Homeಮುಖಪುಟಪಶ್ಚಿಮ ಬಂಗಾಳ: ಹಿಂದೂಗಳ ಕಷ್ಟ ನೋಡಲಾಗದೆ ಕಾಳಿ ಮಂದಿರಕ್ಕೆ ತನ್ನ ಜಮೀನು ಕೊಟ್ಟ ಬಡ ಮುಸ್ಲಿಂ...

ಪಶ್ಚಿಮ ಬಂಗಾಳ: ಹಿಂದೂಗಳ ಕಷ್ಟ ನೋಡಲಾಗದೆ ಕಾಳಿ ಮಂದಿರಕ್ಕೆ ತನ್ನ ಜಮೀನು ಕೊಟ್ಟ ಬಡ ಮುಸ್ಲಿಂ ರೈತ

"ಇದು ಭಾರತದ ನಿಜ ಬಣ್ಣವಾಗಿದೆ. ಬಂಗಾಳ ಯಾವಾಗಲೂ ಕೋಮು ಸೌಹಾರ್ದತೆಗೆ ಹೆಸರುವಾಸಿಯಾಗಿದೆ. ಕೋಮು ವೈಷಮ್ಯಕ್ಕೆ ಇಲ್ಲಿ ಸ್ಥಾನವಿಲ್ಲ"-ಗ್ರಾಮಸ್ಥರು

- Advertisement -
- Advertisement -

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಮತಗಳಿಗಾಗಿ ಹಿಂದೂ- ಮುಸ್ಲಿಂ ಸಮುದಾಯಗಳ ಮಧ್ಯೆ ದ್ವೇಷ ಹರಡಲು ಪ್ರಯತ್ನಿಸಲಾಗಿದ್ದ ಭೀಮಪುರ ಗ್ರಾಮ, ಇಂದು ರಾಜಕೀಯ ಪಕ್ಷಗಳಿಗೆ ತಕ್ಕ ಪಾಠ ಕಲಿಸಿದೆ. ಗ್ರಾಮದ ಬಡ ಮುಸ್ಲಿಂ ರೈತರೊಬ್ಬರು ಹಿಂದೂಗಳಿಗಾಗಿ ಕಾಳಿ ಮಂದಿರ ನಿರ್ಮಾಣ ಮಾಡಲು ತನ್ನ ಜಮೀನಿನ ಭಾಗವನ್ನು ಬಿಟ್ಟಕೊಟ್ಟಿದ್ದಾರೆ.

ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಭೀಮಪುರ ಗ್ರಾಮವು 450 ಕುಟುಂಬಗಳನ್ನು ಹೊಂದಿದೆ. ಅದರಲ್ಲಿ 150 ಮುಸ್ಲಿಮ್ ಸಮುದಾಯದವರು. ಈ ಗ್ರಾಮವು ಭಾರತ-ಬಾಂಗ್ಲಾ ಗಡಿ ಪಕ್ಕದಲ್ಲಿದೆ. ಹಿಂದೂ ಗ್ರಾಮಸ್ಥರು ಹಿಂದಿನಿಂದಲೂ ಗಡಿ ರಸ್ತೆಯ ಪಕ್ಕದಲ್ಲಿನ ಖಾಲಿ ಜಾಗವನ್ನು ಕಾಳಿ ಪೂಜೆಗೆ ಬಳಸುತ್ತಾರೆ. ಇದಕ್ಕೆ ಪ್ರತಿ ವರ್ಷವೂ ಬಿಎಸ್ಎಫ್‌ನಿಂದ ಅನುಮತಿ ಪಡೆಯಬೇಕಾಗುತ್ತದೆ.

ಈ ವರ್ಷ BSF ಅನುಮತಿ ನೀಡುವುದಿಲ್ಲ ಎಂದಿದೆ. ಇದು ಮುಸ್ಲಿಂ ಸಮುದಾಯದ ಬಡ ರೈತ ಹನ್ನಾನ್ ಮೊಂಡಲ್ ಅವರಿಗೆ ತಿಳಿದಿದೆ. ಈ ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸಲು ನಿರ್ಧರಿಸಿದ ಅವರು, ತಮ್ಮ ಜಮೀನಿನ ಒಂದು ಭಾಗವನ್ನು ಶಾಶ್ವತವಾದ ಕಾಳಿ ದೇವಸ್ಥಾನವನ್ನು ನಿರ್ಮಿಸಲು ಗ್ರಾಮಸ್ಥರಿಗೆ ದಾನ ಮಾಡಿದ್ದಾರೆ.

ದೇವಾಲಯ ನಿರ್ಮಾಣಕ್ಕೆ ಜಾಗ ನೀಡಲು ನಿರ್ಧರಿಸಿರುವ ಹನ್ನಾನ್ ಮೊಂಡಲ್ ಅವರ ನಿರ್ಧಾರವನ್ನು ಸ್ವಾಗತಿಸಿದ ಭೀಮಪುರದ ಹಿಂದೂ ಗ್ರಾಮಸ್ಥರು, ಈ ವರ್ಷದ ಆರಂಭದಲ್ಲಿ ಮತಗಳನ್ನು ಸೆಳೆಯಲು ಧಾರ್ಮಿಕ ಕಾರ್ಡ್‌ಗಳನ್ನು ಪ್ಲೇ ಮಾಡಿದ ರಾಜಕೀಯ ಪಕ್ಷಗಳು ಬಡವರ ಈ ನಿರ್ಧಾರಗಳಿಂದ ಪಾಠ ಕಲಿಯಬೇಕು ಎಂದಿದ್ದಾರೆ.

ಇದನ್ನೂ ಓದಿ: ಯುಪಿ ವಿಧಾನಸಭಾ ಚುನಾವಣೆ-2022: ‘ಪೂರ್ವಾಂಚಲ’ ಕಡೆಗೆ ಗಮನ ಹರಿಸಿದ BJP!

ವಿಧಾನಸಭಾ ಚುನಾವಣೆಗೆ ಮುನ್ನ ಜಿಲ್ಲೆಯಲ್ಲಿ ಬಿಜೆಪಿ ಭಾರಿ ಪ್ರಚಾರ ನಡೆಸಿತ್ತು. ಬಾಂಗ್ಲಾದೇಶದಿಂದ ವಲಸೆ ಬಂದಿರುವ ಹಿಂದೂ ಧಾರ್ಮಿಕ ಪಂಗಡವಾದ ಮಟುವಾಸ್(Matuas) ಪ್ರಾಬಲ್ಯ ಹೊಂದಿರುವ ಇಲ್ಲಿ ಮುಸ್ಲಿಂ ಸಮುದಾಯದ ವಿರುದ್ಧ ಕೋಮು ಪ್ರಚೋದನಾ ಭಾಷಣಗಳನ್ನು ಬಿಜೆಪಿ ಮಾಡಿತ್ತು. ಚುನಾವಣಾ ಪ್ರಚಾರದ ಸಮಯದಲ್ಲಿ ಬಿಜೆಪಿ ನಾಯಕರು ಬಾಂಗ್ಲಾದೇಶದಲ್ಲಿ ಮುಸ್ಲಿಮರಿಂದ ದೌರ್ಜನ್ಯಗಳು ನಡೆಯುತ್ತಿರುವರ ಬಗ್ಗೆ ಮಾತನಾಡುವ ಮೂಲಕ ಹಿಂದೂ ನಿರಾಶ್ರಿತ ಮತದಾರರನ್ನು ಓಲೈಸಲು ಪ್ರಯತ್ನಿಸಿದರು. ಜೊತೆಗೆ ದೇಶ ವಿಭಜನೆಯ ಸಮಯದಲ್ಲಿ ಮಟುವಾಗಳು ದೇಶದಿಂದ ಏಕೆ ವಲಸೆ ಹೋಗಬೇಕಾಯಿತು ಎಂಬುದನ್ನು ಒತ್ತಿ ಒತ್ತಿ ಹೇಳಿದ್ದರು.

“ವಿಧಾನಸಭಾ ಚುನಾವಣೆಗೆ ಮುನ್ನ ಮತದಾರರನ್ನು ಧರ್ಮದ ಆಧಾರದ ಮೇಲೆ ವಿಭಜನೆ ಮಾಡುವ ಪ್ರಯತ್ನಗಳು ನಡೆದವು. ಇವು ನಾವು ಹಿಂದೆಂದೂ ನೋಡಿರದ ಪ್ರಯತ್ನಗಳಾಗಿದ್ದವು. ಆದರೆ ಹನ್ನಾನ್ ಅವರ ದಾನವು ಬಂಗಾಳದಲ್ಲಿ ಅಂತಹ ವಿಭಜನೆ ರಾಜಕೀಯವು ಕೆಲಸ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸುತ್ತದೆ” ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

“ಇದು ಭಾರತದ ನಿಜ ಬಣ್ಣವಾಗಿದೆ. ಬಂಗಾಳವು ಯಾವಾಗಲೂ ಕೋಮು ಸೌಹಾರ್ದತೆಗೆ ಹೆಸರುವಾಸಿಯಾಗಿದೆ. ಕೋಮು ವೈಷಮ್ಯಕ್ಕೆ ಇಲ್ಲಿ ಸ್ಥಾನವಿಲ್ಲ. ಸಹೋದರತ್ವದ ಉದಾಹರಣೆಗಾಗಿ ಹನ್ನಾನ್‌ಗೆ ನಾವೆಲ್ಲರೂ ಕೃತಜ್ಞರಾಗಿರುತ್ತೇವೆ” ಎಂದು ಕಾಳಿ ಪೂಜಾ ಸಮಿತಿ ಅಧ್ಯಕ್ಷ ಬಿಮಲ್ ಸರ್ಕಾರ್ ಹೇಳಿದ್ದಾರೆ.

“ಪ್ರತಿ ವರ್ಷವೂ ಬಿಎಸ್‌ಎಫ್‌ನಿಂದ ಪೂಜೆಗೆ ಹಸಿರು ನಿಶಾನೆ ಪಡೆಯುವ ಬಗ್ಗೆ ಗ್ರಾಮಸ್ಥರು ಚಿಂತಿಸುತ್ತಿದ್ದರು. ಜಮೀನು ಕಾರಣಕ್ಕಾಗಿ ಕಾಳಿ ಪೂಜೆ ನಿಲ್ಲುವುದು ನನಗೆ ಇಷ್ಟವಾಗಲಿಲ್ಲ. ಹಾಗಾಗಿ ಶಾಶ್ವತ ಕಾಳಿ ದೇವಸ್ಥಾನ ನಿರ್ಮಿಸಲು ನಾನು ಜಮೀನು ನೀಡಿದ್ದೇನೆ. ಅಲ್ಲಿ ಪ್ರತಿ ವರ್ಷ ಕಾಳಿ ಪೂಜೆಯನ್ನು ಆಯೋಜಿಸಲಾಗುತ್ತದೆ” ಎಂದು ಬಡ ರೈತ ಹನ್ನಾನ್ ಹೇಳಿದ್ದಾರೆ.


ಇದನ್ನೂ ಓದಿ: ಯುಪಿಯನ್ನು ಬಣ್ಣಿಸಲು ಇಟಲಿ ಯುದ್ದ ವಿಮಾನ ಮತ್ತು ಆ ದೇಶದ ಧ್ವಜದ ಬಣ್ಣ ಬಳಸಿದ ಬಿಜೆಪಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...