Homeಮುಖಪುಟಕೊರೊನಾ ನಿರ್ವಹಣೆ ಬಗ್ಗೆ ಭಾರಿ ಟೀಕೆ: ವರ್ಚಸ್ಸು ಹೆಚ್ಚಿಸಿಕೊಳ್ಳಲು ಮೋದಿ ಸರ್ಕಾರದ ಪ್ರಯತ್ನ

ಕೊರೊನಾ ನಿರ್ವಹಣೆ ಬಗ್ಗೆ ಭಾರಿ ಟೀಕೆ: ವರ್ಚಸ್ಸು ಹೆಚ್ಚಿಸಿಕೊಳ್ಳಲು ಮೋದಿ ಸರ್ಕಾರದ ಪ್ರಯತ್ನ

- Advertisement -
- Advertisement -

ದೇಶದಲ್ಲಿ ಕೊರೊನಾ ಎರಡನೇ ಅಲೆಯನ್ನು ಸರಿಯಾಗಿ ನಿರ್ವಹಿಸದೇ ಟೀಕೆಗಳಿಗೆ ಗುರಿಯಾಗಿರುವ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಈಗ ತನ್ನ ವರ್ಚಸ್ಸು ಹೆಚ್ಚಿಸಿಕೊಳ್ಳಲು ಭಾರಿ ಪ್ರಯತ್ನ ನಡೆಸುತ್ತಿದೆ. ತನ್ನ ಮಾತೃ ಸಂಘಟನೆಯಾದ ಆರ್‌ಎಸ್‌ಎಸ್‌ನಿಂದ ಕೆಲವು ಸಹಾಯಗಳನ್ನು ಪಡೆದು ಬಿಜೆಪಿ ತನಗಾಗಿರುವ ಹಿನ್ನಡೆಯನ್ನು ಮರೆಮಾಚಿಕೊಳ್ಳಲು ಕಾರ್ಯತಂತ್ರವನ್ನು ರೂಪಿಸುತ್ತಿದೆ.

ಸರ್ಕಾರದ ಎಲ್ಲಾ ಸಚಿವಾಲಯಗಳು, ಇಲಾಖೆಗಳು ಮತ್ತು ಏಜೆನ್ಸಿಗಳಿಗೆ ತಾವು ಮಾಡುತ್ತಿರುವ ಸಕಾರಾತ್ಮಕ ಕಾರ್ಯಗಳ ಕುರಿತು ಭಾರಿ ಪ್ರಮಾಣದಲ್ಲಿ ಪ್ರಚಾರ ಮಾಡಲು ಸಂದೇಶವನ್ನು ಕಳಿಸಿದೆ. ವರ್ಚಸ್ಸು ಹೆಚ್ಚಿಸಿಕೊಳ್ಳಲು ಬಿಜೆಪಿ ಮತ್ತು ಒಕ್ಕೂಟ ಸರ್ಕಾರ ಗುರಿಯಾಗಿಸಿರುವ 5 ಪ್ರಮುಖ ವಿಷಯಗಳು ಇಲ್ಲಿವೆ.

  1. ವಂಚನೆ ಮಾಡಿ ಪರಾರಿಯಾದವರನ್ನು ಭಾರತಕ್ಕೆ ಮರಳಿ ತರುವುದು:

ವಂಚಿಸಿ ದೇಶದಿಂದ ಪರಾರಿಯಾದ ಉದ್ಯಮಿ ಮೆಹುಲ್ ಚೋಕ್ಸಿಯನ್ನು ಡೊಮಿನಿಕಾದಿಂದ ಭಾರತಕ್ಕೆ ಹಸ್ತಾಂತರಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್‌ಬಿ) ವಂಚನೆ ಪ್ರಕರಣದ ಆರೋಪಿ ಡಯಾಮಂಟೈರ್ ಚೋಕ್ಸಿಯನ್ನು ಡೊಮಿನಿಕಾದಲ್ಲಿ ಬಂಧಿಸಲಾಗಿದ್ದು, ಅಲ್ಲಿಂದ ನೇರವಾಗಿ ಇಂಟರ್‌ಪೋಲ್‌ನ ರೆಡ್ ಕಾರ್ನರ್ ನೋಟಿಸ್‌ನ ಆಧಾರದ ಮೇಲೆ ಅವರನ್ನು ಭಾರತಕ್ಕೆ ಕರೆತರಲು ಪ್ರಯತ್ನಿಸಲಾಗುತ್ತಿದೆ.

ಚೋಕ್ಸಿಯ ಸೋದರಳಿಯ ನೀರವ್ ಮೋದಿ ಮತ್ತು ವಿಜಯ್ ಮಲ್ಯ ಅವರ ಹಸ್ತಾಂತರ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಭಾರತವು ರಾಜತಾಂತ್ರಿಕ ಮಾರ್ಗಗಳ ಮೂಲಕ ಯುಕೆಗೆ ವಿನಂತಿಸಿದೆ ಎಂದು ಹೇಳಲಾಗಿದೆ. ನೀರವ್ ಮೋದಿಯವರ ಮೇಲ್ಮನವಿಯನ್ನು ನವೆಂಬರ್‌ನಲ್ಲಿ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಸಲಾಗುವುದು ಮತ್ತು ಮಲ್ಯ ಅವರ ಆಶ್ರಯ ಪ್ರಕರಣದ ವಿಚಾರಣೆಯು ಉನ್ನತ ನ್ಯಾಯಾಲಯದಲ್ಲಿದೆ.

ದೇಶಕ್ಕೆ ವಂಚಿಸಿ ಪರಾರಿಯಾದವರಲ್ಲಿ ಯಾರನ್ನಾದರೂ ಶೀಘ್ರದಲ್ಲೇ ಮರಳಿ ಕರೆತರಲು ಸಾಧ್ಯವಾದರೆ. ಇದರಿಂದ ತಮ್ಮ ಪಕ್ಷದ  ವರ್ಚಸ್ಸು ಮತ್ತು ಚಿತ್ರಣವನ್ನು ದೇಶಾದ್ಯಂತ ಬಲಪಡಿಸಿಕೊಳ್ಳಬಹುದು ಎಂದು ಬಿಜೆಪಿ ಭಾವಿಸಿದೆ.

ಇದನ್ನೂ ಓದಿ: ದೇವರ ವಿಗ್ರಹಕ್ಕೆ ಹಾನಿ: ರೈತರಿಗೆ 21 ಸಾವಿರ ದಂಡ, ಸಾಮಾಜಿಕ ಬಹಿಷ್ಕಾರದ ಬೆದರಿಕೆ

2) ಸಚಿವಾಲಯಗಳ ವಿಮರ್ಶೆ ಮತ್ತು ಕ್ಯಾಬಿನೆಟ್ ಪುನರ್‌ರಚನೆ:

ಪ್ರಧಾನಿ ನರೇಂದ್ರ ಮೋದಿ ಅವರು ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಸಮ್ಮುಖದಲ್ಲಿ ತಮ್ಮ ಕಾರ್ಯಗಳನ್ನು ಪರಿಶೀಲಿಸಲು ವಿವಿಧ ಸಚಿವರನ್ನು ಭೇಟಿ ಮಾಡುತ್ತಿದ್ದಾರೆ. ಕ್ಯಾಬಿನೆಟ್‌ನ ಪುನರ್‌ರಚನೆ ಮತ್ತು ವಿಸ್ತರಣೆಯ ಬಗ್ಗೆ ಊಹಾಪೋಹಗಳು ವರದಿಯಾಗುತ್ತಿವೆ. ಕಾರ್ಯನಿರ್ವಹಿಸದ ಮಂತ್ರಿಗಳಿಗೆ ಗೇಟ್‌ಪಾಸ್‌ ಕೊಡುವುದು. ಶಿರೋಮಣಿ ಅಕಾಲಿ ದಳ (ಎಸ್‌ಎಡಿ) ಮತ್ತು ಶಿವಸೇನೆ ಎನ್‌ಡಿಎಯಿಂದ ನಿರ್ಗಮನ, ಎಲ್‌ಜೆಪಿ ಮುಖ್ಯಸ್ಥ ರಾಮ್ ವಿಲಾಸ್ ಪಾಸ್ವಾನ್ ಅವರ ನಿಧನದ ಕಾರಣದಿಂದಾಗಿ ಸಂಪುಟದಲ್ಲಿ ಖಾಲಿ ಹುದ್ದೆಗಳಿವೆ. ಅನೇಕ ಮಂತ್ರಿಗಳು ಒಂದಕ್ಕಿಂತ ಹೆಚ್ಚು ಖಾತೆಗಳನ್ನು ನಿರ್ವಹಿಸುತ್ತಿದ್ದಾರೆ. ಜ್ಯೋತಿರಾದಿತ್ಯ ಸಿಂಧಿಯಾ, ಸುಶೀಲ್ ಮೋದಿ ಮತ್ತು ಸರ್ಬಾನಂದ ಸೋನೊವಾಲ್ ಅವರಂತಹ ನಾಯಕರು ಸಂಪುಟದೊಳಗೆ ಹೊಂದಾಣಿಕೆ ಮಾಡಿಕೊಳ್ಳಬೇಕಾಗಿದೆ. ಮುಂದಿನ ಸುತ್ತಿನ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಉತ್ತರ ಪ್ರದೇಶ ಮತ್ತು ಪಂಜಾಬ್‌ನ ಕೆಲವು ನಾಯಕರು ಕ್ಯಾಬಿನೆಟ್‌ಗೆ ಕಾಲಿಡಬಹುದು ಎಂದು ಮೂಲಗಳು ಹೇಳುತ್ತಿವೆ.

3) ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ನಾಯಕತ್ವದ ವಿಮರ್ಶೆ:

ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗಳು ಮತ್ತು ರಾಜ್ಯ ನಾಯಕತ್ವದಿಂದ ಕೊರೊನಾ ವೈರಸ್  ನಿರ್ವಹಣೆ ಬಗ್ಗೆ ವಿಮರ್ಶಾತ್ಮಕ ವರದಿಗಳು ಬಂದಿರುವುದರಿಂದ ಯುಪಿ ಕ್ಯಾಬಿನೆಟ್‌ನ ಪುನರ್ರಚನೆ ನಡೆಯುವ ಸಾಧ್ಯತೆಯಿದೆ. ಚುನಾವಣೆಗೆ ಮುಂಚಿತವಾಗಿ ವಿವಿಧ ಜಾತಿ ಮತ್ತು ಸಮುದಾಯಗಳಿಗೆ ಉತ್ತಮ ಪ್ರಾತಿನಿಧ್ಯವನ್ನು ನೀಡಲಾಗುತ್ತದೆ ಎಂದು ನಿರೀಕ್ಷಿಸಲಾಗಿದೆ.

ಬಿಜೆಪಿ ಅಧಿಕಾರದಲ್ಲಿರುವ ಇತರ ರಾಜ್ಯಗಳ ಬಗ್ಗೆ ಕೇಂದ್ರ ನಾಯಕತ್ವವು ಕಾಳಜಿಯನ್ನು ಹೊಂದಿದೆ ಎಂದು ಕಾಣಿಸುತ್ತಿದೆ. ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮಧ್ಯಪ್ರದೇಶ ಮತ್ತು ಹಿಮಾಚಲ ಪ್ರದೇಶದಲ್ಲಿ ನಾಯಕತ್ವದ ಬದಲಾವಣೆಯ ಬಗ್ಗೆಯೂ ಊಹಾಪೋಹಗಳಿದ್ದವು. ಕೇಂದ್ರ ನಾಯಕತ್ವವು ಸದ್ಯಕ್ಕೆ ಮಧ್ಯಪ್ರದೇಶ ಮತ್ತು ಹಿಮಾಚಲದಲ್ಲಿ ಶಾಂತಿಯನ್ನು ಖಾತ್ರಿಪಡಿಸಿಕೊಂಡಿದೆ. ಆದರೆ, ಕರ್ನಾಟಕದಲ್ಲಿ ಲಿಂಗಾಯತ ಪ್ರಬಲ ವ್ಯಕ್ತಿಯ ವಿರುದ್ಧ ಭಿನ್ನಾಭಿಪ್ರಾಯದ ಆಂತರಿಕ ಅಸಮಾಧಾನ ಪ್ರಬಲವಾಗುತ್ತಿದೆ.

ಕೇಂದ್ರ ನಾಯಕತ್ವವು ಈ ಹಿಂದೆ ತ್ರಿಪುರ ಮುಖ್ಯಮಂತ್ರಿ ಬಿಪ್ಲಾಬ್ ಕುಮಾರ್ ದೇಬ್ ವಿರುದ್ಧದ ಪ್ರತಿಭಟನೆಯನ್ನು ತಗ್ಗಿಸಿತು. ಆದರೆ ಉತ್ತರಾಖಂಡದಲ್ಲಿ ಶಾಸಕರು ಸಿಎಂ ವಿರುದ್ಧ ದಂಗೆ ಎದ್ದ ನಂತರ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಅವರನ್ನು ಬದಲಿಸಬೇಕಾಯಿತು.

ಪಕ್ಷದೊಳಗಿನ ಗಲಾಟೆಗಳ ಬಗ್ಗೆ ಆರ್‌ಎಸ್‌ಎಸ್ ಚಿಂತಿಸುತ್ತಿದೆ ಮತ್ತು “ತನ್ನ ರಾಜ್ಯ ನಾಯಕರನ್ನು ನಿಯಂತ್ರಿಸಲು” ಬಿಜೆಪಿಯನ್ನು ಕೇಳಿದೆ ಎಂದು ಮೂಲಗಳು ಹೇಳುತ್ತವೆ.

ಇದನ್ನೂ ಓದಿ: ಕೊರೊನಾದಿಂದ ಅನಾಥರಾದ ಮಕ್ಕಳ ಜವಾಬ್ದಾರಿ ಪಡೆದ ರಾಜ್ಯಗಳ ಸಾಲಿಗೆ ಉತ್ತರ ಪ್ರದೇಶ

4) ವಲಸೆ ಬಂದ ನಾಯಕರು:

ತೃಣಮೂಲ ಕಾಂಗ್ರೆಸ್‌ನಿಂದ ಬಿಜೆಪಿಗೆ ಬಂದ ಕೆಲವು ನಾಯಕರ ಬಗ್ಗೆ ಬಿಜೆಪಿ ತನ್ನ ಭರವಸೆಯನ್ನು ಪೂರೈಸದೇ ಇರಬಹುದು. ಆದರೆ, ಪಕ್ಷವು ಜಿತಿನ್ ಪ್ರಸಾದ ಅವರಂತಹ ಕಾಂಗ್ರೆಸ್ಸಿಗರನ್ನು ಆಕರ್ಷಿಸುತ್ತಲೇ ಇದೆ. ಈ ಹಿಂದೆ ಸಿಂಧಿಯಾ ಅವರು ತಮ್ಮ ಬೆಂಬಲಿಗ ಶಾಸಕರೊಂದಿಗೆ ಕಳೆದ ವರ್ಷ ಬಿಜೆಪಿಗೆ ಸೇರಲು ಕಾಂಗ್ರೆಸ್ ತೊರೆದಿದ್ದರು. ಇದರಿಂದ ಕಮಲ್ ನಾಥ್ ಸರ್ಕಾರವು ಮಧ್ಯಪ್ರದೇಶದಲ್ಲಿ ಬಹುಮತವನ್ನು ಕಳೆದುಕೊಳ್ಳಲು ಕಾರಣವಾಯಿತು. ಅಲ್ಲದೆ, ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ಕರೆತಂದಿತು.

ಸಚಿನ್ ಪೈಲಟ್ ಮತ್ತು ಆರ್.ಪಿ.ಎನ್ ಸಿಂಗ್‌ ಸೇರಿದಂತೆ ಕಾಂಗ್ರೆಸ್‌ನ ಇತರ ಯುವ ನಾಯಕರನ್ನು ಬಿಜೆಪಿ ಸಕ್ರಿಯವಾಗಿ ಸಂಧಿಸುತ್ತಿದೆ ಎಂದು ಮೂಲಗಳು ತಿಳಿಸಿವೆ. ಅದು ಯಶಸ್ವಿಯಾದರೆ,  ಕಾಂಗ್ರೆಸ್‌ಗೆ ದೊಡ್ಡ ಹೊಡೆತವಾಗಲಿದೆ. ಇತ್ತೀಚೆಗೆ ಟಿಆರ್‌ಎಸ್ ಮುಖಂಡ ಈಟೆಲಾ ರಾಜೇಂದರ್ ಕೂಡ ಬಿಜೆಪಿಗೆ ಸೇರಿದ್ದಾರೆ.

5) ಕೆಲವು ನೀತಿಗಳ ತಿದ್ದುಪಡಿ

ಹಿರಿಯ ಬಿಜೆಪಿ ನಾಯಕತ್ವ ಮತ್ತು ಆರ್‌ಎಸ್‌ಎಸ್ ನಡುವಿನ ಸರಣಿ ಸಭೆಗಳಲ್ಲಿ ಸಕಾರಾತ್ಮಕ ವಾತಾವರಣವನ್ನು ಸೃಷ್ಟಿಸಲು ನಿರ್ಧರಿಸಲಾಗಿದೆ. ಮೋದಿ ಸರ್ಕಾರದ ಲಸಿಕೆ ಖರೀದಿ ನೀತಿಯನ್ನು ಹಿಮ್ಮೆಟ್ಟಿಸುವುದು ಸಹ ತಂತ್ರದ ಒಂದು ಭಾಗವೆಂದು ಹೇಳಲಾಗಿದೆ. ಲಸಿಕೆ ವಿತರಣೆಯ ವಿಚಾರದಲ್ಲಿ ಒಕ್ಕೂಟ ಸರ್ಕಾರದ ಧೋರಣೆಯ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನಿಸಿದ ನಂತರ, ಪ್ರಧಾನಿ ಅವರು ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡುವಾಗ ಲಸಿಕೆ ವಿತರಣಾ ನೀತಿಯ ಬದಲಾವಣೆಯನ್ನು ಘೋಷಿಸಿದ್ದರು.

ಇನ್ನೂ ವಿವಾದಿತ ಕೃಷಿ ಕಾಯ್ದೆಗಳ ವಿರುದ್ದ ನಡೆಯುತ್ತಿರುವ ಪ್ರತಿಭಟನೆಗಳಿಂದ ತಮ್ಮನ್ನು ರಕ್ಷಿಸಿಕೊಳ್ಳಲು, ಕೇಂದ್ರವು ಭತ್ತ ಮತ್ತು ಇತರ ಖಾರಿಫ್ ಬೆಳೆಗಳ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಯನ್ನು ಹೆಚ್ಚಿಸಿದೆ. ಈ ನಿರ್ಧಾರವು ಪ್ರತಿಭಟನಾ ನಿರತ ರೈತರನ್ನು ಆಕರ್ಷಿಸಿಲ್ಲವಾದರೂ, ಇದು ವಿಶ್ವಾಸಾರ್ಹತೆಯಾಗಿದೆ ಎಂದು ಸರ್ಕಾರ ಹೇಳುತ್ತದೆ.

ಬಿಜೆಪಿ ಅಧ್ಯಕ್ಷ ನಡ್ಡಾ ಅವರು ದೇಶಾದ್ಯಂತದ ‘ಸೇವಾ ಹಿ ಸಂಘಟನ್’ ಪ್ರೋಗ್ರಾಮ್ ಅಡಿಯಲ್ಲಿ ಪಕ್ಷದ ಕಾರ್ಯಕರ್ತರು ಕೈಗೊಂಡ ಕೋವಿಡ್ ಪರಿಹಾರ ಕಾರ್ಯಗಳನ್ನು ನಿರಂತರವಾಗಿ ಪರಿಶೀಲಿಸುತ್ತಿದ್ದಾರೆ. ಆರ್‌ಎಸ್‌ಎಸ್‌ನ ಕೆಲವು ನಾಯಕರು “ಬಿಜೆಪಿ ಕಾರ್ಯಕರ್ತರ ಗೈರುಹಾಜರಿ” ಬಗ್ಗೆ ಟೀಕೆಗೆ ಗುರಿಯಾಗಿದ್ದರಿಂದ ಇದನ್ನು ಮಾಡಲಾಗಿದೆ.

ಮೂಲ: ಔಟ್‌ಲುಕ್‌

ಕನ್ನಡಕ್ಕೆ: ಸೋಮಶೇಖರ್ ಚಲ್ಯ


ಇದನ್ನೂ ಓದಿ: ಕೊರೊನಾ ನಿರ್ವಹಣೆ ಲೋಪ ಮುಚ್ಚಿಕೊಳ್ಳಲು ಜಾಹೀರಾತುಗಳಿಗೆ ಹಣ ಸುರಿಯುತ್ತಿರುವ ಕರ್ನಾಟಕ ಮತ್ತು ಉತ್ತರ ಪ್ರದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...