Homeಮುಖಪುಟಕೊರೊನಾ ನಿರ್ವಹಣೆ ಬಗ್ಗೆ ಭಾರಿ ಟೀಕೆ: ವರ್ಚಸ್ಸು ಹೆಚ್ಚಿಸಿಕೊಳ್ಳಲು ಮೋದಿ ಸರ್ಕಾರದ ಪ್ರಯತ್ನ

ಕೊರೊನಾ ನಿರ್ವಹಣೆ ಬಗ್ಗೆ ಭಾರಿ ಟೀಕೆ: ವರ್ಚಸ್ಸು ಹೆಚ್ಚಿಸಿಕೊಳ್ಳಲು ಮೋದಿ ಸರ್ಕಾರದ ಪ್ರಯತ್ನ

- Advertisement -
- Advertisement -

ದೇಶದಲ್ಲಿ ಕೊರೊನಾ ಎರಡನೇ ಅಲೆಯನ್ನು ಸರಿಯಾಗಿ ನಿರ್ವಹಿಸದೇ ಟೀಕೆಗಳಿಗೆ ಗುರಿಯಾಗಿರುವ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಈಗ ತನ್ನ ವರ್ಚಸ್ಸು ಹೆಚ್ಚಿಸಿಕೊಳ್ಳಲು ಭಾರಿ ಪ್ರಯತ್ನ ನಡೆಸುತ್ತಿದೆ. ತನ್ನ ಮಾತೃ ಸಂಘಟನೆಯಾದ ಆರ್‌ಎಸ್‌ಎಸ್‌ನಿಂದ ಕೆಲವು ಸಹಾಯಗಳನ್ನು ಪಡೆದು ಬಿಜೆಪಿ ತನಗಾಗಿರುವ ಹಿನ್ನಡೆಯನ್ನು ಮರೆಮಾಚಿಕೊಳ್ಳಲು ಕಾರ್ಯತಂತ್ರವನ್ನು ರೂಪಿಸುತ್ತಿದೆ.

ಸರ್ಕಾರದ ಎಲ್ಲಾ ಸಚಿವಾಲಯಗಳು, ಇಲಾಖೆಗಳು ಮತ್ತು ಏಜೆನ್ಸಿಗಳಿಗೆ ತಾವು ಮಾಡುತ್ತಿರುವ ಸಕಾರಾತ್ಮಕ ಕಾರ್ಯಗಳ ಕುರಿತು ಭಾರಿ ಪ್ರಮಾಣದಲ್ಲಿ ಪ್ರಚಾರ ಮಾಡಲು ಸಂದೇಶವನ್ನು ಕಳಿಸಿದೆ. ವರ್ಚಸ್ಸು ಹೆಚ್ಚಿಸಿಕೊಳ್ಳಲು ಬಿಜೆಪಿ ಮತ್ತು ಒಕ್ಕೂಟ ಸರ್ಕಾರ ಗುರಿಯಾಗಿಸಿರುವ 5 ಪ್ರಮುಖ ವಿಷಯಗಳು ಇಲ್ಲಿವೆ.

  1. ವಂಚನೆ ಮಾಡಿ ಪರಾರಿಯಾದವರನ್ನು ಭಾರತಕ್ಕೆ ಮರಳಿ ತರುವುದು:

ವಂಚಿಸಿ ದೇಶದಿಂದ ಪರಾರಿಯಾದ ಉದ್ಯಮಿ ಮೆಹುಲ್ ಚೋಕ್ಸಿಯನ್ನು ಡೊಮಿನಿಕಾದಿಂದ ಭಾರತಕ್ಕೆ ಹಸ್ತಾಂತರಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್‌ಬಿ) ವಂಚನೆ ಪ್ರಕರಣದ ಆರೋಪಿ ಡಯಾಮಂಟೈರ್ ಚೋಕ್ಸಿಯನ್ನು ಡೊಮಿನಿಕಾದಲ್ಲಿ ಬಂಧಿಸಲಾಗಿದ್ದು, ಅಲ್ಲಿಂದ ನೇರವಾಗಿ ಇಂಟರ್‌ಪೋಲ್‌ನ ರೆಡ್ ಕಾರ್ನರ್ ನೋಟಿಸ್‌ನ ಆಧಾರದ ಮೇಲೆ ಅವರನ್ನು ಭಾರತಕ್ಕೆ ಕರೆತರಲು ಪ್ರಯತ್ನಿಸಲಾಗುತ್ತಿದೆ.

ಚೋಕ್ಸಿಯ ಸೋದರಳಿಯ ನೀರವ್ ಮೋದಿ ಮತ್ತು ವಿಜಯ್ ಮಲ್ಯ ಅವರ ಹಸ್ತಾಂತರ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಭಾರತವು ರಾಜತಾಂತ್ರಿಕ ಮಾರ್ಗಗಳ ಮೂಲಕ ಯುಕೆಗೆ ವಿನಂತಿಸಿದೆ ಎಂದು ಹೇಳಲಾಗಿದೆ. ನೀರವ್ ಮೋದಿಯವರ ಮೇಲ್ಮನವಿಯನ್ನು ನವೆಂಬರ್‌ನಲ್ಲಿ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಸಲಾಗುವುದು ಮತ್ತು ಮಲ್ಯ ಅವರ ಆಶ್ರಯ ಪ್ರಕರಣದ ವಿಚಾರಣೆಯು ಉನ್ನತ ನ್ಯಾಯಾಲಯದಲ್ಲಿದೆ.

ದೇಶಕ್ಕೆ ವಂಚಿಸಿ ಪರಾರಿಯಾದವರಲ್ಲಿ ಯಾರನ್ನಾದರೂ ಶೀಘ್ರದಲ್ಲೇ ಮರಳಿ ಕರೆತರಲು ಸಾಧ್ಯವಾದರೆ. ಇದರಿಂದ ತಮ್ಮ ಪಕ್ಷದ  ವರ್ಚಸ್ಸು ಮತ್ತು ಚಿತ್ರಣವನ್ನು ದೇಶಾದ್ಯಂತ ಬಲಪಡಿಸಿಕೊಳ್ಳಬಹುದು ಎಂದು ಬಿಜೆಪಿ ಭಾವಿಸಿದೆ.

ಇದನ್ನೂ ಓದಿ: ದೇವರ ವಿಗ್ರಹಕ್ಕೆ ಹಾನಿ: ರೈತರಿಗೆ 21 ಸಾವಿರ ದಂಡ, ಸಾಮಾಜಿಕ ಬಹಿಷ್ಕಾರದ ಬೆದರಿಕೆ

2) ಸಚಿವಾಲಯಗಳ ವಿಮರ್ಶೆ ಮತ್ತು ಕ್ಯಾಬಿನೆಟ್ ಪುನರ್‌ರಚನೆ:

ಪ್ರಧಾನಿ ನರೇಂದ್ರ ಮೋದಿ ಅವರು ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಸಮ್ಮುಖದಲ್ಲಿ ತಮ್ಮ ಕಾರ್ಯಗಳನ್ನು ಪರಿಶೀಲಿಸಲು ವಿವಿಧ ಸಚಿವರನ್ನು ಭೇಟಿ ಮಾಡುತ್ತಿದ್ದಾರೆ. ಕ್ಯಾಬಿನೆಟ್‌ನ ಪುನರ್‌ರಚನೆ ಮತ್ತು ವಿಸ್ತರಣೆಯ ಬಗ್ಗೆ ಊಹಾಪೋಹಗಳು ವರದಿಯಾಗುತ್ತಿವೆ. ಕಾರ್ಯನಿರ್ವಹಿಸದ ಮಂತ್ರಿಗಳಿಗೆ ಗೇಟ್‌ಪಾಸ್‌ ಕೊಡುವುದು. ಶಿರೋಮಣಿ ಅಕಾಲಿ ದಳ (ಎಸ್‌ಎಡಿ) ಮತ್ತು ಶಿವಸೇನೆ ಎನ್‌ಡಿಎಯಿಂದ ನಿರ್ಗಮನ, ಎಲ್‌ಜೆಪಿ ಮುಖ್ಯಸ್ಥ ರಾಮ್ ವಿಲಾಸ್ ಪಾಸ್ವಾನ್ ಅವರ ನಿಧನದ ಕಾರಣದಿಂದಾಗಿ ಸಂಪುಟದಲ್ಲಿ ಖಾಲಿ ಹುದ್ದೆಗಳಿವೆ. ಅನೇಕ ಮಂತ್ರಿಗಳು ಒಂದಕ್ಕಿಂತ ಹೆಚ್ಚು ಖಾತೆಗಳನ್ನು ನಿರ್ವಹಿಸುತ್ತಿದ್ದಾರೆ. ಜ್ಯೋತಿರಾದಿತ್ಯ ಸಿಂಧಿಯಾ, ಸುಶೀಲ್ ಮೋದಿ ಮತ್ತು ಸರ್ಬಾನಂದ ಸೋನೊವಾಲ್ ಅವರಂತಹ ನಾಯಕರು ಸಂಪುಟದೊಳಗೆ ಹೊಂದಾಣಿಕೆ ಮಾಡಿಕೊಳ್ಳಬೇಕಾಗಿದೆ. ಮುಂದಿನ ಸುತ್ತಿನ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಉತ್ತರ ಪ್ರದೇಶ ಮತ್ತು ಪಂಜಾಬ್‌ನ ಕೆಲವು ನಾಯಕರು ಕ್ಯಾಬಿನೆಟ್‌ಗೆ ಕಾಲಿಡಬಹುದು ಎಂದು ಮೂಲಗಳು ಹೇಳುತ್ತಿವೆ.

3) ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ನಾಯಕತ್ವದ ವಿಮರ್ಶೆ:

ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗಳು ಮತ್ತು ರಾಜ್ಯ ನಾಯಕತ್ವದಿಂದ ಕೊರೊನಾ ವೈರಸ್  ನಿರ್ವಹಣೆ ಬಗ್ಗೆ ವಿಮರ್ಶಾತ್ಮಕ ವರದಿಗಳು ಬಂದಿರುವುದರಿಂದ ಯುಪಿ ಕ್ಯಾಬಿನೆಟ್‌ನ ಪುನರ್ರಚನೆ ನಡೆಯುವ ಸಾಧ್ಯತೆಯಿದೆ. ಚುನಾವಣೆಗೆ ಮುಂಚಿತವಾಗಿ ವಿವಿಧ ಜಾತಿ ಮತ್ತು ಸಮುದಾಯಗಳಿಗೆ ಉತ್ತಮ ಪ್ರಾತಿನಿಧ್ಯವನ್ನು ನೀಡಲಾಗುತ್ತದೆ ಎಂದು ನಿರೀಕ್ಷಿಸಲಾಗಿದೆ.

ಬಿಜೆಪಿ ಅಧಿಕಾರದಲ್ಲಿರುವ ಇತರ ರಾಜ್ಯಗಳ ಬಗ್ಗೆ ಕೇಂದ್ರ ನಾಯಕತ್ವವು ಕಾಳಜಿಯನ್ನು ಹೊಂದಿದೆ ಎಂದು ಕಾಣಿಸುತ್ತಿದೆ. ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮಧ್ಯಪ್ರದೇಶ ಮತ್ತು ಹಿಮಾಚಲ ಪ್ರದೇಶದಲ್ಲಿ ನಾಯಕತ್ವದ ಬದಲಾವಣೆಯ ಬಗ್ಗೆಯೂ ಊಹಾಪೋಹಗಳಿದ್ದವು. ಕೇಂದ್ರ ನಾಯಕತ್ವವು ಸದ್ಯಕ್ಕೆ ಮಧ್ಯಪ್ರದೇಶ ಮತ್ತು ಹಿಮಾಚಲದಲ್ಲಿ ಶಾಂತಿಯನ್ನು ಖಾತ್ರಿಪಡಿಸಿಕೊಂಡಿದೆ. ಆದರೆ, ಕರ್ನಾಟಕದಲ್ಲಿ ಲಿಂಗಾಯತ ಪ್ರಬಲ ವ್ಯಕ್ತಿಯ ವಿರುದ್ಧ ಭಿನ್ನಾಭಿಪ್ರಾಯದ ಆಂತರಿಕ ಅಸಮಾಧಾನ ಪ್ರಬಲವಾಗುತ್ತಿದೆ.

ಕೇಂದ್ರ ನಾಯಕತ್ವವು ಈ ಹಿಂದೆ ತ್ರಿಪುರ ಮುಖ್ಯಮಂತ್ರಿ ಬಿಪ್ಲಾಬ್ ಕುಮಾರ್ ದೇಬ್ ವಿರುದ್ಧದ ಪ್ರತಿಭಟನೆಯನ್ನು ತಗ್ಗಿಸಿತು. ಆದರೆ ಉತ್ತರಾಖಂಡದಲ್ಲಿ ಶಾಸಕರು ಸಿಎಂ ವಿರುದ್ಧ ದಂಗೆ ಎದ್ದ ನಂತರ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಅವರನ್ನು ಬದಲಿಸಬೇಕಾಯಿತು.

ಪಕ್ಷದೊಳಗಿನ ಗಲಾಟೆಗಳ ಬಗ್ಗೆ ಆರ್‌ಎಸ್‌ಎಸ್ ಚಿಂತಿಸುತ್ತಿದೆ ಮತ್ತು “ತನ್ನ ರಾಜ್ಯ ನಾಯಕರನ್ನು ನಿಯಂತ್ರಿಸಲು” ಬಿಜೆಪಿಯನ್ನು ಕೇಳಿದೆ ಎಂದು ಮೂಲಗಳು ಹೇಳುತ್ತವೆ.

ಇದನ್ನೂ ಓದಿ: ಕೊರೊನಾದಿಂದ ಅನಾಥರಾದ ಮಕ್ಕಳ ಜವಾಬ್ದಾರಿ ಪಡೆದ ರಾಜ್ಯಗಳ ಸಾಲಿಗೆ ಉತ್ತರ ಪ್ರದೇಶ

4) ವಲಸೆ ಬಂದ ನಾಯಕರು:

ತೃಣಮೂಲ ಕಾಂಗ್ರೆಸ್‌ನಿಂದ ಬಿಜೆಪಿಗೆ ಬಂದ ಕೆಲವು ನಾಯಕರ ಬಗ್ಗೆ ಬಿಜೆಪಿ ತನ್ನ ಭರವಸೆಯನ್ನು ಪೂರೈಸದೇ ಇರಬಹುದು. ಆದರೆ, ಪಕ್ಷವು ಜಿತಿನ್ ಪ್ರಸಾದ ಅವರಂತಹ ಕಾಂಗ್ರೆಸ್ಸಿಗರನ್ನು ಆಕರ್ಷಿಸುತ್ತಲೇ ಇದೆ. ಈ ಹಿಂದೆ ಸಿಂಧಿಯಾ ಅವರು ತಮ್ಮ ಬೆಂಬಲಿಗ ಶಾಸಕರೊಂದಿಗೆ ಕಳೆದ ವರ್ಷ ಬಿಜೆಪಿಗೆ ಸೇರಲು ಕಾಂಗ್ರೆಸ್ ತೊರೆದಿದ್ದರು. ಇದರಿಂದ ಕಮಲ್ ನಾಥ್ ಸರ್ಕಾರವು ಮಧ್ಯಪ್ರದೇಶದಲ್ಲಿ ಬಹುಮತವನ್ನು ಕಳೆದುಕೊಳ್ಳಲು ಕಾರಣವಾಯಿತು. ಅಲ್ಲದೆ, ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ಕರೆತಂದಿತು.

ಸಚಿನ್ ಪೈಲಟ್ ಮತ್ತು ಆರ್.ಪಿ.ಎನ್ ಸಿಂಗ್‌ ಸೇರಿದಂತೆ ಕಾಂಗ್ರೆಸ್‌ನ ಇತರ ಯುವ ನಾಯಕರನ್ನು ಬಿಜೆಪಿ ಸಕ್ರಿಯವಾಗಿ ಸಂಧಿಸುತ್ತಿದೆ ಎಂದು ಮೂಲಗಳು ತಿಳಿಸಿವೆ. ಅದು ಯಶಸ್ವಿಯಾದರೆ,  ಕಾಂಗ್ರೆಸ್‌ಗೆ ದೊಡ್ಡ ಹೊಡೆತವಾಗಲಿದೆ. ಇತ್ತೀಚೆಗೆ ಟಿಆರ್‌ಎಸ್ ಮುಖಂಡ ಈಟೆಲಾ ರಾಜೇಂದರ್ ಕೂಡ ಬಿಜೆಪಿಗೆ ಸೇರಿದ್ದಾರೆ.

5) ಕೆಲವು ನೀತಿಗಳ ತಿದ್ದುಪಡಿ

ಹಿರಿಯ ಬಿಜೆಪಿ ನಾಯಕತ್ವ ಮತ್ತು ಆರ್‌ಎಸ್‌ಎಸ್ ನಡುವಿನ ಸರಣಿ ಸಭೆಗಳಲ್ಲಿ ಸಕಾರಾತ್ಮಕ ವಾತಾವರಣವನ್ನು ಸೃಷ್ಟಿಸಲು ನಿರ್ಧರಿಸಲಾಗಿದೆ. ಮೋದಿ ಸರ್ಕಾರದ ಲಸಿಕೆ ಖರೀದಿ ನೀತಿಯನ್ನು ಹಿಮ್ಮೆಟ್ಟಿಸುವುದು ಸಹ ತಂತ್ರದ ಒಂದು ಭಾಗವೆಂದು ಹೇಳಲಾಗಿದೆ. ಲಸಿಕೆ ವಿತರಣೆಯ ವಿಚಾರದಲ್ಲಿ ಒಕ್ಕೂಟ ಸರ್ಕಾರದ ಧೋರಣೆಯ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನಿಸಿದ ನಂತರ, ಪ್ರಧಾನಿ ಅವರು ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡುವಾಗ ಲಸಿಕೆ ವಿತರಣಾ ನೀತಿಯ ಬದಲಾವಣೆಯನ್ನು ಘೋಷಿಸಿದ್ದರು.

ಇನ್ನೂ ವಿವಾದಿತ ಕೃಷಿ ಕಾಯ್ದೆಗಳ ವಿರುದ್ದ ನಡೆಯುತ್ತಿರುವ ಪ್ರತಿಭಟನೆಗಳಿಂದ ತಮ್ಮನ್ನು ರಕ್ಷಿಸಿಕೊಳ್ಳಲು, ಕೇಂದ್ರವು ಭತ್ತ ಮತ್ತು ಇತರ ಖಾರಿಫ್ ಬೆಳೆಗಳ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಯನ್ನು ಹೆಚ್ಚಿಸಿದೆ. ಈ ನಿರ್ಧಾರವು ಪ್ರತಿಭಟನಾ ನಿರತ ರೈತರನ್ನು ಆಕರ್ಷಿಸಿಲ್ಲವಾದರೂ, ಇದು ವಿಶ್ವಾಸಾರ್ಹತೆಯಾಗಿದೆ ಎಂದು ಸರ್ಕಾರ ಹೇಳುತ್ತದೆ.

ಬಿಜೆಪಿ ಅಧ್ಯಕ್ಷ ನಡ್ಡಾ ಅವರು ದೇಶಾದ್ಯಂತದ ‘ಸೇವಾ ಹಿ ಸಂಘಟನ್’ ಪ್ರೋಗ್ರಾಮ್ ಅಡಿಯಲ್ಲಿ ಪಕ್ಷದ ಕಾರ್ಯಕರ್ತರು ಕೈಗೊಂಡ ಕೋವಿಡ್ ಪರಿಹಾರ ಕಾರ್ಯಗಳನ್ನು ನಿರಂತರವಾಗಿ ಪರಿಶೀಲಿಸುತ್ತಿದ್ದಾರೆ. ಆರ್‌ಎಸ್‌ಎಸ್‌ನ ಕೆಲವು ನಾಯಕರು “ಬಿಜೆಪಿ ಕಾರ್ಯಕರ್ತರ ಗೈರುಹಾಜರಿ” ಬಗ್ಗೆ ಟೀಕೆಗೆ ಗುರಿಯಾಗಿದ್ದರಿಂದ ಇದನ್ನು ಮಾಡಲಾಗಿದೆ.

ಮೂಲ: ಔಟ್‌ಲುಕ್‌

ಕನ್ನಡಕ್ಕೆ: ಸೋಮಶೇಖರ್ ಚಲ್ಯ


ಇದನ್ನೂ ಓದಿ: ಕೊರೊನಾ ನಿರ್ವಹಣೆ ಲೋಪ ಮುಚ್ಚಿಕೊಳ್ಳಲು ಜಾಹೀರಾತುಗಳಿಗೆ ಹಣ ಸುರಿಯುತ್ತಿರುವ ಕರ್ನಾಟಕ ಮತ್ತು ಉತ್ತರ ಪ್ರದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...