Homeಮುಖಪುಟಪಶ್ಚಿಮ ಬಂಗಾಳ: ಹಿಂದೂಗಳ ಕಷ್ಟ ನೋಡಲಾಗದೆ ಕಾಳಿ ಮಂದಿರಕ್ಕೆ ತನ್ನ ಜಮೀನು ಕೊಟ್ಟ ಬಡ ಮುಸ್ಲಿಂ...

ಪಶ್ಚಿಮ ಬಂಗಾಳ: ಹಿಂದೂಗಳ ಕಷ್ಟ ನೋಡಲಾಗದೆ ಕಾಳಿ ಮಂದಿರಕ್ಕೆ ತನ್ನ ಜಮೀನು ಕೊಟ್ಟ ಬಡ ಮುಸ್ಲಿಂ ರೈತ

"ಇದು ಭಾರತದ ನಿಜ ಬಣ್ಣವಾಗಿದೆ. ಬಂಗಾಳ ಯಾವಾಗಲೂ ಕೋಮು ಸೌಹಾರ್ದತೆಗೆ ಹೆಸರುವಾಸಿಯಾಗಿದೆ. ಕೋಮು ವೈಷಮ್ಯಕ್ಕೆ ಇಲ್ಲಿ ಸ್ಥಾನವಿಲ್ಲ"-ಗ್ರಾಮಸ್ಥರು

- Advertisement -
- Advertisement -

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಮತಗಳಿಗಾಗಿ ಹಿಂದೂ- ಮುಸ್ಲಿಂ ಸಮುದಾಯಗಳ ಮಧ್ಯೆ ದ್ವೇಷ ಹರಡಲು ಪ್ರಯತ್ನಿಸಲಾಗಿದ್ದ ಭೀಮಪುರ ಗ್ರಾಮ, ಇಂದು ರಾಜಕೀಯ ಪಕ್ಷಗಳಿಗೆ ತಕ್ಕ ಪಾಠ ಕಲಿಸಿದೆ. ಗ್ರಾಮದ ಬಡ ಮುಸ್ಲಿಂ ರೈತರೊಬ್ಬರು ಹಿಂದೂಗಳಿಗಾಗಿ ಕಾಳಿ ಮಂದಿರ ನಿರ್ಮಾಣ ಮಾಡಲು ತನ್ನ ಜಮೀನಿನ ಭಾಗವನ್ನು ಬಿಟ್ಟಕೊಟ್ಟಿದ್ದಾರೆ.

ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಭೀಮಪುರ ಗ್ರಾಮವು 450 ಕುಟುಂಬಗಳನ್ನು ಹೊಂದಿದೆ. ಅದರಲ್ಲಿ 150 ಮುಸ್ಲಿಮ್ ಸಮುದಾಯದವರು. ಈ ಗ್ರಾಮವು ಭಾರತ-ಬಾಂಗ್ಲಾ ಗಡಿ ಪಕ್ಕದಲ್ಲಿದೆ. ಹಿಂದೂ ಗ್ರಾಮಸ್ಥರು ಹಿಂದಿನಿಂದಲೂ ಗಡಿ ರಸ್ತೆಯ ಪಕ್ಕದಲ್ಲಿನ ಖಾಲಿ ಜಾಗವನ್ನು ಕಾಳಿ ಪೂಜೆಗೆ ಬಳಸುತ್ತಾರೆ. ಇದಕ್ಕೆ ಪ್ರತಿ ವರ್ಷವೂ ಬಿಎಸ್ಎಫ್‌ನಿಂದ ಅನುಮತಿ ಪಡೆಯಬೇಕಾಗುತ್ತದೆ.

ಈ ವರ್ಷ BSF ಅನುಮತಿ ನೀಡುವುದಿಲ್ಲ ಎಂದಿದೆ. ಇದು ಮುಸ್ಲಿಂ ಸಮುದಾಯದ ಬಡ ರೈತ ಹನ್ನಾನ್ ಮೊಂಡಲ್ ಅವರಿಗೆ ತಿಳಿದಿದೆ. ಈ ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸಲು ನಿರ್ಧರಿಸಿದ ಅವರು, ತಮ್ಮ ಜಮೀನಿನ ಒಂದು ಭಾಗವನ್ನು ಶಾಶ್ವತವಾದ ಕಾಳಿ ದೇವಸ್ಥಾನವನ್ನು ನಿರ್ಮಿಸಲು ಗ್ರಾಮಸ್ಥರಿಗೆ ದಾನ ಮಾಡಿದ್ದಾರೆ.

ದೇವಾಲಯ ನಿರ್ಮಾಣಕ್ಕೆ ಜಾಗ ನೀಡಲು ನಿರ್ಧರಿಸಿರುವ ಹನ್ನಾನ್ ಮೊಂಡಲ್ ಅವರ ನಿರ್ಧಾರವನ್ನು ಸ್ವಾಗತಿಸಿದ ಭೀಮಪುರದ ಹಿಂದೂ ಗ್ರಾಮಸ್ಥರು, ಈ ವರ್ಷದ ಆರಂಭದಲ್ಲಿ ಮತಗಳನ್ನು ಸೆಳೆಯಲು ಧಾರ್ಮಿಕ ಕಾರ್ಡ್‌ಗಳನ್ನು ಪ್ಲೇ ಮಾಡಿದ ರಾಜಕೀಯ ಪಕ್ಷಗಳು ಬಡವರ ಈ ನಿರ್ಧಾರಗಳಿಂದ ಪಾಠ ಕಲಿಯಬೇಕು ಎಂದಿದ್ದಾರೆ.

ಇದನ್ನೂ ಓದಿ: ಯುಪಿ ವಿಧಾನಸಭಾ ಚುನಾವಣೆ-2022: ‘ಪೂರ್ವಾಂಚಲ’ ಕಡೆಗೆ ಗಮನ ಹರಿಸಿದ BJP!

ವಿಧಾನಸಭಾ ಚುನಾವಣೆಗೆ ಮುನ್ನ ಜಿಲ್ಲೆಯಲ್ಲಿ ಬಿಜೆಪಿ ಭಾರಿ ಪ್ರಚಾರ ನಡೆಸಿತ್ತು. ಬಾಂಗ್ಲಾದೇಶದಿಂದ ವಲಸೆ ಬಂದಿರುವ ಹಿಂದೂ ಧಾರ್ಮಿಕ ಪಂಗಡವಾದ ಮಟುವಾಸ್(Matuas) ಪ್ರಾಬಲ್ಯ ಹೊಂದಿರುವ ಇಲ್ಲಿ ಮುಸ್ಲಿಂ ಸಮುದಾಯದ ವಿರುದ್ಧ ಕೋಮು ಪ್ರಚೋದನಾ ಭಾಷಣಗಳನ್ನು ಬಿಜೆಪಿ ಮಾಡಿತ್ತು. ಚುನಾವಣಾ ಪ್ರಚಾರದ ಸಮಯದಲ್ಲಿ ಬಿಜೆಪಿ ನಾಯಕರು ಬಾಂಗ್ಲಾದೇಶದಲ್ಲಿ ಮುಸ್ಲಿಮರಿಂದ ದೌರ್ಜನ್ಯಗಳು ನಡೆಯುತ್ತಿರುವರ ಬಗ್ಗೆ ಮಾತನಾಡುವ ಮೂಲಕ ಹಿಂದೂ ನಿರಾಶ್ರಿತ ಮತದಾರರನ್ನು ಓಲೈಸಲು ಪ್ರಯತ್ನಿಸಿದರು. ಜೊತೆಗೆ ದೇಶ ವಿಭಜನೆಯ ಸಮಯದಲ್ಲಿ ಮಟುವಾಗಳು ದೇಶದಿಂದ ಏಕೆ ವಲಸೆ ಹೋಗಬೇಕಾಯಿತು ಎಂಬುದನ್ನು ಒತ್ತಿ ಒತ್ತಿ ಹೇಳಿದ್ದರು.

“ವಿಧಾನಸಭಾ ಚುನಾವಣೆಗೆ ಮುನ್ನ ಮತದಾರರನ್ನು ಧರ್ಮದ ಆಧಾರದ ಮೇಲೆ ವಿಭಜನೆ ಮಾಡುವ ಪ್ರಯತ್ನಗಳು ನಡೆದವು. ಇವು ನಾವು ಹಿಂದೆಂದೂ ನೋಡಿರದ ಪ್ರಯತ್ನಗಳಾಗಿದ್ದವು. ಆದರೆ ಹನ್ನಾನ್ ಅವರ ದಾನವು ಬಂಗಾಳದಲ್ಲಿ ಅಂತಹ ವಿಭಜನೆ ರಾಜಕೀಯವು ಕೆಲಸ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸುತ್ತದೆ” ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

“ಇದು ಭಾರತದ ನಿಜ ಬಣ್ಣವಾಗಿದೆ. ಬಂಗಾಳವು ಯಾವಾಗಲೂ ಕೋಮು ಸೌಹಾರ್ದತೆಗೆ ಹೆಸರುವಾಸಿಯಾಗಿದೆ. ಕೋಮು ವೈಷಮ್ಯಕ್ಕೆ ಇಲ್ಲಿ ಸ್ಥಾನವಿಲ್ಲ. ಸಹೋದರತ್ವದ ಉದಾಹರಣೆಗಾಗಿ ಹನ್ನಾನ್‌ಗೆ ನಾವೆಲ್ಲರೂ ಕೃತಜ್ಞರಾಗಿರುತ್ತೇವೆ” ಎಂದು ಕಾಳಿ ಪೂಜಾ ಸಮಿತಿ ಅಧ್ಯಕ್ಷ ಬಿಮಲ್ ಸರ್ಕಾರ್ ಹೇಳಿದ್ದಾರೆ.

“ಪ್ರತಿ ವರ್ಷವೂ ಬಿಎಸ್‌ಎಫ್‌ನಿಂದ ಪೂಜೆಗೆ ಹಸಿರು ನಿಶಾನೆ ಪಡೆಯುವ ಬಗ್ಗೆ ಗ್ರಾಮಸ್ಥರು ಚಿಂತಿಸುತ್ತಿದ್ದರು. ಜಮೀನು ಕಾರಣಕ್ಕಾಗಿ ಕಾಳಿ ಪೂಜೆ ನಿಲ್ಲುವುದು ನನಗೆ ಇಷ್ಟವಾಗಲಿಲ್ಲ. ಹಾಗಾಗಿ ಶಾಶ್ವತ ಕಾಳಿ ದೇವಸ್ಥಾನ ನಿರ್ಮಿಸಲು ನಾನು ಜಮೀನು ನೀಡಿದ್ದೇನೆ. ಅಲ್ಲಿ ಪ್ರತಿ ವರ್ಷ ಕಾಳಿ ಪೂಜೆಯನ್ನು ಆಯೋಜಿಸಲಾಗುತ್ತದೆ” ಎಂದು ಬಡ ರೈತ ಹನ್ನಾನ್ ಹೇಳಿದ್ದಾರೆ.


ಇದನ್ನೂ ಓದಿ: ಯುಪಿಯನ್ನು ಬಣ್ಣಿಸಲು ಇಟಲಿ ಯುದ್ದ ವಿಮಾನ ಮತ್ತು ಆ ದೇಶದ ಧ್ವಜದ ಬಣ್ಣ ಬಳಸಿದ ಬಿಜೆಪಿ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹಾಸನ ಪೆನ್‌ಡ್ರೈವ್ ಪ್ರಕರಣ: ಎಸ್‌ಐಟಿ ರಚಿಸಲು ಕೋರಿ ಮಹಿಳಾ ಆಯೋಗದಿಂದ ಸಿಎಂಗೆ ಪತ್ರ

0
ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿರುವ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ವಿಶೇಷ ತಂಡ ರಚನೆ ಮಾಡುವಂತೆ ಕೋರಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ಅವರು ಸಿಎಂ ಸಿದ್ದರಾಮಯ್ಯ, ಗೃಹ ಸಚಿವ...