಸೋದರಳಿಯ ನೀರವ್ ಮೋದಿ ಮತ್ತು ವಿಜಯ್ ಮಲ್ಯ ಅವರ ಹಸ್ತಾಂತರ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಭಾರತವು ರಾಜತಾಂತ್ರಿಕ ಮಾರ್ಗಗಳ ಮೂಲಕ ಯುಕೆಗೆ ವಿನಂತಿಸಿದೆ ಎಂದು ಹೇಳಲಾಗಿದೆ. ನೀರವ್ ಮೋದಿಯವರ ಮೇಲ್ಮನವಿಯನ್ನು ನವೆಂಬರ್‌ನಲ್ಲಿ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಸಲಾಗುವುದು ಮತ್ತು ಮಲ್ಯ ಅವರ ಆಶ್ರಯ ಪ್ರಕರಣದ ವಿಚಾರಣೆಯು ಉನ್ನತ ನ್ಯಾಯಾಲಯದಲ್ಲಿದೆ.

ದೇಶಕ್ಕೆ ವಂಚಿಸಿ ಪರಾರಿಯಾದವರಲ್ಲಿ ಯಾರನ್ನಾದರೂ ಶೀಘ್ರದಲ್ಲೇ ಮರಳಿ ಕರೆತರಲು ಸಾಧ್ಯವಾದರೆ. ಇದರಿಂದ ತಮ್ಮ ಪಕ್ಷದ  ವರ್ಚಸ್ಸು ಮತ್ತು ಚಿತ್ರಣವನ್ನು ದೇಶಾದ್ಯಂತ ಬಲಪಡಿಸಿಕೊಳ್ಳಬಹುದು ಎಂದು ಬಿಜೆಪಿ ಭಾವಿಸಿದೆ.

ಇದನ್ನೂ ಓದಿ: ದೇವರ ವಿಗ್ರಹಕ್ಕೆ ಹಾನಿ: ರೈತರಿಗೆ 21 ಸಾವಿರ ದಂಡ, ಸಾಮಾಜಿಕ ಬಹಿಷ್ಕಾರದ ಬೆದರಿಕೆ

2) ಸಚಿವಾಲಯಗಳ ವಿಮರ್ಶೆ ಮತ್ತು ಕ್ಯಾಬಿನೆಟ್ ಪುನರ್‌ರಚನೆ:

ಪ್ರಧಾನಿ ನರೇಂದ್ರ ಮೋದಿ ಅವರು ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಸಮ್ಮುಖದಲ್ಲಿ ತಮ್ಮ ಕಾರ್ಯಗಳನ್ನು ಪರಿಶೀಲಿಸಲು ವಿವಿಧ ಸಚಿವರನ್ನು ಭೇಟಿ ಮಾಡುತ್ತಿದ್ದಾರೆ. ಕ್ಯಾಬಿನೆಟ್‌ನ ಪುನರ್‌ರಚನೆ ಮತ್ತು ವಿಸ್ತರಣೆಯ ಬಗ್ಗೆ ಊಹಾಪೋಹಗಳು ವರದಿಯಾಗುತ್ತಿವೆ. ಕಾರ್ಯನಿರ್ವಹಿಸದ ಮಂತ್ರಿಗಳಿಗೆ ಗೇಟ್‌ಪಾಸ್‌ ಕೊಡುವುದು. ಶಿರೋಮಣಿ ಅಕಾಲಿ ದಳ (ಎಸ್‌ಎಡಿ) ಮತ್ತು ಶಿವಸೇನೆ ಎನ್‌ಡಿಎಯಿಂದ ನಿರ್ಗಮನ, ಎಲ್‌ಜೆಪಿ ಮುಖ್ಯಸ್ಥ ರಾಮ್ ವಿಲಾಸ್ ಪಾಸ್ವಾನ್ ಅವರ ನಿಧನದ ಕಾರಣದಿಂದಾಗಿ ಸಂಪುಟದಲ್ಲಿ ಖಾಲಿ ಹುದ್ದೆಗಳಿವೆ. ಅನೇಕ ಮಂತ್ರಿಗಳು ಒಂದಕ್ಕಿಂತ ಹೆಚ್ಚು ಖಾತೆಗಳನ್ನು ನಿರ್ವಹಿಸುತ್ತಿದ್ದಾರೆ. ಜ್ಯೋತಿರಾದಿತ್ಯ ಸಿಂಧಿಯಾ, ಸುಶೀಲ್ ಮೋದಿ ಮತ್ತು ಸರ್ಬಾನಂದ ಸೋನೊವಾಲ್ ಅವರಂತಹ ನಾಯಕರು ಸಂಪುಟದೊಳಗೆ ಹೊಂದಾಣಿಕೆ ಮಾಡಿಕೊಳ್ಳಬೇಕಾಗಿದೆ. ಮುಂದಿನ ಸುತ್ತಿನ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಉತ್ತರ ಪ್ರದೇಶ ಮತ್ತು ಪಂಜಾಬ್‌ನ ಕೆಲವು ನಾಯಕರು ಕ್ಯಾಬಿನೆಟ್‌ಗೆ ಕಾಲಿಡಬಹುದು ಎಂದು ಮೂಲಗಳು ಹೇಳುತ್ತಿವೆ.

3) ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ನಾಯಕತ್ವದ ವಿಮರ್ಶೆ:

ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗಳು ಮತ್ತು ರಾಜ್ಯ ನಾಯಕತ್ವದಿಂದ ಕೊರೊನಾ ವೈರಸ್  ನಿರ್ವಹಣೆ ಬಗ್ಗೆ ವಿಮರ್ಶಾತ್ಮಕ ವರದಿಗಳು ಬಂದಿರುವುದರಿಂದ ಯುಪಿ ಕ್ಯಾಬಿನೆಟ್‌ನ ಪುನರ್ರಚನೆ ನಡೆಯುವ ಸಾಧ್ಯತೆಯಿದೆ. ಚುನಾವಣೆಗೆ ಮುಂಚಿತವಾಗಿ ವಿವಿಧ ಜಾತಿ ಮತ್ತು ಸಮುದಾಯಗಳಿಗೆ ಉತ್ತಮ ಪ್ರಾತಿನಿಧ್ಯವನ್ನು ನೀಡಲಾಗುತ್ತದೆ ಎಂದು ನಿರೀಕ್ಷಿಸಲಾಗಿದೆ.

ಬಿಜೆಪಿ ಅಧಿಕಾರದಲ್ಲಿರುವ ಇತರ ರಾಜ್ಯಗಳ ಬಗ್ಗೆ ಕೇಂದ್ರ ನಾಯಕತ್ವವು ಕಾಳಜಿಯನ್ನು ಹೊಂದಿದೆ ಎಂದು ಕಾಣಿಸುತ್ತಿದೆ. ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮಧ್ಯಪ್ರದೇಶ ಮತ್ತು ಹಿಮಾಚಲ ಪ್ರದೇಶದಲ್ಲಿ ನಾಯಕತ್ವದ ಬದಲಾವಣೆಯ ಬಗ್ಗೆಯೂ ಊಹಾಪೋಹಗಳಿದ್ದವು. ಕೇಂದ್ರ ನಾಯಕತ್ವವು ಸದ್ಯಕ್ಕೆ ಮಧ್ಯಪ್ರದೇಶ ಮತ್ತು ಹಿಮಾಚಲದಲ್ಲಿ ಶಾಂತಿಯನ್ನು ಖಾತ್ರಿಪಡಿಸಿಕೊಂಡಿದೆ. ಆದರೆ, ಕರ್ನಾಟಕದಲ್ಲಿ ಲಿಂಗಾಯತ ಪ್ರಬಲ ವ್ಯಕ್ತಿಯ ವಿರುದ್ಧ ಭಿನ್ನಾಭಿಪ್ರಾಯದ ಆಂತರಿಕ ಅಸಮಾಧಾನ ಪ್ರಬಲವಾಗುತ್ತಿದೆ.

ಕೇಂದ್ರ ನಾಯಕತ್ವವು ಈ ಹಿಂದೆ ತ್ರಿಪುರ ಮುಖ್ಯಮಂತ್ರಿ ಬಿಪ್ಲಾಬ್ ಕುಮಾರ್ ದೇಬ್ ವಿರುದ್ಧದ ಪ್ರತಿಭಟನೆಯನ್ನು ತಗ್ಗಿಸಿತು. ಆದರೆ ಉತ್ತರಾಖಂಡದಲ್ಲಿ ಶಾಸಕರು ಸಿಎಂ ವಿರುದ್ಧ ದಂಗೆ ಎದ್ದ ನಂತರ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಅವರನ್ನು ಬದಲಿಸಬೇಕಾಯಿತು.

ಪಕ್ಷದೊಳಗಿನ ಗಲಾಟೆಗಳ ಬಗ್ಗೆ ಆರ್‌ಎಸ್‌ಎಸ್ ಚಿಂತಿಸುತ್ತಿದೆ ಮತ್ತು “ತನ್ನ ರಾಜ್ಯ ನಾಯಕರನ್ನು ನಿಯಂತ್ರಿಸಲು” ಬಿಜೆಪಿಯನ್ನು ಕೇಳಿದೆ ಎಂದು ಮೂಲಗಳು ಹೇಳುತ್ತವೆ.

ಇದನ್ನೂ ಓದಿ: ಕೊರೊನಾದಿಂದ ಅನಾಥರಾದ ಮಕ್ಕಳ ಜವಾಬ್ದಾರಿ ಪಡೆದ ರಾಜ್ಯಗಳ ಸಾಲಿಗೆ ಉತ್ತರ ಪ್ರದೇಶ

4) ವಲಸೆ ಬಂದ ನಾಯಕರು:

ತೃಣಮೂಲ ಕಾಂಗ್ರೆಸ್‌ನಿಂದ ಬಿಜೆಪಿಗೆ ಬಂದ ಕೆಲವು ನಾಯಕರ ಬಗ್ಗೆ ಬಿಜೆಪಿ ತನ್ನ ಭರವಸೆಯನ್ನು ಪೂರೈಸದೇ ಇರಬಹುದು. ಆದರೆ, ಪಕ್ಷವು ಜಿತಿನ್ ಪ್ರಸಾದ ಅವರಂತಹ ಕಾಂಗ್ರೆಸ್ಸಿಗರನ್ನು ಆಕರ್ಷಿಸುತ್ತಲೇ ಇದೆ. ಈ ಹಿಂದೆ ಸಿಂಧಿಯಾ ಅವರು ತಮ್ಮ ಬೆಂಬಲಿಗ ಶಾಸಕರೊಂದಿಗೆ ಕಳೆದ ವರ್ಷ ಬಿಜೆಪಿಗೆ ಸೇರಲು ಕಾಂಗ್ರೆಸ್ ತೊರೆದಿದ್ದರು. ಇದರಿಂದ ಕಮಲ್ ನಾಥ್ ಸರ್ಕಾರವು ಮಧ್ಯಪ್ರದೇಶದಲ್ಲಿ ಬಹುಮತವನ್ನು ಕಳೆದುಕೊಳ್ಳಲು ಕಾರಣವಾಯಿತು. ಅಲ್ಲದೆ, ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ಕರೆತಂದಿತು.

ಸಚಿನ್ ಪೈಲಟ್ ಮತ್ತು ಆರ್.ಪಿ.ಎನ್ ಸಿಂಗ್‌ ಸೇರಿದಂತೆ ಕಾಂಗ್ರೆಸ್‌ನ ಇತರ ಯುವ ನಾಯಕರನ್ನು ಬಿಜೆಪಿ ಸಕ್ರಿಯವಾಗಿ ಸಂಧಿಸುತ್ತಿದೆ ಎಂದು ಮೂಲಗಳು ತಿಳಿಸಿವೆ. ಅದು ಯಶಸ್ವಿಯಾದರೆ,  ಕಾಂಗ್ರೆಸ್‌ಗೆ ದೊಡ್ಡ ಹೊಡೆತವಾಗಲಿದೆ. ಇತ್ತೀಚೆಗೆ ಟಿಆರ್‌ಎಸ್ ಮುಖಂಡ ಈಟೆಲಾ ರಾಜೇಂದರ್ ಕೂಡ ಬಿಜೆಪಿಗೆ ಸೇರಿದ್ದಾರೆ.

5) ಕೆಲವು ನೀತಿಗಳ ತಿದ್ದುಪಡಿ

ಹಿರಿಯ ಬಿಜೆಪಿ ನಾಯಕತ್ವ ಮತ್ತು ಆರ್‌ಎಸ್‌ಎಸ್ ನಡುವಿನ ಸರಣಿ ಸಭೆಗಳಲ್ಲಿ ಸಕಾರಾತ್ಮಕ ವಾತಾವರಣವನ್ನು ಸೃಷ್ಟಿಸಲು ನಿರ್ಧರಿಸಲಾಗಿದೆ. ಮೋದಿ ಸರ್ಕಾರದ ಲಸಿಕೆ ಖರೀದಿ ನೀತಿಯನ್ನು ಹಿಮ್ಮೆಟ್ಟಿಸುವುದು ಸಹ ತಂತ್ರದ ಒಂದು ಭಾಗವೆಂದು ಹೇಳಲಾಗಿದೆ. ಲಸಿಕೆ ವಿತರಣೆಯ ವಿಚಾರದಲ್ಲಿ ಒಕ್ಕೂಟ ಸರ್ಕಾರದ ಧೋರಣೆಯ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನಿಸಿದ ನಂತರ, ಪ್ರಧಾನಿ ಅವರು ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡುವಾಗ ಲಸಿಕೆ ವಿತರಣಾ ನೀತಿಯ ಬದಲಾವಣೆಯನ್ನು ಘೋಷಿಸಿದ್ದರು.

ಇನ್ನೂ ವಿವಾದಿತ ಕೃಷಿ ಕಾಯ್ದೆಗಳ ವಿರುದ್ದ ನಡೆಯುತ್ತಿರುವ ಪ್ರತಿಭಟನೆಗಳಿಂದ ತಮ್ಮನ್ನು ರಕ್ಷಿಸಿಕೊಳ್ಳಲು, ಕೇಂದ್ರವು ಭತ್ತ ಮತ್ತು ಇತರ ಖಾರಿಫ್ ಬೆಳೆಗಳ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಯನ್ನು ಹೆಚ್ಚಿಸಿದೆ. ಈ ನಿರ್ಧಾರವು ಪ್ರತಿಭಟನಾ ನಿರತ ರೈತರನ್ನು ಆಕರ್ಷಿಸಿಲ್ಲವಾದರೂ, ಇದು ವಿಶ್ವಾಸಾರ್ಹತೆಯಾಗಿದೆ ಎಂದು ಸರ್ಕಾರ ಹೇಳುತ್ತದೆ.

ಬಿಜೆಪಿ ಅಧ್ಯಕ್ಷ ನಡ್ಡಾ ಅವರು ದೇಶಾದ್ಯಂತದ ‘ಸೇವಾ ಹಿ ಸಂಘಟನ್’ ಪ್ರೋಗ್ರಾಮ್ ಅಡಿಯಲ್ಲಿ ಪಕ್ಷದ ಕಾರ್ಯಕರ್ತರು ಕೈಗೊಂಡ ಕೋವಿಡ್ ಪರಿಹಾರ ಕಾರ್ಯಗಳನ್ನು ನಿರಂತರವಾಗಿ ಪರಿಶೀಲಿಸುತ್ತಿದ್ದಾರೆ. ಆರ್‌ಎಸ್‌ಎಸ್‌ನ ಕೆಲವು ನಾಯಕರು “ಬಿಜೆಪಿ ಕಾರ್ಯಕರ್ತರ ಗೈರುಹಾಜರಿ” ಬಗ್ಗೆ ಟೀಕೆಗೆ ಗುರಿಯಾಗಿದ್ದರಿಂದ ಇದನ್ನು ಮಾಡಲಾಗಿದೆ.

ಮೂಲ: ಔಟ್‌ಲುಕ್‌

ಕನ್ನಡಕ್ಕೆ: ಸೋಮಶೇಖರ್ ಚಲ್ಯ


ಇದನ್ನೂ ಓದಿ: ಕೊರೊನಾ ನಿರ್ವಹಣೆ ಲೋಪ ಮುಚ್ಚಿಕೊಳ್ಳಲು ಜಾಹೀರಾತುಗಳಿಗೆ ಹಣ ಸುರಿಯುತ್ತಿರುವ ಕರ್ನಾಟಕ ಮತ್ತು ಉತ್ತರ ಪ್ರದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....