Homeಮುಖಪುಟಪಶ್ಚಿಮ ಬಂಗಾಳ: ಹಿಂದೂಗಳ ಕಷ್ಟ ನೋಡಲಾಗದೆ ಕಾಳಿ ಮಂದಿರಕ್ಕೆ ತನ್ನ ಜಮೀನು ಕೊಟ್ಟ ಬಡ ಮುಸ್ಲಿಂ...

ಪಶ್ಚಿಮ ಬಂಗಾಳ: ಹಿಂದೂಗಳ ಕಷ್ಟ ನೋಡಲಾಗದೆ ಕಾಳಿ ಮಂದಿರಕ್ಕೆ ತನ್ನ ಜಮೀನು ಕೊಟ್ಟ ಬಡ ಮುಸ್ಲಿಂ ರೈತ

"ಇದು ಭಾರತದ ನಿಜ ಬಣ್ಣವಾಗಿದೆ. ಬಂಗಾಳ ಯಾವಾಗಲೂ ಕೋಮು ಸೌಹಾರ್ದತೆಗೆ ಹೆಸರುವಾಸಿಯಾಗಿದೆ. ಕೋಮು ವೈಷಮ್ಯಕ್ಕೆ ಇಲ್ಲಿ ಸ್ಥಾನವಿಲ್ಲ"-ಗ್ರಾಮಸ್ಥರು

- Advertisement -
- Advertisement -

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಮತಗಳಿಗಾಗಿ ಹಿಂದೂ- ಮುಸ್ಲಿಂ ಸಮುದಾಯಗಳ ಮಧ್ಯೆ ದ್ವೇಷ ಹರಡಲು ಪ್ರಯತ್ನಿಸಲಾಗಿದ್ದ ಭೀಮಪುರ ಗ್ರಾಮ, ಇಂದು ರಾಜಕೀಯ ಪಕ್ಷಗಳಿಗೆ ತಕ್ಕ ಪಾಠ ಕಲಿಸಿದೆ. ಗ್ರಾಮದ ಬಡ ಮುಸ್ಲಿಂ ರೈತರೊಬ್ಬರು ಹಿಂದೂಗಳಿಗಾಗಿ ಕಾಳಿ ಮಂದಿರ ನಿರ್ಮಾಣ ಮಾಡಲು ತನ್ನ ಜಮೀನಿನ ಭಾಗವನ್ನು ಬಿಟ್ಟಕೊಟ್ಟಿದ್ದಾರೆ.

ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಭೀಮಪುರ ಗ್ರಾಮವು 450 ಕುಟುಂಬಗಳನ್ನು ಹೊಂದಿದೆ. ಅದರಲ್ಲಿ 150 ಮುಸ್ಲಿಮ್ ಸಮುದಾಯದವರು. ಈ ಗ್ರಾಮವು ಭಾರತ-ಬಾಂಗ್ಲಾ ಗಡಿ ಪಕ್ಕದಲ್ಲಿದೆ. ಹಿಂದೂ ಗ್ರಾಮಸ್ಥರು ಹಿಂದಿನಿಂದಲೂ ಗಡಿ ರಸ್ತೆಯ ಪಕ್ಕದಲ್ಲಿನ ಖಾಲಿ ಜಾಗವನ್ನು ಕಾಳಿ ಪೂಜೆಗೆ ಬಳಸುತ್ತಾರೆ. ಇದಕ್ಕೆ ಪ್ರತಿ ವರ್ಷವೂ ಬಿಎಸ್ಎಫ್‌ನಿಂದ ಅನುಮತಿ ಪಡೆಯಬೇಕಾಗುತ್ತದೆ.

ಈ ವರ್ಷ BSF ಅನುಮತಿ ನೀಡುವುದಿಲ್ಲ ಎಂದಿದೆ. ಇದು ಮುಸ್ಲಿಂ ಸಮುದಾಯದ ಬಡ ರೈತ ಹನ್ನಾನ್ ಮೊಂಡಲ್ ಅವರಿಗೆ ತಿಳಿದಿದೆ. ಈ ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸಲು ನಿರ್ಧರಿಸಿದ ಅವರು, ತಮ್ಮ ಜಮೀನಿನ ಒಂದು ಭಾಗವನ್ನು ಶಾಶ್ವತವಾದ ಕಾಳಿ ದೇವಸ್ಥಾನವನ್ನು ನಿರ್ಮಿಸಲು ಗ್ರಾಮಸ್ಥರಿಗೆ ದಾನ ಮಾಡಿದ್ದಾರೆ.

ದೇವಾಲಯ ನಿರ್ಮಾಣಕ್ಕೆ ಜಾಗ ನೀಡಲು ನಿರ್ಧರಿಸಿರುವ ಹನ್ನಾನ್ ಮೊಂಡಲ್ ಅವರ ನಿರ್ಧಾರವನ್ನು ಸ್ವಾಗತಿಸಿದ ಭೀಮಪುರದ ಹಿಂದೂ ಗ್ರಾಮಸ್ಥರು, ಈ ವರ್ಷದ ಆರಂಭದಲ್ಲಿ ಮತಗಳನ್ನು ಸೆಳೆಯಲು ಧಾರ್ಮಿಕ ಕಾರ್ಡ್‌ಗಳನ್ನು ಪ್ಲೇ ಮಾಡಿದ ರಾಜಕೀಯ ಪಕ್ಷಗಳು ಬಡವರ ಈ ನಿರ್ಧಾರಗಳಿಂದ ಪಾಠ ಕಲಿಯಬೇಕು ಎಂದಿದ್ದಾರೆ.

ಇದನ್ನೂ ಓದಿ: ಯುಪಿ ವಿಧಾನಸಭಾ ಚುನಾವಣೆ-2022: ‘ಪೂರ್ವಾಂಚಲ’ ಕಡೆಗೆ ಗಮನ ಹರಿಸಿದ BJP!

ವಿಧಾನಸಭಾ ಚುನಾವಣೆಗೆ ಮುನ್ನ ಜಿಲ್ಲೆಯಲ್ಲಿ ಬಿಜೆಪಿ ಭಾರಿ ಪ್ರಚಾರ ನಡೆಸಿತ್ತು. ಬಾಂಗ್ಲಾದೇಶದಿಂದ ವಲಸೆ ಬಂದಿರುವ ಹಿಂದೂ ಧಾರ್ಮಿಕ ಪಂಗಡವಾದ ಮಟುವಾಸ್(Matuas) ಪ್ರಾಬಲ್ಯ ಹೊಂದಿರುವ ಇಲ್ಲಿ ಮುಸ್ಲಿಂ ಸಮುದಾಯದ ವಿರುದ್ಧ ಕೋಮು ಪ್ರಚೋದನಾ ಭಾಷಣಗಳನ್ನು ಬಿಜೆಪಿ ಮಾಡಿತ್ತು. ಚುನಾವಣಾ ಪ್ರಚಾರದ ಸಮಯದಲ್ಲಿ ಬಿಜೆಪಿ ನಾಯಕರು ಬಾಂಗ್ಲಾದೇಶದಲ್ಲಿ ಮುಸ್ಲಿಮರಿಂದ ದೌರ್ಜನ್ಯಗಳು ನಡೆಯುತ್ತಿರುವರ ಬಗ್ಗೆ ಮಾತನಾಡುವ ಮೂಲಕ ಹಿಂದೂ ನಿರಾಶ್ರಿತ ಮತದಾರರನ್ನು ಓಲೈಸಲು ಪ್ರಯತ್ನಿಸಿದರು. ಜೊತೆಗೆ ದೇಶ ವಿಭಜನೆಯ ಸಮಯದಲ್ಲಿ ಮಟುವಾಗಳು ದೇಶದಿಂದ ಏಕೆ ವಲಸೆ ಹೋಗಬೇಕಾಯಿತು ಎಂಬುದನ್ನು ಒತ್ತಿ ಒತ್ತಿ ಹೇಳಿದ್ದರು.

“ವಿಧಾನಸಭಾ ಚುನಾವಣೆಗೆ ಮುನ್ನ ಮತದಾರರನ್ನು ಧರ್ಮದ ಆಧಾರದ ಮೇಲೆ ವಿಭಜನೆ ಮಾಡುವ ಪ್ರಯತ್ನಗಳು ನಡೆದವು. ಇವು ನಾವು ಹಿಂದೆಂದೂ ನೋಡಿರದ ಪ್ರಯತ್ನಗಳಾಗಿದ್ದವು. ಆದರೆ ಹನ್ನಾನ್ ಅವರ ದಾನವು ಬಂಗಾಳದಲ್ಲಿ ಅಂತಹ ವಿಭಜನೆ ರಾಜಕೀಯವು ಕೆಲಸ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸುತ್ತದೆ” ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

“ಇದು ಭಾರತದ ನಿಜ ಬಣ್ಣವಾಗಿದೆ. ಬಂಗಾಳವು ಯಾವಾಗಲೂ ಕೋಮು ಸೌಹಾರ್ದತೆಗೆ ಹೆಸರುವಾಸಿಯಾಗಿದೆ. ಕೋಮು ವೈಷಮ್ಯಕ್ಕೆ ಇಲ್ಲಿ ಸ್ಥಾನವಿಲ್ಲ. ಸಹೋದರತ್ವದ ಉದಾಹರಣೆಗಾಗಿ ಹನ್ನಾನ್‌ಗೆ ನಾವೆಲ್ಲರೂ ಕೃತಜ್ಞರಾಗಿರುತ್ತೇವೆ” ಎಂದು ಕಾಳಿ ಪೂಜಾ ಸಮಿತಿ ಅಧ್ಯಕ್ಷ ಬಿಮಲ್ ಸರ್ಕಾರ್ ಹೇಳಿದ್ದಾರೆ.

“ಪ್ರತಿ ವರ್ಷವೂ ಬಿಎಸ್‌ಎಫ್‌ನಿಂದ ಪೂಜೆಗೆ ಹಸಿರು ನಿಶಾನೆ ಪಡೆಯುವ ಬಗ್ಗೆ ಗ್ರಾಮಸ್ಥರು ಚಿಂತಿಸುತ್ತಿದ್ದರು. ಜಮೀನು ಕಾರಣಕ್ಕಾಗಿ ಕಾಳಿ ಪೂಜೆ ನಿಲ್ಲುವುದು ನನಗೆ ಇಷ್ಟವಾಗಲಿಲ್ಲ. ಹಾಗಾಗಿ ಶಾಶ್ವತ ಕಾಳಿ ದೇವಸ್ಥಾನ ನಿರ್ಮಿಸಲು ನಾನು ಜಮೀನು ನೀಡಿದ್ದೇನೆ. ಅಲ್ಲಿ ಪ್ರತಿ ವರ್ಷ ಕಾಳಿ ಪೂಜೆಯನ್ನು ಆಯೋಜಿಸಲಾಗುತ್ತದೆ” ಎಂದು ಬಡ ರೈತ ಹನ್ನಾನ್ ಹೇಳಿದ್ದಾರೆ.


ಇದನ್ನೂ ಓದಿ: ಯುಪಿಯನ್ನು ಬಣ್ಣಿಸಲು ಇಟಲಿ ಯುದ್ದ ವಿಮಾನ ಮತ್ತು ಆ ದೇಶದ ಧ್ವಜದ ಬಣ್ಣ ಬಳಸಿದ ಬಿಜೆಪಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...